ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂ. ಹಣ ಕೊಡಲಿಲ್ಲವೆಂದು 7 ಕುಟುಂಬಕ್ಕೆ ಊರಿಂದ ಬಹಿಷ್ಕಾರ

ಸುದ್ದಿ ಸಂಗ್ರಹ ಬಾಗಲಕೋಟೆ ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂ. ಪಟ್ಟಿ ಹಣ ಕೊಡದ ಕಾರಣಕ್ಕೆ ಏಳು ಕುಟುಂಬಗಳನ್ನು ಊರಿಂದ ಬಹಿಷ್ಕಾರ ಹಾಕಿರುವ ವಿಚಿತ್ರ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಹುಣಸಿಕಟ್ಟಿ ಗ್ರಾಮದ ಊರಿನ ಹಿರಿಯರು, ಹನುಮಂತ ದೇವರ ಜಾತ್ರೆಗೆ ಪ್ರತಿ ಕುಟುಂಬಕ್ಕೆ 600 ರೂ. ಪಟ್ಟಿ ಹಾಕಿದ್ದರು. ಆದರೆ ಗ್ರಾಮದ 7 ಕುಟುಂಬಗಳು ಪಟ್ಟಿ ಹಣ ಕೊಟ್ಟಿರಲಿಲ್ಲ. ಆ ಕಾರಣವನ್ನೆ ಮುಂದಿಟ್ಟುಕೊಂಡ ಹಿರಿಯರು, ಆ ಕುಟುಂಬಗಳನ್ನು ದೈವದಿಂದ‌ ಹೊರಗೆ ಇಟ್ಟಿದ್ದೆವೆ […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ ಭಗವಾನ್ ಬುದ್ಧ ಜಯಂತಿ ಆಚರಣೆ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುದ್ಧ ಪೂರ್ಣಿಮೆಯ ಪ್ರಯುಕ್ತ ಭಗವಾನ್ ಬುದ್ಧನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಬುದ್ಧನ ಉನ್ನತ ಆದರ್ಶಗಳು, ಅಹಿಂಸಾ ತತ್ವ, ಸಾಮರಸ್ಯದ ಸಂದೇಶಗಳು ನೆಮ್ಮದಿ ಜೀವನಕ್ಕೆ ನಾಂದಿ ಎಂದರು. ಅವರ ಮಾನವೀಯತೆಯ ಸಂಕೇತಗಳು ಇಡಿ ವಿಶ್ವಕ್ಕೆ ಅನ್ವಯವಾಗಿವೆ. ಅವರ ಜೀವನ ಸಮಾನತೆ, ಪ್ರೀತಿ, ದಯೆ, ಸಹಿಷ್ಣುತೆಯ ಪ್ರತೀಕವಾಗಿದೆ. ಸೌಹಾರ್ದ, ಸಹಾನುಭೂತಿಯಿಂದ ಸಮಾಜಕ್ಕಾಗಿ ಸೇವೆ ಮಾಡುವ ಸ್ಫೂರ್ತಿ ನಮಗೆ […]

Continue Reading

ಇಂದಿನಿಂದ ದೇಶದಲ್ಲಿ ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ

ದೇಶದ ಯುವ ಜನತೆ ಆನ್‌ಲೈನ್‌ ಗೇಮ್‌ಗಳಿಗೆ ಮಾರು ಹೋಗಿದ್ದಾರೆ. ಅದೆಷ್ಟರ ಮಟ್ಟಿಗೆ ಎಂದರೆ ದೇಶದ ಹಳ್ಳಿಯ ಮೂಲೆಯಲ್ಲೂ ಗೇಮ್‌ಗಳಲ್ಲಿ ತೊಡಗಿರುವವರು ಕಾಣಸಿಗುತ್ತಾರೆ. ಹೀಗೆ ಆಡುವವರಲ್ಲಿ ಅಪ್ರಾಪ್ತರು ಸೇರಿದಂತೆ ಅನೇಕರು ಹಣ ಹೂಡಿ ನಷ್ಟ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗುತ್ತಾರೆ. ಅದೆ ರೀತಿ ಅಪರಾಧ ಕೃತ್ಯಗಳಲ್ಲೂ ತೊಡಗಿದ ಉದಾಹರಣೆಗಳನ್ನು ನಾವು ನೋಡಿದ್ದೆವೆ. ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ಆನ್‌ಲೈನ್‌ ಗೇಮಿಂಗ್‌ ಕಾಯ್ದೆ ಜಾರಿಗೆ ತಂದಿದೆ. ಯಾವೆಲ್ಲ ಕಂಪನಿಗಳು ಹೊಸ ಲೈಸೆನ್ಸ್‌ ಪಡೆಯಬೇಕು ?ನ್ಯಾಷನಲ್ ಗೇಮಿಂಗ್ ಅಥಾರಿಟಿ ಎಲ್ಲಾ ಗೇಮ್‌ಗಳಿಗೆ […]

Continue Reading

ಕರ್ನಾಟಕದ 3 ಜಿಲ್ಲೆಗಳಲ್ಲಿ ಡೇಟಾ ಪಾರ್ಕ್ ಸ್ಥಾಪನೆ: ಸಚಿವರ ಸಭೆಯಲ್ಲಿ ತೀರ್ಮಾನ

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ ಡೇಟಾ ಕೇಂದ್ರಗಳು (ಸಸ್ಟೇನಬಲ್ ಡೇಟಾ ಸೆಂಟರ್ಸ್) ಅಗತ್ಯವಿದ್ದು ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಡೇಟಾ ಪಾರ್ಕ್ ಸ್ಥಾಪಿಸಲು ಗುರುವಾರ ನಡೆದ ಸಂಬಂಧಿತ ಸಚಿವರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇಲ್ಲಿನ ಶಕ್ತಿ ಭವನದಲ್ಲಿ ನಡೆದ ಈ ಪ್ರಾಥಮಿಕ ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್, ಬೃಹತ್ ಮತ್ತು ಮಧ್ಯಮ‌ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಮತ್ತು ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪಾಲ್ಗೊಂಡಿದ್ದರು. ಹೊಸಕೋಟೆಯ ಸಮೀಪ ಡೇಟಾ ಪಾರ್ಕ್‌ಬೆಂಗಳೂರಿನಲ್ಲಿ […]

Continue Reading

ಮುಗಳನಾಗಾವಿ: ಪುಣ್ಯ ಸ್ಮರಣೋತ್ಸವ, ಮಹಾರಥೋತ್ಸವ

ಸುದ್ದಿ ಸಂಗ್ರಹ ಶಹಾಬಾದ್ತಾಲೂಕಿನ ಮುಗಳನಾಗಾವಿ ಕಟ್ಟಿಮನಿ ಸಂಸ್ಥಾನ ಹಿರೇಮಠದಲ್ಲಿ ಮೇ 2ರಂದು ಶ್ರೀ ಗುರು ನಿಜಲಿಂಗೈಕ್ಯ ಸಿದ್ಧಲಿಂಗ ಶಿವಯೋಗಿಗಳ 77ನೇ ಪುಣ್ಯ ಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವ ಜರುಗಲಿದೆ ಎಂದು ಮಠದ ಪೀಠಾಧಿಪತಿ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ತಿಳಿಸಿದರು. ಜಾತ್ರೆ ನಿಮಿತ್ತ ಬೆಳಗ್ಗೆ ಸಿದ್ಧಲಿಂಗ ಶಿವಯೋಗಿಗಳ ವಿಶೇಷ ಪೂಜೆ, ನಿತ್ಯ ಅಲಂಕಾರ ಪೂಜೆ ಜರುಗಲಿದೆ. ಸಂಜೆ ಗುರು ಸಿದ್ಧಲಿಂಗ ಶಿವಯೋಗಿಗಳ ಮಹಾಪುರಾಣ, ಸಂಗೀತ ಕಾರ್ಯಕ್ರಮ ನಿತ್ಯ ರಾತ್ರಿ 8ರಿಂದ 10ಗಂಟೆಯವರೆಗೆ ನಡೆಯುತ್ತಿದೆ. ಮೇ.1ರಂದು ಬೆಳಗ್ಗೆ ಪೂಜ್ಯ ಮರುಳಸಿದ್ದ […]

Continue Reading

ರೌಡಿಗಳಿಗೆ ಪೊಲೀಸರ ಎಚ್ಚರಿಕೆ

ಸುದ್ದಿ ಸಂಗ್ರಹ ವಾಡಿಹಳೆ ದ್ವೇಷದ ಕಾರಣಕ್ಕೆ ಏ.20ರಂದು ವಾಡಿ ಪಟ್ಟಣದಲ್ಲಿ ನಡೆದ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಸೋಮವಾರ ತಾಲೂಕಿನಾದ್ಯಂತ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಶಹಾಬಾದ್‌ ಡಿವೈಎಸ್ಪಿ ಶಂಕರಗೌಡ ಪಾಟೀಲ ನೇತೃತ್ವದಲ್ಲಿ ಚಿತ್ತಾಪುರ ತಾಲೂಕಿನ ವಿವಿದೆಡೆ ಪೊಲೀಸರು ರಾತ್ರಿ ಸಮಯದಲ್ಲಿ 50ಕ್ಕೂ ಹೆಚ್ಚು ರೌಡಿಶೀಟರ್‌ ಮನೆಗಳನ್ನು ಜಾಲಾಡಿದ್ದಾರೆ. ಸಿಪಿಐ ಸಿದ್ದಬಸವನಗೌಡ ಪಾಟೀಲ, ಪಿಎಸ್ಐ ತಿರುಮಲೇಶ ಕೆ, ಮಂಜುನಾಥರೆಡ್ಡಿ, ರೇಣುಕಾ ಉಡಗಿ ಸಹಿತ ಚಿತ್ತಾಪುರ ವಾಡಿ, ಶಹಾಬಾದ, ಕಾಳಗಿ ಪೊಲೀಸ್ ಸಿಬ್ಬಂದಿಗಳು […]

Continue Reading

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇಂದು ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದೆ. ನಾಳೆ (ಏ.30) 24 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಮೇ 1ರಂದು ರಾಯಚೂರು, […]

Continue Reading

ತೊನಸನಳ್ಳಿ(ಎಸ್): ಏ.30ರಂದು ಸಂಗಮೇಶ್ವರ ರಥೋತ್ಸವ

ಸುದ್ದಿ ಸಂಗ್ರಹ ಶಹಾಬಾದತಾಲೂಕಿನ ತೊನಸನಳ್ಳಿ(ಎಸ್) ಗ್ರಾಮದ ಶ್ರೀಗುರು ಸಂಗಮೇಶ್ವರ ಸಂಸ್ಥಾನ ಮಠದ ಪೀಠಾಧಿಪತಿಗಳಾದ ರೇವಣಸಿದ್ದ ಚರಂತೇಶ್ವರ ಶಿವಾಚಾರ್ಯರ 19ನೇ ಪೀಠಾಧಿಕಾರ ವರ್ಧಂತಿ ಮಹೋತ್ಸವ ಹಾಗೂ ಗುರು ಸಂಗಮೇಶ್ವರರ ಭವ್ಯ ರಥೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ ಏ.30ರಂದು ನಡೆಯಲಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ. ಅಂದು ಬೆಳಗ್ಗೆ ಕತೃ ಗದ್ದುಗೆಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾಮಂಗಳಾರತಿ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಧರ್ಮಸಭೆ ನಡೆಯಲಿದೆ, ಸಭೆಯನ್ನು ಸಚಿವ ಪ್ರಿಯಂಕ್ ಖರ್ಗೆ ಉದ್ಘಾಟಿಸಲಿದ್ದು, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಮಾಜಿ ಸಚಿವ […]

Continue Reading

ಮೇ 1ರಿಂದ ಎಲ್​ಪಿಜಿ ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ

ಸುದ್ದಿ ಸಂಗ್ರಹ ನವದೆಹಲಿ ಮೇ 1 ರಿಂದ ಭಾರತದಾದ್ಯಂತ ಎಲ್‌ಪಿಜಿ ಸಿಲಿಂಡರ್ ಬುಕ್ಕಿಂಗ್ ಮತ್ತು ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳು ಜಾರಿಗೆ ಬರಲಿದ್ದು, ಇದು ಲಕ್ಷಾಂತರ ಕುಟುಂಬಗಳ ಮೇಲೆ ಪ್ರಭಾವ ಬೀರಲಿದೆ. ಹೊಸ 3 ನಿಯಮ ಜಾರಿಗೆ ಬರಲಿದೆ. ಸಬ್ಸಿಡಿ ಗ್ಯಾಸ್ ಕಾಳಸಂತೆಕೋರರ ಪಾಲಾಗುವುದನ್ನು ಮತ್ತು ಅಕ್ರಮ ದಾಸ್ತಾನು ಮಾಡುವುದನ್ನು ತಡೆಯಲು ಪ್ರಮುಖ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ , ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಈ ಹೊಸ ನಿಯಮಗಳನ್ನು ಜಾರಿಗೆ ತರುತ್ತಿವೆ. ಸಿಲಿಂಡರ್ ಬುಕ್ಕಿಂಗ್ […]

Continue Reading

ಮಕ್ಕಳ ಜೊತೆ ಫುಟ್‌ಬಾಲ್: ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

ಸುದ್ದಿ ಸಂಗ್ರಹ ಗ್ಯಾಂಗ್ಟಾಕ್ಪ್ರಧಾನಿ ನರೇಂದ್ರ ಮೋದಿ ಅವರು ಸಿಕ್ಕಿಂನ ಗ್ಯಾಂಗ್ಟಾಕ್‌ನಲ್ಲಿ ಮಕ್ಕಳ ಜೊತೆ ಫುಟ್‌ಬಾಲ್ ಆಡಿ ಸಂಭ್ರಮಿಸಿದ್ದಾರೆ. ಸಿಕ್ಕಿಂ ಭಾರತದೊಂದಿಗೆ ವಿಲೀನಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ರಾಜ್ಯದ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಗ್ಯಾಂಗ್ಟಾಕ್‌ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರು ಇಂದು ಬೆಳಗ್ಗೆ ಪಾಲ್ಜೋರ್ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸ್ಥಳೀಯ ಮಕ್ಕಳೊಂದಿಗೆ ಫುಟ್‌ಬಾಲ್ ಆಡಿದರು. ನೀಲಿ ಬಣ್ಣದ ಸ್ಪೋರ್ಟ್ಸ್ ಜಾಕೆಟ್ ಧರಿಸಿದ್ದ ಪ್ರಧಾನಿಯವರು, ಮೈದಾನದಲ್ಲಿ ಉತ್ಸಾಹದಿಂದ ಓಡಾಡುತ್ತಾ ಮಕ್ಕಳೊಂದಿಗೆ ಚೆಂಡನ್ನು […]

Continue Reading