ಮಣ್ಣಿನಿಂದಲೆ ಬದುಕು, ಸಕಲ ಜೀವಿಗಳಿಗೆ ಆಸರೆ: ಬಿರಾದಾರ

ಸುದ್ದಿ ಸಂಗ್ರಹ ಚಿತ್ತಾಪುರ ಹಸಿರು ಮತ್ತು ಉಸಿರನ್ನು ಪಡೆಯಬೇಕಾದರೆ ಮಣ್ಣು ಬೇಕು. ಮಣ್ಣಿನ ಸವಕಳಿ ತೆಡೆಗಟ್ಟಿ ಅದರ ಫಲವತ್ತತೆ ಕಾಪಾಡಬೇಕು. ಮಣ್ಣಿನಿಂದಲೆ ಬದುಕು, ಸಕಲ ಜೀವಿಗಳಿಗೆ ಆಸರೆಯಾಗಿದೆ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್ ಬಿರಾದಾರ ಹೇಳಿದರು. ಮಾಡಬೂಳ ತಾಂಡಾದ ಅಶೋಕ ರಾಠೋಡ್ ಹೊಲದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಮಣ್ಣು ದಿನಾಚರಣೆ’ಯಲ್ಲಿ ಸಾಮೂಹಿಕವಾಗಿ ಮಣ್ಣಿಗೆ ಪುಷ್ಪಾರ್ಚನೆ ಮೂಲಕ ಗೌರವಿಸಿ ಮಾತನಾಡಿದ ಅವರು, ರೈತರು ರಾಸಾಯನಿಕ ಮುಕ್ತ […]

Continue Reading

ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಕೇಸ್‌ಗೆ ಟ್ವಿಸ್ಟ್: ಉದ್ಯಮಿ ಕಿಡ್ನ್ಯಾಪ್ ಹಿಂದೆ ರಘು ಕೈವಾಡ

ಬೆಂಗಳೂರು: ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಉದ್ಯಮಿ ಮನೋಜ್ ಕಿಡ್ನ್ಯಾಪ್ ಹಿಂದೆ ಬೇಕರಿ ರಘು ಕೈವಾಡವಿರುವುದು ಸಾಬೀತಾಗಿದೆ. ಸಿನಿಮಾ ನಿರ್ದೇಶಕ ನಂದಕಿಶೋರ್‌ಗೆ ರೌಡಿಶೀಟರ್ ರಾಜೇಶ್ ಅಲಿಯಾಸ್ ಅಪ್ಪಿ ಮೂಲಕ ಸಾಲ ಕೊಟ್ಟಿದ್ದ ಉದ್ಯಮಿ ಮನೋಜ್‌ನ ಅಪಹರಣವಾಗಿತ್ತು. ಇದರ ಹಿಂದೆ ಬೇಕರಿ ರಘು ಪಾತ್ರವಿರುವ ಬಗ್ಗೆ ಕೇಳಿಬಂದಿತ್ತು. ಹೀಗಾಗಿ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಅಂದಿನಿಂದ ಹುಡುಕಾಟ ನಡೆಸಿದ್ದರು. ಬಳಿಕ ಮಂಡ್ಯ ಬಳಿ ಬೇಕರಿ ರಘುನನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು. ಸದ್ಯ ಕಿಡ್ನ್ಯಾಪ್ […]

Continue Reading

ರಷ್ಯಾದ ಒಂದು ರುಬೆಲ್‌ಗೆ ಭಾರತದಲ್ಲಿ ಬೆಲೆ ಎಷ್ಟು ? ರೂಪಾಯಿ ಅಥವಾ ರುಬೆಲ್‌ ಯಾವುದರ ಮೌಲ್ಯ ಜಾಸ್ತಿ ?

ಸುದ್ದಿ ಸಂಗ್ರಹ ಬೆಂಗಳೂರು ಒಂದೆಡೆ ಡಾಲರ್‌ ಎದುರು ರೂಪಾಯಿ ಮೌಲ್ಯ ತೀವ್ರವಾಗಿ ಕುಸಿಯುತ್ತಿದೆ. 1 ಯುಎಸ್‌ ಡಾಲರ್‌ಗೆ 90 ರೂಪಾಯಿ ಗಡಿ ದಾಟಿ ರೂಪಾಯಿ ಮುಂದೆ ಸಾಗಿದೆ. ಇದರ ನಡುವೆ ಭಾರತಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಭೇಟಿ ನೀಡಿದ್ದಾರೆ. ಈ ಹಂತದಲ್ಲಿ ಭಾರತದ ರೂಪಾಯಿ ಮತ್ತು ರಷ್ಯಾದ ಕರೆನ್ಸಿಯಾಗಿರುವ ರುಬೆಲ್‌ ನಡುವೆ ನೆಟ್ಟಿಗರು ಮೌಲ್ಯದ ಲೆಕ್ಕಾಚಾರ ಮಾಡಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಭಾರತಕ್ಕೆ ಭೇಟಿ ನೀಡಿದ್ದು, ನಾಲ್ಕು ವರ್ಷಗಳ ನಂತರ ಪುಟಿನ್ ಅವರ […]

Continue Reading

ನನ್ನ ಸ್ನೇಹಿತ ಪುಟಿನ್‌ರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ: ಮೋದಿ

ನವದೆಹಲಿ: ನನ್ನ ಸ್ನೇಹಿತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಖುಷಿ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ನನ್ನ ಸ್ನೇಹಿತ ಅಧ್ಯಕ್ಷ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ. ಇಂದು ಸಂಜೆ ಮತ್ತು ನಾಳೆ ನಮ್ಮ ಸಂವಾದ ಎದುರು ನೋಡುತ್ತಿದ್ದೆನೆ. ಭಾರತ-ರಷ್ಯಾ ಸ್ನೇಹವು ಕಾಲಾತೀತವಾಗಿದ್ದು, ಇದು ನಮ್ಮ ಜನರಿಗೆ ಹೆಚ್ಚಿನ ಪ್ರಯೋಜನ ನೀಡಿದೆ ಎಂದು ತಿಳಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಗುರುವಾರ ಸಂಜೆ […]

Continue Reading

ಭಾರತದಲ್ಲಿ ಈ 3 ಬ್ಯಾಂಕ್’ಗಳು ಅತಿ ಸುರಕ್ಷಿತವೆಂದು ಆರ್​ಬಿಐ ಘೋಷಣೆ: ಇವುಗಳಿಗೆ ವಿಶೇಷ ಮಾರ್ಗಸೂಚಿ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಈ ದೇಶದ ಮೂರು ಬ್ಯಾಂಕುಗಳನ್ನು ಬಹಳ ಮುಖ್ಯವೆಂದು ವರ್ಗೀಕರಣ ಮಾಡಿದೆ. ಎಸ್​ಬಿಐ, ಎಚ್​ಡಿಎಫ್​ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕುಗಳನ್ನು ವ್ಯವಸ್ಥಿತವಾಗಿ ಅತ್ಯಂತ ಮುಖ್ಯ ಹಣಕಾಸು ಸಂಸ್ಥೆಗಳೆಂದು ಆರ್​ಬಿಐ ಪರಿಗಣಿಸಿದೆ. ಇವುಗಳನ್ನು ಡಿ-ಎಸ್​ಐಬಿ ಅಥವಾ ದೇಶೀಯವಾಗಿ ವ್ಯವಸ್ಥಿತವಾಗಿ ಪ್ರಮುಖ ಬ್ಯಾಂಕ್’ಗಳು ಎಂದು ವರ್ಗೀಕರಿಸಿದೆ. ಆರ್​ಬಿಐ ಪ್ರಕಾರ ದೇಶದ ಬ್ಯಾಂಕಿಂಗ್ ವಲಯದಲ್ಲಿ ಈ ಮೂರು ಬ್ಯಾಂಕ್’ಗಳು ಬಹಳ ಮುಖ್ಯಸ್ಥಾನ ಹೊಂದಿರುತ್ತವೆ. ಈ ಮೂರು ಬ್ಯಾಂಕ್’ಗಳ ಪೈಕಿ ಎಸ್​ಬಿಐ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿದೆ, ಎಚ್​ಡಿಎಫ್​ಸಿ […]

Continue Reading

ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಕಳ್ಳರ ಬಂಧನ

ಕಲಬುರಗಿ: ವಿಶ್ವವಿದ್ಯಾಲಯದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಒಂದು ಸುಲಿಗೆ ಮತ್ತು 5 ಕಳ್ಳತನ ಪ್ರಕರಣಕ್ಕೆ ಇಬ್ಬರನ್ನು ಬಂಧಿಸಿ ಅವರಿಂದ 7,62,400 ರೂ ಮೌಲ್ಯದ 61 ಗ್ರಾಂ ಬಂಗಾರ ಮತ್ತು 680 ಗ್ರಾಂ ಬೆಳ್ಳಿಯ ಆಭರಣಗಳು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಫಜಲಪುರ ಮೂಲದ ನೃಪತುಂಗ ಕಾಲೋನಿಯ ನಿವಾಸಿ ಕಲ್ಲಪ್ಪ ಅಲಿಯಾಸ್ ಸಂಜು ಪೂಜಾರಿ (24) ಮತ್ತು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಚಣ ಗ್ರಾಮದ ನಿವಾಸಿ ಸಂತೋಷ (30) ಎಂಬುವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೊಪಿಸಲಾಗಿದೆ ಎಂದು […]

Continue Reading

16 ವರ್ಷದೊಳಗಿನವರಿಗೆ ಸಾಮಾಜಿಕ ಮಾಧ್ಯಮ ನಿಷೇಧ: ಫೇಸ್‌ಬುಕ್, ಇನ್‌ಸ್ಟಾಗ್ರಾಂ ಬಂದ್

ಸಿಡ್ನಿ: ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವುದರ ಮೇಲೆ ನಿರ್ಬಂಧಗಳು, ಮಿತಿಗಳು ಇರಬೇಕು ಎಂಬ ವಿಚಾರವಾಗಿ ವಿಶ್ವದಾದ್ಯಂತ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೆ, ಈಗ ಆಸ್ಟ್ರೇಲಿಯಾ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವಂತಿಲ್ಲ ಎಂದು ಕಾನೂನು ರೂಪಿಸಿದೆ. ಡಿಸೆಂಬರ್‌ 10ರಂದು ಹೊಸ ಕಾನೂನು ಜಾರಿಗೆ ಬರಲಿದ್ದು, ಎಲ್ಲಾ ಸಾಮಾಜಿಕ ಮಾಧ್ಯಮ ಕಂಪನಿಗಳು ತಮ್ಮ ಬಳಕೆದಾರರು ಕನಿಷ್ಠ 16 ವರ್ಷದವರಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ 16 ವರ್ಷದೊಳಗಿನ ಮಕ್ಕಳು ಬಳಸುತ್ತಿರುವ ಫೇಸ್‌ಬುಕ್, ಇನ್‌ಸ್ಟಾಗ್ರಾಂ, […]

Continue Reading

ಭಾಗ್ಯಲಕ್ಷ್ಮಿ ಯೋಜನೆಗೆ ಕುತ್ತು ತಂದ ಬಾಲ್ಯ ವಿವಾಹ: ಯಾದಗಿರಿಯಲ್ಲಿ 189 ಫಲಾನುಭವಿಗಳಿಗೆ ಸೌಲಭ್ಯ ಅನುಮಾನ

ಸುದ್ದಿ ಸಂಗ್ರಹ ಯಾದಗಿರಿ ಜಿಲ್ಲೆಯಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ನೋಂದಣಿ ಮಾಡಿಕೊಂಡು ಬಾಂಡ್‌ ಪಡೆದಿರುವ 189 ಫಲಾನುಭವಿಗಳಿಗೆ ಬಾಲ್ಯ ವಿವಾಹವಾಗಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದ್ದು, ಇಷ್ಟು ಫಲಾನುಭವಿಗಳು ಸರಕಾರದ ಯೋಜನೆಯ ಆರ್ಥಿಕ ಸೌಲಭ್ಯದಿಂದ ವಂಚಿತರಾಗುವಂತಾಗಿದೆ. ಅಲ್ಲದೆ ಕಾನೂನಿನ ಸಂಕಷ್ಟ ಎದುರಿಸುವ ಭೀತಿಯೂ ಶುರುವಾಗಿದೆ. ಕರ್ನಾಟಕದಲ್ಲಿ 2006-07ನೇ ಸಾಲಿನಲ್ಲಿ ಜಾರಿಗೊಳಿಸಿದ ಭಾಗ್ಯಲಕ್ಷ್ಮಿ ಯೋಜನೆಯಡಿ ಮೊದಲನೆಯ ವರ್ಷವೇ ನೋಂದಣಿಯಾಗಿರುವ ಫಲಾನುಭವಿಗಳಿಗೆ ನೀಡಿರುವ ಬಾಂಡ್‌ಗಳಿಗೆ ಈ ವರ್ಷ ಮೆಚುರಿಟಿ (ಪರಿಪಕ್ವ) ಆಗಿರುವುದರಿಂದ ಫಲಾನುಭವಿಗಳಿಗೆ ಮೆಚುರಿಟಿ ಹಣ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಆದ್ದರಿಂದ […]

Continue Reading

ಗ್ರಾಹಕರಿಗೆ ಶಾಕ್: ನುಗ್ಗೆಕಾಯಿ ಕೆಜಿಗೆ 700 ರೂ

ಬೆಂಗಳೂರು: ಚಿಕನ್, ಮಟನ್ ರೇಟನ್ನು ನುಗ್ಗೆಕಾಯಿ ಮೀರಿಸಿಬಿಟ್ಟಿದೆ. ಕೆಜಿ ನುಗ್ಗೆಕಾಯಿ ರೇಟ್ 500 ರಿಂದ 700 ರೂಪಾಯಿಗೇರಿದೆ. ಚಳಿಗಾಲದಲ್ಲಿ ನುಗ್ಗೆಕಾಯಿ ಇಳುವರಿ ಕಡಿಮೆಯಾಗಿದ್ದು, ಬೇಡಿಕೆ ಹೆಚ್ಚಾಗಿರೋದೆ ಇದಕ್ಕೆ ಕಾರಣವಾಗಿದೆ. ಈ ಹಿಂದೆ ಕೆ.ಜಿಗೆ ಹೆಚ್ಚೆಂದರೆ 150-200 ರೂ ಮಾತ್ರ ಇರುತ್ತಿತ್ತು. ಈಗ 2 ಕಾಯಿಗೆ 100 ರೂ ಕೊಡಬೇಕಾಗಿದೆ. ಎರಡ್ಮೂರು ತಿಂಗಳು ನುಗ್ಗೆಕಾಯಿ ಬೆಲೆ ಕಡಿಮೆ ಆಗಲ್ಲ ಎನ್ನಲಾಗುತ್ತಿದೆ.

Continue Reading

ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ

ನವದೆಹಲಿ: ಅಂಗನವಾಡಿ, ಅಕ್ಷರ ದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಅನ್ನಪೂರ್ಣ ದೇವಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಹತ್ವದ ಮಾತುಕತೆ ನಡೆಸಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನಾ ಚಳವಳಿ ನಡೆಸುತ್ತಿದ್ದ ಕರ್ನಾಟಕ ಅಂಗನವಾಡಿ, ಅಕ್ಷರ ದಾಸೋಹ ಮತ್ತು ಆಶಾ ನೌಕರರ ಪ್ರಮುಖರನ್ನು ಬುಧವಾರ ನವದೆಹಲಿಗೆ ಕರೆಸಿಕೊಂಡ ಸಚಿವ […]

Continue Reading