ಶಿವನಸಮುದ್ರದ ಬಳಿ ನಾಲೆಗೆ ಬಿದ್ದ ಕಾಡಾನೆಯನ್ನು ಯಶಸ್ವಿಯಾಗಿ ಮೇಲೆತ್ತಿದ ಅರಣ್ಯ ಇಲಾಖೆ

ಮಂಡ್ಯ: ಎರಡು ದಿನಗಳ ಹಿಂದೆ ಮಳವಳ್ಳಿ ತಾಲೂಕಿನ ಶಿವನಸಮುದ್ರ ಬಳಿಯ ನಾಲೆಗೆ ಬಿದ್ದ ಕಾಡಾನೆಯನ್ನು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆ ಮೇಲೆತ್ತಿದೆ. ಶಿವವಸಮುದ್ರ ಬಳಿಯ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ ಆನೆ ಓಡಾಡುವುದನ್ನು ಅಲ್ಲಿನ ಅಧಿಕಾರಿಗಳು ಗಮನಿಸಿದ್ದರು. ಆದರೆ ಶನಿವಾರ (ನ.15) ರಾತ್ರಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ನೀರು ಪೂರೈಸುವ ಸುಮಾರು 20 ಅಡಿ ಆಳದ ಕೆನಲ್ ಗೇಟ್ ಮೂಲಕ ಕಾಡಾನೆ ನಾಲೆಗೆ ಇಳಿದಿದೆ. ಆದರೆ ನೀರಿನ ಹರಿವಿನ ರಭಸ ಹೆಚ್ಚಾಗಿದ್ದರಿಂದ ಮತ್ತೆ […]

Continue Reading

ಪ್ರಕೃತಿ ಚಿಕಿತ್ಸೆ ಸಮಗ್ರ ಆರೋಗ್ಯ ಪದ್ಧತಿ: ಡಾ.ಶ್ರೀನಿಧಿ ಬೀದರ

ಕಲಬುರಗಿ: ನೈಸರ್ಗಿಕ ವಿಧಾನ ಬಳಸಿಕೊಂಡು ದೇಹದ ಸ್ವ-ಗುಣಪಡಿಸುವ ಶಕ್ತಿ ಸಕ್ರಿಯಗೊಳಿಸುವ ಪೂರಕ ಚಿಕಿತ್ಸಾ ಪದ್ಧತಿ ಇದಾಗಿದ್ದು, ಯಾವುದೆ ಅಡ್ಡ ಪರಿಣಾಮ ಇಲ್ಲದೆ ಚಿಕಿತ್ಸಾ ವಿಧಾನ ಇದಾಗಿದೆ ಎಂದು ಉಜಿರೆಯ ಧರ್ಮಸ್ಥಳದ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಆಸ್ಪತ್ರೆಯ ವೈದ್ಯೆ ಡಾ.ಶ್ರೀನಿಧಿ ಬೀದರ ಹೇಳಿದರು.  ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ ನಲ್ಲಿರುವ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಆಸ್ಪತ್ರೆ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ […]

Continue Reading

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಸಾರಿಗೆ ಬಸ್: 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕಾರವಾರ: ಸಾರಿಗೆ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ತಗ್ಗು ಪ್ರದೇಶಕ್ಕೆ ಉರುಳಿ ಬಿದ್ದು, ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಗೇರುಸೊಪ್ಪಾದ ಸೂಳೆಮುರ್ಕಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ನಡೆದಿದೆ. ಬೆಳಗಿನ ಜಾವ ಸುಮಾರು 2 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಹಾನಗಲ್‌ನಿಂದ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಸಿದ್ದಾಪುರ ಮಾರ್ಗವಾಗಿ ಹೊನ್ನಾವರದ ಕಡೆಗೆ ಬರುತ್ತಿತ್ತು. ಘಟ್ಟ ಪ್ರದೇಶದ ಇಳಿಜಾರಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆಯ ಎಡಬದಿಯ […]

Continue Reading

ದೇಶದ ಜ್ವಲಂತ ಸಮಸ್ಯೆಗಳ ವಿಮುಕ್ತಿಗೆ ಸಮಾಜವಾದಿ ಕ್ರಾಂತಿಯೊಂದೆ ಪರಿಹಾರ: ಗಣಪತರಾವ ಮಾನೆ

ಸುದ್ದಿ ಸಂಗ್ರಹ ಶಹಾಬಾದ ದೇಶದ ಜ್ವಲಂತ ಸಮಸ್ಯೆಗಳ ವಿಮುಕ್ತಿಗೆ ಕ್ರಾಂತಿಯ ಮೂಲಕ ಸಮಾಜವಾದಿ ಸರಕಾರ ಸ್ಥಾಪಿಸಲು ಕಾರ್ಮಿಕರು ಒಗ್ಗಟ್ಟಾಗಬೇಕಾಗಿರುವುದು ಅವಶ್ಯಕ ಎಂದು ಎಸ್’ಯುಸಿಐ (ಸಿ) ಪಕ್ಷದ ಸ್ಥಳಿಯ  ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ.ಕೆ ಮಾನೆ ಹೇಳಿದರು. ಪಟ್ಟಣದ ಹುನುಮಾನ ನಗರದಲ್ಲಿ ಎಸ್’ಯುಸಿಐ (ಐ) ಪಕ್ಷದ ವತಿಯಿಂದ ಸಂಘಟಿಸಿಲಾದ ರಷ್ಯಾದ ನವೆಂಬರ್ ಕ್ರಾಂತಿಯ 108ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜರೋಹಣ ನೇರವೆರಿಸಿ. ಕಾಮ್ರೇಡ್ ಲೆನಿನ್, ಕಾಮ್ರೇಡ್ ಸ್ಟಾಲಿನವರ ಭಾವಚಿತ್ರಕ್ಕೆ  ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ರಷ್ಯಾದಲ್ಲಿ ಕಾಮ್ರೇಡ್ ಲೆನಿನ್’ರವರು ಶೋಷಿತ ಕಾರ್ಮಿಕರ ಕಮ್ಯೂನಿಸ್ಟ್ ವಿಚಾರಧಾರೆಯ ಆಧಾರದ […]

Continue Reading

ಇದ್ದಕ್ಕಿದ್ದಂತೆ ಬಿಸಿಯಾಗ್ತಿರುವ ಮನೆಯ ಹಾಲ್‌ನ ಟೈಲ್ಸ್‌: ಬೆಚ್ಚಿಬಿದ್ದ ಜನ

ದಾವಣಗೆರೆ: ಕೆಲವೊಂದು ಘಟನೆಗಳು ವಿಜ್ಞಾನಕ್ಕೆ ಸವಾಲೆಸೆಯುವಂತಿರುತ್ತವೆ. ಅಂತಹದ್ದೆ ಒಂದು ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ರಾಜಾರಾಮ್ ಕಾಲೋನಿಯಲ್ಲಿ ನಡೆದಿದೆ. ನಗರದ ಶಿಕ್ಷಕ ಮಾರುತೇಶ್ ಅವರ ಮನೆಯಲ್ಲಿ ಹಾಲ್‌ನ ಟೈಲ್ಸ್ ಕಾದ ಕಾವಲಿಯಂತಾಗುತ್ತಿದೆ. ಇದರಿಂದ ಇಡಿ ಮನೆಯವರು ಅತಂಕದಲ್ಲಿ ಕಾಲ ಕಳೆಯುವಂತಾಗಿದೆ. ಟೈಲ್ಸ್‌ನ್ನು ಒದ್ದೆ ಬಟ್ಟೆಯಿಂದ ಒರೆಸಿದರೂ ಕೂಡ ಕಾವು ಹೆಚ್ಚಾಗುತ್ತಿದ್ದು, ಯಾವ ಕಾರಣಕ್ಕೆ ಟೈಲ್ಸ್’ಗಳು ಬಿಸಿಯಾಗುತ್ತಿವೆ ಎಂಬ ಪ್ರಶ್ನೆ ಕಾಡುತ್ತಿದೆ. ಸ್ಥಳಕ್ಕೆ ಖಗೋಳಶಾಸ್ತ್ರಜ್ಞರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. […]

Continue Reading

ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ವಿರುದ್ಧ ದೂರು

ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ನಟನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ರಿಷಾ ಬಟ್ಟೆಗಳನ್ನು ವಾಷ್ ರೂಂನಲ್ಲಿ ಇಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ ದೂರು ಕೊಡಲಾಗಿದೆ. ಜೊತೆಗೆ ಮಹಿಳೆಯರ ಬಗ್ಗೆ ಅವಮಾನಕರ ರೀತಿಯಲ್ಲಿ ಮಾತಾನಾಡಿದ್ದಾರೆ ಅಂತಾ ದೂರಲಾಗಿದೆ. ಈ ಬಗ್ಗೆ ಮಹಿಳಾ ಆಯೋಗ ವಿಡಿಯೋ ಫೂಟೇಜ್ ಪರಿಶೀಲನೆ ಮಾಡಿದೆ. ಮೇಲ್ನೋಟಕ್ಕೆ ಗಿಲ್ಲಿ ನಟ ತಪ್ಪಾಗಿ ನಡೆದುಕೊಂಡ ಬಗ್ಗೆ ಯಾವುದೆ ಸಾಕ್ಷಿ ಸಿಗದ ಕಾರಣಕ್ಕೆ ಪ್ರಕರಣವನ್ನು ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳಿಸಿಕೊಡಲಾಗಿದೆ.

Continue Reading

ಎಡಿಜಿಪಿ ದಯಾನಂದ್‌ ಹೆಸರಿನಲ್ಲಿ ನಕಲಿ ಎಫ್‌ಬಿ ಖಾತೆ ಓಪನ್‌: ಹಣಕ್ಕೆ ಬೇಡಿಕೆ

ಬೆಂಗಳೂರು: ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ದಯಾನಂದ್ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದಿದ್ದಾರೆ. ಈ ಹಿಂದೆ ಮೂರು ಬಾರಿ ನಕಲಿ ಅಕೌಂಟ್ ಓಪನ್ ಆಗಿರುವ ಬಗ್ಗೆ ದಯಾನಂದ್‌ ಸೈಬರ್ ಪೊಲೀಸರ ಗಮನಕ್ಕೆ ತಂದಿದ್ದರು. ಆದರೂ ಸೈಬರ್ ಖದೀಮರು ಮುಂದುವರೆದು ಸೂಟ್ ಹಾಕಿರುವ ಹಾಗೂ ಮಕ್ಕಳ ಜೊತೆ ಇರುವ ಪೋಟೋ ಬಳಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಸದ್ಯ ಕಾರಾಗೃಹ ಎಡಿಜಿಪಿಯಾಗಿ ದಯಾನಂದ್ ಕರ್ತವ್ಯ ನಿರ್ವಹಿಸುತ್ತಿದ್ದು ಇತ್ತೀಚೆಗೆ ಜೈಲಿನ ಒಳಗಡೆ ಇರುವ […]

Continue Reading

ಖರ್ಗೆ ಕೋಟೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಹೆಜ್ಜೆ: ಚಿತ್ತಾಪುರದಲ್ಲಿ ಪಥಸಂಚಲನ ಯಶಸ್ವಿ

ಕಲಬುರಗಿ: ಒಂದು ತಿಂಗಳಿನಿಂದ ದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನ ಕೊನೆಗೂ ಇಂದು ಯಶಸ್ವಿಯಾಗಿ ನಡೆದಿದೆ. ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತವರಿನಲ್ಲಿ ಭಗವಾ ಧ್ವಜ ಹಾರಿಸಿ ಆರ್‌ಎಸ್‌ಎಸ್ ಕಾರ್ಯಕರ್ತರು ಹೆಜ್ಜೆ ಹಾಕಿದರು. ಚಿತ್ತಾಪುರದ ಬಜಾಜ್ ಕಲ್ಯಾಣ ಮಂಟಪದಿಂದ ಆರಂಭವಾಗಿ ಅಂಬೇಡ್ಕರ್ ಸರ್ಕಲ್, ಬಸವ ಆಸ್ಪತ್ರೆ, ಎಚ್‌ಡಿಎಫ್‌ಸಿ ಬ್ಯಾಂಕ್ ರಸ್ತೆ, ಬಸವೇಶ್ವರ ಸರ್ಕಲ್‌ ಮೂಲಕ ಸಾಗಿ ಬಜಾಜ್ ಕಲ್ಯಾಣ ಮಂಟಪದಲ್ಲಿ ಮುಕ್ತಾಯವಾಯಿತು. ಹೈಕೋರ್ಟ್‌ ಆದೇಶದಂತೆ 300 ಜನ ಗಣವೇಶಧಾರಿಗಳು ಹಾಗೂ 50 ಜನ […]

Continue Reading

ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನ‌: ಗಣವೇಷಧಾರಿಗಳಿಗೆ ಜನರಿಂದ ಅದ್ದೂರಿ ಸ್ವಾಗತ

ಚಿತ್ತಾಪುರ: ರಾಜ್ಯದ ಗಮನ ಸೆಳೆದಿರುವ‌ ಆರ್‌ಎಸ್‌ಎಸ್‌ ಚಿತ್ತಾಪುರ ಪಥ ಪಥಸಂಚಲನ ರವಿವಾರ ಮಧ್ಯಾಹ್ನ 3.45ಕ್ಕೆ ಶುರುವಾಯಿತು. ಪಟ್ಟಣದ ಬಜಾಜ್‌ ಕಲ್ಯಾಣ ಮಂಟಪದಿಂದ ಶುರುವಾದ ಗಣವೇಷಧಾರಿಗಳ‌ ಮೆರವಣಿಗೆ ಮೇಲೆ ನೆರೆದಿದ್ದ ನೂರಾರು ಜನರು ಪುಷ್ಪ ದಳ‌ಗಳನ್ನು ಎರಚಿ ಹುರಿದುಂಬಿಸಿದರು. ನೆರೆದಿದ್ದವರು ‘ಭಾರತ ಮಾತಾಕೀ ಜೈ, ವಂದೆ ಮಾತರಂ ಹಾಗೂ ಜೈ ಶ್ರೀರಾಮ’ ಘೋಷಣೆಗಳನ್ನು ಮೊಳಗಿಸಿದರು. ಸಾವಿರಕ್ಕೂ ಅಧಿಕ ಪೊಲೀಸ್ ಸರ್ಪಗಾವಲಿನ ಪಥಸಂಚಲನ‌ವು ಕಲ್ಯಾಣ ‌ಮಂಟಪದಿಂದ, ಬಸ್ ನಿಲ್ದಾಣ, ಕನ್ಯಾ ಸರ್ಕಾರಿ ‌ಪ್ರೌಢಶಾಲೆ, ತಾಲೂಕು ಪಂಚಾಯಿತಿ ಎದುರಿನಿಂದ ಮರಳಿ ಕಲ್ಯಾಣ […]

Continue Reading

58 ವರ್ಷಗಳಿಂದ ಜ್ಞಾನ ದಾಸೋಹದ ಜೊತೆಗೆ ಸಮಾಜಮುಖಿ ಸೇವೆಗಳು

ಸುದ್ದಿ ಸಂಗ್ರಹ ಶಹಾಬಾದ 58 ವರ್ಷಗಳಿಂದ ಹೈ.ಕ ಶಿಕ್ಷಣ ಸಂಸ್ಥೆಯ ಎಸ್ಎಸ್ ಮರಗೋಳ ಪದವಿ ಮಹಾವಿದ್ಯಾಲಯದ ವತಿಯಿಂದ ಜ್ಞಾನ ದಾಸೋಹದ ಜೊತೆಗೆ ರಕ್ತದಾನ ಶಿಬಿರ, ಆರೋಗ್ಯ ಶಿಬಿರ, ಉಚಿತ ನೇತ್ರ ತಪಾಸಣಾ ಶಿಬಿರ ಸೇರಿದಂತೆ ಹಲವಾರು ಸಮಾಜಮುಖಿ ಸೇವೆಗಳನ್ನು ಮಾಡುತ್ತಾ ಬಂದಿದ್ದೆವೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಬಸವರಾಜ ಹಿರೇಮಠ್ ಹೇಳಿದರು.  ನಗರದ ಹೈ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಸ್ಎಸ್ ಮರಗೋಳ ಕಾಲೇಜ್ ಹಾಗೂ ಸಿದ್ದರಾಮೇಶ್ವರ ಕಣ್ಣಿನ ಅಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಔಷಧ […]

Continue Reading