ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ಇತಿಹಾಸದಲ್ಲೆ ಮೊದಲ ಬಾರಿಗೆ ಶೇ.94.10 ರಷ್ಟು ಫಲಿತಾಂಶ

ಸುದ್ದಿ ಸಂಗ್ರಹ ಬೆಂಗಳೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟಗೊಂಡಿದ್ದು, ಇತಿಹಾಸದಲ್ಲಿ ಇದೆ ಮೊದಲಬಾರಿಗೆ ಶೇ.94.10ರಷ್ಟು ಫಲಿತಾಂಶ ಪ್ರಕಟವಾಗಿದೆ. ಈಗಾಗಲೆ ಇಲಾಖೆ ವೆಬ್ ಸೈಟ್ ನಲ್ಲೂ (web: https://karresults.nic.in/) ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಿದೆ. SMS, ವಾಟ್ಸಪ್‌ ಮೂಲಕವೂ ಫಲಿತಾಂಶ ಕಳುಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಈ ಬಾರಿ ಪರೀಕ್ಷೆಗೆ ಹಾಜರಾಗಿದ್ದ 7,70,209 ವಿದ್ಯಾರ್ಥಿಗಳ ಪೈಕಿ, 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದರು. ಇದರಲ್ಲಿ 3,77,922 (96.18%) […]

Continue Reading

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡು ಕಾಲು ಕಟ್: ಇಬ್ಬರ ಸ್ಥಿತಿ ಗಂಭೀರ

ಸುದ್ದಿ ಸಂಗ್ರಹ ಬೀದರ್ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊರ್ವನ ಎರಡು ಕಾಲು ಕಟ್ ಆಗಿದ್ದು, ಇಬ್ಬರ ಕಾಲಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಥೇರು ಮೈದಾನದಲ್ಲಿ ನಡೆದಿದೆ. ಶ್ರೀ ಬಸವೇಶ್ವರ ಜಾತ್ರಾ ರಥದಡಿ ಸಿಲುಕಿ ಧನರಾಜ್ ಎಂಬುವವರ ಎರಡು ಕಾಲು ಕತ್ತರಿಸಿದೆ. ಇಬ್ಬರು ವ್ಯಕ್ತಿಗಳ ಕಾಲಿಗೆ ಗಂಭೀರವಾಗಿ ಗಾಯವಾಗಿದೆ. ಭೀಮಾಶಂಕರ ಎಂಬಾತನಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸವಕಲ್ಯಾಣದಲ್ಲಿ ಶ್ರೀ ಬಸವೇಶ್ವರ ಜಾತ್ರಾ ರಥೋತ್ಸವ ನಡೆಯುತ್ತಿತ್ತು. ಲಕ್ಷಾಂತರ ಭಕ್ತ ಸಮೂಹ ಥೇರು ನೋಡಲು ಆಗಮಿಸಿತ್ತು. […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ ಭಗಿರಥ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಗಿರಥ ಮಹರ್ಷಿ ಜಯಂತಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಭಗಿರಥ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಛಲದಿಂದ ದೇವ ಗಂಗೆಯನ್ನು ಧರೆಗಿಳಿಸಿ ಸಕಲ ಜೀವಿಗಳ ದಾಹ ತಿರಿಸಿದ ಸಂತ ಭಗಿರಥ ಎಂದರು. ತಪಸ್ಸಿನಿಂದ ಗಂಗೆಯನ್ನು ಭೂಮಿಗೆ ತಂದು ತನ್ನ ಹಿರಿಯರಿಗೆ ಜಲತರ್ಪಣ ಮಾಡಿದ ಭಗೀರಥರ ಸಾಧನೆ ಅಸಾಮಾನ್ಯವಾಗಿದೆ. ಇದು ಪರಿಶ್ರಮ ಮತ್ತು ಕಠಿಣ ನಿರ್ಣಯಗಳ ಮೂಲಕ ಜಯ ಸಾಧಿಸಬಹುದು ಎಂಬುದಕ್ಕೆ ಮುನ್ನುಡಿಯಾಗಿದೆ. ಅವರ ಮಾರ್ಗದಲ್ಲಿ ನಾವು ನಡೆದು […]

Continue Reading

ಶಹಾಬಾದ: ವಿಶ್ವ ಭೂಮಿ ದಿನ ಆಚರಣೆ

ಸುದ್ದಿ ಸಂಗ್ರಹ ಶಹಾಬಾದ ನಗರದ ಹೈ.ಕ ಶಿ‌ಕ್ಷಣ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ವಿಶ್ವ ಭೂಮಿ ದಿನ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಬಸವರಾಜ ಹಿರೇಮಠ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ.ಲಕ್ಷ್ಮಣ ರಾಠೋಡ, ಡಾ.ಎಚ್.ವಿ ಸೇಡಂಕರ್, ಡಾ.ಸುರೇಖಾ ನಾಟೇಕರ್, ಡಾ.ಕಾವೇರಿ, ಜ್ಯೋತಿ ಗಂಟಿಮಠ, ನಾಗರಾಜ ದೇವತ್ಕಲ್, ಸಾಯಿರಾಮ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Continue Reading

ನಾಳೆ SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಕೋರ್ಟ್‌ ಆದೇಶದಂತೆ ಈ ಬಾರಿ ಹಿಂದಿ ಭಾಷೆಯ ಪರೀಕ್ಷೆಗೆ ಅಂಕ ನೀಡಲಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ವ್ಯವಸ್ಥೆ ನಿಯಮ ಜಾರಿಗೆ ತೀರ್ಮಾನ ಮಾಡಲಾಗಿದೆ. ಹಿಂದಿಗೆ ಅಂಕ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ ಎಂದು ವಿವರಿಸಿದರು.

Continue Reading

ಟೆಂಗಳಿ: ಸಿಡಿಲಿಗೆ ಎತ್ತು ಬಲಿ‌

ಸುದ್ದಿ ಸಂಗ್ರಹ ಕಾಳಗಿಸಿಡಿಲು ಬಡಿದ ಪರಿಣಾಮ ತಾಲೂಕಿನ ಟೆಂಗಳಿ ಗ್ರಾಮದಲ್ಲಿ ಒಂದು ಎತ್ತು ಬಲಿಯಾದ ಘಟನೆ ಮಂಗಳವಾರ ನಡೆದಿದೆ. ಮನೆಯ ಎದುರುಗಡೆ ಕಟ್ಟಿದ್ದ ಎತ್ತಿಗೆ ಸಿಡಿಲು ಬಡಿದು ಮೃತಪಟ್ಟಿದೆ. ರೈತ ಅಜೀಮ್ ಕುಕ್ಕುಂದ ಎಂಬವರಿಗೆ ಸೇರಿದ ಎತ್ತು ಮೃತಪಟ್ಟಿದೆ. 1.20 ಲಕ್ಷ ರೂ. ಬೆಲೆಯದ್ದು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಗ್ರಾಮ‌ ಲೆಕ್ಕಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಂತೆ ಕಾಳಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.‌

Continue Reading

ಕಿರುತೆರೆ ಇತಿಹಾಸದಲ್ಲಿ ಹೊಸ ದಾಖಲೆ: ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಮೂರು ಧಾರಾವಾಹಿಗಳ ʻತ್ರಿವೇಣಿ ಸಂಗಮʼ

ಕನ್ನಡ ಕಿರುತೆರೆ ಲೋಕದಲ್ಲಿ ಸದಾ ಹೊಸತನಕ್ಕೆ ತುಡಿಯುವ ವಾಹಿನಿ ʻಸ್ಟಾರ್‌ ಸುವರ್ಣʼ. ಕನ್ನಡಿಗರ ನಾಡಿಮಿಡಿತ ಅರಿತು ವೈವಿಧ್ಯಮಯ ಕಥೆಗಳ ಮೂಲಕ ಮನೆಮಾತಾಗಿರುವ ʻಸ್ಟಾರ್‌ ಸುವರ್ಣʼ, ಈಗ ಕಿರುತೆರೆಯ ಇತಿಹಾಸದಲ್ಲೆ ಹಿಂದೆಂದೂ ಕಾಣದ ಅದ್ಬುತ ಪ್ರಯೋಗವೊಂದಕ್ಕೆ ಸಾಕ್ಷಿಯಾಗಿದೆ. ಸಾಮಾನ್ಯವಾಗಿ ಎರಡು ಜನಪ್ರಿಯ ಧಾರಾವಾಹಿಗಳು ಒಂದಾಗುವುದನ್ನು ನಾವು ʻಮಹಾಸಂಗಮʼ ಎಂದು ಕರೆಯುತ್ತೆವೆ. ಆದರೆ ಇದೆ ಮೊದಲ ಬಾರಿಗೆ ʻಸುವರ್ಣ ವಾಹಿನಿʼಯ ಮೂರು ಸೂಪರ್‌ ಹಿಟ್‌ ಧಾರಾವಾಹಿಗಳನ್ನು ಒಂದೆ ವೇದಿಕೆಯಲ್ಲಿ ತರುವ ಮೂಲಕ ʻತ್ರಿವೇಣಿ ಸಂಗಮʼ ಎಂಬ ವಿನೂತನ ರಸದೌತಣವನ್ನು ವೀಕ್ಷಕರಿಗೆ […]

Continue Reading

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ: ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

ಬೆಳಗಾವಿ: ಹಿಟ್ ಸ್ಟ್ರೋಕ್‌ಗೆ ರಾಜ್ಯದಲ್ಲಿ ಎರಡನೇಯ ಬಲಿಯಾಗಿದೆ. ಬಿಸಿಲಿನ ತಾಪಕ್ಕೆ ಬೆಳಗಾವಿ ಜಿಲ್ಲೆಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿವಾಸಿಯಾಗಿರುವ ವೆಂಕಟೇಶ್ ಬಳ್ಳಾರಿ (35) ಮೃತ ದುರ್ದೈವಿ. ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸೋಮವಾರ (ಏ.21) ಬಸವೇಶ್ವರ ಜಯಂತಿ ಸಂದರ್ಭದಲ್ಲಿ ಫೋಟೋ ಪೂಜೆ ಬಳಿಕ ಮೆರವಣಿಗೆ ಸಂದರ್ಭದಲ್ಲಿ ತಲೆ ತಿರುಗಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ […]

Continue Reading

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

ಸುದ್ದಿ ಸಂಗ್ರಹ ಬೆಂಗಳೂರುಕಬಡ್ಡಿ ಪಂದ್ಯಾವಳಿ ವೇಳೆ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಜಿ. ಪರಮೇಶ್ವರ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಏನಿದು ಪ್ರಕರಣ ?ಚಿಕ್ಕೋಡಿ vs ವಿಜಯಪುರ ನಡುವೆ ಕಬಡ್ಡಿ ಪಂದ್ಯಾವಳಿ ನಡೆಯುತ್ತಿತ್ತು. ಈ ವೇಳೆ ಚಿಕ್ಕೋಡಿ ತಂಡ ಗೆಲ್ಲುವುದಾಗಿ ಪರಮೇಶ್ವರ್‌ ಅವರು 500 ರೂಪಾಯಿ ಬೆಟ್ಟಿಂಗ್‌ ಕಟ್ಟಿದ್ದರು. ವಿಜಯಪುರ ತಂಡ ಗೆದ್ದ ಬಳಿಕ ಡಿಸಿಗೆ 500 ರೂಪಾಯಿ ಹಣ ನೀಡಿದ್ದರು ಸಚಿವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ನಾಗಭೂಷಣ್ ಎಂಬುವವರು […]

Continue Reading

ಸಮಾಜ ಸೇವೆಯಿಂದಲೇ ಜೀವನ ಸಾರ್ಥಕ: ನಾಗಯ್ಯ ಹಿರೇಮಠ

ಚಿತ್ತಾಪುರ: ನಮ್ಮ ಜೀವನ ಕೇವಲ ಸ್ವಾರ್ಥಕ್ಕಾಗಿ ಅಲ್ಲ, ಸಮಾಜಕ್ಕಾಗಿ ಮುಡಿಪಾಗಿಟ್ಟುಕೊಂಡರೆ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ನಂತರ ಮಾತನಾಡಿದ ಅವರು, ಪ್ರತಿಯೊಬ್ಬರು ಸ್ವಂತ ಲಾಭಕ್ಕಾಗಿ ಬದುಕುತ್ತಿರುವ ಇಂದಿನ ಸಂದರ್ಭದಲ್ಲಿ, ಹಿಂದಿನ ಮಹಾಪುರುಷರು ಸಂಸಾರ ಹಾಗೂ ಸಂಬಂಧಗಳನ್ನು ಬದಿಗಿಟ್ಟು ಸಮಾಜ ಮತ್ತು ಧರ್ಮದ ಉಳಿವಿಗಾಗಿ ಶ್ರಮಿಸಿದ್ದಾರೆ. ತಮ್ಮ ಜೀವನವನ್ನೇ ಸಮಾಜಕ್ಕೆ ಅರ್ಪಿಸಿದ ಕಾರಣದಿಂದಲೆ […]

Continue Reading