ಸೇವೆಯಲ್ಲಿ ಕರ್ತವ್ಯ ಬದ್ಧತೆ, ಪ್ರಾಮಾಣಿಕತೆ ಮುಖ್ಯ

ಕಲಬುರಗಿ: ಸರ್ಕಾರಿ ನೌಕರಿ ಪಡೆಯುವುದು, ದೀರ್ಘಕಾಲ ಸೇವೆ ಸಲ್ಲಿಸುವುದು ದೊಡ್ಡ ಸಾಧನೆಯಲ್ಲ. ಬದಲಿಗೆ ದೊರೆತ ಹುದ್ದೆಗೆ ಪ್ರಾಮಾಣಿಕತೆ, ನಿಷ್ಠೆ ಹಾಗೂ ಕರ್ತವ್ಯಬದ್ಧತೆಯಿಂದ ಸೇವೆ ಸಲ್ಲಿಸಿ, ನ್ಯಾಯ ಒದಗಿಸುವುದು ಮುಖ್ಯ. ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ದಕ್ಷತೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ, ಇಲಾಖೆ ಹಾಗೂ ಸರ್ಕಾರಿ ನೌಕರರಿಗೆ ಮಲ್ಲಿಕಾರ್ಜುನ ಜಮಾದಾರ ಮತ್ತು ದಾನಮ್ಮ ಅವರು ಮಾದರಿಯಾಗಿದ್ದಾರೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮನೀರ್ ಅಹಮ್ಮದ್ ಮಾರ್ಮಿಕವಾಗಿ ಹೇಳಿದರು. ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಕಿರು ಮೃಗಾಲಯದಲ್ಲಿ ಅರಣ್ಯ […]

Continue Reading

ತಂಬಾಕು, ಧೂಮಪಾನ ಸೇವನೆ ಬೇಡ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ತಂಬಾಕು, ಧೂಮಪಾನ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ದುಷ್ಪರಿಣಾಮವಾಗಿ ಜೀವಕ್ಕೆ ಗಂಡಾಂತರ, ಹೀಗಾಗಿ ಇವುಗಳ ಸೇವನೆ ಮಾಡಬಾರದು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಶನಿವಾರ ಜರುಗಿದ ‘ವಿಶ್ವ ತಂಬಾಕು ರಹಿತ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟು ಯುವ ಶಕ್ತಿಯಿದೆ. ರಾಷ್ಟ್ರದ ಅಭಿವೃದ್ಧಿಯಲ್ಲಿ ಸದೃಢ ಮಾನವ ಸಂಪನ್ಮೂಲ ತುಂಬಾ […]

Continue Reading

ಸಮಾಜಕ್ಕೆ ಅಹಿಲ್ಯಾಬಾಯಿ ಹೋಳ್ಕರ ಕೊಡುಗೆ ಅಪಾರ: ಎಚ್.ಬಿ ಪಾಟೀಲ

ಕಲಬುರಗಿ: ಮಹಿಳಾ ಸ್ವಾತಂತ್ರ ಹೋರಾಟಗಾರ್ತಿ, ಹಿಂದುಳಿದ, ಮಹಿಳೆಯರ, ಬಡವರ ಪರ ಹೋರಾಟ ಮಾಡಿ, ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಲು ಶ್ರಮಿಸಿದ, ಅನೇಕ ಕೆರೆ-ಕಟ್ಟೆಗಳನ್ನು ನಿರ್ಮಿಸಿ ಸಮಾಜಪರ ಕೆಲಸಗಳನ್ನು ಮಾಡಿದ ಅಹಿಲ್ಯಾಬಾಯಿ ಹೋಳ್ಕರ ಅವರು ಬಹುಮುಖಿ ವ್ಯಕ್ತಿತ್ವದ ಮಹಾನ ಸಾಧಕಿಯಾಗಿ ಭಾರತೀಯ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘ಅಹಿಲ್ಯಾಬಾಯಿ ಹೋಳ್ಕರ್‌ರ 300ನೇ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ […]

Continue Reading

ಗುಣಮಟ್ಟದ ಶಿಕ್ಷಣ ರಾಷ್ಟ್ರದ ಅಭಿವೃದ್ಧಿಗೆ ಪೂರಕ

ಕಲಬುರಗಿ: ಶಿಕ್ಷಣವು ವ್ಯಕ್ತಿಗೆ ಜ್ಞಾನ, ಬುದ್ದಿ, ಸಂಸ್ಕಾರ, ಮಾನವೀಯತೆ, ಕೌಶಲಗಳನ್ನು ನೀಡಿ ರಾಷ್ಟ್ರದ ಸದೃಢ ಮಾನವ ಸಂಪನ್ಮೂಲ ನಿರ್ಮಾಣ ಮಾಡುವ ಮೂಲಕ ಸಾಮಾಜಿಕ ಪರಿವರ್ತನೆಯ ಪ್ರಮುಖ ಸಾಧನವಾಗಿದೆ. ಆದರೆ ಶಿಕ್ಷಣವು ಕೇವಲ ಪರಿಮಾಣಾತ್ಮಕವಾಗಿದ್ದರೆ ಪ್ರಯೋಜನೆಯಿಲ್ಲ. ಅದು ಗುಣಮಟ್ಟದಿಂದ ಕೂಡಿರಬೇಕು. ಗುಣಮಟ್ಟದ ಶಿಕ್ಷಣ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಶಿಕ್ಷಣ ಪ್ರೇಮಿ ಡಾ.ಸುನೀಲಕುಮಾರ ಎಚ್ ವಂಟಿ ಅಭಿಪ್ರಾಯಪಟ್ಟರು. ನಗರದ ಆಸಿಫ್ ಗಂಜ್‌ನ ಕಸ್ತೂರಬಾ ಬಾಲಿಕಾ ವಸತಿ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿ […]

Continue Reading

ಐಪಿಎಲ್ ಟಿಕೆಟ್​ ಕಾಳಸಂತೆಯಲ್ಲಿ ಮಾರಾಟ: ದಂಧೆ ಕಿಂಗ್​ಪಿನ್ ಆಗಿದ್ದ ಇಬ್ಬರು ಪೊಲೀಸರು ಸಸ್ಪೆಂಡ್

ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಟಿಕೆಟ್‌ ಕಾಳಸಂತೆ ಮಾರಾಟದಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಟಿಕೆಟ್ ಮಾರಾಟ ಮಾಡುವಾಗ ಇಬ್ಬರು ಕಾನ್ಸ್‌ಟೇಬಲ್‌ ಸಿಕ್ಕಿಬಿದ್ದಿದ್ದು, ಈ ಸಂಬಂಧ ಗೋವಿಂದರಾಜ ನಗರದ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಇದೀಗ ಇಬ್ಬರು ಪೊಲೀಸ್ ಪೇದೆಗಳನ್ನು ಸಸ್ಪೆಂಡ್ ಮಾಡಲಾಗಿದೆ. ಹಲಸೂರು ಸಂಚಾರಿ ಠಾಣೆಯ ಪೊಲೀಸ್ ಕಾನ್ಸ್​​ ಟೇಬಲ್ ರವಿಚಂದ್ರ ಹಾಗೂ ಟಿಎಂಸಿ ಸಿಬ್ಬಂದಿ ವೆಂಕಟಗಿರಿಗೌಡನನ್ನು ಸಸ್ಪೆಂಡ್ ಮಾಡಿ ಬೆಂಗಳೂರು ಸಂಚಾರ ವಿಭಾಗದ ಜಂಟಿ ಆಯುಕ್ತ ಅನುಚೇತ್ ಆದೇಶ ಹೊರಡಿಸಿದ್ದಾರೆ. ಮೇ 17 ರಂದು […]

Continue Reading

ಡಾ.ಎಚ್.ಎಸ್ ವೆಂಕಟೇಶ ಮೂರ್ತಿಯವರಿಗೆ ಶೃದ್ಧಾಂಜಲಿ

ಕಲಬುರಗಿ: ಶುಕ್ರವಾರ ನಿಧನರಾದ ಹಿರಿಯ ಸಾಹಿತಿ ಡಾ.ಎಚ್.ಎಸ್ ವೆಂಕಟೇಶ ಮೂರ್ತಿ ಅವರಿಗೆ ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶೃದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಚ್.ಬಿ ಪಾಟೀಲ, ಶಿವಯೋಗೆಪ್ಪಾ ಎಸ್. ಬಿರಾದಾರ, ದತ್ತು ಹಡಪದ, ಡಾ‌ರಾಜಶೇಖರ ಪಾಟೀಲ, ರಾಜು ಕೊರಳ್ಳಿ ಹಾಗೂ ವಿದ್ಯಾರ್ಥಿಗಳು ಇದ್ದರು.

Continue Reading

ಶೇ.30 ರಷ್ಟು ಆಯಸ್ಸು ಹೆಚ್ಚಿಸುವ ಔಷಧ ಪ್ರಯೋಗ ಯಶಸ್ವಿ: ಇಲಿಗಳ ಮೇಲೆ ಜರ್ಮನಿ ವಿಜ್ಞಾನಿಗಳ ಪ್ರಯೋಗ

ಬರ್ಲಿನ್‌: ಜೀವಿಗಳ ಆಯಸ್ಸು ಹೆಚ್ಚಿಸುವ ಕುರಿತಾದ ಜೀವವಿಜ್ಞಾನಿಗಳ ಪ್ರಯೋಗಕ್ಕೆ ಪ್ರಾರಂಭಿಕ ಯಶಸ್ಸು ದೊರೆತಿದೆ, ಜರ್ಮನಿಯ ವಿಜ್ಞಾನಿಗಳು ಇಲಿಗಳ ಜೀವಿತಾವಧಿಯನ್ನು ಶೇ.30 ರಷ್ಟು ವಿಸ್ತರಿಸುವ ಪ್ರಯೋಗದಲ್ಲಿ ಯಶಸ್ಸು ಕಂಡಿದ್ದಾರೆ ಎಂದು ವರದಿಯಾಗಿದೆ. ಮಾನವರ ಮೇಲೂ ಪ್ರಯೋಗದ ಚಿಂತನೆ ಇದೆ ಎನ್ನಲಾಗಿದೆ. ಮ್ಯಾಕ್ಸ್‌ ಪ್ಲಾಂಕ್‌ ಇನ್ಸ್ಟಿಟ್ಯೂಟ್‌ ಫಾರ್‌ ಬಯಾಲಜಿ ಆಫ್ ಏಜಿಂಗ್‌ನ ಜೀವವಿಜ್ಞಾನಿಗಳ ತಂಡ ಎಫ್ಡಿಎ ಪ್ರಮಾಣಿತ ಔಷಧಗಳಾದ ರಾಪಾಮೈಸಿನ್‌ (ಅಂಗಾಂಶ ಕಸಿಯಲ್ಲಿ ಬಳಕೆಯಾಗುವ ಔಷಧ) ಹಾಗೂ ಟ್ರಾಮೆಟಿನಿಬ್‌ (ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಬಳಕೆಯಾಗುವ ಔಷಧ) ಸಂಯೋಜನೆ ಬಳಸಿ ಈ ಪ್ರಯೋಗ […]

Continue Reading

ವಿಚಕ್ಷಣ ದಳದ ದಾಳಿಗೆ ಹೆದರಿ ಕಿಟಕಿಯಿಂದ ನೋಟುಗಳ ಬಂಡಲ್ ಎಸೆದ ಇಂಜಿನಿಯರ್‌: 2.1 ಕೋಟಿ ಜಪ್ತಿ

ಭುವನೇಶ್ವರ: ನಿನ್ನೆಯಷ್ಟೇ ಉತ್ತರಾಖಂಡ್‌ನ ಡೆಹ್ರಾಡೂನ್‌ನಲ್ಲಿ ವಿಚಕ್ಷಣ ದಳದ ದಾಳಿಗೆ ಹೆದರಿ ಸಿಕ್ಕಿ ಬೀಳುವ ಭಯದಲ್ಲಿ ವಿಲೇಜ್ ಅಕೌಂಟೆಂಟ್‌ ಒಬ್ಬರು ತಾವು ಪಡೆದ ಲಂಚದ ಹಣವನ್ನು ನುಂಗಿದಂತಹ ಘಟನೆ ನಡೆದ ಬಗ್ಗೆ ವರದಿಯಾಗಿತ್ತು. ಈ ಘಟನೆ ಮಾಸುವ ಮೊದಲೇ ಈಗ ಒಡಿಶಾದಲ್ಲಿ ಇದೆ ರೀತಿಯ ಘಟನೆಯೊಂದು ನಡೆದಿದೆ. ಮನೆ ವಿಚಕ್ಷಣ ದಳದ ದಾಳಿ ನಡೆಯುವುದು ತಿಳಿಯುತ್ತಿದ್ದಂತೆ ಸರ್ಕಾರಿ ಅಧಿಕಾರಿಯೊಬ್ಬ ತಮ್ಮ ಬಳಿ ಅಕ್ರಮವಾಗಿ ಸಂಗ್ರಹಿಸಿದ್ದ ನೋಟುಗಳನ್ನು ಕಿಟಿಕಿಯ ಮೂಲಕ ಹೊರಗೆ ಎಸೆದಂತಹ ಘಟನೆ ನಡೆದಿದೆ. ಈತನ ಬಳಿಯಿಂದ 2.1 […]

Continue Reading

ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ಬೇಸಿಗೆ ಶಿಬಿರ ಪೂರಕ: ಎಚ್.ಬಿ ಪಾಟೀಲ

ಕಲಬುರಗಿ: ಬೇಸಿಗೆ ಶಿಬಿರದಲ್ಲಿ ಭಾಗವಹಿಸುವುದರಿಂದ ತರಗತಿಯ ಪಠ್ಯದ ಜೊತೆಗೆ ಪಠ್ಯೇತರ, ಸೃಜನಶೀಲ ಚಟುವಟಿಕೆಗಳ ಮೂಲಕ ವಿಷಯದ ಜ್ಞಾನ, ಸಮಯದ ಸದುಪಯೋಗಕ್ಕೆ ಬೇಸಿಗೆ ಶಿಬಿರಗಳು ಪೂರಕವಾಗುತ್ತವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಹೊರವಲಯದ ಉಪಳಾಂವ ಗ್ರಾಮದ ಶ್ರೀರಾಮ ಕನ್ನಡ ಕಾನ್ವೆಂಟ್ ಶಾಲೆಯಲ್ಲಿ ಜರುಗಿದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಬೇಸಿಗೆ ದಿನಗಳಲ್ಲಿ ವಿದ್ಯಾರ್ಥಿಗಳು ಬಿಸಿಲಿನಲ್ಲಿ ಸುತ್ತಾಡಿ ಆರೋಗ್ಯ ಹಾಳುಮಾಡಿಕೊಳ್ಳುತ್ತಾರೆ. ಮಕ್ಕಳು ಮೊಬೈಲ್, ಟಿ.ವಿ ವೀಕ್ಷಣೆಯಲ್ಲಿಯೇ […]

Continue Reading

ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಮಹಿಳೆಯರು ತಮ್ಮ ಆರೋಗ್ಯದಲ್ಲಿ ಏನಾದರೂ ಸಮಸ್ಯೆಯಿದ್ದರೆ ಮುಜುಗರ ಪಡದೆ ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ, ಸಲಹೆ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಮಹಿಳೆಯರಿಗೆ ಸಲಹೆ ನೀಡಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಅಂತಾರಾಷ್ಟ್ರೀಯ ಮಹಿಳಾ ಆರೋಗ್ಯ ಸಂರಕ್ಷಣಾ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ತಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದೆ ಸಮಸ್ಯೆಯಿದ್ದರೆ, ಮುಜುಗರ, ಹಿಂಜರಿಕೆಯ ಮನೋಭಾವದಿಂದ […]

Continue Reading