ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿ ಮರಳು ಲೂಟಿ: ಗಣಿ ಸಚಿವರ ತವರಿನಲ್ಲೆ ಅಕ್ರಮ ಮರಳು ಗಣಿಗಾರಿಕೆ

ದಾವಣಗೆರೆ: ಅಕ್ರಮ ಮರಳು ದಂಧೆಕೋರರು ಅನಧಿಕೃತವಾಗಿ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಿ ಮರಳು ಲೂಟಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಗಣಿ ಸಚಿವರ ತವರಲ್ಲೆ ಈ ಕೃತ್ಯ ನಡೆಯುತ್ತಿದೆ. ಅನಧಿಕೃತವಾಗಿ ಬೃಹತ್ ಪೈಪ್‌ಗಳು, ಕಲ್ಲು ಬಂಡೆಗಳನ್ನು ಬಳಸಿ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಲಾಗಿದೆ. ಮರಳು ತೆಗೆಯಲು ನದಿಯ ದಡದಲ್ಲಿರುವ ಹತ್ತಾರು ತೆಪ್ಪಗಳು, ನದಿಯ ತಟದಲ್ಲೆ ಇರುವ ಮರಳು ಫಿಲ್ಟರ್ ಹಾಗೂ ಜರಡಿ ಬಾವಿಯಲ್ಲಿ ಕಾಣಿಸಿಕೊಂಡಿವೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನ […]

Continue Reading

ಜಪಾನ್‌ ಕರಾವಳಿಗೆ ಅಪ್ಪಳಿಸಿದ ಅವಳಿ ಭೂಕಂಪ: ಭಾರಿ ಸುನಾಮಿ ಎಚ್ಚರಿಕೆ

ಟೋಕಿಯೊ: ಜಪಾನ್‌ನ ಉತ್ತರ ಕರಾವಳಿಯಲ್ಲಿಂದು ಅವಳಿ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ವರದಿ ಮಾಡಿದೆ. ಮೊದಲ ಭೂಕಂಪ 7.6 ತೀವ್ರತೆಯಿದ್ದು, ಪೂರ್ವ-ಈಶಾನ್ಯಕ್ಕೆ 84 ಕಿ.ಮೀ ದೂರದಲ್ಲಿ ಸಂಭವಿಸಿದ್ದು, 53.1 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. 2ನೇ ಭೂಕಂಪವು 5.5 ತೀವ್ರತೆ ಹೊಂದಿದ್ದು, ಹಚಿನೋಹೆಯ ಪೂರ್ವ-ಈಶಾನ್ಯಕ್ಕೆ 96 ಕಿ.ಮೀ ದೂರದಲ್ಲಿ ಸಂಭವಿಸಿದೆ. ಕರಾವಳಿಯಿಂದ 44.3 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಈ ಬೆನ್ನಲ್ಲೆ ಜಪಾನ್‌ ಹವಾಮಾನ ಇಲಾಖೆ ಭಾರಿ ಸುಮಾನಿ ಎಚ್ಚರಿಕೆ ನೀಡಿದೆ. ಈಶಾನ್ಯ […]

Continue Reading

ಶಹಾಬಾದ: ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಯೋಜನೆ ಎಂಬ ವಂಚನೆಯ ಮುಖವಾಡದ ಅಡಿಯಲ್ಲಿ, ಸರ್ಕಾರವು ರಾಜ್ಯದಾದ್ಯಂತ 40 ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ವಿಲೀನಗೊಳಿಸುತ್ತಿದೆ ಎಂದು ಎಐಡಿಎಸ್ಓ ಜಿಲ್ಲಾ ಕೌನ್ಸಿಲ್ ಅಧ್ಯಕ್ಷ ತುಳಜರಾಮ ಎನ್.ಕೆ ಹೇಳಿದರು. ನಗರದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಯೋಜನೆ ಅಡಿಯಲ್ಲಿ ಶಹಾಬಾದ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತರನಳ್ಳಿ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಸರಕಾರಿ […]

Continue Reading

ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚಲ್ಲ: ಮಧು ಬಂಗಾರಪ್ಪ

ಸುದ್ದಿ ಸಂಗ್ರಹ ಬೆಳಗಾವಿ ಒಂದೆ ಒಂದು ಸರ್ಕಾರಿ ಶಾಲೆಯನ್ನು ಮುಚ್ಚುವದಿಲ್ಲ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪುನರುಚ್ಚರಿಸಿದ್ದಾರೆ. ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಚಿದಾನಂದಗೌಡ, ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಪ್ರಶ್ನೆ ಕೇಳಿದರು. ಕೆಪಿಎಸ್ ಶಾಲೆಗಳ ಅಭಿವೃದ್ಧಿ ಪೇಪರ್ ಮೇಲಿವೆ. ಇವತ್ತಿನ ಶಿಕ್ಷಣ ಸಚಿವರು ಶಿಕ್ಷಣ ವ್ಯವಸ್ಥೆ ಬುಡಮೇಲು ಮಾಡಲು ಮುಂದಾಗಿದ್ದಾರೆ ಅನ್ನಿಸುತ್ತಿದೆ. ಗ್ರಾಮ ಪಂಚಾಯತಿಗೆ ಒಂದು ಶಾಲೆ ಮಾಡಿ ಸರ್ಕಾರ ಶಾಲೆಗಳನ್ನು ಮುಚ್ಚೋ ಹುನ್ನಾರ ಮಾಡ್ತಿದೆ. ಕೆಪಿಎಸ್ ಶಾಲೆಗಳಿಗೆ ಹಳೆ ಕಟ್ಟಡ ಬೇಡ, ಹೊಸ […]

Continue Reading

ನಮ್ಮ ರಕ್ತದಲ್ಲಿ ಕನ್ನಡವಿದೆ, ಯಾವುದೆ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚಲ್ಲ: ಮಧು ಬಂಗಾರಪ್ಪ

ಸುದ್ದಿ ಸಂಗ್ರಹ ಬೆಳಗಾವಿ ನಮ್ಮ ರಕ್ತದಲ್ಲಿ ಕನ್ನಡವಿದೆ, ಹೀಗಾಗಿ ಕನ್ನಡ ಮಾಧ್ಯಮದ ಯಾವುದೆ ಶಾಲೆಗಳು ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಚಿದಾನಂದ್ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತಿಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾ.ಪಂ ಗಳಲ್ಲಿ ಒಂದು ಕೆಪಿಎಸ್ ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ನಾವು […]

Continue Reading

ಮೈಸೂರು ರಿಯಲ್‌ ಎಸ್ಟೇಟ್‌ ಉದ್ಯಮಿ ಕಿಡ್ನ್ಯಾಪ್‌ ಮಾಡಿ 30 ಲಕ್ಷ ಬೇಡಿಕೆ: ಆರೋಪಿಗಳು ಅರೆಸ್ಟ್‌

ಸುದ್ದಿ ಸಂಗ್ರಹ ಮೈಸೂರು ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣವನ್ನು ಪೊಲೀಸರು ಸಿನಿಮಿಯ ಶೈಲಿಯಲ್ಲಿ ಭೇದಿಸಿ ಕಿಡ್ನ್ಯಾಪ್ ಆದ ಕೆಲವೆ ಗಂಟೆಗಳಲ್ಲಿ ಅರೋಪಿಗಳ ಹೆಡೆಮುರಿಕಟ್ಟಿದ್ದಾರೆ. ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ವಿಜಯನಗರ ಮೂರನೇ ಹಂತದ ನಿವಾಸಿ ಲೋಕೇಶ್ ಎಂಬವರನ್ನು ಟಾಟಾ ಸುಮೋದಲ್ಲಿ ಬಂದು ಐದು ಜನರನ್ನು ಅಪಹರಣ ಮಾಡಿದ್ದರು. ಬಳಿಕ ಲೋಕೇಶ್ ಮೊಬೈಲ್‌ನಿಂದ ಅವರ ಪತ್ನಿಗೆ ಕರೆ ಮಾಡಿದ ಆರೋಪಿಗಳು 30 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಗಾಬರಿಗೊಂಡ ಲೋಕೇಶ್ ಪತ್ನಿ ವಿಜಯನಗರ ಪೊಲೀಸರಿಗೆ […]

Continue Reading

ಕೆಎಸ್‌ಸಿಎ ಚುನಾವಣೆ ಫಲಿತಾಂಶ ಪ್ರಕಟ: ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಸುದ್ದಿ ಸಂಗ್ರಹ ಬೆಂಗಳೂರು ಕಳೆದೆರೆಡು ತಿಂಗಳಿನಿಂದ ಚರ್ಚೆಯಲ್ಲಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ವೆಂಕಟೇಶ್ ಪ್ರಸಾದ್ ಬಣ ಭರ್ಜರಿ ಜಯ ಸಾಧಿಸಿದೆ. ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ, ಕನ್ನಡಿಗ ವೆಂಕಟೇಶ್ ಪ್ರಸಾದ್‌ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಸುಜಿತ್ ಸೋಮಸುಂದರ್, ಖಜಾಂಚಿ ಆಗಿ ಮಧುಕರ್, ಜನರಲ್ ಸೆಕ್ರೆಟರಿಯಾಗಿ ಸಂತೋಷ್ ಮೆನನ್ ಆಯ್ಕೆ ಆಗಿದ್ದಾರೆ. ಇನ್ನು ಬ್ರಿಜೇಶ್ ಪಟೇಲ್ ಬಣದ ಬಿ.ಕೆ ರವಿ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆ ಆಗಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಒಟ್ಟು […]

Continue Reading

ಡಿ.9 ರಂದು ಭೀಮನಹಳ್ಳಿ ಮಂದಿರ ಉದ್ಘಾಟನೆ: ಡಾ.ಸಿದ್ಧತೋಟೇಂದ್ರ ಶ್ರೀ ಗುರುವಂದನೆ

ಸುದ್ದಿ ಸಂಗ್ರಹ ಚಿತ್ತಾಪುರ ತಾಲೂಕಿನ ಭೀಮನಹಳ್ಳಿ ಗ್ರಾಮದಲ್ಲಿ ನಾಲವಾರದ ಕೋರಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಗುರುವಂದನಾ ಹಾಗೂ ರಜತ ಕಿರೀಟ ಸಮರ್ಪಣಾ ಸಮಾರಂಭ ಡಿ.9 ರಂದು ಮಂಗಳವಾರ ಅದ್ಧೂರಿಯಾಗಿ ನಡೆಯಲಿದೆ ಎಂದು ಶಿವಲಿಂಗ ಕೊಳ್ಳಿ ಭೀಮನಹಳ್ಳಿ ಹೇಳಿದ್ದಾರೆ. ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹಯ್ಯಾಳಲಿಂಗ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಜಾತ್ರಾ ಮಹೋತ್ಸವದ ಸಾನಿಧ್ಯವಹಿಸಲಿರುವ ನಾಲವಾರ ಪೂಜ್ಯರಿಗೆ ಸಕಲ ಸದ್ಭಕ್ತರಿಂದ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ […]

Continue Reading

ನಾಳೆಯಿಂದ ಬೆಳಗಾವಿ ಅಧಿವೇಶನ: 3 ಸಾವಿರ ರೂಮ್‌ ಬುಕ್‌, 10 ದಿನಗಳ ಅಧಿವೇಶನಕ್ಕೆ 21 ಕೋಟಿ ಖರ್ಚು

ಸುದ್ದಿ ಸಂಗ್ರಹ ಬೆಳಗಾವಿ ಸೋಮವಾರದಿಂದ ಬೆಳಗಾವಿ ಅಧಿವೇಶನ ಆರಂಭಗೊಳ್ಳಲಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಪ್ರತಿವರ್ಷ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ. ಬೆಳಗಾವಿಯಲ್ಲಿ ಈವರೆಗೆ 13 ಬಾರಿ ಉಭಯ ಸದನಗಳ ಅಧಿವೇಶನ ನಡೆದಿದ್ದು, ಒಟ್ಟು 170 ಕೋಟಿ ರೂ ವೆಚ್ಚ ಮಾಡಲಾಗಿದೆ. ಕಳೆದ ವರ್ಷ 15 ಕೋಟಿ ರೂ. ವೆಚ್ಚದಲ್ಲಿ ಅಧಿವೇಶನ ಮುಕ್ತಾಯಗೊಂಡಿತ್ತು. ಈ ಸಲದ 10 ದಿನದ ಬೆಳಗಾವಿ ಅಧಿವೇಶನಕ್ಕೆ 21 ಕೋಟಿ ರೂ ಖರ್ಚು ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲಾಡಳಿತ ಈಗಾಗಲೆ ಸಕಲ […]

Continue Reading

ಡಾ.ಬಿ.ಆರ್ ಅಂಬೇಡ್ಕರ್’ರ 69ನೇ ಮಹಾಪರಿನಿರ್ವಾಣ ದಿನ: ಸಂವಿಧಾನ ಶಿಲ್ಪಿಗೆ ಗಣ್ಯರಿಂದ ನಮನ

ಸುದ್ದಿ ಸಂಗ್ರಹ ಶಹಾಬಾದ್ ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣದಿನ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯಗುರು ಸವಿತಾ ಬೆಳಗುಂಪಿ, ಸಂಸ್ಥೆಯ ಸದಸ್ಯ ಸುಧಾರಾಣಿ ಚವ್ಹಾಣ್, ಪ್ರಮುಖರಾದ ಆರತಿ ವೆಂಕಟೇಶ, ಸುಜಾತ ಕುಂಬಾರ, ನಿರ್ಮಲಾ ಬಿರಾದರ, ಚೈತ್ರಾ, ಮಂಜುಳಾ, ಸಂಜನ ಮತ್ತು ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಇದ್ದರು.

Continue Reading