ವಾಡಿ: ಸ್ವದೇಶಿ ದಿನಾಚರಣೆ ಆಚರಣೆ

ವಾಡಿ: ಪಟ್ಟಣದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸ್ವದೇಶಿ ದಿನಾಚರಣೆ ಆಚರಿಸಲಾಯಿತು. ಸ್ವದೇಶಿ ಚಿಂತಕ ರಾಜೀವ್ ದೀಕ್ಷಿತರ 58ನೇ ಜನ್ಮ ದಿನ, 15ನೇ ವರ್ಷದ ಪುಣ್ಯ ಸ್ಮರಣೆ ನಿಮಿತ್ತವಾಗಿ ಪತಂಜಲಿ ಯೋಗ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸ್ವದೇಶಿ ದಿನಾಚರಣೆಯನ್ನು ಸೇಡಂ ಓಂ ಶಾಂತಿ ಕೇಂದ್ರದ ಬಿ.ಕೆ ಕಲಾವತಿ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಅವರು, ರಾಜೀವ್ ದೀಕ್ಷಿತ್ ಅವರು ಸ್ವದೇಶಿ ಉಳಿವಿಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಅವರ ಸಂಕಲ್ಪ ಮತ್ತು ಕನಸನ್ನು ನನಸು ಮಾಡುವ ಜವಾಬ್ದಾರಿ […]

Continue Reading

ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು: ಮತ್ತೆ ಕನ್ನೇರಿ ಶ್ರೀ ವಿವಾದಾತ್ಮಕ ಹೇಳಿಕೆ

ಚಿಕ್ಕೋಡಿ: ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು ಎಂದು ಹೇಳುವ ಮೂಲಕ ಕೊಲ್ಲಾಪುರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿಜಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಭಜರಂಗದಳ ಆಯೋಜಿಸಿದ್ದ ಹನುಮ ಮಾಲಾ ಧೀಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಮಾಲೆ ಪೊಲೀಸ್ ಇದ್ದಹಾಗೆ, ನಮ್ಮನ್ನು ಕೆಟ್ಟ ಕೆಲಸ ಮಾಡಲು ಬಿಡುವುದಿಲ್ಲ. ಏನಾದರೂ ತಪ್ಪು ಕೆಲಸ ಮಾಡಲು ಹೊರಟರೆ, ಅದು ನಮ್ಮನ್ನು ತಡೆಯುತ್ತೆ. ನಮ್ಮಲ್ಲಿ ಪಂಡರಾಪುರಕ್ಕೆ ಹೋಗುವವರು ಮಾಲೆ ಹಾಕಿಕೊಳ್ಳುತ್ತಾರೆ. ಯಾರಾದರು ಮದ್ಯದಂಗಡಿ […]

Continue Reading

ಚಿತ್ತಾಪುರ: ಭೀಮನಡೆ ಪಥಸಂಚಲನಕ್ಕೆ ಕ್ಷಣಗಣನೆ

ಚಿತ್ತಾಪುರ: ರಾಜ್ಯದ ಗಮನ ಸೆಳೆದಿರುವ ಭೀಮನಡೆಪಥಸಂಚಲನಕ್ಕೆ ಚಿತ್ತಾಪುರ ಪಟ್ಟಣ ಸಜ್ಜಾಗಿದೆ. ಪಥಸಂಚಲನ ಸಾಗುವ ಮಾರ್ಗದುದ್ದಕ್ಕೂ ವಿವಿಧ ಸಮಾಜಗಳು ಬಳಸುವ ಧ್ವಜದ ಬಣ್ಣಗಳ ಬಾವುಟಗಳು, ಬಂಟಿಂಗ್ಸ್’ಗಳು, ಬ್ಯಾನರ್’ಗಳು ಹಾಗೂ ಪ್ಲೇಕ್ಸ್’ಗಳು ರಾರಾಜಿಸುತ್ತಿವೆ. ಸಂವಿಧಾನ ಪೀಠಿಕೆಯೊಂದಿಗೆ ಬುದ್ಧ, ಬಸವ, ಅಂಬೇಡ್ಕರ್, ಕನಕದಾಸ, ಅಂಬಿಗರ ಚೌಡಯ್ಯ, ನಾರಾಯಣ ಗುರು, ಮಹರ್ಷಿ ವಾಲ್ಮೀಕಿ, ಸಂತ ಸೇವಾಲಾಲ್, ಟಿಪ್ಪು ಸುಲ್ತಾನ್, ಶಿವಾಜಿ ಮಹಾರಾಜ್, ಸಿದ್ದರಾಮೇಶ್ವರ, ವಿಶ್ವಕರ್ಮ, ಸರ್ವಜ್ಞ, ಮಹಾವೀರ, ನುಲಿಯ ಚಂದಯ್ಯ ಸೇರಿದಂತೆ ವಿವಿಧ ಸಮುದಾಯಗಳ ಶರಣರ ಭಾವಚಿತ್ರಗಳ ಕಟೌಟ್‌’ಗಳು ಪಟ್ಟಣದ ಪ್ರಮುಖ ರಸ್ತೆ […]

Continue Reading

ಕನ್ನಡ ನಿತ್ಯ ಬಳಕೆಯಲ್ಲಿದ್ದರೆ ಮಾತ್ರ ನಾಡು- ನುಡಿ ಉಳಿವು: ತಹಸೀಲ್ದಾರ್ ನಾಗಯ್ಯ ಹಿರೇಮಠ

ಸುದ್ದಿ ಸಂಗ್ರಹ ಚಿತ್ತಾಪುರ ಕನ್ನಡವು ಜಗತ್ತಿನ ಅತ್ಯಂತ ಪ್ರಾಚೀನ ಭಾಷೆಗಳಲ್ಲೊಂದು. ಈ ಭಾಷೆಯನ್ನು ನಿರಂತರವಾಗಿ ಮಾತನಾಡಿ, ಕಲಿಸಿ, ಬಳಸಿಕೊಂಡು ಬಂದರೆ ಮಾತ್ರ ನಮ್ಮ ನಾಡು ಹಾಗೂ ನುಡಿ ಉಳಿಯಲು ಸಾಧ್ಯ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ವರುಣ ನಗರದ ಶ್ರೀಗುರು ರಾಘವೇಂದ್ರ ಟ್ರಸ್ಟ್ ದಿ. ಶೇಷಗಿರಿರಾವ ಎಸ್ ಕುಲಕರ್ಣಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕವು ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಸಿರಿನುಡಿ ಸಂಭ್ರಮ–2025 ಕಾರ್ಯಕ್ರಮ ಉದ್ಘಾಟಿಸಿ […]

Continue Reading

ಕನ್ನಡ ಪ್ರತಿಯೊಬ್ಬರ ಉಸಿರಾಗಲಿ: ಸಂತೋಷ ಕುಡಳ್ಳಿ

ಸುದ್ದಿ ಸಂಗ್ರಹ ಕಾಳಗಿ ಕರ್ನಾಟಕದಲ್ಲಿರುವ ಎಲ್ಲರು ಮೊದಲು ಕನ್ನಡಿಗರು. ಕನ್ನಡವೇ ನಮ್ಮ ಧರ್ಮ, ಮತ, ಭಾಷೆ, ಪ್ರಾಂತ್ಯ. ಕನ್ನಡ ಕೇವಲ ಭಾಷೆಯಲ್ಲ. ಅದು ಪ್ರತಿಯೊಬ್ಬ ಕನ್ನಡಿಗನ ಹೃದಯ ಎಂದು ಕಸಾಪ ಕಾಳಗಿ ತಾಲೂಕಾಧ್ಯಕ್ಷ ಸಂತೋಷ ಕುಡಳ್ಳಿ ಹೇಳಿದರು. ತಾಲೂಕಿನ ಕೋರವಾರ ಗ್ರಾಮದ ಅಣವೀರಭದ್ರೇಶ್ವರ ಪ್ರೌಢ ಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಮಾಸಾಚರಣೆ ಸರಣಿ ಉಪನ್ಯಾಸ ಕಾರ್ಯಕ್ರಮ-30 ಮತ್ತು ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ನಾಡು-ನುಡಿಯ ಸಂರಕ್ಷಣೆ ಸರ್ವರ […]

Continue Reading

ಇನ್ನುಮುಂದೆ ಮೊಬೈಲ್’ನಲ್ಲಿ ಸಕ್ರಿಯ ಸಿಮ್‌ ಇದ್ದರೆ ಮಾತ್ರ ವಾಟ್ಸಪ್‌ ವರ್ಕ್‌ ಆಗುತ್ತೆ

ನವದೆಹಲಿ: ಇನ್ನುಮುಂದೆ ಮೊಬೈಲ್’ನಲ್ಲಿ ಸಕ್ರಿಯವಾಗಿರುವ ಸಿಮ್‌ ಇದ್ದರೆ ಮಾತ್ರ ಮೆಸೇಜಿಂಗ್‌ ಅಪ್ಲಿಕೇಶನ್‌ಗಳು ತೆರೆದುಕೊಳ್ಳಲಿದೆ. ಬಳಕೆದಾರರ ಮೊಬೈಲ್‌ನಲ್ಲಿ ಸಕ್ರಿಯವಾಗಿರುವ ಸಿಮ್‌ ಇದ್ದಾಗ ಮಾತ್ರ ವಾಟ್ಸಪ್‌ ಸೇರಿದಂತೆ ಆ್ಯಪ್‌ ಆಧಾರಿತ ಸಂವಹನ ಸೇವೆ ಕಾರ್ಯನಿರ್ವಹಿಸಬೇಕೆಂದು ಕೇಂದ್ರ ಸರ್ಕಾರ ಸೂಚಿಸಿದೆ. ಈ ಕುರಿತಂತೆ 120 ದಿನಗಳೊಳಗಾಗಿ ದೂರಸಂಪರ್ಕ ಇಲಾಖೆಗೆ (DoT) ಅನುಪಾಲನಾ ವರದಿಯನ್ನು ಸಲ್ಲಿಸಬೇಕು. ವರದಿ ಸಲ್ಲಿಸಲು ವಿಫಲವಾದಲ್ಲಿ ದೂರಸಂಪರ್ಕ ಕಾಯ್ದೆ 2023, ಟೆಲಿಕಾಂ ಸೈಬರ್ ಭದ್ರತಾ ನಿಯಮ ಮತ್ತು ಇತರ ಕಾಯ್ದೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಆ್ಯಪ್‌ ಆಧಾರಿತ […]

Continue Reading

ಅಣ್ಣಾವ್ರು, ಡಾ.ವಿಷ್ಣುವರ್ಧನ್‌ರೊಂದಿಗೆ ಮರೆಯಲಾಗದ ಅಭಿನಯ: ಉಮೇಶ್‌ ಇನ್ನು ನೆನಪು ಪಾತ್ರ

ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಕಳಚಿದೆ. ಖ್ಯಾತ ಹಾಸ್ಯನಟ ಉಮೇಶ್ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಮೇಶ್ ಅವರಿಗೆ 80 ವರ್ಷ ವಯಸ್ಸಾಗಿತ್ತು, ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಇದೆ ಅಕ್ಟೋಬರ್ 10ರಂದು ಜಾರಿಬಿದ್ದು ಉಮೇಶ್ ಪೆಟ್ಟು ಮಾಡಿಕೊಂಡಿದ್ದರು. 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಉಮೇಶ್‌ ಬಹುತೇಕ ಹಾಸ್ಯ ಪಾತ್ರಗಳಲ್ಲೆ ಮಿಂಚಿದ್ದರು. ತನ್ನ ಕಾಮಿಡಿ ಟೈಮಿಂಗ್ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಎಂ.ಎಸ್ […]

Continue Reading

ಲ್ಯಾಂಡಿಂಗ್‌ ವೇಳೆ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

ಹುಬ್ಬಳ್ಳಿ: ಲ್ಯಾಂಡಿಂಗ್‌ ವೇಳೆ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ದುರಂತ ತಪ್ಪಿದಂತಾಗಿದೆ. ಬೆಂಗಳೂರಿನಿಂದ ಸಂಜೆ 6:45ಕ್ಕೆ ಬಿಟ್ಟು 7:45ಕ್ಕೆ ಹುಬ್ಬಳ್ಳಿಗೆ ಬಂದಿದ್ದ 6ಇ7162 ಇಂಡಿಗೋ ವಿಮಾನದಲ್ಲಿ ಲ್ಯಾಂಡಿಂಗ್‌ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದ ಆಕಾಶದಲ್ಲಿ 30 ನಿಮಿಷಗಳ ವಿಮಾನ ಸುತ್ತಾಟ ನಡೆಸಿದೆ. ಪೈಲಟ್ ಚಾಣಾಕ್ಷತನದಿಂದ 70ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿದಂತಾಗಿದೆ. 30 ನಿಮಿಷಗಳ ಕೈಯಲ್ಲಿ ಜೀವ ಹಿಡಿದುಕೊಂಡು ಪ್ರಯಾಣಿಕರು ಕುಳಿತಿದ್ದರು. ಸುಮಾರು 8:15ಕ್ಕೆ ಲ್ಯಾಂಡ್ ವಿಮಾನ ಲ್ಯಾಂಡ್‌ ಆಗಿದೆ.

Continue Reading

ಮಂಗಳೂರು: ತಾಯಿ ಮೇಲೆ ಮನಬಂದಂತೆ ಹಲ್ಲೆ ನಡೆಸಿ ಮಗಳು ಕ್ರೌರ್ಯ

ಮಂಗಳೂರು: ಮಗಳೊಬ್ಬಳು ತನ್ನ ತಾಯಿಯನ್ನು ಮನಬಂದಂತೆ ಥಳಿಸಿ ಕ್ರೌರ್ಯ ಮೆರೆದಿರುವ ಘಟನೆ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ನಡೆದಿದೆ. ಮೂಡುಶೆಡ್ಡೆಯ ಶಿವನಗರ ಎಂಬಲ್ಲಿ ಕಳೆದ ಆರೇಳು ವರ್ಷಗಳಿಂದ ವಾಸಿಸುತ್ತಿರುವ ಉತ್ತರ ಕರ್ನಾಟಕ ಮೂಲದ ನಿರ್ಮಲಾ ಎಂಬವರ ಕುಟುಂಬದ ಕದನ ಈಗ ಬೀದಿಗೆ ಬಂದಿದೆ. ಮಾನಸಿಕವಾಗಿ ಅಸ್ವಸ್ಥರಾಗಿರುವ ನಿರ್ಮಲಾ ಮತ್ತು ಮಗಳು ನೇತ್ರಾವತಿ ನಡುವೆ ಪ್ರತಿದಿನ ಜಗಳವಾಗುತ್ತಿತ್ತು. ಕಳೆದ ಬುಧವಾರ ಜಗಳ ಮಿತಿಮೀರಿದೆ. ನಿರ್ಮಲಾ ಪ್ರತಿದಿನ ಮೂಡುಶೆಡ್ಡೆ ಗ್ರಾಮ‌ ಪಂಚಾಯಿತಿಗೆ ಆಗಮಿಸಿ ಮಗಳ ವಿರುದ್ಧ ದೂರು ನೀಡುತ್ತಿದ್ದರು. ಪಂಚಾಯಿತಿಯವರು ತಾಯಿಗೆ […]

Continue Reading

ಚಿತ್ತಾಪುರ ತಹಸೀಲ್ದಾರರ ಕರ್ತವ್ಯ ಚ್ಯುತಿ ವಿರುದ್ಧ ಜಿಲ್ಲಾಧಿಕಾರಿಗೆ ದೂರು

ಚಿತ್ತಾಪುರ: ತಹಸೀಲ್ದಾರ್ ಕರ್ತವ್ಯ ಚ್ಯುತಿ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಲಾಗಿದೆ ಎಂದು ನಾಗಾವಿ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ವೀರಣ್ಣ ಯಾರಿ ಹೇಳಿದ್ದಾರೆ. ಪಟ್ಟಣದ ನಾಗಾವಿ ಹಿತರಕ್ಷಣಾ ಸಮಿತಿ ಮತ್ತು ಚಿತ್ತಾಪುರದ ನಾಗರಿಕರಿಂದ ಮಾರ್ಚ್ 12 ರಂದು ಐತಿಹಾಸಿಕ ನಾಗಾವಿ ವಿಶ್ವವಿದ್ಯಾಲಯ ಪರಿಸರಕ್ಕೆ ಸಂಬಂಧಿಸಿದ ಗೆಜೆಟ್ ಅಧಿಸೂಚನೆ ಮರುಪರಿಶೀಲನೆ ಮಾಡುವುದು ಮತ್ತು ಸ್ಥಳದ ಬಗ್ಗೆ ವೈಜ್ಞಾನಿಕ ಸಂಶೋಧನೆ ಮಾಡಿ ಹೊಸ ಗೆಜೆಟ್ ಹೊರಡಿಸುವ ಬಗ್ಗೆ ಸಂತರ ನೇತೃತ್ವದಲ್ಲಿ ತಹಸೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಕೊಡಲಾಗಿತ್ತು ಎಂದರು. […]

Continue Reading