ಅಂತರಿಕ್ಷಯಾನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ಮಾರುಕಟ್ಟೆ: ಪ್ಯಾರಿಸ್ ಏರ್ ಫೋರಂ ಚರ್ಚಾಕೂಟದಲ್ಲಿ ಪ್ರಿಯಾಂಕ್ ಖರ್ಗೆ

ಬೆಂಗಳೂರು (ಪ್ಯಾರಿಸ್): ಜಾಗತಿಕ ಅಂತರಿಕ್ಷಯಾನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ನಾಗರಿಕ ವಿಮಾನಯಾನ ಮಾರುಕಟ್ಟೆಯಾಗಿ ಬೆಳೆದಿದೆ ಮತ್ತು ವೇಗವಾಗಿ ಬೆಳೆಯುತ್ತಿರುವ ದೇಶೀಯ ವಾಯುಯಾನ ಮಾರುಕಟ್ಟೆಯಾಗಿ ಮುನ್ನಡೆ ಸಾಧಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಪ್ಯಾರಿಸ್ ಏರ್ ಫೋರಂ ಚರ್ಚಾಕೂಟದಲ್ಲಿ ನಡೆದ ಪ್ಯಾನಲ್ ಚರ್ಚೆಯಲ್ಲಿ ಮಾತನಾಡಿದ ಅವರು, ಸರ್ಕಾರಗಳ ನಡುವೆ ಮಾತ್ರವಲ್ಲದೆ, ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆಗಳಲ್ಲಿಯೂ ಸಹ ಸಹಯೋಗದ ಮಹತ್ವವನ್ನು ಎತ್ತಿ ತೋರಿಸಿದರು. ಪ್ರತಿಯೊಬ್ಬ […]

Continue Reading

ಕಲಬುರಗಿ ಜಿಲ್ಲಾ ಕೋರ್ಟ್‌ನಲ್ಲಿ ನ್ಯಾಯಾಧೀಶರಿಗೆ ಹಾರ್ಟ್ ಅಟ್ಯಾಕ್: ಚೇಂಬರ್‌ನಲ್ಲಿದ್ದಾಗಲೆ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆಯ ಕೋರ್ಟ್‌ನಲ್ಲಿ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶರಾದ ವಿಶ್ವನಾಥ ಮುಗುಟಿ (44) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೋರ್ಟ್ ಚೇಂಬರ್‌ ನಲ್ಲಿದ್ದಾಗಲೆ ಎದೆನೋವಿನ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತ್ವರಿತವಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅದಾಗಲೇ ಅವರು ಸಾವಿಗೀಡಾಗಿದ್ದರು ಎಂಬುದಾಗಿ ವೈದ್ಯರು ದೃಢಪಡಿಸಿದ್ದಾರೆ. ಚೇಂಬರ್‌ನಲ್ಲಿಯೇ ಅಸ್ವಸ್ಥತೆಇಂದು ಬೆಳಿಗ್ಗೆ ಸದಾ ನಗುತ್ತಾ ಕೋರ್ಟ್‌ಗೆ ಆಗಮಿಸಿದ ನ್ಯಾಯಾಧೀಶರು ತಮ್ಮ ಚೇಂಬರ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲೇ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಅವರ ಚಾಲಕ ಮತ್ತು ಕಚೇರಿ ಸಿಬ್ಬಂದಿಯ ಸಹಾಯದಿಂದ ಕಲಬುರಗಿಯ ಜಯದೇವ […]

Continue Reading

ಅಹಮದಾಬಾದ್‌ ವಿಮಾನ ಪತನ: ಮೊಬೈಲ್​ನಲ್ಲಿ ವಿಡಿಯೋ ಸೆರೆಹಿಡಿದ ಹುಡುಗನಿಗೆ ಶುರುವಾಗಿದೆ ಭಯ

ಅಹಮದಾಬಾದ್‌: ಟೇಕಾಫ್​ ಆದ ಕೆಲವೇ ಸೆಕೆಂಡ್​ಗಳಲ್ಲಿ ಅಹಮದಾಬಾದ್‌ ವಿಮಾನ ನಿಲ್ದಾಣದ ಬಳಿ ಏರ್’ಇಂಡಿಯಾ ಪತನಗೊಂಡ ಸುದ್ದಿ ಎಲ್ಲರಿಗೂ ತಿಳಿದಿದೆ. ಈ ದುರಂತ ನೆನೆಪು ಮಾಡಿಕೊಂಡರೆ ಈ ಕ್ಷಣವೂ ಕಣ್ತುಂಬಿಕೊಳ್ಳುತ್ತದೆ. 12 ಸಿಬ್ಬಂದಿ ಸೇರಿದಂತೆ 241 ಜನ ದುರ್ಘಟನೆಯಲ್ಲಿ ಸಾವಿಗೀಡಾದರು. ವಿಮಾನ ಪತನಗೊಂಡ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಅದರಲ್ಲೂ ಮೊಬೈಲ್​ನಲ್ಲಿ ರೆಕಾರ್ಡ್​ ಮಾಡಿ ವಿಡಿಯೋವೊಂದು ಎಲ್ಲರ ಗಮನ ಸೆಳೆಯಿತು. ಆ ವಿಡಿಯೋ ಮಾಡಿದ್ದು ಆರ್ಯನ್ ಎಂಬ ಹುಡುಗ. ಈ ವಿಡಿಯೋ ವೈರಲ್ ಆದ ನಂತರ […]

Continue Reading

UPI ಪಾವತಿ ಇನ್ನಷ್ಟು ವೇಗ: ಇಂದಿನಿಂದ 10-15 ಸೆಕೆಂಡ್‌ಗಳಲ್ಲಿ ಪಾವತಿ

ಹೊಸದಿಲ್ಲಿ: ದೇಶದಲ್ಲಿ ವ್ಯಾಪಕವಾಗಿ ಬಳಕೆಯಲ್ಲಿರುವ ಯುಪಿಐ ಸೇವೆಗಳು ಸೋಮವಾರದಿಂದ ಮತ್ತಷ್ಟು ವೇಗವನ್ನು ಪಡೆದುಕೊಳ್ಳಲಿವೆ. ಇಡಿ ವ್ಯವಸ್ಥೆಯನ್ನು ಕ್ಷಿಪ್ರಗೊಳಿಸುವ ಕ್ರಮ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ಜಾರಿ ಮಾಡಿದೆ. ಹೀಗಾಗಿ ಈ ಮೊದಲು 30 ಸೆಕೆಂಡ್‌ ತೆಗೆದುಕೊಳ್ಳುತ್ತಿದ್ದ ಸೇವೆಗಳು ಇನ್ನುಮುಂದೆ 10 ಅಥವಾ 15 ಸೆಕೆಂಡ್‌ಗಳಲ್ಲಿ ಲಭ್ಯವಾಗಲಿವೆ ಎನ್ನಲಾಗಿದೆ. ಏಕೀಕೃತ ಪಾವತಿ ಇಂಟರ್ಫೇಸ್‌ (ಯುಪಿಐ) ವ್ಯವಸ್ಥೆಯನ್ನು ನಿರ್ವಹಣೆ ಮಾಡುವ ಎನ್‌ಪಿಸಿಐ ಈ ಬಗ್ಗೆ ಎಪ್ರಿಲ್‌ನಲ್ಲಿ ಅಧಿಸೂಚನೆ ಬಿಡುಗಡೆ ಮಾಡಿತ್ತು. ಈಗ ಈ ಪ್ರಕ್ರಿಯೆ ಪೂರ್ಣಗೊಂಡಿದೆ, ಸೋಮವಾರದಿಂದ ಜಾರಿಗೆ […]

Continue Reading

ವಿಶ್ವ ಪಾರಂಪರಿಕತೆಗೆ ಮುನ್ನುಡಿ ಬರೆಯುವ ಕಾಳಗಿಯ ಚರಿತ್ರೆ: ಮುಡುಬಿ ಗುಂಡೇರಾವ

ಕಾಳಗಿ: ವಿಶ್ವ ಪಾರಂಪರಿಕತೆಗೆ ಮುನ್ನುಡಿ ಬರೆಯುವ ಕಾಳಗಿಯ ಚರಿತ್ರೆಯು ವೈಶಿಷ್ಟಪೂರ್ಣವಾಗಿದೆ, ಕಾಳಗಿಯಲ್ಲಿ ಉತ್ಖನನ ಕಾರ್ಯ ನಡೆಯುವ ಮೂಲಕ ಕನ್ನಡ ಸಂಸ್ಕೃತಿಯ ಮೇಲೆ ಹೊಸ ಬೆಳಕು ಚೆಲ್ಲಬೇಕಾಗಿದೆ ಎಂದು ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ ಅಭಿಮತವ್ಯಕ್ತಪಡಿಸಿದರು. ಪಟ್ಟಣದ ನೀಲಕಂಠ ಕಾಳೇಶ್ವರ ದೇವಾಲಯದ ಪರಿಸರದಲ್ಲಿ ಕಲಬುರಗಿ ಬಸವೇಶ್ವರ ಸೇವಾ ಬಳಗ ಆಯೋಜಿಸಿದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದ ಅವರು, ರಾಮಾಯಣ ಕಾಲದಲ್ಲಿ ದಂಡಕಾರಣ್ಯವಾಗಿತ್ತು , ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಮನ್ನೆದಡಿ ಸಾಸಿರ ನಾಡು, ಸಾವಿರ […]

Continue Reading

ಪವನ ಶಕ್ತಿಯ ಸದುಪಯೋಗದಿಂದ ವಿದ್ಯುಚ್ಛಕ್ತಿ ಸಮಸ್ಯೆ ನಿವಾರಣೆಯಾಗಲು ಸಾಧ್ಯ

ಕಲಬುರಗಿ: ಯಾವ ಪ್ರದೇಶಗಳಲ್ಲಿ ಗಾಳಿಯಿಂದ ವಿದ್ಯುಚ್ಛಕ್ತಿ ಉತ್ಪಾದನೆ ಸಾಧ್ಯವೋ, ಅಲ್ಲಿ ಪವನ-ವಿದ್ಯುಚ್ಛಕ್ತಿ ಕೇಂದ್ರಗಳ ಸ್ಥಾಪನೆ ಮಾಡಿ, ವಿದ್ಯುಚ್ಛಕ್ತಿ ಉತ್ಪಾದಿಸುವುದರತ್ತ ಗಮನಹರಿಸಬೇಕಾಗಿರುವುದು ಪ್ರಸ್ತುತವಾಗಿ ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಶಿವ ನಗರದ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ಜಾಗತಿಕ ಪವನ ಶಕ್ತಿ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಪವನಶಕ್ತಿಯಿಂದ ವಿದ್ಯುಚ್ಛಕ್ತಿ ಉತ್ಪಾದನೆ ಸಾಧ್ಯವಾಗಿದೆ. ಪರಿಸರ ಮಾಲಿನ್ಯ ರಹಿತವಾಗಿದ್ದು, ಆರ್ಥಿಕ ಮಿತವ್ಯಯ ಸಾಧ್ಯವಿದೆ. ಪವನಶಕ್ತಿಯಿಂದ […]

Continue Reading

ಮಕ್ಕಳ ಭವಿಷ್ಯ ನಿರ್ಮಿಸುವ ಶಿಲ್ಪಿ ತಂದೆ: ಎಚ್.ಬಿ ಪಾಟೀಲ

ಕಲಬುರಗಿ: ತಂದೆಯ ತ್ಯಾಗ, ಪ್ರೀತಿ, ಪ್ರೇಮ ಮರೆಯಬಾರದು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತನ್ನತನವನ್ನು ತೊರೆದು, ಎಲ್ಲವೂ ಮಕ್ಕಳಿಗಾಗಿ ದಾರೆಯೆರೆಯುವ ಮೂಲಕ ಮಕ್ಕಳ ಭವಿಷ್ಯವನ್ನು ನಿರ್ಮಿಸುವ ಶಿಲ್ಪಿ ತಂದೆಯಾಗಿದ್ದಾನೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಆಯೋಜಿಸಲಾಗಿದ್ದ ‘ವಿಶ್ವ ಅಪ್ಪಂದಿರ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಇಡಿ ಜೀವನದುದ್ದಕ್ಕೂ ಕುಟುಂಬದ ಲೇಸನ್ನು ಬಯಸುವ ಕೌಟುಂಬಿಕ ವ್ಯವಸ್ಥೆಯ ಸಫಲತೆಯಲ್ಲಿ ತಂದೆಯ ಪಾತ್ರ ಅನನ್ಯವಾಗಿದೆ ಎಂದರು. […]

Continue Reading

ಒಬ್ಬರ ರಕ್ತದಾನದಿಂದ ಮೂವರ ಜೀವ ಉಳಿಸಲು ಸಾಧ್ಯ

ಕಲಬುರಗಿ: ರಕ್ತದಾನ ಜೀವದಾನಕ್ಕೆ ಸಮ, ಮತ್ತೊಬ್ಬರಿಗೆ ಮಾಡಿದ ರಕ್ತದಾನದಿಂದ ವ್ಯಕ್ತಿ ಸತ್ತ ನಂತರವು ತಾನು ಬದುಕಿನ ಸಾರ್ಥಕತೆ ಪಡೆಯಲು ಸಾಧ್ಯ ಎಂದು 18 ಬಾರಿ ರಕ್ತದಾನ ಮಾಡಿದ ಮಾಜಿ ಸೈನಿಕ ರೇಣುಕಾಚಾರ್ಯ ಸ್ಥಾವರಮಠ ಮಾರ್ಮಿಕವಾಗಿ ಹೇಳಿದರು. ನಗರದ ಗಾಂಧಿ ನಗರದ ಆಚಾರ್ಯ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ‘ವಿಶ್ವ ರಕ್ತದಾನ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ರಕ್ತದ ಬೇಡಿಕೆ ಮತ್ತು ರಕ್ತದಾನದ ಪ್ರಮಾಣದ ನಡುವೆ […]

Continue Reading

ಶಹಾಬಾದ್: ಪೊಲೀಸ್ ಮತ್ತು ಪತ್ರಕರ್ತರಿಂದ ಉಪನ್ಯಾಸ ನಾಳೆ

ಶಹಾಬಾದ್‌: ಸೇಂಟ್ ಥಾಮಸ್‌ ಶಾಲೆಯಲ್ಲಿ ರವಿವಾರ ಬೆಳಗ್ಗೆ 10.30ಕ್ಕೆ ಪೊಲೀಸ್ ಇಲಾಖೆ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಮಾಜ ಸುಧಾರಣೆಯಲ್ಲಿ ಪೊಲೀಸ್ ಮತ್ತು ಪತ್ರಕರ್ತರ ಪಾತ್ರ ಕುರಿತು ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಕರ್ತರಾದ ಲೋಹಿತ ಕಟ್ಟಿ, ನಿಂಗಣ್ಣ ಜಂಬಗಿ ತಿಳಿಸಿದ್ದಾರೆ. ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ್ ಉದ್ಘಾಟಿಸಲಿದ್ದಾರೆ, ಫಾದರ್ ಜೇರಾಲ್ಡ್ ಸಾಗರ ಸಾನ್ನಿಧ್ಯ ವಹಿಸಲಿದ್ದಾರೆ. ಡಿವೈಎಸ್‌ಪಿ ಶಂಕರಗೌಡ ಪಾಟೀಲ್‌, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ […]

Continue Reading

ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದು ಟಾಪರ್ ಆದ ಸಂಜನಾ

ಶಿವಮೊಗ್ಗ: ಒಂದು ಅಂಕದಿಂದ ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್ ಕನಸು ತಪ್ಪಿಸಿಕೊಂಡಿದ್ದ ಹುಡುಗಿ ಅದೆ ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಎದುರಿಸಿ 625ಕ್ಕೆ 625 ಅಂಕ ಪಡೆದು ವಿಶೇಷ ಸಾಧನೆ ಮಾಡಿದ್ದಾಳೆ. ಶಿವಮೊಗ್ಗದ ಆದಿಚುಂಚನಗಿರಿ ಪ್ರೌಢ ಶಾಲೆಯ ಸಂಜನಾ ಎಸ್ ಮೊದಲ ಪರೀಕ್ಷೆಯಲ್ಲಿ 624 ಅಂಕ ಪಡೆದಿದ್ದಳು. ಬಯಲಾಜಿಯಲ್ಲಿ ಒಂದು ಅಂಕ ಕಟ್ ಆಗಿತ್ತು. “ಥ ಇನ್ಫರ‍್ಮೇಶನ್ ಸೋರ್ಸ್ ಫಾರ್ ಮೇಕಿಂಗ್ ಪ್ರೋಟಿನ್ ಇನ್ ದ ಸೆಲ್ಸ್ ಇಸ್” ಎಂಬ ಬಹು ಆಯ್ಕೆಯ ಪ್ರಶ್ನೆಗೆ ಕೇಳಲಾಗಿತ್ತು. ಅದಕ್ಕೆ ಜೀನ್, ಕ್ರೋಮೋಜೋಮ್, […]

Continue Reading