ಇಂದಿನಿಂದ ಭಾರಿ ಮಳೆ ಸಾಧ್ಯತೆ: 28 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರದಿಂದ ಭಾರಿ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 28 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಕರಾವಳಿ ಜಿಲ್ಲೆಗಳ ಹಲವೆಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ, ಬುಧವಾರ ಈ ಜಿಲ್ಲೆಗಳಿಗೂ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ […]

Continue Reading

16 ಲಕ್ಷ ರೂ.ಗಳೊಂದಿಗೆ ನಾಪತ್ತೆಯಾದ ಪ್ರಾದೇಶಿಕ ಸಾರಿಗೆ ಕಚೇರಿ ಸಿಬ್ಬಂದಿ

ಬಳ್ಳಾರಿ: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಜನರಿಂದ ಸಂಗ್ರಹವಾಗಿದ್ದ 16 ಲಕ್ಷ ರೂ. ಬ್ಯಾಂಕಿಗೆ ಜಮೆ ಮಾಡದೆ ಹಣದೊಂದಿಗೆ ಎಸ್’ಡಿಎ ಸಿಬ್ಬಂದಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಆರ್’ಟಿಒ ಕಚೇರಿಯ ಖಜಾನೆ (ಟ್ರೆಶರಿ) ವಿಭಾಗದ ಸಿಬ್ಬಂದಿ ರವಿ ತಾವರೆಕೆಡ 16.72 ಲಕ್ಷ ರೂ.ಗಳೊಂದಿಗೆ ನಾಪತ್ತೆಯಾಗಿದ್ದು, ಈ ಕುರಿತು ಆರ್’ಟಿಒ ಅಧಿಕಾರಿ ಶ್ರೀನಿವಾಸ್ ಗಿರಿ ನೀಡಿರುವ ದೂರಿನ ಮೇರೆಗೆ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಖಜಾನೆ ವಿಭಾಗದ ಎಸ್’ಡಿಎ ರವಿ ತಾವರೆಕೆಡ ಕಚೇರಿಯಲ್ಲಿ ಸಾರಿಗೆ ಇಲಾಖೆ ಸಾರ್ವಜನಿಕರಿಗೆ […]

Continue Reading

ನಕಲಿ ಆನ್‌ಲೈನ್‌ ಕ್ಲೀನಿಂಗ್‌ ಸೇವೆಗೆ 9 ರೂ. ಪಾವತಿಸಿ 99 ಸಾವಿರ ರೂ. ಕಳೆದುಕೊಂಡ ಮಹಿಳೆ

ಮುಂಬೈ: ನಕಲಿ ಆನ್‌ಲೈನ್ ಕ್ಲೀನಿಂಗ್ ಸೇವೆಗೆ 9 ರೂ. ಪಾವತಿ ಮಾಡಿದ ನಂತರ ಮಹಿಳೆಯೊಬ್ಬರು ಬರೋಬ್ಬರಿ 99,000 ರೂ. ಕಳೆದುಕೊಂಡಿದ್ದಾರೆ. ಮುಂಬೈನ ಅಂಧೇರಿ ಪಶ್ಚಿಮದಿಂದ ಆಘಾತಕಾರಿ ಸೈಬರ್ ವಂಚನೆ ವರದಿಯಾಗಿದೆ. ಮಧುಮೇಹ ಶಿಕ್ಷಕಿಯಾಗಿರುವ ಮಹಿಳೆ ತನ್ನ ಕಚೇರಿಯನ್ನು ಸ್ವಚ್ಛಗೊಳಿಸಲು ಆನ್‌ಲೈನ್ ಸೇವೆಯನ್ನು ಹುಡುಕುತ್ತಿದ್ದಳು. ಇಂಟರ್ನೆಟ್‌ನಲ್ಲಿ ಹುಡುಕುತ್ತಿರುವಾಗ, ‘ಅರ್ಬನ್ ಕ್ಲಬ್’ ಎಂಬ ಶುಚಿಗೊಳಿಸುವ ಸೇವೆಯನ್ನು ಕಂಡುಕೊಂಡಳು. ನಂತರ ಅಪರಿಚಿತ ವ್ಯಕ್ತಿಯೊಬ್ಬ ಆಕೆಗೆ ಕರೆ ಮಾಡಿ ನಾನು ಕಂಪನಿಯ ಪ್ರತಿನಿಧಿ ಎಂದು ಪರಿಚಯಿಸಿಕೊಂಡು ಮಹಿಳೆಗೆ ಅಪ್ಲಿಕೇಶನ್ ಡೌನ್‌ಲೋಡ್ ಮಾಡಲು ಹೇಳಿದ್ದಾನೆ. […]

Continue Reading

ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಮಗಳನ್ನೆ ಕೊಂದ ತಾಯಿ

ಹಾಸನ: ನೀರಿನ ತೊಟ್ಟಿಯಲ್ಲಿ ಮುಳುಗಿಸಿ 6 ವರ್ಷದ ಮಗಳನ್ನೆ ತಾಯಿ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಸಾನ್ವಿ (6) ತಾಯಿಯಿಂದಲೇ ಕೊಲೆಯಾದ ದುರ್ದೈವಿ ಮಗಳು. ಶ್ವೇತಾ (36) ಮಗಳನ್ನೇ ಕೊಂದ ಆರೋಪಿ. ಕಳೆದ 7 ವರ್ಷಗಳ ಹಿಂದೆ ಶಿವಮೊಗ್ಗದ ರಘು ಎಂಬವರ ಜೊತೆ ಶ್ವೇತಾ ವಿವಾಹವಾಗಿದ್ದರು. ಆರಂಭದಿಂದಲೂ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಕಳೆದ 4 ವರ್ಷಗಳಿಂದ ಸಾನ್ವಿಯನ್ನು ರಘು ಪೋಷಕರು ಸಾಕುತ್ತಿದ್ದರು. ಗಂಡನಿಂದ ದೂರವಾಗಿ ಶ್ವೇತಾ […]

Continue Reading

ಮದುವೆ ಮಂಟಪದಲ್ಲೆ ಪತಿಗೆ ಚಪ್ಪಲಿಯಿಂದ ಥಳಿಸಿದ ಪತ್ನಿ

ಚಿತ್ರದುರ್ಗ: ವರದಕ್ಷಿಣೆ ದುರಾಸೆಗೆ 2ನೇ ಮದುವೆಯಾಗಲು ಮುಂದಾಗಿದ್ದ ಪತಿಗೆ ಕಲ್ಯಾಣ ಮಂಟಪದಲ್ಲೆ ಪತ್ನಿ ತನ್ನ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಶನಿವಾರ ತಡರಾತ್ರಿ ಜರುಗಿದೆ. ಪತ್ನಿ, ಆಕೆಯ ಕುಟುಂಬಸ್ಥರಿಂದ ಪತಿ ಮತ್ತು ಆತನ ಕಡೆಯವರಿಗೆ ಸಖತ್ತಾಗಿ ಧರ್ಮದೇಟು ಬಿದ್ದವು. ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದ ಈ ಘಟನೆಯಿಂದ ನವ ವಧು ಮತ್ತು ಕುಟುಂಬದವರು ಕಕ್ಕಾಬಿಕ್ಕಿಯಾದರು. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಮುಶೇನಾಳ ಗ್ರಾಮದ ತನುಜಾ 4 ವರ್ಷದ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆಯ ತಿಪ್ಪಘಟ್ಟದ ಕಾರ್ತಿಕ್ […]

Continue Reading

ಸುರಕ್ಷಿತ ಆಹಾರ ಸೇವನೆಯಿಂದ ಸದೃಢ ಆರೋಗ್ಯ ಸಾಧ್ಯ

ಕಲಬುರಗಿ: ಮಾನವನು ಆರೋಗ್ಯಪೂರ್ಣವಾಗಿ ಜೀವಿಸಲು ಶುದ್ಧವಾದ ಆಕ್ಸಿಜನ್, ಕುಡಿಯುವ ನೀರು ಮತ್ತು ಆಹಾರ ಅವಶ್ಯಕ. ನಮ್ಮ ದೇಹಕ್ಕೆ ಬರುವ ಅನೇಕ ಕಾಯಿಲೆಗಳು ಇವುಗಳಿಗೆ ಸಂಬಂಧಿಸಿವೆ. ಶುಚಿಯಾದ, ಸತ್ವಯುತ ಮತ್ತು ಸಮತೋಲಿತವಾದ ಆಹಾರದ ಸೇವನೆಯಿಂದ ದೇಹವು ಆರೋಗ್ಯಪೂರ್ಣವಾಗಿರಲು ಸಾಧ್ಯವಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸನ್’ಲೈಟ್ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಆಹಾರ ಸುರಕ್ಷತಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನವನ ದುರಾಸೆಯಿಂದ ನಾವು […]

Continue Reading

ಬ್ರೈನ್ ಟ್ಯೂಮರ್ ನಿರ್ಲಕ್ಷ್ಯ ಬೇಡ, ಮುಂಜಾಗ್ರತೆ ಅಗತ್ಯ: ಡಾ.ಮಂಜುನಾಥ

ಕಲಬುರಗಿ: ಆಧುನಿಕ ಒತ್ತಡ ಬದುಕು, ಅನಾರೋಗ್ಯಕರ ಜೀವನ ಶೈಲಿ, ಅಪಘಾತ, ವಿಶ್ರಾಂತಿ ಇಲ್ಲದಿರುವುದು, ರಾಸಾಯನಿಕ ಸೇವನೆ, ಅತಿಯಾದ ಮೊಬೈಲ್ ಬಳಕೆ ಸೇರಿದಂತೆ ಮತ್ತಿತರ ಕಾರಣಗಳಿಂದ ಬ್ರೈನ್ ಟ್ಯೂಮರ್ ಉಂಟಾಗುತ್ತದೆ. ಇದರ ಬಗ್ಗೆ ನಿರ್ಲಕ್ಷ್ಯ ವಹಿಸದೆ, ತಿಳಿದುಕೊಂಡು, ಮುಂಜಾಗ್ರತೆ ವಹಿಸಬೇಕಾದದ್ದು ಅವಶ್ಯಕವಾಗಿವೆ ಎಂದು ಕುಟುಂಬ ವೈದ್ಯ ಡಾ.ಮಂಜುನಾಥ ಪವಾಡಶೆಟ್ಟಿ ಸಲಹೆ ನೀಡಿದರು. ನಗರದ ಆಳಂದ ಚೆಕ್‌ಪೋಸ್ಟ್ ಸಮೀಪದ ಬಸವೇಶ್ವರ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ವಿಶ್ವ ಬ್ರೈನ್ ಟ್ಯೂಮರ್ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, […]

Continue Reading

ಪರಿಸರ ಸಮತೋಲನೆಗೆ ಸಾಗರ-ಸಮುದ್ರಗಳು ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ಪರಿಸರ ಸಮತೋಲನ ಸ್ಥಿತಿಯಲ್ಲಿರಲು ಸಾಗರ ಮತ್ತು ಸಮುದ್ರಗಳು ತುಂಬಾ ಅವಶ್ಯಕವಾಗಿವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ವಿಶ್ವ ಸಾಗರಗಳು ಮತ್ತು ಸಮುದ್ರ ಸಂಬಂಧಿ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಮಾನವನಿಗೆ ಅವಶ್ಯಕವಾಗಿ ಬೇಕಾಗುವ ನೀರನ್ನು ಪೂರೈಸುವ ಸಾಗರಗಳು ಅಮೂಲ್ಯವಾದ ನೈಸರ್ಗಿಕ ಸಂಪತ್ತಾಗಿವೆ. ಭೂಮಿಯ ಮೇಲೆ ಒಟ್ಟು ಶೇ.97ರಷ್ಟು ನೀರನ್ನು ಹಿಡಿದಿಟ್ಟುಕೊಂಡು ಮಳೆಯ ರೂಪದಲ್ಲಿ ಭೂಮಿಯ ಮೇಲೆ ಸುರಿಯುವ […]

Continue Reading

ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣದ ಪ್ರಮಾಣ ಭಾರಿ ಏರಿಕೆ, ಕೇಂದ್ರದಿಂದ ಆತಂಕಕಾರಿ ವರದಿ

ನವದೆಹಲಿ: ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಕುಸಿಯುತ್ತಿದೆ ಎಂಬ ವರದಿಗಳ ನಡುವೆ ಆತಂಕಕಾರಿ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಕರ್ನಾಟಕದ 7 ಜಿಲ್ಲೆಗಳಲ್ಲಿ, ಹುಟ್ಟುವವರಿಗಿಂತ ಮರಣ ಹೊಂದುವವರ ಪ್ರಮಾಣ ಹೆಚ್ಚಾಗಿದೆ ಎಂಬ ಎಚ್ಚರಿಕೆ ಗಂಟೆ ಕೇಂದ್ರ ಸರ್ಕಾರ ವರದಿ ಮಾಡಿದೆ. ಸಾಮಾನ್ಯವಾಗಿ ಮರಣ ಪ್ರಮಾಣಕ್ಕಿಂತ ಜನನ ಪ್ರಮಾಣ ಹೆಚ್ಚಿರುತ್ತದೆ. ಆದರೆ ಮರಣ ಪ್ರಮಾಣವೇ ಅಧಿಕವಾಗಿದೆ ಜನನ ಪ್ರಮಾಣ ಕುಸಿಯುತ್ತಿದೆ ಎಂದರೆ, ಜನಸಂಖ್ಯೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ ಎಂದರ್ಥ. ಈ ರೀತಿಯ ಟ್ರೆಂಡ್‌ ದೇಶದ 49 ಜಿಲ್ಲೆಗಳಲ್ಲಿ […]

Continue Reading

151 ಕೋಟಿ ರೂ. ದೇಣಿಗೆ ನೀಡಿದ ಮುಖೇಶ್ ಅಂಬಾನಿ: ಇತಿಹಾಸದಲ್ಲೇ ಅತಿ ದೊಡ್ಡ ದೇಣಿಗೆ

ಭಾರತ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಏನೇ ಮಾಡಿದರೂ ಅದು ವಿಶೇಷ. ಸಣ್ಣ ವ್ಯವಹಾರದಿಂದ ಪ್ರಾರಂಭಿಸಿದ ಅಂಬಾನಿ, ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ, ಅನೇಕ ಜನರಿಗೆ ದೇಣಿಗೆ ನೀಡಿದ್ದಾರೆ. ಈಗ ಅವರು ಇತಿಹಾಸದಲ್ಲಿಯೇ ಅತಿದೊಡ್ಡ ದೇಣಿಗೆ ನೀಡಿದ್ದಾರೆ. ಮುಖೇಶ್ ಅಂಬಾನಿ, ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ (ICT)ಗೆ 151 ಕೋಟಿ ರೂ ದೇಣಿಗೆ ನೀಡಿದ್ದಾರೆ. ಇದು ಇತಿಹಾಸದಲ್ಲಿಯೆ ಅತಿ ದೊಡ್ಡ ದೇಣಿಗೆಯಾಗಿದೆ. ದೇಶದ ಅತ್ಯಂತ ಮೌಲ್ಯಯುತ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮುಖೇಶ್ […]

Continue Reading