ಸುರಕ್ಷತೆ ಇಲ್ಲದ ಹೊರ ರಾಜ್ಯಗಳ ಖಾಸಗಿ, ಸರ್ಕಾರಿ ಬಸ್‌ಗಿಲ್ಲ ಕರ್ನಾಟಕ ಪ್ರವೇಶ

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್‌ ಬಳಿ ಬಸ್‌ ಬೆಂಕಿಗೆ ಆಹುತಿಯಾದ ಘಟನೆಯ ಬಳಿಕ ಬಸ್‌ಗಳಲ್ಲಿ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ತುರ್ತು ನಿರ್ಗಮನ ಬಾಗಿಲು ಇಲ್ಲದ ಹೊರ ರಾಜ್ಯಗಳ ಬಸ್‌ಗಳ ಮೇಲೆ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ. ಅಖಿಲ ಭಾರತ ಪರವಾನಗಿ ಹೊಂದಿರುವ ಬಸ್‌ಗಳು ದೇಶದ ವಿವಿಧೆಡೆಯಿಂದ ರಾಜ್ಯಕ್ಕೆ ಬರುತ್ತಿವೆ. ಅವುಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮಗಳಿರುವುದಿಲ್ಲ. ಕರ್ನಾಟಕದಲ್ಲಿ ಇರುವ ಸುರಕ್ಷತಾ ನಿಯಮಗಳನ್ನು ಆ ಬಸ್‌ಗಳಲ್ಲಿಯೂ ಅಳವಡಿಸಬೇಕು. ಏಕಾಏಕಿ ಕ್ರಮ ಕೈಗೊಳ್ಳುವ ಬದಲು ಆರಂಭಿಕ […]

Continue Reading

ಕನ್ನಡ ಉಳಿಸಿ, ಬೆಳೆಸುವ ಕಾರ್ಯ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ: ಮುಡಬಿ ಗುಂಡೇರಾವ

ಕಲಬುರಗಿ: ಸಾವಿರಾರು ವರ್ಷಗಳ ಭವ್ಯವಾದ ಇತಿಹಾಸ, ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ನಾಡಿನ ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ, ಬೆಳೆಸಿ, ಮುಂದಿನ ಜನಾಂಗಕ್ಕೆ ತಲುಪಿಸುವ ಕಾರ್ಯ ಪ್ರತಿಯೊಬ್ಬ ಕನ್ನಡಿಗನ ಆದ್ಯ ಜವಾಬ್ದಾರಿಯಾಗಿದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ವಿವೇಕಾನಂದ ನಗರದಲ್ಲಿನ ಭೊಗೇಶ್ವರ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ಕನ್ನಡ ರಾಜ್ಯೋತ್ಸವ ಮಾಸಾಚರಣೆಯ ಸರಣಿ ಉಪನ್ಯಾಸಕ ಕಾರ್ಯಕ್ರಮ-20ರಲ್ಲಿ ‘ಕನ್ನಡ ನಾಡು-ನುಡಿಯ ಸಂರಕ್ಷಣೆ ಎಲ್ಲರ […]

Continue Reading

ಪಾರಂಪರಿಕ ಸ್ಥಳಗಳಿಂದ ಇತಿಹಾಸ, ಸಂಸ್ಕೃತಿ ಉಳಿಯಲು ಸಾಧ್ಯ: ಮುಡಬಿ ಗುಂಡೇರಾವ

ಕಲಬುರಗಿ: ನಮ್ಮ ಜಿಲ್ಲೆ ಸೇರಿದಂತೆ ದೇಶದಲ್ಲಿ ಅನೇಕ ಸುಕ್ಷೇತ್ರಗಳು, ಸ್ಮಾರಕಗಳು, ನೈಸರ್ಗಿಕ ತಾಣಗಳು, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸ್ಥಳಗಳಿದ್ದು ಅವುಗಳನ್ನು ಉಳಿಸಿ, ಸಂರಕ್ಷಿಸಿ, ಅಭಿವೃದ್ಧಿಗೊಳಿಸುವುದು ಅವಶ್ಯಕವಾಗಿದೆ. ಇದರಿಂದ ನಮ್ಮ ದೇಶದ ಸಂಸ್ಕೃತಿ, ಇತಿಹಾಸ, ಪರಂಪರೆಯನ್ನು ಮುಂದಿನ ಪೀಳಿಗೆಗೆ ದೊರೆಯಲು ಸಾಧ್ಯವಾಗುತ್ತದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಮತಟಪಟ್ಟರು. ನಗರದ ಬಹುಮನಿ ಕೋಟೆಯ ಆವರಣದಲ್ಲಿನ ಐತಿಹಾಸಿಕ ಜಾಮಿಯಾ ಮಸೀದಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘ವಿಶ್ವ ಪರಂಪರೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಜಾಮಿಯಾ ಮಸೀದಿಯು […]

Continue Reading

ಅಭಿವೃದ್ಧಿಯಲ್ಲಿ ಸಮಪಾಲು, ಸಮಬಾಳು ನೀಡಿದ ಜನ ನಾಯಕ ಸಚಿವ ಪ್ರಿಯಾಂಕ್ ಖರ್ಗೆ: ರಮೇಶ ಮರಗೋಳ

ಸುದ್ದಿ ಸಂಗ್ರಹ ಚಿತ್ತಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವ ಮೂಲಕ ಸರ್ವರಿಗೂ ಸಮಪಾಲು, ಸಮಬಾಳು ನೀಡಿದ ಕ್ಷೇತ್ರದ ಶಾಸಕ, ಸಚಿವ ಪ್ರಿಯಾಂಕ್ ಖರ್ಗೆ ಅವರು ಉತ್ತಮ ಜನನಾಯಕರಾಗಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ ಮರಗೋಳ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ ಕಚೇರಿಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶೈಕ್ಷಣಿಕ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪಾರ ಪ್ರಮಾಣದ ಅಭಿವೃದ್ಧಿ ಕೆಲಸಗಳು ಕೈಗೊಂಡಿದ್ದಾರೆ ಎಂದರು. ರಾಜ್ಯದ ಪ್ರಭಾವಿ ಸಚಿವ […]

Continue Reading

ಹುಟ್ಟು ಹಬ್ಬದ ದಿನದಂದು ಸಮಾಜಮುಖಿ ಕಾರ್ಯ ಕೈಗೊಂಡ ಸರ್ವರಿಗೂ ಧನ್ಯವಾದ ತಿಳಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವು ಹುಟ್ಟು ಹಬ್ಬ ಆಚರಿಸದಿರುವ ನನ್ನ ನಿರ್ಧಾರವನ್ನು ಒಪ್ಪಿ ರಾಜ್ಯದ್ಯಂತ ಹಲವಾರು ಜನ ಕಾರ್ಯಕರ್ತರು, ಅಭಿಮಾನಿಗಳು ಅಸಂಖ್ಯಾತ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸರ್ವರಿಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಬರೆದಿರುವ ಅವರು, ನನ್ನ ಹಾಗೂ ನಮ್ಮ ಕುಟುಂಬದ ಮೇಲೆ ತೋರುವ ವಾತ್ಸಲ್ಯ, ಅಭಿಮಾನ ಮತ್ತು ಕಾಳಜಿಗೆ ನಾನೆಂದಿಗೂ ಚಿರಋಣಿ. ನಿಮ್ಮೆಲ್ಲರ ಅದಮ್ಯ ಪ್ರೀತಿಯೇ ನನ್ನ […]

Continue Reading

ಬಿಟ್ಟು ಬಿಡದೆ ಕಾಡಿದ ತಪ್ಪಿತಸ್ಥ ಭಾವನೆ: ಅಶ್ವಿನಿ ಬಳಿ ಕ್ಷಮೆ ಕೇಳಿದ ಗಿಲ್ಲಿ

ಬಿಗ್ ಬಾಸ್​ನಲ್ಲಿ ಅಶ್ವಿನಿ ಗೌಡ vs ಗಿಲ್ಲಿ ಎಂಬಂತಾಗಿದೆ. ಯಾವುದೆ ಟಾಸ್ಕ್ ನೀಡಲಿ, ಮನೆಯಲ್ಲಿ ಯಾವುದಾದರೂ ವಿಷಯ ಚರ್ಚೆ ಆಗುತ್ತಿರಲಿ, ಗಿಲ್ಲಿ ಹಾಗೂ ಅಶ್ವಿನಿ ಮಧ್ಯೆ ಕಿರಿಕ್ ಆಗಿಯೇ ಆಗುತ್ತದೆ. ಇಬ್ಬರು ಎದುರು ಬದುರಾದಾಗ ನಗುತ್ತಾ ಮಾತನಾಡಿದ ದಾಖಲೆಯೆ ಇಲ್ಲ ಎಂದರೂ ತಪ್ಪಾಗಲಾರದು. ಇಬ್ಬರು ಹಿಡಿದ ಹಠ ಬಿಡೋದಿಲ್ಲ. ಹೀಗಿರುವಾಗಲೆ ಗಿಲ್ಲಿ ಅವರು ಅಶ್ವಿನಿ ಬಳಿ ಕ್ಷಮೆ ಕೇಳಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ. ಕ್ಯಾಪ್ಟನ್ಸಿ ರೇಸ್​ನಲ್ಲಿ ಅಭಿಷೇಕ್ ಹಾಗೂ ಅಶ್ವಿನಿ ಗೌಡ ಇದ್ದರು. ಇಬ್ಬರೂ ಸರದಿಯಲ್ಲಿ […]

Continue Reading

ಮಸೀದಿ ಬಳಿ ಕಾಮಗಾರಿಗೆ ನೆಲ ಅಗೆಯುವಾಗ ರಾಮ-ಸೀತೆಯ ವಿಗ್ರಹ ಪತ್ತೆ

ಭೋಪಾಲ್: ಮಧ್ಯಪ್ರದೇಶದ ಸಾಗರ ಗ್ರಾಮದಲ್ಲಿನ ಜಾಮಾ ಮಸೀದಿ ಬಳಿ ಕಾಮಗಾರಿಗಾಗಿ ನೆಲ ಅಗೆಯುತ್ತಿರುವಾಗ ರಾಮ-ಸೀತೆಯ ವಿಗ್ರಹ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಊರಿನವರು ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಜಮಾಯಿಸಿದ್ದಾರೆ. ಕೂಡಲೇ ಎಚ್ಚೆತ್ತ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ. ಇದರ ವಿಡಿಯೋ ಕೂಡ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಗ್ರಾಮದವರು ಹೇಳುವ ಪ್ರಕಾರ, ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಹಿಂದೆ ದೇವಾಲಯವಿತ್ತು. ಆ ಜಾಗವನ್ನು ಬಹಳ ಹಿಂದೆಯೇ ರಾಜರ ಆಳ್ವಿಕೆಯ ಕಾಲದಲ್ಲಿ ವಶಪಡಿಸಿಕೊಳ್ಳಲಾಗಿತ್ತು. ಇದರಿಂದಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ […]

Continue Reading

ಬೈಜು ರವೀಂದ್ರನ್‌ಗೆ 9 ಸಾವಿರ ಕೋಟಿ ದಂಡ ವಿಧಿಸಿದ ಅಮೇರಿಕ ಕೋರ್ಟ್‌

ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ಎಜುಟೆಕ್‌ ಕಂಪನಿ ಬೈಜೂಸ್‌ನ ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಅಮೇರಿಕದ ನ್ಯಾಯಾಲಯ 1 ಬಿಲಿಯನ್ ಡಾಲರ್‌ಗಳಿಗಿಂತ (9,000 ಕೋಟಿ) ಹೆಚ್ಚು ದಂಡ ವಿಧಿಸಿದೆ. ಬೈಜೂಸ್ ಆಲ್ಫಾ ಮತ್ತು ಅಮೆರಿಕ ಮೂಲದ ಸಾಲದಾತ ಗ್ಲಾಸ್ ಟ್ರಸ್ಟ್ ಎಲ್‌ಎಲ್‌ಸಿ ಸಲ್ಲಿಸಿದ ಅರ್ಜಿಯ ನಂತರ ಡೆಲವೇರ್ ದಿವಾಳಿತನ ನ್ಯಾಯಾಲಯ ಈ ನಿರ್ಧಾರ ಹೊರಡಿಸಿದೆ. ಬೈಜೂಸ್ ಆಲ್ಫಾ ಒಂದು ಅಮೇರಿಕನ್ ಕಂಪನಿಯಾಗಿದ್ದು, ಭಾರತೀಯ ಎಜುಟೆಕ್‌ ದೈತ್ಯ ಬೈಜೂಸ್‌ನ ಅಂಗಸಂಸ್ಥೆಯಾಗಿದೆ. ಇದನ್ನು 2021 ರಲ್ಲಿ ಡೆಲವೇರ್ (ಯುಎಸ್‌ಎ) ನಲ್ಲಿ […]

Continue Reading

ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತ: ಐಸಿಯುನಲ್ಲೆ ತಾಳಿ ಕಟ್ಟಿದ ವರ

ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೆ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ ನಿವಾಸಿ ಶರೋನ್ ವಿವಾಹ ಶುಕ್ರವಾರ ನಿಗದಿಯಾಗಿತ್ತು. ಈ ಹಿನ್ನೆಲೆ ವಧು ಅವನಿ ಮೇಕಪ್ ಮಾಡಿಸಿಕೊಳ್ಳಲೆಂದು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವನಿಯ ಬೆನ್ನುಮೂಳೆಗೆ ತೀವ್ರ ಗಾಯವಾಗಿ ವಿಪಿಎಸ್ […]

Continue Reading

ಆಧ್ಯಾತ್ಮದ ಬದುಕೆ ನಿಜವಾದ ಬದುಕು: ಡಾ.ಶಾಂತಸೋಮನಾಥ ಶಿವಾಚಾರ್ಯರು

ಕಾಳಗಿ: ವರ್ತಮಾನದ ದಿನಗಳಲ್ಲಿ ಮನುಷ್ಯರುಆಧ್ಯಾತ್ಮದ ಬಾಹ್ಯ ಪ್ರಪಂಚದ ಬದುಕೆ ನಿಜವಾದ ಬದುಕು ಎಂದು ಮುಂಗಲಗಿ- ತೆಂಗಳಿಯ ಶಾಂತೇಶ್ವರ ಹಿರೇಮಠದ ಪೀಠಾಧಿಪತಿ ಡಾ.ಶಾಂತಸೋಮನಾಥ ಶಿವಾಚಾರ್ಯರು ಹೇಳಿದರು. ತಾಲೂಕಿನ ಮಂಗಲಗಿ ಗ್ರಾಮದ ಶಾಂತೇಶ್ವರ ಹಿರೇಮಠದಲ್ಲಿ ಗುರುವಾರ ಸಂಜೆ ಕಾರ್ತಿಕ ಮಾಸದ ಚೆಟ್ಟಿ ಅಮಾವಾಸ್ಯೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ತಿಕ ದೀಪೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಾಂತೇಶ್ವರ ಹಿರೇಮಠದಲ್ಲಿ ಕಳೆದ ಎರಡು ವರ್ಷದಿಂದ ಕಾರ್ತಿಕ ದೀಪೋತ್ಸವ ಆಚರಿಸಲಾಗುತ್ತಿದೆ, ಕಾರ್ತಿಕ ಮಾಸದಲ್ಲಿ ಕತ್ತಲೆ ಬಹಳ ಇರುತ್ತೆ, ಇದು ಬಹಿರಂಗದ ಕತ್ತಲೆಯಾದರೆ ಮಾನವನ ಅಂತರಂಗದಲ್ಲಿ […]

Continue Reading