RSS ಶಾಖೆಗಳಲ್ಲಿ, ಕೇಶವ ಕೃಪಾದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಆರ್‌ಎಸ್‌ಎಸ್ ಶಾಖೆಗಳಲ್ಲಿ, ಕೇಶವ ಕೃಪಾದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ. ಇದನ್ನೆ ಆರ್‌ಎಸ್‌ಎಸ್ ಇತಿಹಾಸ ಅಂದುಕೊಂಡಿದ್ದಾರೆ ಎಂದು ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ವಂದೆ ಮಾತರಂ ಗೀತೆ ರಾಷ್ಟ್ರಗೀತೆ ಆಗಬೇಕಿತ್ತು ಎಂಬ ಸಂಸದ ಕಾಗೇರಿ ಹೇಳಿಕೆ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆರ್‌ಎಸ್‌ಎಸ್ ಅವರಿಗೆ ಅವರ ಇತಿಹಾಸ ಗೊತ್ತಿಲ್ಲ. ಬಿಜೆಪಿ ನಾಯಕರು, ಸ್ವಯಂ ಸೇವಕರು ಆರ್‌ಎಸ್‌ಎಸ್ ಪತ್ರಿಕೆ ಆರ್ಗನೈಸರ್ ಲೇಖನ ಓದಲಿ. ಅದನ್ನು ಓದಿದರೆ ನೀವು ಎಷ್ಟು ದೊಡ್ಡ […]

Continue Reading

ಕಿಚ್ಚ ಸುದೀಪ್‌ಗೆ ವಿಶೇಷ ಗಿಫ್ಟ್‌ ನೀಡಲಿದ್ದಾರೆ ಮಲ್ಲಮ್ಮ

ಬೆಂಗಳೂರು: ಬಿಗ್‌ಬಾಸ್ ಖ್ಯಾತಿಯ ಮಲ್ಲಮ್ಮ ಐದು ವಾರಗಳ ನಂತರ ಮನೆಯಿಂದ ಹೊರಗೆ ಬಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಮಲ್ಲಮ್ಮ ಯಾದಗಿರಿ ಜಿಲ್ಲೆಯ ಸುರಪುರದ ಸಣ್ಣ ಹಳ್ಳಿಯಿಂದ ಬಂದ ಸಾದಾ ಸೀದಾ ಮಹಿಳೆ ಮಲ್ಲಮ್ಮ. ಸುಮಾರು 15 ವರ್ಷಗಳ ಹಿಂದೆ ಜೀವನ ಕಟ್ಟಿಕೊಳ್ಳಲು ಕೂಲಿ ಕೆಲಸ ಮಾಡುತ್ತಿದ್ದ ಮಲ್ಲಮ್ಮ ಬಿಗ್‌ಬಾಸ್ ಎಂಬ ಖ್ಯಾತ ರಿಯಾಲಿಟಿ ಶೋ ದಲ್ಲಿ ಪಾಲ್ಗೊಂಡು ಇಡಿ ಕರ್ನಾಟಕ ಗುರ್ತಿಸುವ ಮಟ್ಟಿಗೆ ಆಗಿದ್ದಾರೆ. ಬಿಗ್‌ಬಾಸ್ ವೇದಿಕೆ ಮೇಲೆ ಮಲ್ಲಮ್ಮ ಅವರಿಗೆ ಲೆಮೆನ್ ಟೀ ಯಾವಾಗ […]

Continue Reading

ಪ್ರತಿಯೊಬ್ಬರು ಕನ್ನಡ ಕಟ್ಟುವ ಕೆಲಸ ಮಾಡಬೇಕು

ಚಿತ್ತಾಪುರ: ಕನ್ನಡ ಪ್ರತಿಯೊಬ್ಬರ ಉಸಿರಾಗಬೇಕು, ಅನ್ಯ ಭಾಷಿಗರಿಗೆ ಕನ್ನಡ ಕಲಿಸಬೇಕು, ಕನ್ನಡ ಕಟ್ಟುವ ಕೆಲಸ ಕನ್ನಡಿಗರ ಆದ್ಯ ಕರ್ತವ್ಯವಾಗಿದೆ ಎಂದು ಸಾಹಿತಿ ಕಾಶಿರಾಯ ಕಲಾಲ್ ಹೇಳಿದರು.‌  ಪಟ್ಟಣದ ಶಹಾಬಾದ ರಸ್ತೆಯ ಬಸವೇಶ್ವರ ವಿದ್ಯಾ ಸಂಸ್ಥೆಯ ಅಣೆಮ್ಮ ಗೊಬ್ಬರ ಪ್ರೌಢಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಜರುಗಿದ ಕನ್ನಡ ರಾಜ್ಯೋತ್ಸವ ಮಾಸಾಚರಣೆಯ ಸರಣಿ ಉಪನ್ಯಾಸ ಕಾರ್ಯಕ್ರಮ-3ನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ನಾಡು-ನುಡಿಯ ರಕ್ಷಣೆಗೆ ಮುಂದಾಗಬೇಕು ಎಂದರು.  ಕನ್ನಡ ನಾಡಿಗೆ ಬಸವಾದಿ ಶರಣರ ಕೊಡುಗೆ […]

Continue Reading

ಇಳಿಕೆ ಬೆನ್ನಲ್ಲೆ ನಂದಿನಿ ತುಪ್ಪದ ಬೆಲೆ ಹೆಚ್ಚಳ: ಇಂದಿನಿಂದಲೆ ಜಾರಿ

ಬೆಂಗಳೂರು: ಜಿಎಸ್’ಟಿ ಇಳಿಕೆ ಖುಷಿಯಲ್ಲಿದ್ದ ರಾಜ್ಯದ ಗ್ರಾಹಕರಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ಶಾಕ್ ನೀಡಿದೆ. ನಂದಿನಿ ತುಪ್ಪದ ದರ ಪ್ರತಿ ಲೀಟರ್​ಗೆ 90 ರೂ ಏರಿಕೆ ಮಾಡಿದೆ. ಇತ್ತೀಚಿಗಷ್ಟೆ ಜಿಎಸ್​ಟಿ ದರ ಇಳಿಕೆಯಾದ ನಂತರ ಕೆಎಂಎಫ್ ಹಾಲು ಉತ್ಪನ್ನಗಳ ದರ ಇಳಿಕೆ ಮಾಡಿತ್ತು. ನಂದಿನಿ ತುಪ್ಪದ ಬೆಲೆ 40 ರೂ ಇಳಿಕೆಯಾಗಿತ್ತು. ಆದರೆ ಈಗ ಗ್ರಾಹಕರಿಗೆ ಬಿಸಿ ತುಪ್ಪವಾಗಿದೆ. ಇಂದಿನಿಂದಲೆ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ. ನಂದಿನಿ ತುಪ್ಪದ ಬೆಲೆ ಈ […]

Continue Reading

ವಿಮಾನ ಟಿಕೆಟ್ ಬುಕ್ ಮಾಡಿದ 48 ಗಂಟೆಯೊಳಗೆ ರದ್ದು, ತಿದ್ದುಪಡಿಗೆ ಅವಕಾಶ: ಶೀಘ್ರದಲ್ಲೇ ಹೊಸ ನಿಯಮ

ನವದೆಹಲಿ: ವಿಮಾನ ಟಿಕೆಟ್ ಕಾಯ್ದಿರಿಸಿದ 48 ಗಂಟೆಯೊಳಗೆ ಹೆಚ್ಚುವರಿ ಶುಲ್ಕವಿಲ್ಲದೆ ತಮ್ಮ ಟಿಕೆಟ್‌ಗಳನ್ನು ರದ್ದುಗೊಳಿಸಲು ಅಥವಾ ತಿದ್ದುಪಡಿ ಮಾಡಲು ಪ್ರಯಾಣಿಕರಿಗೆ ಅವಕಾಶ ನೀಡಲು ಶೀಘ್ರದಲ್ಲೇ ಹೊಸ ನಿಯಮ ಜಾರಿಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ನಿರ್ಧರಿಸಿದೆ. ಟಿಕೆಟ್ ಮರುಪಾವತಿ ಮಾನದಂಡಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಡಿಜಿಸಿಎ ಪ್ರಸ್ತಾಪಿಸಿದೆ. ಇದಲ್ಲದೆ, ಟ್ರಾವೆಲ್ ಏಜೆಂಟ್ ಅಥವಾ ಪೋರ್ಟಲ್ ಮೂಲಕ ಟಿಕೆಟ್ ಖರೀದಿಸಿದರೆ, ಏಜೆಂಟರು ನೇಮಕಗೊಂಡ ಪ್ರತಿನಿಧಿಗಳಾಗಿರುವುದರಿಂದ ಮರುಪಾವತಿ ಜವಾಬ್ದಾರಿ ವಿಮಾನಯಾನ ಸಂಸ್ಥೆಗಳ ಮೇಲಿರುತ್ತದೆ ಎಂದು ಹೊಸ ನಿಯಮದಲ್ಲಿ ಹೇಳಲಾಗಿದೆ. ವಿಮಾನಯಾನ ಸಂಸ್ಥೆಗಳು 21 […]

Continue Reading

ಇ-ಸ್ವತ್ತು ಸಮರ್ಪಕ ಅನುಷ್ಠಾನಕ್ಕಾಗಿ ಗ್ರಾ.ಪಂ ಮಟ್ಟದಲ್ಲಿ ಅಧಿಕಾರಿಗಳನ್ನು ಸಜ್ಜುಗೊಳಿಸಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಸುಮಾರು ಒಂದು ಕೋಟಿ ಆಸ್ತಿಗಳನ್ನು ಇ-ಸ್ವತ್ತು ತೆಕ್ಕೆಗೆ ತರುವ ಮೂಲಕ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು. ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇ-ಸ್ವತ್ತು ಸಮರ್ಪಕ ಅನುಷ್ಠಾನ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಈ ಸಂಬಂಧ ಹೊಸದಾಗಿ […]

Continue Reading

ಮಾನವ ಕಂಪ್ಯೂಟರ್ ಶಕುಂತಲಾ ದೇವಿ: ಎಚ್.ಬಿ ಪಾಟೀಲ

ಕಲಬುರಗಿ: ಶಕುಂತಲಾ ದೇವಿಯವರನ್ನು ಗಣಿತದ ಸಂಕೀರ್ಣ ಸಮಸ್ಯೆಗಳನ್ನು ಕ್ಯಾಲ್ಕುಲೇಟರ್‌ಗಿಂತ ವೇಗವಾಗಿ ಪರಿಹರಿಸುವ ಸಾಮರ್ಥ್ಯದಿಂದಾಗಿ ಮಾನವ ಕಂಪ್ಯೂಟರ್ ಎಂದು ಕರೆಯಲಾಗಿದ್ದು, ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದವರು. ಶಕುಂತಲಾ ದೇವಿಯವರು ನಮ್ಮ ನಾಡು, ದೇಶದ ಕೀರ್ತಿ ವಿಶ್ವದೆಲ್ಲೆಡೆ ಪಸರಿಸಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.   ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ ನಲ್ಲಿರುವ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಮಾನವ ಕಂಪ್ಯೂಟರ್ ಶಕುಂತಲಾ ದೇವಿಯವರ 96ನೇ […]

Continue Reading

ಆರೇ ವರ್ಷಕ್ಕೆ ಕಲಬುರಗಿ ಬೆಂಗಳೂರು ವಿಮಾನ ಸಂಚಾರ ಬಂದ್‌

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು ಎಂದು ಕರೆಯಸಿಕೊಳ್ಳುವ ಜಿಲ್ಲೆ ಕಲಬುರಗಿ. ಇದೀಗ ಕಲಬುರಗಿಯ ವಿಮಾನ ನಿಲ್ದಾಣಕ್ಕೆ ಸೂತಕದ ಛಾಯೆ ಆವರಿಸಿದೆ. ಆರಂಭವಾಗಿ ಆರೇ ವರ್ಷಕ್ಕೆ ವಿಮಾನ ಹಾರಾಟವಿಲ್ಲದೆ ವಿಮಾನ ನಿಲ್ದಾಣವೇ ಬಂದ್ ಆಗಿದೆ. ಹೀಗಾಗಿ ಆ ಭಾಗದ ಜನರ ದಶಕದ ಕನಸು ಆರೇ ವರ್ಷಕ್ಕೆ ಮಣ್ಣುಪಾಲಾದಂತಾಗಿದೆ. ಕಲಬುರಗಿಯಿಂದ ಬೆಂಗಳೂರು ಸಂಪರ್ಕಿಸುತ್ತಿದ್ದ ಏಕೈಕ ವಿಮಾನ ಹಾರಾಟ ಸ್ಟಾರ್ ಏರ್‌ ಸಂಸ್ಥೆ ನಿಲ್ಲಿಸಿದೆ. ಅಕ್ಟೋಬರ್‌ 15 ರಿಂದ ಸೇವೆ ಸ್ಥಗಿತಗೊಳಿಸಿದೆ. ಈಗ ಒಂದೇ ಒಂದು ವಿಮಾನವೂ ಸಹ ಕಲಬುರಗಿ […]

Continue Reading

ಪಾಕಿಸ್ತಾನದಲ್ಲಿ ಕೇವಲ 20 ರೂ ಸಿಗುತ್ತೆ ಹೊಟೇಲ್‌ ರೂಂ, ಇದರ ಅವಸ್ಥೆ ಹೇಗಿದೆ ಗೊತ್ತಾ ?

ನವದೆಹಲಿ: ಪಾಕಿಸ್ತಾನದಲ್ಲಿ ಸಾಕಷ್ಟು ವಿಚಾರದಲ್ಲಿ ಅವ್ಯವಸ್ಥೆ ಹೊಂದಿರುವ ವಿಚಾರಗಳು ನಮಗೆಲ್ಲ ತಿಳಿದೆ ಇದೆ. ಅಂತೆಯೇ ಇದೀಗ ಪಾಕಿಸ್ತಾನದ ಪೇಶಾವರದಲ್ಲಿರುವ ಹೊಟೇಲ್ ಒಂದರಲ್ಲಿ ವಿಶ್ವದಲ್ಲೆ ಅತಿ ಅಗ್ಗದ ದರದ ಸೇವೆ ನೀಡುತ್ತಿದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಒಂದು ರಾತ್ರಿ ಈ ಹೊಟೇಲ್’ನಲ್ಲಿ ತಂಗಲು ಕೇವಲ 20 ರೂ ದರ ನಿಗದಿ ಮಾಡಿದೆ. ಇಷ್ಟು ಕಡಿಮೆ ದರದಲ್ಲಿ ತಂಗುವ ವ್ಯವಸ್ಥೆ ಮಾಡಿದ್ದು ಕಂಡು ನೆಟ್ಟಿಗರು ಅಚ್ಚರಿಗೊಂಡಿದ್ದಾರೆ. ನಮ್ಮ ದೇಶದಲ್ಲೇ ಅತಿ ಕಡಿಮೆಗೆ ಸ್ಟೇ ಮಾಡಲು ರೂಮ್ […]

Continue Reading

ಮಹಿಳಾ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಸಿಕ್ಕ ಬಹುಮಾನ ಎಷ್ಟು ಕೋಟಿ ?

ಮುಂಬೈ: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ರವಿವಾರ ನಡೆದ 2025ರ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಮಣಿಸಿದ ಭಾರತೀಯ ಮಹಿಳಾ ತಂಡ, ಚೊಚ್ಚಲ ಬಾರಿಗೆ ವಿಶ್ವಕಪ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಐತಿಹಾಸಿಕ ಗೆಲುವಿನೊಂದಿಗೆ ತಂಡವು ದಾಖಲೆಯ ಮೊತ್ತದ ಬಹುಮಾನ ತನ್ನದಾಗಿಸಿಕೊಂಡಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಘೋಷಿಸಿದಂತೆ, ಚಾಂಪಿಯನ್ ಭಾರತ ತಂಡವು ಬರೋಬ್ಬರಿ 39.78 ಕೋಟಿ ರೂ (4.48 ಮಿಲಿಯನ್ ಡಾಲರ್‌) ಬಹುಮಾನ ಪಡೆಯಲಿದೆ. ಇದು ಮಹಿಳಾ […]

Continue Reading