ಇನ್‌ಸ್ಟಾದಲ್ಲಿ ಡಾಕ್ಟರ್‌ ಆಗೋ ಹುಡುಗಿ ಪರಿಚಯ: ಪ್ರೀತಿ, ಮದುವೆ ಹೆಸರಲ್ಲಿ ಅರ್ಧ ಕೆಜಿ ಚಿನ್ನಕ್ಕೆ ಕನ್ನ ಹಾಕಿದ್ದ ಆರೋಪಿ ಅರೆಸ್ಟ್‌

ಬೆಂಗಳೂರು: ಇನ್‌ಸ್ಟಾದಲ್ಲಿ ವಿದ್ಯಾರ್ಥಿಯನ್ನು ಪರಿಚಯ ಮಾಡಿಕೊಂಡು, ಪ್ರೀತಿ-ಮದುವೆ ಅಂತ ಆಸೆ ತೋರಿಸಿ ಅರ್ಧ ಕೆಜಿ ಚಿನ್ನಕ್ಕೆ ಕನ್ನ ಹಾಕಿದ್ದ ನಕಲಿ ಬ್ಯುಸಿನೆಸ್‌ಮೆನ್ ಪೊಲೀಸರು ಬಂಧಿಸಿದ್ದಾರೆ. ಜನಾರ್ದನ ಅಲಿಯಾಸ್‌ ಸಿದ್ಧಾರ್ಥ್‌ ವೀರ್‌ ಬಂಧಿತ ಆರೋಪಿ. ನೀಟ್‌ಗೆ ತಯಾರಿ ನಡೆಸುತ್ತಿದ್ದ ಹುಡುಗಿಯನ್ನು ಈತ ಇನ್‌ಸ್ಟಾದಲ್ಲಿ ಪರಿಚಯ ಮಾಡಿಕೊಂಡಿದ್ದ. ಮದುವೆ ಆಗ್ತಿನಿ ಅಂತ ಯುವತಿ ಮನೆಗೆ ಬಂದವನು, ಅರ್ಧ ಕೆಜಿ ಚಿನ್ನ ಕಳ್ಳತನ ಮಾಡಿದ್ದ. ಈಗ ಜ್ಞಾನಭಾರತಿ ಠಾಣೆ ಪೊಲೀಸರ ಅತಿಥಿಯಾಗಿದ್ದಾನೆ. ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ರಿಕ್ವೆಸ್ಟ್ ಕಳಿಸಿದ್ದ ಆರೋಪಿ ಜನಾರ್ದನ್, ತಾನು‌ […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ 76ನೇ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಮುಖಂಡರು ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಆಚರಿಸಿದರು. ಬಿಜೆಪಿ ಮುಖಂಡ ರಾಜು ಮುಕ್ಕಣ್ಣ ಮಾತನಾಡಿ, ಭಾರತ ಸಾರ್ವಭೌಮ, ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಸತ್ತಾತ್ಮಕ ಗಣತಂತ್ರ ದೇಶ ಎಂದು ಸಂವಿಧಾನದಲ್ಲಿ ಘೋಷಿಸಿ ನಮ್ಮೆಲ್ಲರಿಗೂ ಮಾನವೀಯ ಬದುಕನ್ನು ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು ನೀಡಿದ್ದಾರೆ ಎಂದರು. ಇಲ್ಲಿರುವ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಒದಗಿಸಲಾಗಿದೆ. ಭಾರತದ […]

Continue Reading

ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅಕಾಲಿಕ ನಿಧನಕ್ಕೆ ಸರಕಾರಿ ನೌಕರರ ಸಂಘ ಶೋಕ ವ್ಯಕ್ತ

ಕಲಬುರಗಿ: ವಿಜಯಪೂರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕ ಬೈಪಾಸ್ ಬಳಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ಕಲಬುರಗಿ ಅಧ್ಯಕ್ಷ ಬಸವರಾಜ ಬಳೂಂಡಗಿ ಮತ್ತು ಪದಾಧಿಕಾರಿಗಳಾದ ಸುರೇಶ ಶರ್ಮಾ, ಮಹೇಶ ಹೂಗಾರ, ಶ್ರೀಮಂತ ಪಟ್ಟೇದಾರ, ಧರ್ಮರಾಯ ಜವಳಿ, ಚಂದ್ರಕಾಂತ ಏರಿ, ‌ಎಂ.ಬಿ […]

Continue Reading

ಕಾರು ಅಪಘಾತ: ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಕಲಬುರಗಿ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ (KSMS) ಎಂಡಿ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೆಎಸ್‌ಎಂಸಿಎಲ್ ಎಂಡಿಯಾಗಿದ್ದ ಮಹಾಂತೇಶ್ ಬೀಳಗಿ ಇನ್ನೋವಾ ಕಾರಿನಲ್ಲಿ ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ಅಪಘಾತವಾಗಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಹಳ್ಳಿಯಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಾಂತೇಶ್ ಬೀಳಗಿ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ […]

Continue Reading

ವಾಡಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಮೋದಿ ಧ್ವಜಾರೋಹಣದ ಭಕ್ತಿಯ ಸಂಭ್ರಮಾಚರಣೆ

ವಾಡಿ: ಪಟ್ಟಣದ ಸಮೀಪದ ಕೊಂಚುರಿನ ಹನುಮಾನ ದೇವಸ್ಥಾನದಲ್ಲಿ ಬಿಜೆಪಿ ಮುಖಂಡರು ಅಯೋಧ್ಯೆಯ ರಾಮಮಂದಿರದಲ್ಲಿ ಮೋದಿ ಅವರು ಐತಿಹಾಸಿಕ ಭಗವಧ್ವಜಾರೋಹಣ ನೆರವೇರಿಸಿದ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕೊಂಡಿದ್ದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಅಯೋಧ್ಯೆಯಲ್ಲಿನ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಇಂದಿನ ಪವಿತ್ರ ದಿನದಂದು ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂದಿರದ ಶಿಖರದ ಮೇಲೆ ಕೇಸರಿ ಧ್ವಜವನ್ನು ಹಾರಿಸಿ, ನಿರ್ಮಾಣ ಕಾರ್ಯದ ಪೂರ್ಣತೆಯನ್ನು ಅಧಿಕೃತವಾಗಿ ಘೋಷಿಸಿದ್ದು ನಮ್ಮೆಲ್ಲರಿಗೆ ಹೆಮ್ಮೆ ಎನಿಸುತ್ತಿದೆ. […]

Continue Reading

ಮಹಿಳಾ ದೌರ್ಜನ್ಯದ ವಿರುದ್ಧ ಜಾಗೃತಿ ಅಗತ್ಯ: ಪೂಜಾ ಹೂಗಾರ

ಕಲಬುರಗಿ: ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಜಾಗೃತಿ ಮೂಡಿಸುವುದು, ಅದನ್ನು ನಿಲ್ಲಿಸುವುದು ಮತ್ತು ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಯುವ ಚಿಂತಕಿ ಪೂಜಾ ಹೂಗಾರ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಬೆಳಿಗ್ಗೆ ಏರ್ಪಡಿಸಿದ್ದ ‘ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಾಚಾರ, ಕೌಟುಂಬಿಕ ಹಿಂಸೆ ಮತ್ತು ಇತರ ರೀತಿಯ ದೌರ್ಜನ್ಯಗಳು […]

Continue Reading

ಇನ್ಮುಂದೆ ನಮೋ ಭಾರತ್ ರೈಲಲ್ಲಿ ಪಾರ್ಟಿ, ಮದುವೆ ಫೋಟೋಶೂಟ್ ಮಾಡಬಹುದು

ನವದೆಹಲಿ: ಇನ್ಮುಂದೆ ನಮೋ ಭಾರತ್ ರೈಲು ಹಾಗೂ ನಿಲ್ದಾಣದಲ್ಲಿ ಪಾರ್ಟಿ, ಪ್ರಿ-ವೆಡ್ಡಿಂಗ್ ಶೂಟ್ ಮಾಡಬಹುದು. ನಿಗದಿಪಡಿಸಿದ ಬಾಡಿಗೆ ಕೊಟ್ಟರೆ ಖಾಸಗಿ ಕಾರ್ಯಕ್ರಮ ಆಯೋಜಿಸಬಹುದು ಎಂದು ತಿಳಿಸಿದೆ. ಈ ಕುರಿತು NCRTC ಮಾಹಿತಿ ನೀಡಿದ್ದು, ನಮೋ ಭಾರತ್ ರೈಲು ಹಾಗೂ ನಿಲ್ದಾಣಗಳಲ್ಲಿ ಫೋಟೋಶೂಟ್ ಸೇರಿದಂತೆ ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ನೀಡಿದೆ. ಈ ಮೂಲಕ ಜನರು ತಮ್ಮ ವಿಶೇಷ ದಿನಗಳನ್ನು ರೈಲಿನಲ್ಲಿ ಆಚರಿಸಬಹುದಾಗಿದೆ. ಈ ನಿರ್ಧಾರದಿಂದ ಹೊಸ ಆದಾಯ ಸೃಷ್ಟಿಯಾಗಲಿದ್ದು, ಜನರಿಗೆ ವಿಭಿನ್ನ ಅನುಭವ ನೀಡಲಿದೆ. ಸದ್ಯ ಈ […]

Continue Reading

ಉಚಿತ ನೇತ್ರ ಶಸ್ತ್ರಚಿಕಿತ್ಸೆಗೆ 94 ಜನರು ಆಯ್ಕೆ

ಸುದ್ದಿ ಸಂಗ್ರಹ ಚಿತ್ತಾಪುರಜನರು ಅನೇಕ ಕೆಲಸಗಳು ಸುಲಭವಾಗಿ ಮಾಡಬಹುದು, ಆದರೆ ಸಮಾಜಮುಖಿ ಕಾರ್ಯ ಮಾಡುವುದು ಸುಲಭವಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ ಮರಗೋಳ ಹೇಳಿದರು.‌ ಪಟ್ಟಣದಲ್ಲಿ ದಿಗ್ಗಾಂವಕರ್ ಎಜ್ಯುಕೇಷನ್ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಪ್ರಾರ್ಥನಾ ಆಂಗ್ಲ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ, ಬೃಹತ್ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯ ಶಿಬಿರ ಹಮ್ಮಿಕೊಳ್ಳುವ ಮೂಲಕ ಜನೋಪಯೋಗಿ ಕಾರ್ಯದಿಂದ ಸಮಾಜದ ಬಡವರಿಗೆ, ದುಬಾರಿ […]

Continue Reading

ರಾವೂರ ಮಕ್ಕಳಿಂದ ಒಂದು ದಿನದ ಶಾಲಾ ಆಡಳಿತ

ಚಿತ್ತಾಪುರ: ಶಾಲಾ ಆಡಳಿತ ಎಂಬ ವಿಶಿಷ್ಟ ಪ್ರಯೋಗದ ಮೂಲಕ ಮಕ್ಕಳಲ್ಲಿ ಬೋಧನಾ ಸಾಮಾರ್ಥ್ಯ, ಕೌಶಲ್ಯ ತುಂಬುವ ಪ್ರಯತ್ನ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯ ಶಿಕ್ಷಕರ ನೆರವಿನಿಂದ ಮಕ್ಕಳು ಅತ್ಯಂತ ಸಮರ್ಥವಾಗಿ ನಿರ್ವಹಿಸಿದರು. ಈ ಪ್ರಯೋಗದಲ್ಲಿ ಮಕ್ಕಳೆ ಶಿಕ್ಷಕರು, ಶಿಕ್ಷಕರೆ ಮಕ್ಕಳಾಗಿ ಒಂದು ದಿನದ ಮಟ್ಟಿಗೆ ಮಕ್ಕಳೆ ಮುಖ್ಯಗುರುಗಳಾಗಿ, ವರ್ಗಶಿಕ್ಷಕರಾಗಿ, ಶಿಕ್ಷಕರಾಗಿ, ದೈಹಿಕ ಶಿಕ್ಷಕರಾಗಿ ಉತ್ತಮ ರೀತಿಯಲ್ಲಿ ಪಾತ್ರ ನಿಭಾಯಿಸಿ ಶಿಕ್ಷಕರ ಮತ್ತು ಆಡಳಿತ ಮಂಡಳಿಯ ಮೆಚ್ಚುಗೆ ಪಡೆದರು. ಬಣ್ಣ ಬಣ್ಣದ ಸೀರೆಯುಟ್ಟ ವಿದ್ಯಾರ್ಥಿನಿಯರು, ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ […]

Continue Reading

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ: ನಾಳೆ ಮೋದಿಯಿಂದ ಧಾರ್ಮಿಕ ಧ್ವಜಾರೋಹಣ

ಲಕ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದ್ದ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ನಾಳೆ ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ಮಂಗಳವಾರ ಬೆಳಿಗ್ಗೆ ಸುಮಾರು 11:52 ರಿಂದ 12:35ರ ಶುಭ ಮುಹೂರ್ತದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. 191 ಅಡಿ ಎತ್ತರದ ರಾಮ ಮಂದಿರದ ಮೇಲ್ಭಾಗದಲ್ಲಿ 11 ಅಡಿ ಅಗಲ ಮತ್ತು 22 ಅಡಿ ಉದ್ದದ ತ್ರಿಕೋನಾಕಾರದ ಕೇಸರಿ ಧ್ವಜವನ್ನು ಹಾರಿಸಲಾಗುತ್ತಿದೆ. ದ್ವಜದ ಮೇಲೆ ಸೂರ್ಯವಂಶಿ ಮತ್ತು ತ್ರೇತಾಯುಗದ ಚಿಹ್ನೆಗಳನ್ನು […]

Continue Reading