ಯಡ್ರಾಮಿ: ಮಧ್ಯರಾತ್ರಿ ಸುರಿಯುತ್ತಿರುವ ಮಳೆಯಲ್ಲಿ ರಥ ಎಳೆದ ಭಕ್ತರು

ಯಡ್ರಾಮಿ: ತಾಲೂಕಿನ ಕಾಖಂಡಕಿ ಗ್ರಾಮದ ಮಲ್ಲಾರಾಧ್ಯರ ಹಾಗೂ ಕೋರಿಸಿದ್ದೇಶ್ವರ ಶಿವಯೋಗಿಗಳ ಭಕ್ತರು ಸುರಿಯುತ್ತಿರುವ ಭಾರಿ ಮಳೆಯ ನಡುವೆಯೂ ರಥವನ್ನು ಎಳೆದರು. ಬುಧವಾರ ಸಂಜೆ ನಡೆಯಬೇಕಿದ್ದ ರಥೋತ್ಸವವು ಮಳೆಯ ಕಾರಣದಿಂದ ಮುಂದೂಡಲಾಗಿತ್ತು. ಮಳೆ ನಿಲ್ಲುವ ಯಾವ ಲಕ್ಷಣವೂ ಕಾಣದಿದ್ದಾಗ ಭಕ್ತರು ನಾಲವಾರ ಹಾಗೂ ಕಾಖಂಡಕಿ ಮಠಗಳ ಪೀಠಾಧಿಪತಿ ಸಿದ್ಧತೋಟೇಂದ್ರ ಶಿವಾಚಾರ್ಯರ ಅಪ್ಪಣೆ ಪಡೆದು ಸದ್ಗುರು ಮಲ್ಲಾರಾಧ್ಯರ ಹಾಗೂ ಕೋರಿಸಿದ್ದೇಶ್ವರ ಶಿವಯೋಗಿಗಳ, ಸಿದ್ಧತೋಟೇಂದ್ರ ಶಿವಾಚಾರ್ಯರ ಜೈಕಾರ ಹಾಕುತ್ತಾ ಮಧ್ಯರಾತ್ರಿ ಸುರಿಯುತ್ತಿರುವ ಭಾರಿ ಮಳೆಯಲ್ಲಿಯೇ ರಥವನ್ನು ಎಳೆದರು. ನಡೆದಾಡಲು ಕಷ್ಟವಾಗಿರುವ ಕೆಸರು […]

Continue Reading

ಕಾಖಂಡಕಿ ಜಾತ್ರಾ ಸಂಭ್ರಮದಲ್ಲಿ ತನಾರತಿ ಹರಕೆ ತೀರಿಸಿದ ಸಹಸ್ರಾರು ಭಕ್ತರು

ಯಡ್ರಾಮಿ: ನಾಡಿನ ವಿಶಿಷ್ಟ ಉತ್ಸವಗಳಲ್ಲಿ ಒಂದಾದ ತನಾರತಿ ಉತ್ಸವವು ಬಾದಮಿ ಅಮಾವಾಸ್ಯೆಯ ದಿನದಂದು ತಾಲೂಕಿನ ಕಾಖಂಡಕಿ ಕ್ಷೇತ್ರದಲ್ಲಿ ಸಹಸ್ರಾರು ಭಕ್ತರ ಮಧ್ಯೆ ಭಕ್ತಿಭಾವದಿಂದ ನೆರವೇರಿತು. ಸದ್ಗುರು ಮಲ್ಲಾರಾಧ್ಯರ ಹಾಗೂ ಕೋರಿಸಿದ್ಧೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ನಾಲವಾರ- ಕಾಖಂಡಕಿ ಮಠಗಳ ಒಡೆಯರಾದ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆದ ಉತ್ಸವದಲ್ಲಿ ನಾಡಿನ-ಪರನಾಡಿನ ಸಹಸ್ರಾರು ಸದ್ಭಕ್ತರು ಇಷ್ಟಾರ್ಥ ಪೂರೈಸಿದ ಮಹಾಗುರುವಿಗೆ ತನಾರತಿ ಹರಕೆ ತೀರಿಸಿ ಭಕ್ತಿ ಭಾವ ಮೆರೆದರು. ಬುಧವಾರ ನಸುಕಿನ ಜಾವ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು […]

Continue Reading

ಬಸವೇಶ್ವರ ಮೂರ್ತಿಯ ಜೊತೆಗೆ ತತ್ವವೂ ಎಲ್ಲೆಡೆ ಪಸರಿಸಲಿ: ಬಸವರಾಜ ಪಾಟೀಲ್ ಸೇಡಂ

ಚಿತ್ತಾಪುರ: ವಿಶ್ವಗುರು ಬಸವೇಶ್ವರ ಮೂರ್ತಿಯ ಜೊತೆಗೆ ತತ್ವ ಸಿದ್ಧಾಂತಗಳು ಎಲ್ಲೆಡೆ ಪಸರಿಸುವ ಕೆಲಸ ಪ್ರತಿಯೊಬ್ಬರೂ ಮಾಡಬೇಕಿದೆ ಎಂದು ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವಗುರು ಬಸವೇಶ್ವರರ 892ನೇ ಜಯಂತ್ಯೋತ್ಸವ ಹಾಗೂ ಬಸವೇಶ್ವರ ಮೂರ್ತಿ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾವೂರ ಗ್ರಾಮದಲ್ಲಿ ಮೂರ್ತಿ ಅನಾವರಣ ಮಾಡಿದ್ದು ಖುಷಿಯ ಸಂಗತಿ. ಆದರ ಜೊತೆಗೆ ಮೂರ್ತಿ ಅನಾವರಣ ಸಮಿತಿಯವರು ನಿತ್ಯವೂ ಈ ಮೂರ್ತಿಯ ಪರಿಸರ ಸ್ವಚ್ಛವಾಗಿಟ್ಟು ಪೂಜೆ ಮಾಡಬೇಕು. ಮಕ್ಕಳಿಗಾಗಿ […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ವೀರ ಸಾವರ್ಕರ ಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ವೀರ ಸಾವರ್ಕರ ಜಯಂತಿ ಪ್ರಯುಕ್ತ ಮುಖಂಡರು ಸಾವರ್ಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಅವರ ಹೋರಾಟ ತ್ಯಾಗ ಹಾಗೂ ಅನುಭವಿಸಿದ ಕಷ್ಟಗಳ ಕುರಿತು ಸ್ಮರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ವೀರ್ ಸಾವರ್ಕರ್ ಭಾರತೀಯರಲ್ಲಿ ಏಕತೆಯ ಕಟ್ಟಾ ಪ್ರತಿಪಾದಕರಾಗಿದ್ದರು ಮತ್ತು ಎಲ್ಲಾ ಸಮುದಾಯಗಳು ಸಾಮರಸ್ಯದಿಂದ ಸಹಬಾಳ್ವೆ ನಡೆಸಬಹುದಾದ ಅಖಂಡ ಭಾರತದಲ್ಲಿ ನಂಬಿಕೆ ಇಟ್ಟಿದ್ದರು. ಅವರ ದೃಷ್ಟಿಕೋನವು ಹಿಂದುತ್ವದ ಕಲ್ಪನೆ ಒಳಗೊಂಡಿತ್ತು, ಇದು ಧಾರ್ಮಿಕ ಪ್ರತ್ಯೇಕತೆಗಿಂತ […]

Continue Reading

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ನೌಕರರ ಸಂಘ ಖಂಡನೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್‌ ಅವರ ಬಗ್ಗೆ ಇತ್ತೀಚೆಗೆ ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ ಅವರ ಅವಹೇಳನಕಾರಿ ಹೇಳಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕತೀವ್ರವಾಗಿ ಖಂಡಿಸಿದೆ. ಈ ರೀತಿಯ ಹೇಳಿಕೆಯಿಂದ ಸರ್ಕಾರಿ ಅಧಿಕಾರಿ-ನೌಕರರ ಆತ್ಮಸ್ಥೆರ್ಯ ಕುಸಿಯುವಂತಾಗುತ್ತದೆ. ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್‌ ಅವರು ಜಿಲ್ಲೆಯ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.

Continue Reading

ಪಾಕ್‌, ಚೀನಾಗೆ ಟಕ್ಕರ್‌ ಕೊಡಲು ಹೊಸ ಫೈಟರ್‌ ಜೆಟ್‌ಗೆ ಭಾರತ ಅನುಮೋದನೆ

ನವದೆಹಲಿ: ಪಾಕಿಸ್ತಾನಕ್ಕೆ ಚೀನಾ ಶಸ್ತ್ರಾಸ್ತ್ರಗಳ ನೆರವಿನ ಮಧ್ಯೆ ಭಾರತವು ತನ್ನದೆ ಆದ ಸ್ಟೆಲ್ತ್‌ ಫೈಟರ್‌ ಜೆಟ್‌ ಯೋಜನೆಗೆ ಅನುಮೋದನೆ ನೀಡಿದೆ. ಭಾರತದ ವಾಯು ಪ್ರಾಬಲ್ಯವನ್ನು ಎದುರಿಸಲು ತನ್ನ ಶಸ್ತ್ರಾಗಾರವನ್ನು ಬಲಪಡಿಸಲು ಪಾಕಿಸ್ತಾನಕ್ಕೆ ಸ್ಟೆಲ್ತ್ ಫೈಟರ್ ಜೆಟ್‌ಗಳನ್ನು ಪೂರೈಸುವ ಯೋಜನೆಯನ್ನು ಚೀನಾ ತ್ವರಿತಗೊಳಿಸುತ್ತಿದೆ. ಈ ನಡುವೆ ದೇಶದ ಮೊದಲ ಸ್ಟೆಲ್ತ್ ಫೈಟರ್‌ ಜೆಟ್‌ ನಿರ್ಮಿಸುವ ಯೋಜನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದನೆ ನೀಡಿದ್ದಾರೆ. ಈ ಫೈಟರ್ ಜೆಟ್ ಅವಳಿ-ಎಂಜಿನ್, 5ನೇ ತಲೆಮಾರಿನ ಮಿಲಿಟರಿ ವಿಮಾನವಾಗಿದೆ. ಈ ಕಾರ್ಯಕ್ರಮವನ್ನು […]

Continue Reading

ಭಾರತದ ನವೋದಯ ಧೃವತಾರೆ ರಾಜಾ ರಾಮ್ ಮೋಹನರಾಯ

ಕಲಬುರಗಿ: ಹತ್ತೊಂಬತ್ತನೆ ಶತಮಾನ ಭಾರತದ ಬೌದ್ಧಿಕ, ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಬೆಳವಣಿಗೆಯ ಸುಧಾರಣೆಯಲ್ಲಿ ಅದ್ವೀತಿಯ ಪಾತ್ರ ವಹಿಸಿದ ರಾಜಾ ರಾಮ್ ಮೋಹನರಾಯರು, ‘ಭಾರತದ ನವೋದಯ ಧೃವತಾರೆ’ಯಾಗಿದ್ದಾರೆ. ಅವರು ಶ್ರೇಷ್ಟ ಸಮಾಜ ಸುಧಾರಕರು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರಾಜಾ ರಾಮ್ ಮೋಹನರಾಯ್’ರ 253ನೇ ಜನ್ಮದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, […]

Continue Reading

ವೈದ್ಯಕೀಯ ತುರ್ತು ಸೇವೆ ಜೀವ ರಕ್ಷಕ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಯಾವುದೆ ರೀತಿಯ ಅಪಘಾತ, ದೇಹವು ಅನಾರೋಗ್ಯಕ್ಕೆ ತುತ್ತಾಗಿ ಶೂಚನೀಯ ಸ್ಥಿತಿಗೆ ತಲುಪುವ ಸಂದರ್ಭದಲ್ಲಿ ಆಸ್ಪತ್ರೆಗೆ ತೆರಳುವುದಕ್ಕಿಂತ ಮುಂಚಿತವಾಗಿ ಮಾಡುವ ಪ್ರಥಮ ಚಿಕಿತ್ಸೆ, ಅಂಬುಲೆನ್ಸನಲ್ಲಿಯೇ ಚಿಕಿತ್ಸೆ ನೀಡುತ್ತಾ ಅತ್ಯಂತ ವೇಗವಾಗಿ ಆಸ್ಪತ್ರೆಗೆ ತೆರಳಿ, ಅಲ್ಲಿನ ವೈದ್ಯರು ನೀಡುವ ತುರ್ತು ಚಿಕಿತ್ಸೆ ರೋಗಿಯ ಜೀವ ರಕ್ಷವಾಗಿ ಕಾರ್ಯನಿರ್ವಹಿಸುತ್ತದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ಅಂತಾರಾಷ್ಟ್ರೀಯ ತುರ್ತು ವೈದ್ಯಕೀಯ […]

Continue Reading

ಕೋಲಾರದಲ್ಲಿ ಏರ್‌ಬಸ್‌-ಟಾಟಾ ಕಾಪ್ಟರ್ ಘಟಕ: ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್‌ ಫ್ಯಾಕ್ಟರಿ

ನವದೆಹಲಿ: ಯುರೋಪ್‌ನ ಅತಿದೊಡ್ಡ ವೈಮಾನಿಕ ಕಂಪನಿ ಏರ್‌ಬಸ್‌ ಹಾಗೂ ಟಾಟಾ ಸಮೂಹದ ಏರೋಸ್ಪೇಸ್‌ ವಿಭಾಗವಾಗಿರುವ ಟಾಟಾ ಅಡ್ವಾನ್ಸ್ಡ್‌ ಸಿಸ್ಟಮ್ಸ್‌ (ಟಿಎಎಸ್‌ಎಲ್‌) ಕಂಪನಿಗಳು ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್‌ ಜೋಡಣೆ ಕಾರ್ಖಾನೆ ಸ್ಥಾಪನೆ ಮಾಡಲು ಕರ್ನಾಟಕದ ಕೋಲಾರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿವೆ. ಬೆಂಗಳೂರಿನಿಂದ ಕೇವಲ 2 ತಾಸು ದೂರದಲ್ಲಿರುವ, ಕೋಲಾರದ ವೇಮಗಲ್‌ ಕೈಗಾರಿಕಾ ಪ್ರದೇಶದಲ್ಲಿ ಈ ಘಟಕ ತಲೆ ಎತ್ತಲಿದೆ ಎಂದು ಅತ್ಯುನ್ನತ ಮೂಲಗಳು ತಿಳಿಸಿವೆ. ಅತ್ಯಂತ ಪ್ರತಿಷ್ಠಿತವಾಗಿರುವ ಈ ಯೋಜನೆಯನ್ನು ಪಡೆಯಲು ಆಂಧ್ರಪ್ರದೇಶ, ಉತ್ತರಪ್ರದೇಶ ಹಾಗೂ ಗುಜರಾತ್‌ಗಳು […]

Continue Reading

ಕೊರೊನಾ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ: ಮಕ್ಕಳಿಗೆ ರಜೆ, ಗರ್ಭಿಣಿಯರಿಗೆ ಮಾಸ್ಕ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳು ಎಲ್ಲ ಗರ್ಭಿಣಿಯರು, ವೃದ್ಧರು, ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆ ಉಳ್ಳವರು ಮಾಸ್ಕ್ ಧರಿಸಬೇಕು. ಶಾಲೆಗೆ ಬರುವ ಮಕ್ಕಳಿಗೆ ಜ್ವರ, ಕೆಮ್ಮು ಸೇರಿದಂತೆ ಇತರೆ ಕೋವಿಡ್ ಲಕ್ಷಣಗಳಿದ್ದಲ್ಲಿ ಅಂಥ ಮಕ್ಕಳಿಗೆ ರಜೆ ಕೊಟ್ಟು ಮನೆಗೆ ಕಳುಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸಂಬಂಧಿತ ಪರಿಸ್ಥಿತಿ ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕಾವೇರಿ ನಿವಾಸದಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವರು, ಹಿರಿಯ ಅಧಿಕಾರಿಗಳು […]

Continue Reading