ಕಲಬುರಗಿ: ವಿವಿಧ ಸಂಘಟಕರಿಗೆ ಗೌರವ ಸತ್ಕಾರ

ಕಲಬುರಗಿ: ನಗರದ ಎಸ್.ಎಂ ಪಂಡಿತ ರಂಗ ಮಂದಿರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಕಲಿಕಾ ಸ್ನೇಹಿ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಿತು. ನಗರದ ಎಸ್.ಎಂ ಪಂಡಿತ ರಂಗ ಮಂದಿರದಲ್ಲಿ ಸುಜಯ್ ಎಜುಕೇಶನಲ್ & ವೆಲ್ಪೇರ್ ಸೊಸೈಟಿ’ ವತಿಯಿಂದ ರವಿವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ‘ಕಲಿಕಾ ಸ್ನೇಹಿ ಶಿಕ್ಷಕ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಯವರಾದ ಎಚ್.ಬಿ ಪಾಟೀಲ್, ನರಸಪ್ಪ ಬಿರಾದಾರ ದೇಗಾಂವ, ನರಸಪ್ಪ ರಂಗೋಲಿ, ಎಂ.ಬಿ ನಿಂಗಪ್ಪ, ದೇವೇಂದ್ರಪ್ಪ ಗಣಮುಖಿ, ಅಪ್ಪಾಸಾಬ ತೀರ್ಥೆ, ಭಾನುಕುಮಾರ ಗಿರೇಗೋಳ್ […]

Continue Reading

ಕಲಬುರಗಿ ಕಾರ್ಯನಿರತ ಪತ್ರಕರ್ತರ ಸಂಘ: 4ನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಬಾಬುರಾವ್ ಯಡ್ರಾಮಿ ಆಯ್ಕೆ

ಕಲಬುರಗಿ: ಕಾರ್ಯನಿರತ ಪತ್ರಕರ್ತರ ಸಂಘದಚುನಾವಣೆಯಲ್ಲಿ ಬಾಬುರಾವ್ ಯಡ್ರಾಮಿ 4ನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. 170 ಮತಗಳನ್ನು ಪಡೆಯುವ ಮೂಲಕ ಬಾಬುರಾವ್‌ ಯಡ್ರಾಮಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ರಾಜು ಉದನೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಭೀಮಾಶಂಕರ್ ಫಿರೋಜಾಬಾದ, ಜಿಲ್ಲಾ ಉಪಾಧ್ಯಕ್ಷರಾಗಿಅರುಣಕುಮಾರ್ ಕದಂ, ಶಿವರಂಜನ್ ಸತ್ಯಂಪೇಟೆ,ಹನಮಂತರಾವ್ ಭೈರಮಡಗಿ, ಜಿಲ್ಲಾ ಕಾರ್ಯದರ್ಶಿಯಾಗಿ ವಾಸುದೇವ್ ಚವ್ಹಾಣ, ಅನೀಲ್ ಸ್ವಾಮಿ, ಬಾಬುರಾವ್‌ ಕೋಬಾಳ ಮತ್ತು ಜಿಲ್ಲಾ ಖಜಾಂಚಿಯಾಗಿ ಅಶೋಕ ಕಪನೂರ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾರ್ಯಕಾರಣಿ ಸದಸ್ಯರಾಗಿ […]

Continue Reading

ತೊಗರಿ ಕಾಯಿ ಕೊರಕದ ಸಮಗ್ರ ಹತೋಟಿ ಮಾಡಿ

ಕಲಬುರಗಿ: ಅಧಿಕ ಮಳೆಯಾಗಿದ್ದರಿಂದ ಕೆಲವೆಡೆ ತೊಗರಿ ಬೆಳೆ ನಾಶವಾಗಿದೆ. ಇನ್ನೂ ಕೆಲವೆಡೆ ಬೆಳೆಗೆ ಗೊಡ್ಡು, ಹಳದಿ ಬಣ್ಣಕ್ಕೆ ತಿರುಗಿರುವುದು, ಕಪ್ಪು ಚುಕ್ಕೆ ರೋಗದ ಜೊತೆಗೆ ಕೀಟಗಳ ಬಾಧೆ ಕಂಡುಬರುತ್ತಿದೆ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್. ಬಿರಾದಾರ ರೈತರಿಗೆ ಸಲಹೆ ನೀಡಿದರು.  ಜಿಲ್ಲೆಯ ಸುಂಟನೂರ ಗ್ರಾಮದ ಹೊಲವೊಂದರಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಸಾಯಂಕಾಲ ಜರುಗಿದ ‘ತೊಗರಿ ಬೆಳೆ ಕ್ಷೇತ್ರ ಭೇಟಿ, ವೀಕ್ಷಣೆ ಹಾಗೂ ರೈತರಿಗೆ ಸಲಹೆಗಳು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೀಟಗಳ […]

Continue Reading

ಫಿಟ್ಸ್ ಬಂದು ರಸ್ತೆಯಲ್ಲಿ ಒದ್ದಾಡುತ್ತಿದ್ದ ಬಾಲಕನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ ಖಂಡ್ರೆ

ಬೀದರ್: ಫಿಟ್ಸ್ ಬಂದು ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಬಾಲಕನನ್ನು ಆಸ್ಪತ್ರೆಗೆ ಸೇರಿಸಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮಾನವೀಯತೆ ಮೆರೆದಿದ್ದಾರೆ. ಬೀದರ್‌ನ ಹೊರವಲಯದ ಶಾಪೂರ್ ಗೇಟ್ ಬಳಿ ಈ ಘಟನೆ ನಡೆದಿದೆ. ಸಚಿವ ಈಶ್ವರ್ ಖಂಡ್ರೆ ಹೈದರಾಬಾದ್ ಏರ್‌ಪೋರ್ಟ್‌ಗೆ ಹೋಗುತ್ತಿದ್ದರು, ಈ ವೇಳೆ ರಸ್ತೆಯಲ್ಲಿ ಫಿಟ್ಸ್ ಬಂದು ಬಾಲಕನೋರ್ವ ಸೈಕಲ್ ಮೇಲಿಂದ ಬಿದ್ದು ಒದ್ದಾಡುತ್ತಿದ್ದ. ಇದನ್ನು ಗಮನಿಸಿದ ಸಚಿವರು ಕಾರು ನಿಲ್ಲಿಸಿ, ಬಾಲಕನನ್ನು ಕೂಡಲೇ ಆಟೋದಲ್ಲಿ ಬ್ರೀಮ್ಸ್ ಆಸ್ಪತ್ರೆಗೆ ಕಳಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ […]

Continue Reading

‘ವಂದೆ ಮಾತರಂ’ಗೆ 150 ವರ್ಷ: ಭಾರತ ಮಾತೆಗೆ ಜಯ ಘೋಷಿಸಿ ಗೌರವಿಸಿದ ಮುಖಂಡರು

ವಾಡಿ: ವಂದೆ ಮಾತರಂ ಗೀತೆಯ 150ನೇ ವರ್ಷಾಚರಣೆಯನ್ನು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮುಖಂಡರು ಭಾರತಾಂಬೆಗೆ ಪುಷ್ಪ ನಮನ ಸಲ್ಲಿಸಿ, ಸಾಮೂಹಿಕವಾಗಿ ವಂದೆ ಮಾತರಂ ಜಯ ಘೋಷ ಕೂಗಿ ಸಂಭ್ರಮಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ವಂದೆ ಮಾತರಂ ಎಂಬುದು ಕೇವಲ ಒಂದು ದೇಶಭಕ್ತಿ ಗೀತೆಯಲ್ಲ, ಬದಲಿಗೆ ಅಂದಿನ ಬ್ರಿಟಿಷ್ ಆಡಳಿತದ ವಿರುದ್ಧ ಸಮಸ್ತ ಭಾರತೀಯರನ್ನು ಒಗ್ಗೂಡಿಸುವ ಒಂದು ಶಕ್ತಿಯ ಗೀತೆಯಾಗಿ ಪ್ರಚಲಿತಗೊಂಡಿತ್ತು. ಆಗಿನ ಪರಿಸ್ಥಿತಿಯಲ್ಲಿ ಜನರಿಗೆ ದೇಶ ಭಕ್ತಿ ಪರಿಕಲ್ಪನೆ ಇರಲಿಲ್ಲ. ಆಗ ರಚನೆಯಾದ ವಂದೆ […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ ಕನಕದಾಸರ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಕ್ತ ಕನಕದಾಸರ ಜಯಂತಿ ಪ್ರಯುಕ್ತ ಮುಖಂಡರು ಕನಕದಾಸರ ಭಾವಚಿತ್ರಕ್ಕೆ ಭಕ್ತಿ ನಮನ ಸಲ್ಲಿಸಿ ಆಚರಿಸಿದರು. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಕನಕದಾಸರು ದಾಸ ಸಾಹಿತ್ಯದಲ್ಲಿ ಉನ್ನತ ಮತ್ತು ವಿಶಿಷ್ಟವಾದ ವ್ಯಕ್ತಿತ್ವ ಹೊಂದಿದ್ದರು ಎಂದರು. ಜಾತಿ, ಮತ, ಧರ್ಮ ಭೇದಭಾವ ವಿರೋಧಿಸಿ ಮನುಷ್ಯ ಜಾತಿಯೊಂದೆ ಎಂದು ಸಾರಿದರು. ಶ್ರೀ ಹರಿಯ ವಿವಿಧ ಅವತಾರಗಳನ್ನು ತಮ್ಮ ಕೀರ್ತನೆಗಳಲ್ಲಿ ಹಾಡಿ ಹೊಗಳಿದ್ದಾರೆ. ಮೂಢನಂಬಿಕೆಗಳನ್ನು ಬಲವಾಗಿ ಖಂಡಿಸುತ್ತಿದ್ದರು. ಹರಿಭಕ್ತಿ ಸಾರ ಎಂಬ ಕೃತಿಯನ್ನು […]

Continue Reading

98ನೇ ವಸಂತಕ್ಕೆ ಕಾಲಿಟ್ಟ ಎಲ್‌.ಕೆ ಅಡ್ವಾಣಿಗೆ ಮೋದಿ ಶುಭ ಹಾರೈಕೆ

ನವದೆಹಲಿ: 98ನೇ ವಸಂತಕ್ಕೆ ಕಾಲಿಟ್ಟ ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಡ್ವಾಣಿಯವರು ಒಬ್ಬ ಮೇದಾವಿ ರಾಜಕಾರಣಿಯಾಗಿದ್ದಾರೆ. ಅವರ ಜೀವನ ಭಾರತದ ಪ್ರಗತಿಗಾಗಿ ಸಮರ್ಪಿತವಾಗಿದೆ. ದೇಶಕ್ಕಾಗಿ ಅವರು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ ಎಂದು ಅವರ ಸೇವೆಯನ್ನು ಸ್ಮರಿಸಿದ್ದಾರೆ. ಅವರ ಕೊಡುಗೆಗಳು ಭಾರತದ ಪ್ರಜಾಪ್ರಭುತ್ವ ಮತ್ತು ಸಾಂಸ್ಕೃತಿಕ ಕೇತ್ರದಲ್ಲಿ ಅಳಿಸಲಾಗದ ಗುರುತನ್ನು ಉಳಿಸಿವೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಪ್ರಧಾನಿಗಳು […]

Continue Reading

ವಿಜ್ಞಾನ ಕ್ಷೇತ್ರದಲ್ಲಿ ಬೆಳಕು ಮೂಡಿಸಿದ ರಾಮನ್: ಎಚ್.ಬಿ ಪಾಟೀಲ

 ಕಲಬುರಗಿ: ರಾಮನ್ ಅವರು ವಿಜ್ಞಾನ ಕ್ಷೇತ್ರದಲ್ಲಿ ‘ಬೆಳಕು’ ಮೂಡಿಸುವ ಮೂಲಕ ದೇಶದ ಕೀರ್ತಿ ವಿಶ್ವದೆಲ್ಲೆಡೆ ಪಸರಿಸಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.‌    ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ ನ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಬೆಳಿಗ್ಗೆ ಏರ್ಪಡಿಸಿದ್ದ ‘ಸರ್ ಸಿ‌.ವಿ ರಾಮನ್’ರ 137ನೇ ಜನ್ಮ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮನ್ ಅವರು ‘ಭಾರತ ರತ್ನ’ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಭಾರತದಲ್ಲಿ ವಿಜ್ಞಾನದ ಬೆಳವಣಿಗೆಗೆ […]

Continue Reading

ಕರ್ನಾಟಕ ಏಕೀಕರಣದ ಯಶೋಗಾಥೆ ಅವಿಸ್ಮರಣೀಯ: ಮುಡಬಿ ಗುಂಡೇರಾವ

ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ಏಕೀರಣದ ಯಶೋಗಾಥೆ ಅವಿಸ್ಮರಣೀಯವಾಗಿದ್ದು, ವಿದ್ಯಾರ್ಥಿ ದಿಸೆಯಿಂದಲೇ ನಾಡು-ನುಡಿಯ ಬಗ್ಗೆ ತಿಳಿದುಕೊಂಡು ಸೇವೆ ಸಲ್ಲಿಸಬೇಕು ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ನಗರದ ವಿದ್ಯಾ ನಗರದಲ್ಲಿನ ರಾಜೀವ ಗಾಂಧಿ ಸ್ಮಾರಕ ಅನುದಾನಿತ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಮಾಸಾಚರಣೆಯ ಪ್ರಯುಕ್ತ ಗುರುವಾರ ಹಮ್ಮಿಕೊಂಡಿರುವ ಸರಣಿ ಉಪನ್ಯಾಸ-5 : ‘ಕರ್ನಾಟಕದ ಏಕೀಕರಣದ ಯಶೋಗಾಥೆ’ಯ ವಿಷಯದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಮಾತನಾಡುವ ಎಲ್ಲರನ್ನು ಒಟ್ಟುಗೂಡಿಸಿ ಅಖಂಡ […]

Continue Reading

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್.ಬಿ ಹೊಸಮನಿಗೆ ಗೌರವ ಸತ್ಕಾರ

ಸುದ್ದಿ ಸಂಗ್ರಹ ಕಲಬುರಗಿ ಪ್ರಸಕ್ತ ಸಾಲಿನ  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಎಸ್.ಬಿ ಹೊಸಮನಿ ಅವರಿಗೆ ನಗರದ ಗುಬ್ಬಿ ಕಾಲೋನಿಯಲ್ಲಿರುವ ಹೊಸಮನಿ ಅವರ ಮನೆಯಲ್ಲಿ ಸತ್ಕರಿಸಲಾಯಿತು. ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಘಟಕ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಸಂಜೆ ಸನ್ಮಾನಿಸಿ, ಗೌರವಿಸಲಾಯಿತು. ಕಜಾಪ ಜಿಲಾಧ್ಯಕ್ಷ ಎಂ.ಬಿ ನಿಂಗಪ್ಪ, ಕಜಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಬಸವೇಶ್ವರ ಸಮಾಜ ಸೇವಾ ಬಳಗದ ಅಧ್ಯಕ್ಷ ಎಚ್.ಬಿ ಪಾಟೀಲ, ಪ್ರಮುಖರಾದ ಶೀಲವಂತ ಹೊಸಮನಿ,  ಸಾಯಬಣ್ಣ […]

Continue Reading