ಒಳ ಮೀಸಲಾತಿ ವಿರೋಧಿಸಿ ಮಾ.24ರಂದು ಬೆಂಗಳೂರು ಚಲೋ‌

ಸುದ್ದಿ ಸಂಗ್ರಹ ಚಿತ್ತಾಪುರಒಳಮೀಸಲಾತಿ ಜಾರಿ ವಿರೋಧಿಸಿ ಮತ್ತು ಹಳೆ ಮೀಸಲಾತಿ ನಿಯಮದಂತೆ ನೇಮಕಾತಿ ನಡೆಸಲು ಒತ್ತಾಯಿಸಿ ಮಾರ್ಚ್ 24ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಡಿ ಚವ್ಹಾಣ್ ಹೇಳಿದರು. ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯೋಗದ ವರದಿ ಅಸಂಬದ್ಧವಾಗಿದೆ, ಈ ವರದಿಯಿಂದ ಭೋವಿ, ಬಂಜಾರ, ಕೊರಮ, ಕೊರಚ, ಛಲವಾದಿ, ಚರ್ಮಕಾರ ಸೇರಿದಂತೆ ಹಲವು ಸೂಕ್ಷ್ಮ ಜಾತಿಗಳಿಗೆ ಅನ್ಯಾಯವಾಗುತ್ತಿದೆ, […]

Continue Reading

ಸಂಭ್ರಮದಿಂದ ಜರುಗಿದ ರಮಣಾದೇವಿ ರಥೋತ್ಸವ

ಸುದ್ದಿ ಸಂಗ್ರಹ ಶಹಾಬಾದ್ನಗರದ ಹಳೆ ಶಹಾಬಾದ್ ಬಡಾವಣೆಯ ಶ್ರೀ ರಮಣಾದೇವಿಯ ಜಾತ್ರಾ ಮಹೋತ್ಸವ ನಿಮಿತ್ತ ಶನಿವಾರ ಸಂಜೆ ಭಕ್ತರ ಜಯಘೋಷಗಳ ಮಧ್ಯೆ ಭವ್ಯ ರಥೋತ್ಸವ ಜರುಗಿತು. ವಿವಿಧ ರಾಜ್ಯದಿಂದ ಆಗಮಿದ ಭಕ್ತರು ರಥಕ್ಕೆ ಉತ್ತತ್ತಿ, ಹೂವು ಎರಚಿ ಕೃತಾರ್ಥರಾದರು. ರಥೋತ್ಸವದಲ್ಲಿ ಶ್ರೀ ರಾಚೋಟೇಶ್ವರ ಸಂಸ್ಥಾನದ ಪೂಜ್ಯ ಶಂಕರಯ್ಯ ಸ್ವಾಮಿ ಹಿರೇಮಠ, ಶಾಸಕ ಬಸವರಾಜ ಮತ್ತಿಮೂಡ ಸೇರಿದಂತೆ ದೇವಸ್ಥಾನದ ಪದಾಧಿಕಾರಿಗಳು, ಭಕ್ತರು ಪಾಲ್ಗೊಂಡಿದ್ದರು.

Continue Reading

ಗಿಡ-ಮರಗಳು ನೆಟ್ಟು, ಸಂರಕ್ಷಿಸುವುದು ಎಲ್ಲರ ಹೊಣೆ

ಸುದ್ದಿ ಸಂಗ್ರಹ ಚಿತ್ತಾಪುರಗಿಡ-ಮರಗಳು ನೆಡುವುದು, ಅರಣ್ಯನಾಶ ತಡೆಯುವುದು, ಕಾಗದದ ಮಿತ ಬಳಕೆ ಮತ್ತು ಪರಿಸರ ಜಾಗೃತಿ ಮೂಡಿಸುವ ಮೂಲಕ ಪ್ರತಿಯೊಬ್ಬ ನಾಗರಿಕನು ಅರಣ್ಯ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ಉಪವಲಯ ಅರಣ್ಯ ಅಧಿಕಾರಿ ಜಟ್ಟೆಪ್ಪ ನಾವಿ ಹೇಳಿದರು. ಸಮೀಪದ ಮಾಡಬೂಳ ಗ್ರಾಮದ ಪ್ರಾದೇಶಿಕ ಅರಣ್ಯ ವಲಯದ ಸಸ್ಯಕ್ಷೇತ್ರದಲ್ಲಿ ಪ್ರಾದೇಶಿಕ ಅರಣ್ಯ ವಲಯ ಮತ್ತು ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ “ಅಂತಾರಾಷ್ಟ್ರೀಯ ಅರಣ್ಯ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ಗಿಡ-ಮರಗಳು ಪರಿಸರ […]

Continue Reading

ಏಪ್ರಿಲ್‌ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ನಿಯಮ ಜಾರಿ

ಸುದ್ದಿ ಸಂಗ್ರಹ ನವದೆಹಲಿ ಆದಾಯ ತೆರಿಗೆ ಕಾಯ್ದೆ-2026ರ ಅನುಷ್ಠಾನಕ್ಕೆ ಅಗತ್ಯವಿರುವ ನಿಯಮಗಳ ಅಧಿಸೂಚನೆಯನ್ನು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯು (ಸಿಬಿಡಿಟಿ) ಶುಕ್ರವಾರ ಪ್ರಕಟಿಸಿದೆ. ಈ ಹೊಸ ನಿಯಮಗಳು ಏಪ್ರಿಲ್‌ 1ರಿಂದ ಜಾರಿಗೆ ಬರಲಿವೆ ಎಂದು ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಿದೆ. ಬ್ಯಾಂಕ್‌ಗಳಲ್ಲಿ ಠೇವಣಿ ಮಾಡುವುದು/ಹಿಂಪಡೆಯುವಿಕೆ, ಮೋಟಾರು ವಾಹನಗಳು ಹಾಗೂ ಆಸ್ತಿ ಖರೀದಿ ಮತ್ತು ಹೋಟೆಲ್ ಬಿಲ್‌ಗಳ ಪಾವತಿಗಾಗಿ ಪ್ಯಾನ್ ಉಲ್ಲೇಖಿಸಿ ನಡೆಸಬಹುದಾದ ವಹಿವಾಟು ಮಿತಿಯನ್ನು ಹೊಸ ಕಾಯ್ದೆಯು ಹೆಚ್ಚಿಸಿದೆ. ಆರು ದಶಕಗಳಷ್ಟು ಹಳೆಯದಾದ 1961ರ ಆದಾಯ ತೆರಿಗೆ (ಐ.ಟಿ) […]

Continue Reading

ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೆನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ

ಸುದ್ದಿ ಸಂಗ್ರಹ ಕಾರವಾರ ಹೆರಿಗೆ ಆಸ್ಪತ್ರೆಯಲ್ಲಿ ಬಡವರ ಹತ್ತಿರ ಹಣ ಸುಲಿಗೆ ಮಾಡಿದರೆ ಕೈಕಾಲು ಮುರಿಯುತ್ತೆನೆ. ನನ್ಮೇಲೆ ಕ್ರಿಮಿನಲ್ ಕೇಸ್​ ಆದರೂ ಪರವಾಗಿಲ್ಲ ಎಂದು ಶಾಸಕ ಆರ್​​ವಿ ದೇಶಪಾಂಡೆ ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ತಾಲೂಕು ಆರೋಗ್ಯ ರಕ್ಷ ಸಮಿತಿ ಸಭೆಯಲ್ಲಿ ವೈದ್ಯರಾದ ಡಾ.ಅಖಿಲ್ ಕಿತ್ತೂರು​​ ಮತ್ತು ಡಾ.ಕೀರ್ತಿಗೆ ತರಾಟೆ ತೆಗೆದುಕೊಂಡಿದ್ದಾರೆ. ವೈದ್ಯರ ಚಳಿ ಬಿಡಿಸಿದ ಶಾಸಕ ಆರ್​​ವಿ ದೇಶಪಾಂಡೆಹೆರಿಗೆ ಮಾಡಿದರೆ ಯಾಕೆ ಹಣ ಪಡೆಯುತ್ತಿರಿ ಎಂದು ಸಭೆಯಲ್ಲಿ ಶಾಸಕ […]

Continue Reading

KPSC ಅಕ್ರಮ ಆರೋಪ: ಪರೀಕ್ಷಾ ನಿಯಂತ್ರಕ ಎತ್ತಂಗಡಿ

ಸುದ್ದಿ ಸಂಗ್ರಹ ಬೆಂಗಳೂರು ಕೆಪಿಎಸ್‌ಸಿ ಅಕ್ರಮ ಆರೋಪ ಬೆನ್ನಲ್ಲೆ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರಕುಮಾರ್ ಗಂಗಾವರ್ ಎತ್ತಂಗಡಿ ಮಾಡಲಾಗಿದೆ. ಆ ಸ್ಥಾನಕ್ಕೆ ದಿಗ್ವಿಜಯ್ ಬೋಡ್ಕೆ ಅವರನ್ನು ನೇಮಿಸಲಾಗಿದೆ. ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ಪದೆ ಪದೆ ಅಕ್ರಮ ಆರೋಪಗಳು ಕೇಳಿಬರುತ್ತಿದ್ದ ಹಿನ್ನೆಲೆ ಸರ್ಕಾರ ಮಹತ್ತರ ಸುಧಾರಣೆ ತಂದಿದೆ. ಕೇಂದ್ರ ಲೋಕಸೇವಾ ಆಯೋಗದ ಮಾದರಿಯಲ್ಲಿ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕವೂ ಪ್ರತಿ ವರ್ಷ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಈ ಬಗ್ಗೆ ವಿಧಾನಸಭೆಯಲ್ಲಿ […]

Continue Reading

ಬಾಲ್ಯದಿಂದಲೇ ಮಕ್ಕಳಲ್ಲಿ ಮೌಲ್ಯ ಬಿತ್ತುವ ಕಾರ್ಯವಾಗಲಿ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿಮಕ್ಕಳಿಗೆ ಬಾಲ್ಯದಿಂದಲೇ ಮೌಲ್ಯ, ದೇಶದ ಸಂಸ್ಕೃತಿ, ಪರಂಪರೆ, ಹಬ್ಬಗಳು, ಉತ್ಸವಗಳ ಹಿನ್ನಲೆಯ ಬಗ್ಗೆ ಅವರಲ್ಲಿ ಬಿತ್ತುವ ಕಾರ್ಯ ಮಾಡಬೇಕಾದದ್ದು ಪ್ರಸ್ತುತ ಜರೂರಿಯಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು.‌ ಮಹಾಗಾಂವ ಕ್ರಾಸ್ ಸಮೀಪದ ಚಿಗುರು ನಿರ್ಗತಿಕ ಮತ್ತು ಅನಾಥ ಮಕ್ಕಳ ನಿಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಯುಗಾದಿ ಹಬ್ಬದ ನಿಮಿತ್ಯ ಗುರುವಾರ ಜರುಗಿದ ‘ಯುಗಾದಿ ಮಕ್ಕಳ ಕಲರವ’ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಯುವ ಜನತೆ ವಿದೇಶಿ […]

Continue Reading

ಅಲ್ಲಮಪ್ರಭುಗಳ ವಚನಗಳು ಮನೆ-ಮನ ತಲುಪಲಿ: ಡಾ.ರಾಜಶೇಖರ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿಪ್ರಸ್ತುತ ದಿನಗಳಲ್ಲಿಯೂ ಕೂಡಾ ಕಂಡು ಬರುತ್ತಿರುವ ಜಾತಿಯತೆ, ಮೂಡನಂಬಿಕೆ, ಕಂದಾಚಾರ, ಅಂಧಶೃದ್ಧೆಯಂತಹ ಮುಂತಾದ ಸಾಮಾಜಿಕ ಸಮಸ್ಯೆಗಳ ನಿರ್ಮೂಲನೆಗೆ ಬಸವಣ್ಣನವರ ಜೊತೆಗೂಡಿ 950 ವರ್ಷಗಳ ಹಿಂದೆ ಹೋರಾಡಿದ, ಸಾಮಾಜಿಕ ಸಮಾನತೆಯ ನಿರ್ಮಾಣಕ್ಕೆ ಶ್ರಮಿಸಿದ ಶರಣ ಅಲ್ಲಮಪ್ರಭು ದೇವರು ವಿಶ್ವದ ಪ್ರಥಮ ಮೊದಲ ಸಂಸತ್ತಿನ ಅಧ್ಯಕ್ಷರಾಗಿ ಅನನ್ಯವಾದ ಕೊಡುಗೆ ನೀಡಿದ್ದಾರೆ, ಎಲ್ಲರ ಮನೆಯಲ್ಲಿ ಅವರ ಭಾವಚಿತ್ರ ಇಡುವುದು ಮತ್ತು ಅವರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಶರಣ ಚಿಂತಕ ಡಾ.ರಾಜಶೇಖರ ಪಾಟೀಲ ಹೆಬಳಿ ಅಭಿಪ್ರಾಯಪಟ್ಟರು. ನಗರದ […]

Continue Reading

ಮೆಡಿಕಲ್ ಸ್ಟೋರ್ ಪರವಾನಗಿ ನವೀಕರಣಕ್ಕಾಗಿ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಡ್ರಗ್​​ ಕಂಟ್ರೋಲರ್

ಸುದ್ದಿ ಸಂಗ್ರಹ ಕೋಲಾರಮೆಡಿಕಲ್ ಸ್ಟೋರ್ ಪರವಾನಗಿ ನವೀಕರಣಕ್ಕಾಗಿ 38 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೋಲಾರ ಜಿಲ್ಲಾ ಡ್ರಗ್​​ ಕಂಟ್ರೋಲರ್​​ ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕರ್ನಾಟಕ ದಲಿತ ಸಿಂಹ ಸೇನೆ ಮುಖಂಡ ಹೂಹಳ್ಳಿ ಪ್ರಕಾಶ್, ಕೃಷ್ಣಯ್ಯ ದೂರಿನ ಅನ್ವಯ ಲೋಕಾಯುಕ್ತ ಉಪ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಪ್ರಕರಣ ಸಂಬಂಧ ಜಿಲ್ಲಾ ಔಷಧ ನಿಯಂತ್ರಕರಾದ ಶ್ಯಾಮಲಾ, ವಾಹನ ಚಾಲಕ ಮಹಂತೇಶ್ ಮತ್ತು ನಿವೃತ್ತ ಡಿ ಗ್ರೂಪ್ ಶ್ರೀನಿವಾಸನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಮಾಲೂರು […]

Continue Reading

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

ಸುದ್ದಿ ಸಂಗ್ರಹ ಮಂಗಳೂರು ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧ ಹಿನ್ನೆಲೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಇದೀಗ ಕರಾವಳಿಯ ಪ್ಲಾಸ್ಟಿಕ್ ಉದ್ಯಮದ ಮೇಲೆ‌ ಭಾರಿ ಹೊಡೆತ ಬಿದ್ದಿದೆ. ಕರಾವಳಿಯ ಪ್ಲಾಸ್ಟಿಕ್ ಪ್ಯಾಕ್ಟರಿಗಳು ಬಂದ್ ಆಗುವ ಭೀತಿ ಎದುರಾಗಿದೆ. ಪೆಟ್ರೋಲಿಯಂ ಬೈ ಪ್ರಾಡೆಕ್ಟ್‌ನ‌ ಕಚ್ಚಾ ವಸ್ತುವಿನಿಂದ ತಯಾರಿಸಲಾಗುವ ಪ್ಲಾಸ್ಟಿಕ್ ಉತ್ಪನ್ನಗಳ ಸುಮಾರು 50 ಕ್ಕೂ ಹೆಚ್ಚು ಫ್ಯಾಕ್ಟರಿಗಳು ಮಂಗಳೂರು ಹಾಗೂ ಉಡುಪಿಯಲ್ಲಿವೆ. ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಉತ್ಪಾದನಾ ವೆಚ್ಚ ಭರಿಸಲು ಫ್ಯಾಕ್ಟರಿಗಳು ಪರದಾಡುತ್ತಿದೆ‌. ಕಚ್ಚಾ ತೈಲದ ಬೆಲೆ‌ ಪ್ರತಿ […]

Continue Reading