3.50 ಕೋಟಿ ರೂ.ಗೆ ಬಾಂದ್ರಾ ಅಪಾರ್ಟ್‌ಮೆಂಟ್‌ ಮಾರಿದ ಸಲ್ಮಾನ್‌ ಖಾನ್‌

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಮುಂಬೈನ ಬಾಂದ್ರಾ ಪಶ್ಚಿಮದಲ್ಲಿರುವ ತಮ್ಮ ಅಪಾರ್ಟ್‌ಮೆಂಟನ್ನು 3.50 ಕೋಟಿ ರೂ.ಗೆ ಮಾರಾಟ ಮಾಡಿದ್ದಾರೆ. CRE ಮ್ಯಾಟ್ರಿಕ್ಸ್ ಪ್ರವೇಶಿಸಿದ ಆಸ್ತಿ ನೋಂದಣಿ ದಾಖಲೆಗಳು 2026ರ ಜು.9 ರಂದು ಒಪ್ಪಂದವನ್ನು ಅಧಿಕೃತವಾಗಿ ನೋಂದಾಯಿಸಲಾಗಿದೆ ಎಂದು ದೃಢಪಡಿಸಿದ ನಂತರ ಇತ್ತೀಚಿನ ರಿಯಲ್ ಎಸ್ಟೇಟ್ ವಹಿವಾಟು ಗಮನ ಸೆಳೆದಿದೆ. ಈ ಅಪಾರ್ಟ್‌ಮೆಂಟ್ ಬಾಂದ್ರಾ ಪಶ್ಚಿಮದಲ್ಲಿರುವ ಶಿವ-ಆಸ್ಥಾನ್ ಹೈಟ್ಸ್ ಎಂಬ ವಸತಿ ಕಟ್ಟಡದಲ್ಲಿದೆ. ಸಲ್ಮಾನ್‌ ಖಾನ್ 2015ರಲ್ಲಿ 2.88 ಕೋಟಿ ರೂ.ಗೆ ಆಸ್ತಿಯನ್ನು ಖರೀದಿಸಿದ್ದರು ಎಂದು ದಾಖಲೆಗಳು ತೋರಿಸಿವೆ. […]

Continue Reading

ಜಾಗತಿಕ ತಾಪಮಾನ ತಡೆಗೆ ಮರ ಗಿಡ ಬೆಳೆಸಿ: ಶೈಲೇಂದ್ರ ಕಾವಡಿ

ಸುದ್ದಿ ಸಂಗ್ರಹ ಕಲಬುರಗಿ ಜಾಗತಿಕ ತಾಪಮಾನ ಮನುಷ್ಯರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಗಿಡ ನೆಟ್ಟು ಬೆಳೆಸುವುದರಿಂದ ತಾಪಮಾನ ನಿಯಂತ್ರಿಸಬಹುದು ಎಂದು ಬೀದರ ಪರಿಸರವಾನಿ ಅಧ್ಯಕ್ಷ, ಖ್ಯಾತ ಪರಿಸರವಾದಿ ಶೈಲೇಂದ್ರ ಕಾವಡಿ ಹೇಳಿದರು. ತಾಲೂಕಿನ ಅವರಾದ್ (ಬಿ) ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಪರಿಸರ ಸಂರಕ್ಷಣೆ ಜನ ಜಾಗೃತಿ ಮತ್ತು ವನಮೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ, ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದ ಅವರು, […]

Continue Reading

ಕರ್ನಾಟಕದಲ್ಲೆ ಗಾಯನಕ್ಕೆ ವಿದಾಯ ಘೋಷಿಸಿದ್ದ ಎಸ್ ಜಾನಕಿ

ಭಾರತೀಯ ಚಿತ್ರರಂಗದ ದಿಗ್ಗಜ ಹಿನ್ನೆಲೆ ಗಾಯಕಿ ಎಸ್ ಜಾನಕಿ ಅವರ ಜೀವನದ ಅತ್ಯಂತ ಭಾವನಾತ್ಮಕ ಕ್ಷಣಗಳಲ್ಲಿ ಒಂದಕ್ಕೆ ಸಾಕ್ಷಿಯಾಗಿದ್ದು ಕರ್ನಾಟಕ. ಸುಮಾರು 65 ವರ್ಷಗಳ ಅದ್ಭುತ ಸಂಗೀತ ಪಯಣದ ಬಳಿಕ ಸಾರ್ವಜನಿಕ ಗಾಯನಕ್ಕೆ ವಿದಾಯ ಹೇಳುವ ನಿರ್ಧಾರವನ್ನು ಅವರು ಮೈಸೂರಿನಲ್ಲಿ ಘೋಷಿಸಿದ್ದರು. ಇದೀಗ ಅವರು ಮೈಸೂರಿನಲ್ಲೆ ನಿಧನರಾಗಿರುವ ಹಿನ್ನೆಲೆಯಲ್ಲಿ, 2017ರಲ್ಲಿ ನಡೆದ ಆ ವಿದಾಯ ಸಂಗೀತ ಕಾರ್ಯಕ್ರಮವನ್ನು ಅಭಿಮಾನಿಗಳು ಮತ್ತೆ ನೆನಪಿಸಿಕೊಳ್ಳುತ್ತಿದ್ದಾರೆ. 2017ರ ಅಕ್ಟೋಬರ್ 28ರಂದು ಮೈಸೂರಿನ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಬಯಲು ರಂಗಮಂದಿರದಲ್ಲಿ “ಎಸ್ […]

Continue Reading

ದಂಡೋತಿ: ಊಟ ಮಾಡಿದ ಬಳಿಕ ಮಕ್ಕಳು ಅಸ್ವಸ್ಥ ಕೇಸ್ – ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತು

ಸುದ್ದಿ ಸಂಗ್ರಹ ಚಿತ್ತಾಪುರತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ನಿಲಯದ ವಿದ್ಯಾರ್ಥಿಗಳು ಊಟದ ನಂತರ ಅಸ್ವಸ್ಥಗೊಂಡ ಪ್ರಕರಣದ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರಿ ಪ್ರಾಂಶುಪಾಲ ನಜೀಮಾ ಬೇಗಂ ಮತ್ತು ಪ್ರಭಾರಿ ವಾರ್ಡನ್ ಭೀಮಬಾಯಿ ಅವರನ್ನು ಅಮಾನತುಗೊಳಿಸಲಾಗಿದೆ. ಗುರುವಾರ ರಾತ್ರಿ ಶಾಲೆಯ 50 ಮಕ್ಕಳು ರಾತ್ರಿ ಊಟ ಸೇವಿಸಿದ್ದರು. ಅವರಲ್ಲಿ 39 ಮಕ್ಕಳು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಚಿತ್ತಾಪುರ ತಾಲೂಕಾ ಆಸ್ಪತ್ರೆ, ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕರ್ತವ್ಯ ಲೋಪದ ಆಧಾರದ ಮೇಲೆ ನಜೀಮಾ ಬೇಗಂ ಮತ್ತು ಭೀಮಬಾಯಿ […]

Continue Reading

ಚಿತ್ತಾಪುರದಲ್ಲಿ ಶೇ.98.22 ಅರ್ಜಿ ವಿತರಣೆ, ಮತದಾರರ ಪಟ್ಟಿ ಪರಿಷ್ಕರಣೆ

ಸುದ್ದಿ ಸಂಗ್ರಹ ಚಿತ್ತಾಪುರರಾಜ್ಯ ಚುನಾವಣೆ ಆಯೋಗದಿಂದ ನಡೆಯುತ್ತಿರುವ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಚಿತ್ತಾಪುರ ಮತಕ್ಷೇತ್ರದಲ್ಲಿ ಗುರುವಾರದವರೆಗೆ ಒಟ್ಟು ಶೇ. 98.22 ಅರ್ಜಿ ವಿತರಿಸಲಾಗಿದೆ. ಮತಕ್ಷೇತ್ರದ ವ್ಯಾಪ್ತಿಯ 257 ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳು ಒಟ್ಟು 2,51,226 ಮತದಾರರ ಪೈಕಿ 2,46,751 ಮತದಾರರಿಗೆ ಅರ್ಜಿ ವಿತರಣೆ ಮಾಡಿದ್ದಾರೆ. ಜೂ.30 ರಿಂದ ಗುರುವಾರದವರೆಗೆ ಒಟ್ಟು 16,718 ಮತದಾರರು ತಮಗೆ ಕೊಟ್ಟಿರುವ ಅರ್ಜಿಗಳನ್ನು ಭರ್ತಿ ಮಾಡಿಕೊಟ್ಟಿದ್ದು ಡಿಜಿಟಲೈಜ್ ಮಾಡಲಾಗಿದೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ತಿಳಿಸಿದ್ದಾರೆ. ಮತದಾರರಿಗೆ ಕೊಟ್ಟಿರುವ ಅರ್ಜಿಯ […]

Continue Reading

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ತಹಸೀಲ್ದಾರ್‌ಗೆ 4 ವರ್ಷ ಜೈಲು

ಸುದ್ದಿ ಸಂಗ್ರಹ ಕಲಬುರಗಿ1 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ತಹಸೀಲ್ದಾರ್‌ ಶಶಿಕಲಾ ಪಾದಗಟ್ಟಿ ಸೇರಿದಂತೆ ಇಬ್ಬರಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯವು ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ತಲಾ 20 ಸಾವಿರ ರೂ ದಂಡ ವಿಧಿಸಿದೆ. 2017ರಲ್ಲಿ ಅಫಜಲಪುರದ ತಹಸೀಲ್ದಾರ್‌ ಆಗಿದ್ದ ಶಶಿಕಲಾ ಪಾದಗಟ್ಟಿ ಹಾಗೂ ದೂರುದಾರನಿಂದ ಲಂಚದ ಹಣ ಪಡೆದು ತಹಸೀಲ್ದಾರ್‌ಗೆ ತಲುಪಿಸಿದ್ದ ಶಿವಾನಂದ ಜಮಖಂಡಿ ಶಿಕ್ಷೆಗೆ ಗುರಿಯಾದವರು. ಶಶಿಕಲಾ ಪ್ರಸ್ತುತ ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ವಾರವಷ್ಟೆ […]

Continue Reading

ಜು.12ರಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಣೆ: ಇಲಾಖೆ ಮಾಹಿತಿ

ಸುದ್ದಿ ಸಂಗ್ರಹ ಬೆಂಗಳೂರುಜು.12ರ ಭಾನುವಾರದಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಮಾಹಿತಿ ನೀಡಿದೆ. ರಾಜ್ಯಾದ್ಯಂತ ಇರುವ ಎಲ್ಲಾ ಉಪನೋಂದಣಿ ಕಚೇರಿಗಳು ಜು.12 ರಂದು ರವಿವಾರ ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ. ಸಾರ್ವಜನಿಕ ರಜಾ ದಿನವಾಗಿದ್ದರೂ ಸಹ, ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ​ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಮತ್ತು ಇಲಾಖೆಗೆ ಸಂಬಂಧಿಸಿದ […]

Continue Reading

ದಂಡೋತಿ ವಸತಿ ಶಾಲೆ: ಊಟದ ಬಳಿಕ ಹೊಟ್ಟೆ ನೋವು- ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಸುದ್ದಿ ಸಂಗ್ರಹ ಚಿತ್ತಾಪುರತಾಲೂಕಿನ ದಂಡೋತಿ ಗ್ರಾಮದ ಅಲ್ಪಸಂಖ್ಯಾತರ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ರಾತ್ರಿ ಊಟದ ನಂತರ ವಿದ್ಯಾರ್ಥಿಗಳು ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿದ್ದಾರೆ. ಅಂದಾಜು 20ರಿಂದ 30 ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಶುರುವಾಗಿದೆ. ತಕ್ಷಣ ವಿದ್ಯಾರ್ಥಿಗಳನ್ನು ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಚಿತ್ತಾಪುರದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿಗಳು ಶಾಲೆಗೆ ದೌಡಾಯಿಸಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕಳಿಸುವ ಕೆಲಸ ಮಾಡಿದ್ದಾರೆ. ಘಟನೆಯಿಂದ ವಿದ್ಯಾರ್ಥಿ ಪಾಲಕರಲ್ಲಿ […]

Continue Reading

ಮಂಗಲಗಿ ಗ್ರಾಮದಲ್ಲಿ ಬಸವೇಶ್ವರರ ಅಶ್ವಾರೂಢ ಮೂರ್ತಿ ಅನಾವರಣ

ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಮಂಗಲಗಿ ಗ್ರಾಮದಲ್ಲಿ ಮಂಗಳವಾರ ಬಸವ ಅಭಿಮಾನಿಗಳ ವತಿಯಿಂದ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಅಶ್ವಾರೂಢ ಮೂರ್ತಿಯನ್ನು ಲೋಕಾರ್ಪಣೆಗೊಳಿಸಲಾಯಿತು. ಈ ವೇಳೆ ಮಾಜಿ ಸಂಸದ ಡಾ.ಉಮೇಶ ಜಾಧವ ಮಾತನಾಡಿ, 12ನೇ ಶತಮಾನದಲ್ಲಿ ಬಸವಕಲ್ಯಾಣದಲ್ಲಿ ಅನುಭವ ಮಂಟಪ ಅಸ್ತಿತ್ವಕ್ಕೆ ತರುವ ಮೂಲಕ ಜಗತ್ತಿಗೆ ಮೊಟ್ಟಮೊದಲ ಸಂಸತ್ತು, ಪ್ರಜಾಪ್ರಭುತ್ವ ಪರಿಚಯಿಸಿದವರೇ ಬಸವಣ್ಣನವರು. ಅವರ ಸಮಾನತೆಯ ಸಂಸ್ಕೃತಿ ಮಂಗಲಗಿ ಗ್ರಾಮದಲ್ಲಿ ಮೇಳೈಸಿದೆ ಎಂದರು. ಬಸವಕಲ್ಯಾಣ ಅನುಭವ ಮಂಟಪದ ಅಭಿವೃದ್ಧಿಗೆ ಹಿಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ 500 ಕೋಟಿ ರೂ […]

Continue Reading

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ವಾಕಿಂಗ್‌ಗೆ ಬಂದಿದ್ದವರಿಗೆ ದರ್ಶನ, ಪಾರ್ಕ್‌ನಿಂದ ಎದ್ನೋ ಬಿದ್ನೋ ಅಂತ ಓಡಿದ ಜನ

ಸುದ್ದಿ ಸಂಗ್ರಹ ಬೆಂಗಳೂರುಸಿಲಿಕಾನ್‌ ಸಿಟಿಯಲ್ಲಿ ಹೆಚ್ಚುತ್ತಿರುವ ನಗರೀಕರಣದಿಂದಾಗಿ ಕೆಲವೊಮ್ಮೆ ಕಾಡು ಪ್ರಾಣಿಗಳು ನಾಡಿಗೆ ಪ್ರವೇಶಿಸುತ್ತವೆ. ವಿಶೇಷವಾಗಿ ದಕ್ಷಿಣ ಬೆಂಗಳೂರು ಹಾಗೂ ಮಾಗಡಿ ರಸ್ತೆಯಂತಹ ಪ್ರದೇಶಗಳಲ್ಲಿ ಚಿರತೆಗಳು ಆಗಾಗ್ಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ನಿದರ್ಶನಗಳಿವೆ. ಇಂತಹ ಸಂದರ್ಭಗಳಲ್ಲಿ ಅರಣ್ಯ ಇಲಾಖೆಯು ಸ್ಥಳದಲ್ಲೇ ಬೋನುಗಳು ಇರಿಸಿ ಪ್ರಾಣಿಗಳನ್ನು ಸೆರೆಹಿಡಿಯುವ ಕಾರ್ಯಾಚರಣೆ ನಡೆಸುತ್ತದೆ. ಸದ್ಯ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳ ನಿದ್ದೆಗೆಡಿಸಿರುವುದು ತಾಜಾ ಉದಾಹರಣೆಯಾಗಿದೆ. ಬೆಂಗಳೂರಿನ ಬ್ಯಾಡ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಇಎಲ್ ಲೇಔಟ್ ನಲ್ಲಿ ನಿನ್ನೆ […]

Continue Reading