ಆರೋಗ್ಯಕರ ಜೀವನ ಶೈಲಿಯಿಂದ ಮಧುಮೇಹ ದೂರ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಒತ್ತಡದ ಬದುಕಿನಿಂದ ವಿವಿಧ ರೋಗಗಳು ಉದ್ಬವವಾಗುತ್ತಿವೆ. ಒಂದುಕಾಲದಲ್ಲಿ ಶ್ರೀಮಂತರ ರೋಗವೆಂದು ಕರೆಸಿಕೊಳ್ಳುತ್ತಿದ್ದ ಸಕ್ಕರೆ ಕಾಯಿಲೆ ಇಂದು ವಿವಿಧ ಕಾರಣಗಳಿಂದ ಜನಸಾಮನ್ಯರ ಕಾಯಿಲೆಯಾಗಿದೆ. ಸೂಕ್ತ ಸಮಯಕ್ಕೆ ಆಹಾರ ಸೇವನೆ, ನಿದ್ರೆ, ಸಮತೋಲನ ಆಹಾರ, ಒತ್ತಡಮುಕ್ತಜೀವನ, ಯೋಗ, ಧ್ಯಾನದಂತಹ ಕ್ರಮಗಳಂತಹ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಮಧುಮೇಹದಿಂದ ದೂರವಿರಲು ಸಾಧ್ಯವಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಶುಕ್ರವಾರ ಏರ್ಪಡಿಸಿದ್ದ […]

Continue Reading

ವೃಕ್ಷಮಾತೆ ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

ಬೆಂಗಳೂರು: ವೃಕ್ಷಮಾತೆ, ರಸ್ತೆ ಬದಿಯಲ್ಲಿ ಮರಗಳನ್ನು ನೆಡುತ್ತಲೇ ಖ್ಯಾತಿಯಾಗಿದ್ದ ಸಾಲುಮರದ ತಿಮ್ಮಕ್ಕ ಕೊನೆಯುಸಿರೆಳೆದಿದ್ದಾರೆ. ಇಂದು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ 114ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ಜೂನ್‌ 30ರಂದು ಜನಿಸಿದ್ದ ಅವರು, ವೃಕ್ಷಮಾತೆ ಎಂದು ಪ್ರಸಿದ್ಧಿ ಪಡೆದಿದ್ದರು. ಮರ, ಗಿಡಗಳನ್ನು ತಮ್ಮ ಮಕ್ಕಳಂತೆ ಪ್ರೀತಿಸುತ್ತಿದ್ದರು. ತಿಮ್ಮಕ್ಕ ಅವರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, ವೀರಚಕ್ರ ಪ್ರಶಸ್ತಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, […]

Continue Reading

ಚುನಾವಣಾ ಚಾಣಕ್ಯ ಅಮಿತ್‌ ಶಾ ಭವಿಷ್ಯ ಮತ್ತೆ ನಿಜವಾಯಿತು

ನವದೆಹಲಿ: ಚುನಾವಣಾ ಚಾಣಕ್ಯ ಅಮಿತ್‌ ಶಾ ಭವಿಷ್ಯ ಮತ್ತೆ ನಿಜವಾಗಿದ್ದು ಎನ್‌ಡಿಎ ಮೈತ್ರಿಕೂಟ 180ಕ್ಕೂ ಹೆಚ್ಚು ಸ್ಥಾನಗಳು ಗೆಲ್ಲುವತ್ತ ಮುಖ ಮಾಡಿದೆ. ನ.8 ರಂದು ಪೂರ್ಣಿಯಾದಲ್ಲಿ ಮಾತನಾಡಿದ ಅಮಿತ್‌ ಶಾ, ಒಂದು ಕಡೆ ಚುದುರಿದ ಘಟ್‌ಬಂಧನ್‌ ಇದ್ದರೆ ಮತ್ತೊಂದು ಕಡೆ ಐದು ಪಾಂಡವರಂತಿರುವ ಎನ್‌ಡಿಎ ಇದೆ. ಈಗಾಗಲೇ ಬಿಹಾರ ಅರ್ಧದಷ್ಟು ಜನ ಮತ ಚಲಾಯಿಸಿದ್ದು ಎನ್‌ಡಿಎ 160ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿದ್ದರು. ಇದಕ್ಕೂ ಮೊದಲು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ […]

Continue Reading

ಗ್ರಂಥಾಲಯಗಳು ಜೀವಂತ ದೇವಾಲಯಗಳು

ಕಲಬುರಗಿ: ಜ್ಞಾನಕ್ಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ. ಇದು ಯಾರಿಂದಲೂ ಕಳ್ಳತನ ಮಾಡಲಾಗದ ಸಂಪತ್ತಾಗಿದೆ. ಇಂತಹ ಅಮೂಲ್ಯವಾದ ಸಂಪತ್ತನ್ನು ನೀಡುವ ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ ಜೀವಂತ ದೇವಾಲಯ ಮತ್ತು ಬದುಕನ್ನು ಸುಂದರಗೊಳಿಸುವ ಸಾಧನಗಳಾಗಿ ಕಾರ್ಯನಿರ್ವಹಿಸುತ್ತವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಅಭಿಮತಪಟ್ಟರು. ಸುಂಟನೂರ ಗ್ರಾಮದ ಅರಿವು ಕೇಂದ್ರವಾದ ಸಾರ್ವಜನಿಕ ಗ್ರಂಥಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರಾಷ್ಟ ಗ್ರಂಥಾಲಯ ಸಪ್ತಾಹ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಿಂದಲೇ ಪುಸ್ತಕಗಳು, ದಿನ ಪತ್ರಿಕೆಗಳು ಓದುವ […]

Continue Reading

ವೃಕ್ಷಮಾತೆ, ಸಾಲುಮರದ ತಿಮ್ಮಕ್ಕನವರಿಗೆ ಗೌರವಪೂರ್ವಕ ಶೃದ್ಧಾಂಜಲಿ

ಕಲಬುರಗಿ: ಶುಕ್ರವಾರ ನಿಧನರಾದ ವೃಕ್ಷಮಾತೆ, ಸಾಲುಮರದ ತಿಮ್ಮಕ್ಕನವರಿಗೆ ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗೌರವಪೂರ್ವಕವಾಗಿ ಮಾತೆಯವರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ನುಡಿನಮನ ಸಲ್ಲಿಸಿದ ಉಪನ್ಯಾಸಕ ಎಚ್.ಬಿ ಪಾಟೀಲ್, ಸಾಲುಮರದ ತಿಮ್ಮಕ್ಕನವರು ಕನ್ನಡ ನೆಲದ ಅಪರೂಪದ, ಮಾದರಿಯ ಸಾಧಕಿಯಾಗಿದ್ದಾರೆ. ಅವರೊಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೆ ತಮ್ಮ ಮಕ್ಕಳಂತೆ ಭಾವಿಸಿ ಬೆಳೆಸಿದವರು. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ […]

Continue Reading

ಸೈಡ್‌ ಬಿಡದಿದ್ದಕ್ಕೆ ಕಿರಿಕ್: ಕಾರಿನಿಂದ ಗುದ್ದಿಸಿ ಬೈಕ್‌ನಲ್ಲಿದ್ದ ಮೂವರ ಕೊಲೆಗೆ ಯತ್ನಿಸಿದ ಟೆಕ್ಕಿ

ಬೆಂಗಳೂರು: ರಸ್ತೆಯಲ್ಲಿ ಸೈಡ್‌ ಬಿಡದಿದ್ದಕ್ಕೆ ಕಾರು ಗುದ್ದಿಸಿ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆಗೆ ಯತ್ನಿಸಿದ ಸಾಫ್ಟ್‌ವೇರ್ ಇಂಜಿನಿಯರ್ ಸುಕೃತ್ ಕೇಶವ್‌ನನ್ನು ಸದಾಶಿವ ನಗರ ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 26 ರಂದು ಅಪಘಾತವೆಂದು ಕೇಸ್ ದಾಖಲಾಗಿತ್ತು. ತನಿಖೆ ನಂತರ ಉದ್ದೇಶಪೂರ್ವಕ ಕೊಲೆಯತ್ನ ಎಂದು ಗೊತ್ತಾಗಿದೆ. ರಾಮಯ್ಯ ಸಿಗ್ನಲ್‌ನಲ್ಲಿ ಫ್ರೀ ಲೆಫ್ಟ್ ಬ್ಲಾಕ್ ಮಾಡಲಾಗಿತ್ತು. ಈ ವೇಳೆ ಹಿಂದಿನಿಂದ ಬಂದ ಕಾರಿನ ಚಾಲಕ ಹಾರ್ನ್ ಮಾಡಿದಾಗ ಬೈಕ್ ಸವಾರ ಸಿಗ್ನಲ್ ಲೆಫ್ಟ್ ಫ್ರೀ ಟರ್ನ್ ಇಲ್ಲ ಎಂದಿದ್ದಾನೆ. […]

Continue Reading

ಚಿತ್ತಾಪುರ ಬಸ್ ನಿಲ್ದಾಣದಲ್ಲಿ ಅಪರಿಚಿತ ಶವ ಪತ್ತೆ

ಚಿತ್ತಾಪುರ: ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಅಪರಿಚಿತ ಶವ ಪತ್ತೆಯಾಗಿದೆ. ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ವ್ಯಕ್ತಿಗೆ ಅಂದಾಜು 35-40 ವಯಸ್ಸಾಗಿದೆ, ಗುರುತು ಪತ್ತೆಯಾಗಿಲ್ಲ, ಶವವನ್ನು ಸ್ಥಳೀಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಪಿಎಸ್‌ಐ ತಿಳಿಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ಚಿತ್ತಾಪುರ ಪೊಲೀಸ್ ಠಾಣೆಗೆ ಅಥವಾ ಪಿಎಸ್‌ಐ ಅವರ ದೂರವಾಣಿ ಸಂಖ್ಯೆ 9480803573 ಕರೆ ಮಾಡಿ ಮಾಹಿತಿ […]

Continue Reading

ಶಹಾಬಾದ: ನ.15 ರಂದು ಉಚಿತ ನೇತ್ರ ತಪಾಸಣೆ ಮತ್ತು ಔಷಧ ವಿತರಣಾ ಶಿಬಿರ

ಸುದ್ದಿ ಸಂಗ್ರಹ ಶಹಬಾದನಗರದ ಹೈ.ಕ ಶಿಕ್ಷಣ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ನವೆಂಬರ್ 15 ರಂದು ಶನಿವಾರ ಉಚಿತ ನೇತ್ರ ತಪಾಸಣೆ ಮತ್ತು ಔಷಧಿ ವಿತರಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಐಕ್ಯೂಎಸ್‌ಸಿ, ಎನ್.ಎಸ್.ಎಸ್ ಘಟಕ ಮತ್ತು ಸಿದ್ದರಾಮೇಶ್ವರ ಕಣ್ಣಿನ ಆಸ್ಪತ್ರೆ ಕಲಬುರ್ಗಿ ಇವರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಔಷಧಿ ವಿತರಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಬಸವರಾಜ್ ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಮದುವೆ ಮಂಟಪದಲ್ಲಿ ವರನಿಗೆ ಚಾಕು ಇರಿತ: ಆರೋಪಿಯನ್ನು 2 ಕಿ.ಮೀ ವರೆಗೆ ಬೆನ್ನಟ್ಟಿದ ವೆಡ್ಡಿಂಗ್‌ ಡ್ರೋನ್‌

ಮುಂಬೈ: ಮದುವೆ ಮಂಟಪದಲ್ಲಿ ವರನಿಗೆ ಚಾಕುವಿನಿಂದ ಇರಿದು ಎಸ್ಕೇಪ್‌ ಆಗುತ್ತಿದ್ದ ವ್ಯಕ್ತಿಯನ್ನು ವೆಡ್ಡಿಂಗ್‌ ಡ್ರೋನ್‌ 2 ಕಿ.ಮೀ ವರೆಗೆ ಬೆನ್ನಟ್ಟಿದ ಪ್ರಸಂಗ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಅಮರಾವತಿಯಲ್ಲಿ ಮದುವೆ ಸಮಾರಂಭದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ರಾಘೋ ಜಿತೇಂದ್ರ ಬಕ್ಷಿ ಎಂಬಾತ ವೇದಿಕೆಯ ಮೇಲೆ ವರನಿಗೆ ಮೂರು ಬಾರಿ ಇರಿದು ಪರಾರಿಯಾಗಿದ್ದಾನೆ. ವೆಡ್ಡಿಂಗ್‌ ಚಿತ್ರೀಕರಿಸುತ್ತಿದ್ದ ವಿಡಿಯೋಗ್ರಾಫರ್ ತಕ್ಷಣವೇ ಕಾರ್ಯಪ್ರವೃತ್ತನಾಗಿ ತನ್ನ ಡ್ರೋನ್ ಮೂಲಕ ದಾಳಿಕೋರನನ್ನು ಬೆನ್ನಟ್ಟಿ, ದಾಳಿಕೋರ ಮತ್ತು ಇನ್ನೊಬ್ಬ ವ್ಯಕ್ತಿ ಬೈಕ್‌ನಲ್ಲಿ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದಾಗ ಸುಮಾರು […]

Continue Reading

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ತಿಂಗಳಲ್ಲಿ ಒಂದು ದಿನ ಋತುಚಕ್ರ ರಜೆ ನೀಡಬೇಕು. ತಿಂಗಳಲ್ಲಿ ಒಂದು ದಿನ ವರ್ಷಕ್ಕೆ 12 ದಿನ ವೇತನ ಸಹಿತ ರಜೆ ನೀಡುವಂತೆ ಸರ್ಕಾರ ಆದೇಶಿಸಿದೆ. ಇತ್ತೀಚೆಗಷ್ಟೆ ಋತುಚಕ್ರ ರಜೆ ನೀಡಲು ಕ್ಯಾಬಿನೆಟ್ ನಿರ್ಣಯಿಸಿತ್ತು. ಕ್ಯಾಬಿನೆಟ್ ನಿರ್ಣಯದಂತೆ ಕಾರ್ಮಿಕ ಇಲಾಖೆ ಅಧಿಕೃತ ಅದೇಶ ಹೊರಡಿಸಿದೆ. 2 ಷರತ್ತುಗಳನ್ನು ವಿಧಿಸಿ ರಜೆ ನೀಡಲು ಸಂಸ್ಥೆಗಳಿಗೆ ಸೂಚಿಸಿದೆ. ಷರತ್ತುಗಳೆನು […]

Continue Reading