ಮಹಿಳಾ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಸಿಕ್ಕ ಬಹುಮಾನ ಎಷ್ಟು ಕೋಟಿ ?

ಮುಂಬೈ: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ರವಿವಾರ ನಡೆದ 2025ರ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಮಣಿಸಿದ ಭಾರತೀಯ ಮಹಿಳಾ ತಂಡ, ಚೊಚ್ಚಲ ಬಾರಿಗೆ ವಿಶ್ವಕಪ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಐತಿಹಾಸಿಕ ಗೆಲುವಿನೊಂದಿಗೆ ತಂಡವು ದಾಖಲೆಯ ಮೊತ್ತದ ಬಹುಮಾನ ತನ್ನದಾಗಿಸಿಕೊಂಡಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಘೋಷಿಸಿದಂತೆ, ಚಾಂಪಿಯನ್ ಭಾರತ ತಂಡವು ಬರೋಬ್ಬರಿ 39.78 ಕೋಟಿ ರೂ (4.48 ಮಿಲಿಯನ್ ಡಾಲರ್‌) ಬಹುಮಾನ ಪಡೆಯಲಿದೆ. ಇದು ಮಹಿಳಾ […]

Continue Reading

ಬಿಹಾರ ಚುನಾವಣೆ: ಕೊಳಕ್ಕೆ ಧುಮುಕಿ ಮೀನು ಹಿಡಿದ ರಾಹುಲ್‌

ಪಾಟ್ನಾ: ಬಿಹಾರ ಚುನಾವಣಾ ಪ್ರಚಾರದಲ್ಲಿರುವ ರಾಹುಲ್‌ ಗಾಂಧಿ ಇಂದು ಬೇಗುಸರೈಯ ಹಳ್ಳಿಯ ಕೊಳದಲ್ಲಿ ಮೀನು ಹಿಡಿದು ಸುದ್ದಿಯಾಗಿದ್ದಾರೆ. ತಮ್ಮ ಭಾಷಣವನ್ನು ಮುಗಿಸಿದ ನಂತರ ರಾಹುಲ್ ಸುಮಾರು 3 ಕಿ.ಮೀ. ದೂರ ಪ್ರಯಾಣ ಬೆಳೆಸಿ, ಬೇಗುಸರೈ ವಿಧಾನಸಭಾ ಕ್ಷೇತ್ರದ ಭರ್ರಾ ಗ್ರಾಮಕ್ಕೆ ತೆರಳಿದರು. ಕೊಳ ತಲುಪಿದ ರಾಹುಲ್ ಬಲೆ ಬೀಸುತ್ತಿರುವ ಮೀನುಗಾರರನ್ನು ಭೇಟಿ ಮಾಡಲು ಸಣ್ಣ ದೋಣಿ ಹತ್ತಿದರು. ಈ ಸಂದರ್ಭದಲ್ಲಿ ಕನ್ಹಯ್ಯ ಕುಮಾರ್‌ ನೀರಿಗೆ ಹಾರಿದಾಗ ರಾಹುಲ್ ಹಾರಿದರು. ಈ ವೇಳೆ ಅಲ್ಲಿ ಸೇರಿದ್ದ ಗ್ರಾಮಸ್ಥರು ಚಪ್ಪಾಳೆ […]

Continue Reading

ಕೆ-ಸೆಟ್ ಪರೀಕ್ಷೆ ಸುಗಮ, ಶೇ.90ರಷ್ಟು ಹಾಜರು: ಕೆಇಎ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್-25 ರವಿವಾರ ರಾಜ್ಯದ 11 ಜಿಲ್ಲೆಗಳಲ್ಲಿ ಸುಗಮವಾಗಿ ನಡೆಯಿತು. ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳು ಕೈಗೊಂಡಿದ್ದರಿಂದ ಯಾವುದೆ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು 34 ವಿಷಯಗಳಿಗೆ ನಡೆದ ಕೆ-ಸೆಟ್ ಪರೀಕ್ಷೆಗೆ 1.34 ಲಕ್ಷ ಜನರು ಅರ್ಜಿ ಸಲ್ಲಿಸಿದ್ದರು. ಇವರ ಪೈಕಿ 1.21 ಲಕ್ಷ (ಶೇ.90) ಜನರು ಹಾಜರಾಗಿದ್ದರು ಎಂದು ವಿವರಿಸಿದ್ದಾರೆ. ಬೆಂಗಳೂರು, ಬಳ್ಳಾರಿ, […]

Continue Reading

ಕೆ-ಸೆಟ್ ಪರೀಕ್ಷೆ: ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ

ಬಳ್ಳಾರಿ: ಇಂದು ಕೆ-ಸೆಟ್ ಪರೀಕ್ಷೆ ಹಿನ್ನೆಲೆ ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ, ಕೈಕಡಗ ಸೇರಿದಂತೆ ಮೈಮೇಲೆ ಹಾಕಿಕೊಂಡಿರೋ ದೇವರ ದಾರವನ್ನು ಸಹ ಬಿಚ್ಚಿಸಿ ಅಭ್ಯರ್ಥಿಗಳನ್ನು ಒಳಗೆ ಕಳುಹಿಸಿದ ಘಟನೆ ನಡೆದಿದೆ. ಕಿವಿಯೋಲೆ, ಮೂಗುತಿ ಹಾಗೂ ದೇವರ ದಾರ ಬಿಚ್ಚಿಸಿದ್ದಕ್ಕೆ ಕೆಲ ಪರೀಕ್ಷಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು. ಅಸಮಾಧಾನದ ನಡುವೆಯೂ ಅನಿವಾರ್ಯವಾಗಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾದರು. ಇನ್ನೂ ಪರೀಕ್ಷೆ ಮುಗಿಸಿಕೊಂಡು ಹೊರಬಂದ ಬಳಿಕ ಪ್ರತಿಕ್ರಿಯೆ ನೀಡಿದ ಪರೀಕ್ಷಾರ್ಥಿಗಳು ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ದ ಅಸಮಾಧಾನ ಹೊರಹಾಕಿದರು. ಕಿವಿಯೋಲೆ, ಮೂಗುತಿ ಬಿಚ್ಚಿಸಿದ್ದು […]

Continue Reading

ಕಲರ್ಸ್ ಕನ್ನಡ ವಾಹಿನಿಯ ಧಾರಾವಾಹಿಗಳಲ್ಲಿ ಈ ತಿಂಗಳು ಪೂರ್ತಿ ಕನ್ನಡ ಹಬ್ಬ

ಕಲರ್ಸ್ ಕನ್ನಡ ವಾಹಿನಿಯು ಕನ್ನಡ ರಾಜ್ಯೋತ್ಸವವನ್ನು ಧಾರಾವಾಹಿಗಳಲ್ಲಿ ವಿಶಿಷ್ಟವಾಗಿ ಆಚರಿಸಲಿದೆ. ಕತೆಗಳಲ್ಲಿ ಕನ್ನಡತನ ತರುವ ಈ ಪ್ರಯತ್ನವನ್ನು ಪ್ರೋಮೋದಲ್ಲಿ ನೋಡಿರುವ ಕನ್ನಡದ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಒಟ್ಟಿನಲ್ಲಿ ನವೆಂಬರ್ ತಿಂಗಳು ಪೂರ್ತಿ ಕನ್ನಡದ ಸಂಭ್ರಮ ಕಲರ್ಸ್ ಕನ್ನಡದ ಧಾರಾವಾಹಿಗಳಲ್ಲಿ ಜೋರಾಗಿ ನಡೆಯಲಿದೆ. ಪ್ರೇಮ ಕಾವ್ಯ, ರಾಮಾಚಾರಿ, ಮುದ್ದು ಸೊಸೆ, ಗಂಧದ ಗುಡಿ, ಭಾಗ್ಯಲಕ್ಷ್ಮಿ, ಭಾರ್ಗವಿ LLB, ನಂದ ಗೋಕುಲ ಧಾರಾವಾಹಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ಕಂಪು ಹರಡಲಿದೆ. ರಾಮಾಚಾರಿಚಾರು ದೇವಸ್ಥಾನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡುತ್ತಾಳೆ ಮತ್ತು ಮಗುವಿಗೆ […]

Continue Reading

ಬಸವೇಶ್ವರ ಸಮಾಜ ಸೇವಾ ಬಳಗದಿಂದ ಸಂಭ್ರಮದ 70ನೇ ಕರ್ನಾಟಕ ರಾಜ್ಯೋತ್ಸವ

ಕಲಬುರಗಿ: ನಗರದ ಆಳಂದ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ತರಬೇತಿ ಸಂಸ್ಥೆಯ ವತಿಯಿಂದ ಶನಿವಾರ ಸಂಭ್ರಮದಿಂದ 70ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ ಪಾಟೀಲ್, ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗೆಪ್ಪಾ ಎಸ್.ಬಿರಾದಾರ, ಮುಖಂಡ ಓಂಕಾರ ವಠಾರ, ಶಿಕ್ಷಕಿಯರಾದ ಪೂಜಾ ಹೂಗಾರ, ಕಾವೇರಿ ಹೌದೆ, ಮುಸ್ಕಾನ್ ಶೇಖ್, ಸ್ನೇಹಾ ಚೌಹಾಣ ಮತ್ತು ವಿದ್ಯಾರ್ಥಿಗಳು ಇದ್ದರು.

Continue Reading

ಆಂಧ್ರದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ: 10 ಭಕ್ತರು ಸಾವು

ಅಮರಾವತಿ: ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 10 ಜನ ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಘಾತ ವ್ಯಕ್ತಪಡಿಸಿದ್ದು, ಭಕ್ತರ ಸಾವು ಹೃದಯವಿದ್ರಾವಕ ಎಂದು ವಿಷಾದಿಸಿದ್ದಾರೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತ ಘಟನೆ ಆಘಾತವನ್ನುಂಟು ಮಾಡಿದೆ. ಈ ದುರಂತ ಘಟನೆಯಲ್ಲಿ ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕವಾಗಿದೆ. […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವನ್ನು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಕನ್ನಡ ಮಾತೆ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣ ಮಾಡುವ ಮೂಲಕ ಮುಖಂಡರೊಂದಿಗೆ ಸಂಭ್ರಮದಿಂದ ಆಚರಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ನಮ್ಮ ನಾಡಿನ ಶ್ರೀಮಂತ ಇತಿಹಾಸ, ಸಂಸ್ಕೃತಿ ಮತ್ತು ಅಸ್ಮಿತೆಯ ರೋಮಾಂಚಕ ಅಭಿವ್ಯಕ್ತಿಯೇ ಕನ್ನಡ ರಾಜ್ಯೋತ್ಸವ ಎಂದರು. ನಮ್ಮ ರಾಜ್ಯ ರಚನೆಗೆ ಕಾರಣವಾದ ಹೋರಾಟಗಳಿಗೆ ಗೌರವ ಸಲ್ಲಿಸುವ, ನಮ್ಮ ನೆಲದ ಪರಂಪರೆಯನ್ನು ಆಚರಿಸಲು ನಾವೆಲ್ಲರು ಒಗ್ಗೂಡುವ ದಿನ. ಈ […]

Continue Reading

ಸೈಡ್‌ ಕೊಡದಿದ್ದಕ್ಕೆ ಕಿರಿಕ್‌, ಬೈಕ್‌ಗೆ ಕ್ಯಾಬ್ ಗುದ್ದಿಸಿ ದುಂಡಾವರ್ತನೆ – ಕ್ಯಾಮೆರಾದಲ್ಲಿ ಸೆರೆ

ಬೆಂಗಳೂರು: ‌ಸೈಡ್‌ ಕೊಡದಿದ್ದಕ್ಕೆ ಬೈಕ್‌ಗೆ ಕಾರು ಗುದ್ದಿಸಿ ಕ್ಯಾಬ್‌ ಚಾಲಕ ದುಂಡಾವರ್ತನೆ ತೋರಿದ ಘಟನೆ ನಗರದ ಕೆ.ಆರ್‌ ಪುರದ ಬಳಿ ನಡೆದಿದೆ. ಸೈಡ್ ಕೊಡುವ ವಿಚಾರಕ್ಕೆ ಕ್ಯಾಬ್‌ ಚಾಲಕ ಹಾಗೂ ಬೈಕ್‌ ಸವಾರನ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಸ್ವಲ್ಪ ಮುಂದೆ ಬಂದು ಬೈಕ್ ಸವಾರ ಪ್ರಶ್ನೆ ಮಾಡಿದ್ದಾನೆ. ಈ ವೇಳೆ ಕ್ಯಾಬ್‌ ಚಾಲಕ ಕಾರಿನಲ್ಲಿ ಬೈಕ್‌ಗೆ ಗುದ್ದಿಸಿ ಸವಾರನನ್ನು ಬೀಳಿಸಿದ್ದಾನೆ. ಕ್ಯಾಬ್ ಚಾಲಕನ ದುಂಡಾವರ್ತನೆ ಮತ್ತೊಂದು ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾನದಲ್ಲಿ […]

Continue Reading

ಕನ್ನಡಿಗರಿಗೆ ಕನ್ನಡದಲ್ಲೆ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್‌ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ನಾವು ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೆವೆ ಎಂದು ತಿಳಿಸಿದ್ದಾರೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೆವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸಂತೋಷ ಮತ್ತು ಆರೋಗ್ಯದಿಂದ […]

Continue Reading