ಇಂದು ಆರೆಸೆಸ್ ಪಥಸಂಚಲನ: ಚಿತ್ತಾಪುರದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್

ಕಲಬುರಗಿ: ಹೈಕೋರ್ಟ್ ಸೂಚನೆಯಂತೆ ಇಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ಚಿತ್ತಾಪುರ ಪಟ್ಟಣದಲ್ಲಿ ಆರೆಸ್ಸೆಸ್ ಪಥಸಂಚಲನ ಕಾರ್ಯಕ್ರಮ ನಡೆಯಲಿದೆ, ನಿಮಿತ್ತ ಈಗಾಗಲೇ ಪೋಲಿಸ್ ಇಲಾಖೆಯಿಂದ ಬಿಗಿ ಪೋಲಿಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಹೇಳಿದರು. ಇಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಿಂದ ಪಥಸಂಚಲನ ಆರಂಭವಾಗಲಿದೆ, ಹೈಕೋರ್ಟ್ ಸೂಚನೆಯಂತೆ ನಿಗದಿತ ಸ್ಥಳದಲ್ಲಿ ನಿಗದಿತ ಕಾರ್ಯಕ್ರಮ ನಡೆಸುವಂತೆ ಸಂಘಟಕರಿಗೆ ಸೂಚಿಸಲಾಗಿದೆ ಎಂದರು. ಪಥಸಂಚಲನಕ್ಕೆ ಪೋಲಿಸ್ ಇಲಾಖೆಯಿಂದ […]

Continue Reading

ಕರ್ನಾಟಕ ಬ್ಯಾಂಕ್ ಸಿಬ್ಬಂದಿ ಎಡವಟ್ಟಿಗೆ 1 ಲಕ್ಷ ಕೋಟಿ ರೂ ಬೇರೊಂದು ಖಾತೆಗೆ ಟ್ರಾನ್ಸ್‌ಫರ್

ಬೆಂಗಳೂರು: ದೇಶದ ಪ್ರಮುಖ ಬ್ಯಾಂಕ್‌ಗಳ ಪೈಕಿ ಕರ್ನಾಟಕ ಬ್ಯಾಂಕ್ ಕೂಡ ಒಂದು. ಮಂಗಳೂರು ಮೂಲದ ಈ ಬ್ಯಾಂಕ್ ದೇಶಾದ್ಯಂತ ಕಾರ್ಯನಿರ್ವಹಿಸುತ್ತಿದೆ. ದೇಶಾದ್ಯಂತ ಸರಿಸುಮಾರು 1,000 ಬ್ರಾಂಚ್ ಹೊಂದಿರುವ ಕರ್ನಾಟಕ ಬ್ಯಾಂಕ್ ಪ್ರತಿ ಟ್ರಾನ್ಸಾತ್ರನ್, ವ್ಯವಹಾರ ಅತೀವ ಎಚ್ಚರಿಕೆಯಿಂದ ಮಾಡುತ್ತದೆ. ಎರಡೆರಡು ಬಾರಿ ಕ್ರಾಸ್ ಚೆಕ್ ಮಾಡಲಾಗುತ್ತದೆ. ಆದರೆ ಸಿಬ್ಬಂದಿಯ ಕಣ್ತಪ್ಪಿನಿಂದ ಕರ್ನಾಟಕ ಬ್ಯಾಂಕ್ ಎಲ್ಲಾ ಠೇವಣಿ, ಮೊತ್ತ ಖಾಲಿ ಖಾಲಿಯಾದ ಘಟನೆ ನಡೆದಿದೆ. ಬರೋಬ್ಬರಿ 1 ಲಕ್ಷ ಕೋಟಿ ರೂ ಮೊತ್ತವನ್ನು ಅಚಾತುರ್ಯದಿಂದ ಬೇರೊಂದು ಖಾತೆಗೆ ವರ್ಗಾವಣೆ […]

Continue Reading

ಬೆಳಗಾವಿಯಲ್ಲಿ ಡಿ.8 ರಿಂದ ಚಳಿಗಾಲದ ಅಧಿವೇಶನ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್‌ 8 ರಿಂದ 10 ದಿನಗಳ ಕಾಲ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ. ಡಿಸೆಂಬರ್ 8 ರಿಂದ 19 ರವೆರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನ ಸಂಬಂಧ ನಿರ್ಣಯ ಕೈಗೊಳ್ಳಲಾಗಿತ್ತು. ಇಂದು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

Continue Reading

ಕುಂದಾನಗರಿಯಲ್ಲಿ ಕುಳಿತು ಅಮೇರಿಕಾದ ನಾಗರಿಕರನ್ನ ವಂಚಿಸುತ್ತಿದ್ದ ಗ್ಯಾಂಗ್‌: 33 ಸೈಬರ್‌ ವಂಚಕರು ಅರೆಸ್ಟ್‌

ಬೆಳಗಾವಿ: ತಂತ್ರಜ್ಞಾನ ಬೆಳೆದಂತೆ ಆನ್‌ಲೈನ್‌ ವಹಿವಾಟು ಹೆಚ್ಚಾಗುತ್ತಲೆ ಇದೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ವಂಚಕರು ನೇರವಾಗಿ ಬ್ಯಾಂಕ್‌ ಖಾತೆಗೆ ಕನ್ನ ಇಡಲು ಶುರು ಮಾಡಿದ್ದಾರೆ. ಸಾಮಾನ್ಯವಾಗಿ ಕರ್ನಾಟಕದಲ್ಲಿ ಎಲ್ಲೆ ಸೈಬರ್‌ ವಂಚನೆ ನಡೆದರೂ, ಅದರ ಹಿಂದೆ ವಿದೇಶಿಗರ ಲಿಂಕ್‌ ಇರುತ್ತಿತ್ತು. ಆದರೆ ಈಗ ಕುಂದಾನಗರಿಯಲ್ಲಿ ನಡೆದಿರೋದೆ ಬೇರೆ. ಬೆಳಗಾವಿಯಲ್ಲಿ ಕುಳಿತು ವಿಶ್ವದ ದೊಡ್ಡಣ್ಣ ಎನ್ನುವ ಅಮೇರಿಕಾದ ನಾಯಕರಿಗೆ ಚಳ್ಳೆಹಣ್ಣು ತಿನ್ನಿಸಿದ್ದಾರೆ. ಕಾಲ್ ಸೆಂಟರ್ ಹೆಸರಿನಲ್ಲಿ ಅನುಮತಿ ಪಡೆದು ವಂಚಿಸುತ್ತಿದ್ದ ಸೈಬರ್‌ ವಂಚಕರನ್ನ ಬೆಳಗಾವಿ ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ. […]

Continue Reading

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಸಂತಾಪ

ಸಾಲು ಮರದ ತಿಮ್ಮಕ್ಕ ಇಂದು (ನ.14) ನಿಧನ ಹೊಂದಿದ್ದಾರೆ. ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಾಲುಮರದ ತಿಮ್ಮಕ್ಕ ಇಹಲೋಕ ತ್ಯಜಿಸಿದ್ದಾರೆ. ವೃಕ್ಷಮಾತೆ ತಿಮ್ಮಕ್ಕ ಅವರ ಅಗಲಿಕೆಗೆ ಚಲನಚಿತ್ರ ರಂಗದ ಗಣ್ಯರು ಹಾಗೂ ರಾಜಕೀಯ ರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಆಂಧ್ರ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೃಕ್ಷಮಾತೆಗೆ ಸಂತಾಪ ಸೂಚಿಸಿದ್ದಾರೆ. ಮಕ್ಕಳಿಲ್ಲದ ನೋವನ್ನು ಮರೆತು ತಮ್ಮ ಜೀವಿತಾವಧಿಯಲ್ಲಿ 8,000ಕ್ಕೂ ಅಧಿಕ ಗಿಡಗಳನ್ನು ಬೆಳೆಸಿದ ಸಾಲು ಮರದ ತಿಮ್ಮಕ್ಕ ಅವರಿಗೆ […]

Continue Reading

ಶಹಬಾದ್ ಮಾಜಿ ನಗರಸಭೆ ಅಧ್ಯಕ್ಷೆ ಮೇಲೆ ಹಲ್ಲೆ: ಚಿಕಿತ್ಸೆ ಫಲಿಸದೆ ಸಾವು

ಶಹಾಬಾದ್: ಯಾದಗಿರಿಯಲ್ಲಿ ನಡೆದ ಮಾರಕ ಹಲ್ಲೆ ಪ್ರಕರಣದಲ್ಲಿ ಶಹಬಾದ್‌ನ ಮಾಜಿ ನಗರಸಭೆ ಅಧ್ಯಕ್ಷೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಎಸ್‌’ಡಿಎ ಅಂಜಲಿ ಕಂಬಾನೂರ್ (38) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದ್ದಿದ್ದಾರೆ. ನವೆಂಬರ್ 12ರಂದು ಬೆಳಗ್ಗೆ ಕಚೇರಿಗೆ ತೆರಳುತ್ತಿದ್ದ ವೇಳೆ ಯಾದಗಿರಿ ನಗರದಲ್ಲಿ ದುಷ್ಕರ್ಮಿಗಳು ಅಂಜಲಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಅಂಜಲಿ ಕಲಬುರಗಿ ಜಿಲ್ಲೆಯ ಶಹಬಾದ್ ಪಟ್ಟಣದ ನಿವಾಸಿಯಾಗಿದ್ದು, ಎರಡು ವರ್ಷಗಳ ಹಿಂದೆ ಪತಿ ಗಿರೀಶ್ ಕಂಬಾನೂರ್ ಅವರನ್ನು […]

Continue Reading

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಗೆಲುವಿಗೆ ವಾಡಿ ಪಟ್ಟಣದಲ್ಲಿ ಬಿಜೆಪಿ ಮುಖಂಡರ ವಿಜಯೋತ್ಸವ

ವಾಡಿ: ಪಟ್ಟಣದ ಆಝಾದ್ ವೃತ್ತದಲ್ಲಿ ಬಿಜೆಪಿ ಮುಖಂಡರು ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟದ ದಿಗ್ವಿಜಯಕ್ಕೆ ಹರ್ಷ ವ್ಯಕ್ತಪಡಿಸಿ, ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಎನ್‌ಡಿಎ ಅಭ್ಯರ್ಥಿಗಳಿಗೆ ಹಾಗೂ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಮತ್ತು ಮತದಾರ ಬಂಧುಗಳಿಗೆ ಧನ್ಯವಾದಗಳು ಎಂದರು. ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ಬಿಜೆಪಿ ಮತಗಳ್ಳತನ […]

Continue Reading

ಅತಿವೃಷ್ಟಿಯಿಂದ ಬೆಳೆ ಹಾನಿಯಾದ ಚಿತ್ತಾಪುರ ತಾಲೂಕಿನ ರೈತರಿಗೆ ರಾಜ್ಯ ಸರ್ಕಾರದಿಂದ 20.58 ಕೋಟಿ ರೂ ಪರಿಹಾರ: ಶರಣು ಡೋಣಗಾಂವ

ಚಿತ್ತಾಪುರ: ತಾಲೂಕಿನಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ 20.58 ಕೋಟಿ ರೂ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಪಂಚ ಗ್ಯಾರಂಟಿ ಜಿಲ್ಲಾ ಸಮಿತಿ ಸದಸ್ಯ ಶರಣು ಡೋಣಗಾಂವ ಹೇಳಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಮುಂದಾಳತ್ವದಲ್ಲಿ ಪರಿಹಾರ ಬಿಡುಗಡೆ ಪ್ರಕ್ರಿಯೆ ನಡೆದಿದೆ. ಮಳೆ ಹಾನಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಸ್ತುವಾರಿ ಸಚಿವಪ್ರಿಯಾಂಕ್ ಖರ್ಗೆ ಅವರು ಹಾನಿಗೊಳಗಾದ ಪ್ರದೇಶಗಳ […]

Continue Reading

ಆರೋಗ್ಯಕರ ಜೀವನ ಶೈಲಿಯಿಂದ ಮಧುಮೇಹ ದೂರ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಒತ್ತಡದ ಬದುಕಿನಿಂದ ವಿವಿಧ ರೋಗಗಳು ಉದ್ಬವವಾಗುತ್ತಿವೆ. ಒಂದುಕಾಲದಲ್ಲಿ ಶ್ರೀಮಂತರ ರೋಗವೆಂದು ಕರೆಸಿಕೊಳ್ಳುತ್ತಿದ್ದ ಸಕ್ಕರೆ ಕಾಯಿಲೆ ಇಂದು ವಿವಿಧ ಕಾರಣಗಳಿಂದ ಜನಸಾಮನ್ಯರ ಕಾಯಿಲೆಯಾಗಿದೆ. ಸೂಕ್ತ ಸಮಯಕ್ಕೆ ಆಹಾರ ಸೇವನೆ, ನಿದ್ರೆ, ಸಮತೋಲನ ಆಹಾರ, ಒತ್ತಡಮುಕ್ತಜೀವನ, ಯೋಗ, ಧ್ಯಾನದಂತಹ ಕ್ರಮಗಳಂತಹ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಮಧುಮೇಹದಿಂದ ದೂರವಿರಲು ಸಾಧ್ಯವಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಶುಕ್ರವಾರ ಏರ್ಪಡಿಸಿದ್ದ […]

Continue Reading

ವೃಕ್ಷಮಾತೆ ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

ಬೆಂಗಳೂರು: ವೃಕ್ಷಮಾತೆ, ರಸ್ತೆ ಬದಿಯಲ್ಲಿ ಮರಗಳನ್ನು ನೆಡುತ್ತಲೇ ಖ್ಯಾತಿಯಾಗಿದ್ದ ಸಾಲುಮರದ ತಿಮ್ಮಕ್ಕ ಕೊನೆಯುಸಿರೆಳೆದಿದ್ದಾರೆ. ಇಂದು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ 114ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ಜೂನ್‌ 30ರಂದು ಜನಿಸಿದ್ದ ಅವರು, ವೃಕ್ಷಮಾತೆ ಎಂದು ಪ್ರಸಿದ್ಧಿ ಪಡೆದಿದ್ದರು. ಮರ, ಗಿಡಗಳನ್ನು ತಮ್ಮ ಮಕ್ಕಳಂತೆ ಪ್ರೀತಿಸುತ್ತಿದ್ದರು. ತಿಮ್ಮಕ್ಕ ಅವರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, ವೀರಚಕ್ರ ಪ್ರಶಸ್ತಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, […]

Continue Reading