ಅಯೋಧ್ಯೆ ರಾಮಮಂದಿರಕ್ಕೆ 3 ಸಾವಿರ ಕೋಟಿ ದೇಣಿಗೆ: 1500 ಕೋಟಿ ರೂ. ಖರ್ಚು

ಅಯೋಧ್ಯೆ: ರಾಮಮಂದಿರಕ್ಕೆ 3,000 ಕೋಟಿ ರೂ. ಹರಿದುಬಂದಿದ್ದು, ಅದರಲ್ಲಿ ದೇಗುಲ ಸಂಪೂರ್ಣ ನಿರ್ಮಾಣಕ್ಕೆ 1,500 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ತಿಳಿಸಿದೆ. ಅಯೋಧ್ಯೆ ರಾಮಮಂದಿರವನ್ನು ಈಗ ಸಂಪೂರ್ಣವಾಗಿ ನಿರ್ಮಿಸಲಾಗಿದೆ. ಭಗವಾನ್ ರಾಮನಿಗೆ ಸಮರ್ಪಿತವಾದ ಭವ್ಯ ದೇವಾಲಯವು ಪವಿತ್ರ ಸಂಕೀರ್ಣದ ಒಳಗೆ ಆರು ಸಹಾಯಕ ದೇವಾಲಯಗಳೊಂದಿಗೆ ಪೂರ್ಣಗೊಂಡಿದೆ. ಶಿವ, ಗಣೇಶ, ಹನುಮಾನ್, ಸೂರ್ಯ, ಭಗವತಿ ಮತ್ತು ಅನ್ನಪೂರ್ಣ ದೇವಿಗೆ ಮೀಸಲಾಗಿರುವ ದೇವಾಲಯಗಳ ನಿರ್ಮಾಣ ಪೂರ್ಣಗೊಂಡಿದೆ ಎಂದು ಟ್ರಸ್ಟ್‌ನ ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯ […]

Continue Reading

ಮಗನಿಗೆ ಅದೃಷ್ಟ ತಂದ ತಾಯಿಯ ಜನ್ಮ ದಿನಾಂಕ: UAE ಲಾಟರಿಯಲ್ಲಿ 240 ಕೋಟಿ ರೂ ಗೆದ್ದ ಭಾರತೀಯ

ದುಬೈ: 29 ವರ್ಷದ ಭಾರತೀಯ ಪ್ರಜೆ ದೀರ್ಘಕಾಲದಿಂದ ಅಬುಧಾಬಿಯಲ್ಲಿ ನೆಲೆಸಿರುವ ಆಂಧ್ರ ಮೂಲದ ಅನಿಲ್‌ಕುಮಾರ್ ಬೊಲ್ಲಾ ಎಂಬಾತನ ಭವಿಷ್ಯವೇ ಬದಲಾಗಿದೆ. ಅದಕ್ಕೆ ಕಾರಣವಾಗಿದ್ದು ಆತನ ತಾಯಿಯ ಹುಟ್ಟುಹಬ್ಬದ ದಿನ. ಅಕ್ಟೋಬರ್ 18ರ ಶನಿವಾರ ನಡೆದ ಯುಎಇ ಲಾಟರಿಯ 23ನೇ ಲಕ್ಕಿ ಡೇ ಡ್ರಾ #251018 ರಲ್ಲಿ ಚಿನ್ನ ಗೆದ್ದು, ಕ್ಷಣಾರ್ಧದಲ್ಲಿ ಕೋಟ್ಯಾಧಿಪತಿಯಾಗಿದ್ದಾನೆ. ಯುಎಇ ಲಾಟರಿ ಅಧಿಕಾರಿಗಳು ಅದೃಷ್ಟಶಾಲಿ ಭಾರತೀಯನ ಚಿತ್ರವನ್ನು ಬಿಡುಗಡೆ ಮಾಡಿರುವುದರಿಂದ ಸಸ್ಪೆನ್ಸ್ ಕೊನೆಗೂ ಕೊನೆಗೊಂಡಿದೆ. ಇತಿಹಾಸದಲ್ಲಿಯೇ ಅತಿ ದೊಡ್ಡ ಬಹುಮಾನ (ಸುಮಾರು 240 ಕೋಟಿ […]

Continue Reading

ವಿಜಯಪುರದಲ್ಲಿ ಸರಣಿ ಭೂಕಂಪನ: 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ

ವಿಜಯಪುರ: ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದೆ. ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದ್ದು, ಇದರಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಮಂಗಳವಾರ (ಅ.28) ರಾತ್ರಿ 11:41ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದಾದ ಬಳಿಕ ಬುಧವಾರ (ಅ.29) ಬೆಳಿಗ್ಗೆ 5:30ರ ಸುಮಾರಿಗೆ ಭೂಮಿ ಕಂಪಿಸಿದೆ. ಸಿಸಿಟಿವಿ ದೃಶ್ಯದಲ್ಲಿಯೂ ಭೂಕಂಪನದ ತೀವ್ರತೆ ದಾಖಲಾಗಿದೆ. 3.0 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸರಣಿ ಭೂಕಂಪನದಿಂದ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

Continue Reading

ಸುನಿ-ಶಿವಣ್ಣ ಕಾಂಬಿನೇಷನ್‌ನ `ಮನಮೋಹಕ’ ಸಿನಿಮಾ ನಿಲ್ಲೋಕೆ ಕಾರಣವೇನು ?

ನಟ ಶಿವರಾಜ್‌ಕುಮಾರ್ ಹಾಗೂ ಸಿಂಪಲ್ ಸುನಿ ನಿರ್ದೇಶನದ `ಮನಮೋಹಕ’ ಸಿನಿಮಾ ಸುಮಾರು 10 ವರ್ಷಗಳ ಹಿಂದೆ ಸೆಟ್ಟೇರಬೇಕಿತ್ತು. ಆ ಸಿನಿಮಾಗಾಗಿ ಫೋಟೋ ಶೂಟ್ ಕೂಡಾ ಮಾಡಲಾಗಿತ್ತು. ನವಿರಾದ ಪ್ರೇಮಕಥೆಯುಳ್ಳ ಮನಮೋಹಕ ಸಿನಿಮಾದ ಕಥೆ ಕೇಳಿ ಶಿವಣ್ಣ ತುಂಬಾನೇ ಖುಷಿಯಿಂದ ಒಪ್ಪಿಕೊಂಡಿದ್ದರು. ಆದರೆ ಆ ಸಿನಿಮಾ ಕಾರಣಾಂತರಗಳಿಂದ ನಿಂತು ಹೋಯಿತು. ಮನಮೋಹಕ ಸಿನಿಮಾದ ವಿಶೇಷ ಪಾತ್ರದಲ್ಲಿ ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಐಶ್ವರ್ಯ ರೈ ಅವರನ್ನು ಕರೆತರಲು ಕೂಡಾ ಪ್ಲ್ಯಾನ್ ಮಾಡಲಾಗಿತ್ತಂತೆ. ಸುಮಾರು 10 ವರ್ಷಗಳಾದರೂ ಆ ಸಿನಿಮಾದ […]

Continue Reading

ಮೊಂಥಾ ಎಫೆಕ್ಟ್: 100ಕ್ಕೂ ಹೆಚ್ಚು ರೈಲುಗಳು, 35 ವಿಮಾನಗಳ ಹಾರಾಟ ರದ್ದು

ನವದೆಹಲಿ: ಮೊಂಥಾ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆ ಭಾರತೀಯ ರೈಲ್ವೆ 100ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಿದೆ. ಜೊತೆಗೆ 30ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿವೆ. ಚಂಡಮಾರುತದ ಮುನ್ನೆಚ್ಚರಿಕೆ ಕ್ರಮವಾಗಿ, ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಭಾರತೀಯ ರೈಲ್ವೆ 100ಕ್ಕೂ ಹೆಚ್ಚು ರೈಲು ಸೇವೆಗಳನ್ನು ರದ್ದುಗೊಳಿಸಿದೆ. ಜೊತೆಗೆ ಹಲವಾರು ರೈಲುಗಳ ಮಾರ್ಗದಲ್ಲಿಯೂ ಬದಲಾವಣೆ ಮಾಡಿದ್ದು, ಕೆಲವು ರೈಲುಗಳ ಸಮಯವನ್ನು ಮರುನಿಗದಿಪಡಿಸಿದೆ. ಆಂಧ್ರಪ್ರದೇಶ ಕರಾವಳಿ ಪ್ರದೇಶಗಳಾದ ಕಾಕಿನಾಡ, ಭೀಮಾವರಂ, ವಿಜಯವಾಡ, ರಾಜಮಂಡ್ರಿ ಮತ್ತು ವಿಶಾಖಪಟ್ಟಣಂ ಕಡೆ ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆ […]

Continue Reading

ಚಿತ್ತಾಪುರ ಶಾಂತಿ ಸಭೆಯಲ್ಲಿ ಅಶಾಂತಿ, ಸಂಘಟನೆಗಳ ಮಧ್ಯೆ ಮೂಡದ ಒಮ್ಮತ

ಕಲಬುರಗಿ: ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ಪ್ರಕರಣ ಸಂಬಂಧ ಕಲಬುರಗಿ ಜಿಲ್ಲಾಡಳಿತ ನಡೆಸಿದ ಶಾಂತಿ ಸಭೆಯಲ್ಲಿ ಅಶಾಂತಿ ಮೂಡಿದೆ. ಬೆಳಗ್ಗೆ 11:30ಕ್ಕೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ನೇತೃತ್ವದಲ್ಲಿ ಆರ್‌ಎಸ್‌ಎಸ್, ಭೀಮ್ ಆರ್ಮಿ ಸೇರಿದಂತೆ 10 ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಮೊದಲಿಗೆ ಡಿಸಿಗೆ ಲಿಖಿತ ಹೇಳಿಕೆ ಸಲ್ಲಿಸಿದ ಸಂಘಟನೆಗಳಿಗೆ ಸಭೆಯಲ್ಲಿ ಅನಿಸಿಕೆ ಹೇಳಲು ಸೂಚಿಸಲಾಯಿತು. ಈ ವೇಳೆ ಆರ್‌ಎಸ್‌ಎಸ್ ಲಾಠಿ ಬಿಟ್ಟು ರಾಷ್ಟ್ರಧ್ವಜ ಹಿಡಿದು ಪಥಸಂಚಲನ ಮಾಡುವಂತೆ ದಲಿತ ಸಂಘಟನೆಗಳು ಪಟ್ಟು ಹಿಡಿದವು. ಇದಕ್ಕೆ ಲಾಠಿ ಹಿಡಿದು ಪಥಸಂಚಲನ […]

Continue Reading

ಶಹಾಬಾದ: ರೇಣುಕಾ ಯಲ್ಲಮ್ಮ ಮೂರ್ತಿ ಭವ್ಯ ಮೆರವಣಿಗೆ

ಸುದ್ದಿ ಸಂಗ್ರಹ ಶಹಾಬಾದ ನಗರದ ಇಂಜನ್ ಫೈಲ್ ಬಡಾವಣೆಯಲ್ಲಿ ಜೀರ್ಣೋದ್ದಾರಗೊಂಡಿರುವ ರೇಣುಕಾ ಯಲ್ಲಮ್ಮ ದೇವಿಯ ಮೂರ್ತಿ ಪ್ರತಿಷ್ಠಾಪನೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಮಹಿಳೆಯರ ಪೂರ್ಣ ಕುಂಭ ಸ್ವಾಗತ, ಕಲಾ ತಂಡಗಳೊಂದಿಗೆ ಸೋಮವಾರ ನಗರದ ಪ್ರಮುಖ ಬೀದಿಯಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಗೂ ನಿಂಬಾಳ್ಕರ ಕುಟುಂಬದ ಕುಲದೇವತೆಯಾಗಿರುವ ಕೊತ್ಲಾಪುರ ರೇಣುಕಾ ಯಲ್ಲಮ್ಮ ದೇವಿಯ ಜೀರ್ಣಾವಸ್ಥೆಯ ದೇವಸ್ಥಾನವನ್ನು ಸಂಪೂರ್ಣ ಶಿಲಾ ದೇಗುಲ ನಿರ್ಮಿಸಲಾಗಿದೆ. ಅ.27 ರಿಂದ 29 ವರೆಗೆ ಕೇರಳದ ತ್ರಿಶೂರಿನ ರಾಮದಾಸ ನಂಬೂದರಿ ಅವರ […]

Continue Reading

ಕಲಬುರಗಿ: ಸರಕಾರಿ ನೌಕರರಿಗೆ ಗೀತ ಗಾಯನ ಸ್ಪರ್ಧೆ

ಕಲಬುರಗಿ: ಸರಕಾರಿ ನೌಕರರ ಸಂಘದಿಂದ ಕರ್ನಾಟಕರಾಜ್ಯೋತ್ಸವ ಅಂಗವಾಗಿ ಸರಕಾರಿ ನೌಕರರಿಗೆ ಬೆಂಗಳೂರಿನ ಸಂಘದ ಆವರಣದಲ್ಲಿ ನ.8 ರಂದು ರಾಜ್ಯಮಟ್ಟದ ಜನಪದ, ಕನ್ನಡ ಗೀತೆಗಳ ಗುಂಪು ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ನೌಕರರ ಸಂಘವು ನೀಡಿರುವ ಆನ್‌ಲೈನ್ ಲಿಂಕ್ https://forms.gle/8pR3m5nXowwQzccs9 ಮೂಲಕ ನ.2ರ ಸಂಜೆ 5 ಗಂಟೆಯೊಳಗೆ ನೋಂದಾಯಿಸಿಕೊಳ್ಳಬೇಕು. ವಿಜೇತ ತಂಡಗಳಿಗೆ ಪ್ರಥಮ 1,00,000 ರೂ., ದ್ವಿತೀಯ 75,000 ರೂ. ಹಾಗೂ ತೃತೀಯ ಬಹುಮಾನ 50,000 […]

Continue Reading

ರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್ ಭಾಗ್ಯ: ಹಳೆಯ ಸ್ಲೋಚ್ ಹ್ಯಾಟ್‌ಗಳಿಗೆ ಗುಡ್ ಬೈ

ಬೆಂಗಳೂರು: ರಾಜ್ಯದ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್‌’ಗಳನ್ನು ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರು ಹೊಸ ಕ್ಯಾಪ್‌ಗಳನ್ನು ವಿತರಣೆ ಮಾಡಲಿದ್ದಾರೆ. ನಂತರ ಹಂತಹಂತವಾಗಿ ವಿವಿಧ ಜಿಲ್ಲೆಗಳ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ಕಾನ್‌ಸ್ಟೆಬಲ್‌ಗಳಿಗ ಹೊಸ ಕ್ಯಾಪ್‌ ವಿತರಣೆ ನಡೆಯಲಿದೆ. ಜೂನ್‌ನಲ್ಲಿ ನಡೆದಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಹೊಸ […]

Continue Reading

ಜೇವರ್ಗಿ: ಸ್ಕಿಲ್ @ ಸ್ಕೂಲ್ ಕೌಶಲ್ಯ ತರಬೇತಿ ಕಾರ್ಯಕ್ರಮ

ಕಲಬುರಗಿ: ಉದ್ಯೋಗ ಮತ್ತು ತರಬೇತಿ ಇಲಾಖೆಯ ವತಿಯಿಂದ ಸ್ಕಿಲ್ @ ಸ್ಕೂಲ್ ಕೌಶಲ್ಯ ತರಬೇತಿ ಕಾರ್ಯಕ್ರಮ ಜೇವರ್ಗಿ ಪಟ್ಟಣದಲ್ಲಿ ಜರುಗಿತು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್’ಎಸ್’ಎಸ್ ಘಟಕದ ಸಹಯೋಗದಲ್ಲಿ ಉದ್ಯೋಗ ಮತ್ತು ತರಬೇತಿ ಇಲಾಖೆಯ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸ್ಕಿಲ್ @ ಸ್ಕೂಲ್ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಸರ್ಕಾರಿ ಐಟಿಐ ಕಾಲೇಜಿನ ಜೆಟಿಓ ಶಿವಶರಣಪ್ಪ ಹಳಿಮನಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜೆಟಿಓ ಸೈಯದ್ ಅಯಾಜ್, ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ […]

Continue Reading