ಕನ್ನಡಿಗರಿಗೆ ಕನ್ನಡದಲ್ಲೆ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್‌ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ನಾವು ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೆವೆ ಎಂದು ತಿಳಿಸಿದ್ದಾರೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೆವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸಂತೋಷ ಮತ್ತು ಆರೋಗ್ಯದಿಂದ […]

Continue Reading

ರಾಷ್ಟ್ರೀಯ ಏಕತಾ ದಿನ ಆಚರಣೆ: ಮಕ್ಕಳಿಂದ ಪ್ರತಿಜ್ಞಾ ವಿಧಿ ಬೋಧನೆ

ಶಹಾಬಾದ: ಸರ್ದಾರ್ ವಲ್ಲಭವಾಯ್ ಪಟೇಲ್ ಅವರು ದೇಶದ ಎಲ್ಲಾ ಸಂಸ್ಥಾನಗಳನ್ನು ಒಗ್ಗೂಡಿಸಿದರು. ದೇಶದ ಐಕ್ಯತೆ, ಸಮಗ್ರತೆ, ಆತಂರಿಕ ಭದ್ರತೆಗಾಗಿ ಶ್ರಮಿಸಿದ ಮಹನೀಯರು ಎಂದು ಮುಖ್ಯಗುರು ಸವಿತಾ ಬೆಳಗುಂಪಿ ಹೇಳಿದರು. ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಶಾಲೆಯಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭವಾಯಿ ಪಟೇಲ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಟೇಲರ ಸಾಧನೆಗಳು ನಮಗೆಲ್ಲರಿಗೂ ಸ್ಫೂರ್ತಿದಾಯಕ. ಐಕ್ಯತೆ, ಸಮಗ್ರತೆ, ಆಂತರಿಕ ಭದ್ರತೆ ನಿಟ್ಟಿನಲ್ಲಿ ಒಗ್ಗೂಡಿ ಕಾರ್ಯನಿರ್ವಹಿಸಲು ಏಕತಾ ದಿನಾಚರಣೆ ಪ್ರೇರಣೆಯಾಗಿದೆ […]

Continue Reading

ರೈಲ್ವೆ ಬಳಕೆದಾರರ ಸಮಾಲೋಚನಾ ಸಮಿತಿಯ ನೂತನ ಸದಸ್ಯ ಬಾಬುರಾವ ಪಂಚಾರರಿಗೆ ಕಸಾಪದಿಂದ ಸನ್ಮಾನ

ಶಹಾಬಾದ: ನಗರದ ಕನ್ನಡ ಭವನದಲ್ಲಿ ಸೋಲಾಪುರ ರೈಲ್ವೆ ವಿಭಾಗೀಯ ರೈಲ್ವೆ ಬಳಕೆದಾರರ ಸಮಾಲೋಚನಾ ಸಮಿತಿಯ ಸದಸ್ಯರಾಗಿ ಆಯ್ಕೆಗೊಂಡ ಬಾಬುರಾವ ಪಂಚಾರ ಅವರಿಗೆ ಕಸಾಪದಿಂದ ಗೌರವ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಶರಣಬಸಪ್ಪ ಕೋಬಾಳ, ಕಾರ್ಯದರ್ಶಿ ಶರಣು ವಸ್ತ್ರದ, ಪತ್ರಕರ್ತ ವಾಸುದೇವ ಚವ್ಹಾಣ್, ಹಿರಿಯರಾದ ಶರಣಗೌಡ ಪಾಟೀಲ್ ಗೋಳಾ(ಕೆ), ಸಿದ್ಧಲಿಂಗಯ್ಯ ಹಿರೇಮಠ, ಕನಕಪ್ಪ ದಂಡಗುಲಕರ್ ಇದ್ದರು. 

Continue Reading

ನಿವೃತ್ತ ಪ್ರಾಚಾರ್ಯ ಬಸವರಾಜ ಬಿರಾದಾರ ಅವರಿಗೆ ಬೀಳ್ಕೊಡುಗೆ

ಕಲಬುರಗಿ: ಜೇವರ್ಗಿ ಪಟ್ಟಣದ ಕೋರ್ಟ್ ಎದುರುಗಡೆಯಿರುವ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರುವ ಬಸವರಾಜ ಬಿರಾಜದಾರ ಅವರಿಗೆ ಸತ್ಕರಿಸಿ, ಬೀಳ್ಕೊಡಲಾಯಿತು. ಜಿಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಬಿರಾದಾರ ಅವರಿಗೆ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಜಿಲ್ಲೆಯ ವಿವಿಧ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು ಬಿರಾದಾರ ಅವರಿಗೆ ಸತ್ಕರಿಸಿ, ಅವರ ಅನುಪಮ ಸೇವೆಯನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ […]

Continue Reading

ಸುರಕ್ಷತೆಯಿಲ್ಲದೆ ಮ್ಯಾನ್‌ಹೋಲ್‌ಗೆ ಇಳಿದಿದ್ದ ಕಾರ್ಮಿಕರು ಅಸ್ವಸ್ಥ: ಓರ್ವನ ಸ್ಥಿತಿ ಗಂಭೀರ

ಬೆಂಗಳೂರು: ಸುರಕ್ಷತೆಗಳಿಲ್ಲದೆ ಮ್ಯಾನ್‌ಹೋಲ್‌ಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಅಸ್ವಸ್ಥಗೊಂಡಿರುವ ಘಟನೆ ಬೆಂಗಳೂರು ನಗರದ ನೀಲಸಂಧ್ರದ ಜಾನ್ಸನ್ ಮಾರ್ಕೆಟ್ ಬಳಿ ನಡೆದಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅನಿಲದ ದುರ್ವಾಸನೆಗೆ ಕಾರ್ಮಿಕರು ಮ್ಯಾನ್‌ಹೋಲ್‌ ಸಿಲುಕಿ ಅಸ್ವಸ್ಥಗೊಂಡಿದ್ದಾರೆ. ಬಳಿಕ ಹೋಲ್‌ನಲ್ಲಿ ಒದ್ದಾಡುತ್ತಿದ್ದ ಕಾರ್ಮಿಕರನ್ನ ಸ್ಥಳೀಯರು ಮೇಲೆತ್ತಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುತ್ತಮುತ್ತಲಿನವರ ಸಮಯಪ್ರಜ್ಞೆಯಿಂದ ಕಾರ್ಮಿಕರ ಜೀವ ಉಳಿದಿದೆ. ರಕ್ಷಣೆಗೆ ಬಂದವನೂ ಅಸ್ವಸ್ಥಘಟನೆ ಸಂಬಂಧ ಪ್ರತ್ಯಕ್ಷದರ್ಶಿ ಮೊಹಮ್ಮದ್ ಖಾನ್ ಹೇಳಿಕೆಯಂತೆ ಬೆಳಗ್ಗ 11 ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಕಳೆದೆರೆಡು […]

Continue Reading

ಭಾರತದ ಏಕತೆಗಾಗಿ ಬದುಕಿದ ಸರ್ದಾರ್: ಯಾರಿ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಗೌರವ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಭಾರತದ ಏಕತೆ ಮತ್ತು ಸಮಗ್ರತೆಗಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ರಾಜಪ್ರಭುತ್ವದ ರಾಜ್ಯಗಳನ್ನು ಭಾರತೀಯ ಒಕ್ಕೂಟಕ್ಕೆ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿ, ಭಾರತದ ಏಕತೆಗಾಗಿ ಬದುಕಿದ ಮಹಾನ್ ದೇಶಭಕ್ತರು ಎಂದರು. ಅವರ ಜನ್ಮದಿನದಂದು ನಾವು ರಾಷ್ಟ್ರೀಯ ಏಕತೆಯ […]

Continue Reading

ಚಿತ್ತಾಪುರ: ಅಥ್ಲೆಟಿಕ್ಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ಜಿಲ್ಲಾ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ಚಿತ್ತಾಪುರ ಪಟ್ಟಣದ ಆದರ್ಶ ವಿದ್ಯಾಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಪಟುಗಳು ಅಥ್ಲೆಟಿಕ್ಸ್‌ನ ವಿವಿಧ ಕ್ರೀಡೆಗಳಲ್ಲಿ ವಿಜಯಶಾಲಿಗಳಾಗುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 10ನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀಶೈಲ ಸರಪಳಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ ಮತ್ತು 10ನೇ ತರಗತಿಯ ಪ್ರಕೃತಿ ಜಿಲ್ಲಾ ಮಟ್ಟದ 3 ಕಿಲೋ ಮೀಟರ್ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟ ಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಮೇಲುಸ್ತುವಾರಿ ಸಮಿತಿಯ ಚಂದರ ಚವ್ಹಾಣ, […]

Continue Reading

ನಾಳೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

ಸುದ್ದಿ ಸಂಗ್ರಹ ಕಲಬುರಗಿ ಜಿಲ್ಲಾಡಳಿತ, ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆಯಿಂದ ಅ.31ರಂದು ಬೆಳಗ್ಗೆ 10.30ಕ್ಕೆ ನಗರದ ಡಾ.ಎಸ್.ಎಂ ಪಂಡಿತ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಸರಕಾರಿ ನೌಕರರ ದಿನಾಚರಣೆ ನಿಮಿತ್ತ ‘ಸರ್ವೋತ್ತಮ ಸೇವಾ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023, 2024, 2025ನೇ ಸಾಲಿನ ಒಟ್ಟು 30 ಜನರ ‘ಸರ್ವೋತ್ತಮ ಸೇವಾ’ ಪ್ರಶಸ್ತಿಗೆ ಆಯ್ಕೆ […]

Continue Reading

ಹೆಬ್ಬಾಳ: ಅಥ್ಲೆಟಿಕ್ಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ಜಿಲ್ಲಾ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ಕಾಳಗಿ ತಾಲೂಕಿನ ಹೆಬ್ಬಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಕ್ರೀಡಾಪಟುಗಳು ಅಥ್ಲೆಟಿಕ್ಸ್‌ನ ವಿವಿಧ ಕ್ರೀಡೆಗಳಲ್ಲಿ ವಿಜಯಶಾಲಿಗಳಾಗುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 10ನೇ ತರಗತಿಯ ವಿದ್ಯಾರ್ಥಿಗಳಾದ ಸಮೀರ್ ಎಂ ಪಟೇಲ್ ಟ್ರಿಪಲ್ ಜಂಪ್’ನಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ ಮತ್ತು ಅಭಿಷೇಕ್ ಶಿವಾನಂದ 400 ಮೀಟರ್ ಹರ್ಡಲ್ಸ್‌ನಲ್ಲಿ ದ್ವಿತೀಯ ಸ್ಥಾನಗಳಿಸುವ ಮೂಲಕ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಕ್ರೀಡಾಪಟುಗಳ ಸಾಧನೆಯನ್ನು ತರಬೇತುದಾರ, ದೈ.ಶಿ ಶಿಕ್ಷಕ ನಾಗರಾಜ […]

Continue Reading

ಸದೃಢ ಮಾನವ ಸಂಪನ್ಮೂಲ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಅನನ್ಯ

ಕಲಬುರಗಿ: ವಿದ್ಯಾರ್ಥಿಗಳಿಗೆ ಜ್ಞಾನ, ಕೌಶಲ್ಯ, ಬುದ್ಧಿ, ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ನೀಡಿ, ಅವರನ್ನು ದೇಶದ ಅಮೂಲ್ಯ ಮಾನವ ಸಂಪನ್ಮೂಲವನ್ನಾಗಿಸಲು ಶಿಕ್ಷಣ ಹಾಗೂ ಶಿಕ್ಷಣ ಸಂಸ್ಥೆಗಳು ಅನನ್ಯವಾದ ಪಾತ್ರ ನಿರ್ವಹಿಸುತ್ತವೆ ಎಂದು ಜೇವರ್ಗಿಯ ಬಸವೇಶ್ವರ ಬಿ.ಎಡ್ ಕಾಲೇಜಿನ ಪ್ರಾಧ್ಯಾಪಕ, ಚಿಂತಕ ಪ್ರೊ.ಎಸ್.ಬಿ ಮಮದಾಪುರ ಅಭಿಮತಪಟ್ಟರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಲಾಗಿದ್ದ ‘ಕಾಲೇಜಿನ 67ನೇ ಸಂಸ್ಥಾಪನಾ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಎಲ್ಲಾ ಸಮಸ್ಯೆಗಳಿಗೆ ಶಿಕ್ಷಣ ಪರಿಹಾರವಾಗಬಲ್ಲದು ಎಂದರು. […]

Continue Reading