500 ರೂ. ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿಗೆ 30 ವರ್ಷಗಳ ಬಳಿಕ ಶಿಕ್ಷೆ

ಬೆಳಗಾವಿ: ಅಣ್ಣ-ತಮ್ಮಂದಿರರ ಜಾಗದ ವಿವಾದದಲ್ಲಿ ಪಹಣಿ ಪತ್ರ ನೀಡಲು 500 ರೂ. ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿಗೆ 30 ವರ್ಷಗಳ ಬಳಿಕ ಸುಪ್ರೀಂಕೋರ್ಟ್ ಬುಧವಾರ ಒಂದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವ ಮೂಲಕ ಕೆಲ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ. ತಾಲೂಕಿನ ಕಡೋಲಿ‌ ಗ್ರಾಮದ ಲೆಕ್ಕಾಧಿಕಾರಿ ನಾಗೇಶ ಧೋಂಡು ಶಿವಂಗೇಕರ ಎಂಬಾತನಿಗೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದು, ಆಪಾದಿತರನ್ನು ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ. ಕಡೋಲಿಯ ಲಕ್ಷ್ಮಣ ರುಕ್ಕಣ್ಣ ಕಟಾಂಬಳೆ ಇವರ ಸಹೋದರರ ಜಮೀನನ್ನು […]

Continue Reading

ತರಕಾರಿ ಸೇವನೆಯಿಂದ ಸದೃಢ ಆರೋಗ್ಯ

ಕಲಬುರಗಿ: ದೈಹಿಕ, ಮಾನಸಿಕವಾಗಿ ಜೀವಿಸಿ, ಬೆಳವಣಿಗೆ ಹೊಂದಲು, ಆರೋಗ್ಯಕರವಾಗಿರಲು ಆಹಾರವು ಪ್ರಮುಖ ಪಾತ್ರ ವಹಿಸುತ್ತದೆ. ಶುದ್ಧ, ಸ್ವಚ್ಛವಾಗಿರುವ ಹಾಗೂ ಆದಷ್ಟು ಸಾವಯುವ ಪದ್ಧತಿಯ ಮೂಲಕ ಬೆಳೆದ ತರಕಾರಿಗಳ ಸೇವನೆ ಮಾಡುವುದುರಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಟೋಲ್‌ಗೇಟ್ ಸಮೀಪದ ರೈತ ಚಂದ್ರಶ್ಯಾ ಇಟಗಿ ಅವರ ತರಕಾರಿ ತೋಟದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಜರುಗಿದ ‘ವಿಶ್ವ ತರಕಾರಿ ದಿನಾಚರಣೆ’ಯಲ್ಲಿ ತರಕಾರಿ ಬೆಳೆಗಾರ ರೈತ […]

Continue Reading

ಜಾನ್ಸಿ ರಾಣಿ ಲಕ್ಷ್ಮಿಬಾಯಿ ಧೀರ ಸ್ವಾತಂತ್ರ್ಯ ಹೋರಾಟಗಾರ್ತಿ

ಕಲಬುರಗಿ: ನಮ್ಮ ದೇಶದ ಸ್ವಾತಂತ್ರ್ಯಕ್ಕೆ ಅನೇಕ ಮಹನೀಯರು ಹೋರಾಡಿದ್ದಾರೆ. ಮಹಿಳೆಯಾಗಿ ಅತ್ಯಂತ ಧೀರ, ಶೂರತನದಿಂದ ಹೋರಾಟ ಮಾಡುವ ಮೂಲಕ ಜಾನ್ಸಿ ರಾಣಿ ಲಕ್ಷ್ಮಿಬಾಯಿಯವರು ಮಹಿಳಾ ಲೋಕಕ್ಕೆ ಮಾದರಿಯಾಗಿದ್ದಾರೆ ಎಂದು ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಜಾನ್ಸಿ ರಾಣಿ ಲಕ್ಷ್ಮಿಬಾಯಿಯವರ 167ನೇ ಸ್ಮರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಿಂದಲೇ ಇಂತಹ ಮಹನೀಯರ ಬಗ್ಗೆ ತಿಳಿದುಕೊಳ್ಳುವುದು […]

Continue Reading

ಖಾಸಗಿ ವಾಹನಗಳಿಗೆ 3 ಸಾವಿರ ರೂ. ವಾರ್ಷಿಕ ಟೋಲ್‌ ಪಾಸ್ ಘೋಷಿಸಿದ ನಿತಿನ್ ಗಡ್ಕರಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಆಗಸ್ಟ್ 15, 2025 ರಿಂದ 3 ಸಾವಿರ ರೂ. ಬೆಲೆಯ ಹೊಸ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಪ್ರಾರಂಭಿಸಲಾಗುವುದಾಗಿ ಘೋಷಣೆ ಹೊರಡಿಸಿದ್ದಾರೆ. ಇದು ವಾಣಿಜ್ಯೇತರ ವಾಹನಗಳಿಗೆ ದೇಶದ ಹೆದ್ದಾರಿ ಜಾಲದಾದ್ಯಂತ ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡುವ ಉದ್ದೇಶ ಹೊಂದಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಕರ ಅನುಕೂಲತೆ ಹೆಚ್ಚಿಸುವ ಗುರಿಯನ್ನು ಹೊಂದಿರುವ ಈ ಉಪಕ್ರಮವನ್ನು ಇಂದು (18) ಘೋಷಿಸಲಾಗಿದೆ. ತೊಂದರೆ ರಹಿತ ಹೆದ್ದಾರಿ ಪ್ರಯಾಣದತ್ತ ಪರಿವರ್ತಕ […]

Continue Reading

ವಾಡಿ: ಜೂನ್ 21 ರಂದು ವಿಶ್ವ ಯೋಗ ದಿನಾಚರಣೆ

ವಾಡಿ: ಪಟ್ಟಣದಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ, ಈ ಹಿನ್ನಲೆಯಲ್ಲಿ ನಡೆಯುವ ಸಾಮೂಹಿಕ ಯೋಗ ಅಭ್ಯಾಸದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ ಕರೆ ನೀಡಿದ್ದಾರೆ. ಹನ್ನೊಂದನೇ ವಿಶ್ವ ಯೋಗ ದಿನಾಚರಣೆಯು ಒಂದು ಭೂಮಿ- ಒಂದು ಆರೋಗ್ಯ ಎಂಬ ಘೋಷ ವಾಕ್ಯದಂತೆ ಇಂದಿನ ಒತ್ತಡದ ಜೀವನದಲ್ಲಿ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವ ಜೊತೆಗೆ ನೈಸರ್ಗಿಕ ಸಂಪತ್ತಿನ ಪ್ರಯೋಜನಯೊಂದಿಗೆ ಪ್ರತಿಯೊಬ್ಬರು ಉತ್ತಮ ಆರೋಗ್ಯ ಹೊಂದಲು ಯೋಗ ದಿನಾಚರಣೆ ಸ್ಫೂರ್ತಿಯಾಗಲಿದೆ […]

Continue Reading

1 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾಳಗಿ SDA ಶರಣಪ್ಪ

ಕಲಬುರಗಿ: ರಸ್ತೆ ಕಾಮಗಾರಿ ಪೂರ್ಣಗೊಳಿಸಿದ ಪ್ರಮಾಣ ಪತ್ರ ನೀಡಲು 1 ಲಕ್ಷ ರೂ ಲಂಚ ಪಡೆಯುತ್ತಿದ್ದ ಆರೋಪದಡಿ ಕಾಳಗಿ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆಯ ಸಹಾಯಕ (ಎಸ್‌ಡಿಎ) ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಗಳವಾರ ನಡೆದಿದೆ. ಕಾಳಗಿ ತಹಸೀಲ್ದಾರ್ ಕಚೇರಿಯ ದೇವಸ್ಥಾನ ಶಾಖೆಯ ಎಸ್‌ಡಿಎ ಶರಣಪ್ಪ ಲಂಚ ಪಡೆದ ಆರೋಪಿಯಾಗಿದ್ದು. ಕಲಬುರಗಿಯ ಗುತ್ತಿಗೆದಾರ ಅಣಿವೀರಯ್ಯ ಹಿರೇಮಠ ನೀಡಿದ ದೂರಿನನ್ವಯ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕಾಳಗಿಯ ಅಣಿವೀರಭದ್ರೇಶ್ವರ ದೇವಸ್ಥಾನ ಸಮೀಪದ ಸಿ.ಸಿ ರಸ್ತೆಯ […]

Continue Reading

ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಮಳೆಗಾಲದಲ್ಲಿ ಸರ್ವರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅವಶ್ಯಕವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ಮಳೆಗಾಲದಲ್ಲಿ ಆರೋಗ್ಯದ ಮುಂಜಾಗೃತಾ ಕ್ರಮಗಳು ವಿಶೇಷ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದ ಅವರು, ಮಳೆಗಾಲ ಪ್ರಾರಂಭವಾಗಿದೆ ವಾತಾವರಣದ ತಂಪಾಗಿದೆ. ಡೆಂಗ್ಯೂ, ಮಲೇರಿಯಾ, ಶೀತ, ನೆಗಡಿ, ಜ್ವರ, ಅಜೀರ್ಣ ಸಮಸ್ಯೆ, ಕಾಲರಾದಂತಹ ಮುಂತಾದ ಸಾಮಾನ್ಯ ಕಾಯಿಲೆಗಳು ಕಂಡುಬರುತ್ತವೆ. ಇಂತಹ ಸಮಯದಲ್ಲಿ ರೋಗನಿರೋಧಕ […]

Continue Reading

ವ್ಯಕ್ತಿಯ ಲೋಕೇಷನ್ ಮಾಹಿತಿ ಕೊಟ್ಟಿದ್ದಕ್ಕೆ ಹಾನಗಲ್ CPI ಆಂಜನೇಯ ಅಮಾನತು

ಹಾವೇರಿ: ಸಮುದಾಯವೊಂದರ ಪ್ರಭಾವಿ ತಂಗಿದ್ದ ಸ್ಥಳದ ಬಗ್ಗೆ ಲೋಕೇಷನ್ ಸಮೇತ ಅನ್ಯರಿಗೆ ಮಾಹಿತಿ ಕೊಟ್ಟ ಆರೋಪದಡಿ ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಲೋಕೇಷನ್‌ನಿಂದ ಸಮಸ್ಯೆಗೆ ಸಿಲುಕಿದ್ದ ಹಾನಗಲ್ ಪಟ್ಟಣದ ಪ್ರಭಾವಿ ನೀಡಿದ್ದ ಮಾಹಿತಿ ಅನ್ವಯ ಪ್ರಾಥಮಿಕ ತನಿಖೆ ನಡೆಸಿ ವರದಿ ಪಡೆದಿದ್ದ ದಾವಣಗೆರೆ ವಲಯದ ಐಜಿಪಿ ರವಿಕಾಂತೇಗೌಡ ಅವರು ಸಿಪಿಐ ಆಂಜನೇಯ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಐಜಿಪಿ ಆದೇಶ ಉಲ್ಲೇಖಿಸಿ ಮತ್ತೊಂದು ಆದೇಶ ಹೊರಡಿಸಿರುವ ಜಿಲ್ಲಾ ಎಸ್ಪಿ […]

Continue Reading

ಈತ ಕಲಿಯುಗದ ಷಹಜಹಾನ್‌: ಪತ್ನಿಗಾಗಿ ತಾಜ್‌ಮಹಲ್ ನಂತಹ ಮನೆ ಕಟ್ಟಿಸಿದ ಭೂಪ

ಭೋಪಾಲ್: ತಾಜ್‍ ಮಹಲ್ ಜಗತ್ತಿನ ಏಳು ಅದ್ಭುತಗಳಲ್ಲಿ ಒಂದು. ಇದರ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಪ್ರವಾಸಿಗರು ಆಗ್ರಾಕ್ಕೆ ಭೇಟಿ ನೀಡುತ್ತಾರೆ. ಆದರೆ ಮಧ್ಯಪ್ರದೇಶದ ದಂಪತಿ ತಮ್ಮ ಮನೆಯನ್ನು ಈ ಐತಿಹಾಸಿಕ ಸ್ಮಾರಕದ ಪ್ರತಿಕೃತಿಯಂತೆ ವಿನ್ಯಾಸಗೊಳಿಸಿದ್ದಾರೆ. ಇದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ನೆಟ್ಟಿಗರು ಈ ಮನೆಯನ್ನು ನೋಡಿ ಫುಲ್‌ ಫಿದಾ ಆಗಿದ್ದಾರೆ. ಆನಂದ್ ಪ್ರಕಾಶ್ ಚೌಕ್ಸೆ ಮತ್ತು ಇತನ ಪತ್ನಿ ಒಡೆತನದ ನಾಲ್ಕು ಬೆಡ್ ರೂಂಗಳಿರುವ ಮನೆ ಮಧ್ಯಪ್ರದೇಶದ ಬುರ್ಹಾನ್‌ಪುರದಲ್ಲಿದೆ. ಈ ಮನೆಯನ್ನು ಮಕ್ರಾನಾ ಅಮೃತಶಿಲೆಯನ್ನು […]

Continue Reading

ಭಕ್ತರ ದೇಣಿಗೆ ಹಣ ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲು ಅಂಡಗಿ ಮನವಿ

ಕಲಬುರಗಿ: ಮುಜರಾಯಿ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಸಂಗ್ರಹವಾಗುವ ಭಕ್ತರ ದೇಣಿಗೆ ಹಣ ದೇವಾಲಯದ ಅಭೀವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು, ಬೇರೆ ಬೇರೆ ಯೋಜನೆಗಳಿಗೆ ಬಳಸಿಕೊಳ್ಳದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಛೇರಿ ಮುಖಾಂತರ ಘನ ಸರ್ಕಾರದ ಮುಜರಾಯಿ ಸಚಿವರಿಗೆ ಟೆಂಗಳಿ ಅಂಡಗಿ ಪ್ರತಿಷ್ಠಾನದ ಅಧ್ಯಕ್ಷ ಶಿವರಾಜ ಅಂಡಗಿ ಮನವಿ ಮಾಡಿದ್ದಾರೆ. ಜಿಲ್ಲಾ ಧಾರ್ಮಿಕ ಪರಿಷತ್ತು ಹಾಗೂ ವಿವಿಧ ದೇವಸ್ಥಾನಗಳ ವ್ಯವಸ್ಥಾಪಕ ಮಂಡಳಿ ಇದುವರೆಗೆ ರಚನೆಯಾಗಿಲ್ಲ. ಕೂಡಲೇ ರಚನೆ ಮಾಡಿ ಭಕ್ತಿಯ ಸೇವೆ ಮಾಡುತ್ತಿರುವ ಭಕ್ತರಿಗೆ ಪರಿಷತ್ತು ಮತ್ತು ಮಂಡಳಿಯಲ್ಲಿ […]

Continue Reading