ಬಣ್ಣಬಣ್ಣದ ಮಾತನಾಡಿ 3 ಕೋಟಿ ವಂಚನೆ: ಮಹಿಳೆಯನ್ನು ಅಟ್ಟಾಡಿಸಿ ಹೊಡೆದ ಜನ

ಹಾಸನ: ಬಣ್ಣಬಣ್ಣದ ಮಾತನಾಡಿ ಹಲವಾರು ಜನರಿಂದ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ಜನ ಅಟ್ಟಾಡಿಸಿ ಹೊಡೆದ ಘಟನೆ ಹಾಸನದ ಅರಳೆಪೇಟೆಯಲ್ಲಿ ನಡೆದಿದೆ. ಟೈಲರ್ ಶಾಪ್ ನಡೆಸುತ್ತಿದ್ದ ಮಹಿಳೆ ಹೇಮಾವತಿ ಎಂಬಾಕೆ, ಹಲವರ ಬಳಿ ಚಿಟ್ಸ್‍ನಲ್ಲಿ 1 ಕೋಟಿ ರೂ. ಚೀಟಿ ಹಾಕಿದ್ದೆನೆ ಎಂದು ಸ್ಲಿಪ್ ತೋರಿಸಿ ಹಣ ಪಡೆದಿದ್ದಳು. ಅಲ್ಲದೆ ಮಗಳನ್ನು ವಿದೇಶದಲ್ಲಿ ಇಂಜಿನಿಯರಿಂಗ್ ಓದಿಸುವುದಕ್ಕೆ, ಒಂದು ಕೋಟಿ ರೂ. ಮನೆ ಖರೀದಿಸಿದ್ದೆನೆಂದು ಹೇಳಿ ಹಲವರಿಂದ ಸಾಲ ಪಡೆದಿದ್ದಳು. ಚಿನ್ನಾಭರಣ ಅಡವಿಟ್ಟು ಜನ ಲಕ್ಷ […]

Continue Reading

ನಕಲಿ ಲೋಕಾಯುಕ್ತ ಜಸ್ಟೀಸ್ ಹಾವಳಿಗೆ ಬೆಚ್ಚಿಬಿದ್ದ ಅಧಿಕಾರಿಗಳು

ಬೆಂಗಳೂರು: ಹಣ ಮಾಡೋದಕ್ಕೆ ಅಡ್ಡದಾರಿ ಹಿಡಿಯೋ ಸೈಬರ್ ವಂಚಕರು ಈ ಬಾರಿ ಬಳಸಿದ್ದು ನ್ಯಾಯಾಧೀಶರ ಹೆಸರನ್ನು. ಅಚ್ಚರಿ ಅನಿಸಿದ್ದರು ಇದು ನಿಜ. ಲೋಕಾಯುಕ್ತ ಜಸ್ಟೀಸ್ ಹೆಸರಲ್ಲಿ ಅಧಿಕಾರಿಗಳಿಗೆ ಫೋನ್ ಮಾಡಿ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಫೋನ್ ಮಾಡಿ ನಿಮ್ಮ ಇಲಾಖೆಯಲ್ಲಿ ಭ್ರಷ್ಟಚಾರ ನಡೆಯುತ್ತಿದೆ. ನಿಮ್ಮ ಮೇಲಿನ ಆರೋಪಿಗಳಿಂದ ರೇಡ್ ಮಾಡ್ತಿವಿ ಅಂತ ಬೆದರಿಸೋಕೆ ಶುರು ಮಾಡಿದ್ದಾರೆ. ಟ್ರೂ ಕಾಲರ್‌ನಲ್ಲಿ ಲೋಕಾಯುಕ್ತ ಜಸ್ಟೀಸ್ ಹೆಸರು ಬಳಸಿ ಕರೆ ಮಾಡಿದ್ದಾರೆ. ಇದರಿಂದ ಕರೆ ಸ್ವೀಕರಿಸಿದ ಸರ್ಕಾರಿ ಅಧಿಕಾರಿಗಳು […]

Continue Reading

ಮಾರ್ಚ್‌ ವೇಳೆಗೆ 3,500 ಹುದ್ದೆ ಭರ್ತಿ: ಎಸ್‌ಬಿಐ

ನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಮುಂದಿನ ಐದು ತಿಂಗಳೊಳಗೆ ಸುಮಾರು 3,500 ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಯೋಜಿಸಿದೆ. ಜೂನ್ ತಿಂಗಳಿನಲ್ಲಿ 505 ಪ್ರೊಬೇಷನರಿ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿತ್ತು. ಈಗ ಇಷ್ಟೇ ಸಂಖ್ಯೆಯ ಹುದ್ದೆಗಳಿಗೆ ಮತ್ತೆ ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು, ಅರ್ಜಿ ಸ್ವೀಕರಿಸಲಾಗಿದೆ. ದೇಶದಾದ್ಯಂತ ಬ್ಯಾಂಕ್‌ನ ಕಾರ್ಯಾಚರಣೆ ಹೆಚ್ಚಿಸಲು ಮತ್ತು ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಈ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಬ್ಯಾಂಕ್‌ನ ಉಪ ವ್ಯವಸ್ಥಾಪಕ ನಿರ್ದೇಶಕ (ಮಾನವ ಸಂಪನ್ಮೂಲ ವಿಭಾಗ) ಮತ್ತು ಮುಖ್ಯ ಅಭಿವೃದ್ಧಿ ಅಧಿಕಾರಿ […]

Continue Reading

ಕಠಿಣ ಪರಿಶ್ರಮ, ತಾಳ್ಮೆಯಿಂದ ಉನ್ನತ ಸಾಧನೆ ಸಾಧ್ಯ: ಮುಡಬಿ ಗುಂಡೇರಾವ

ಕಲಬುರಗಿ: ಜೀವನದಲ್ಲಿ ಗುರಿ ನಿಗದಪಡಿಸಿಕೊಂಡು ಅದಕ್ಕೆ ಪೂರಕವಾಗಿ ಕಠಿಣ ಪರಿಶ್ರಮ, ತಾಳ್ಮೆ, ಸಮಯ ಬದ್ಧತೆಯಿಂದ ನಿರಂತರವಾಗಿ ಪ್ರಯತ್ನಿಸಿದರೆ, ಖಂಡಿತವಾಗಿ ಜೀವನದಲ್ಲಿ ಉನ್ನತವಾದ ಸಾಧನೆ ಮಾಡಲು ಸಾಧ್ಯ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಕಳೆದ ಅಗಷ್ಟ್ ಬ್ಯಾಚ್‌ನ ತರಬೇತಿ ಹೊಂದಿ ಉತ್ತೀರ್ಣ ವಿದ್ಯಾರ್ಥಿಗಳಿ ರವಿವಾರ ಏರ್ಪಡಿಸಲಾಗಿದ್ದ ‘ಪ್ರಮಾಣ ಪತ್ರಗಳ ವಿತರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದಿಸೆಯಿಂದಲೆ ತಂದೆ-ತಾಯಿ, ಗುರು-ಹಿರಿಯರಿಗೆ ಮತ್ತು ದೇಶಕ್ಕೆ […]

Continue Reading

ಬೆಂದವರಷ್ಟೆ ಬೇಂದ್ರೆಯಾಗಲು ಸಾಧ್ಯ: ಎಚ್.ಬಿ ಪಾಟೀಲ

ಕಲಬುರಗಿ: ಬೇಂದ್ರೆಯವರು ಜೀವನದಲ್ಲಿ ಅನೇಕ ಕಷ್ಟಗಳನ್ನು ಅನುಭವಿಸಿ, ಅವುಗಳನ್ನು ಸಾಹಿತ್ಯದಲ್ಲಿ ಕೃಷಿ ಮಾಡಿದ್ದರಿಂದ ಅವರ ಸಾಹಿತ್ಯವು ಹೆಚ್ಚು ನೈಜತೆ ಹಾಗೂ ಗಟ್ಟಿತನದಿಂದ ಕೂಡಿದೆ. ಅವರಂತೆ ಸಾಹಿತ್ಯ ಮೇರು ಸಾಧನೆ ಮಾಡಬೇಕಾದರೆ, ಸಾಕಷ್ಟು ಸಮಸ್ಯೆಗಳನ್ನು ಮೆಟ್ಟಿ ನಿಲ್ಲಬೇಕು. ‘ಜೀವನದಲ್ಲಿ ಬೆಂದವರು ಮಾತ್ರ ಬೇಂದ್ರೆಯಾಗಲು ಸಾಧ್ಯ’ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಮಾರ್ಮಿಕವಾಗಿ ಅಭಿಮತಪಟ್ಟರು. ತಾಲೂಕಿನ ಫರತಾಬಾದನ ಕರಿಗೋಳೇಶ್ವರ ದೇವಸ್ಥಾನದ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘ವರಕವಿ ದ.ರಾ ಬೇಂದ್ರೆಯವರ 44ನೇ ಪುಣ್ಯಸ್ಮರಣೋತ್ಸವ’ […]

Continue Reading

ಕಲೆಯ ಪೋಷಣೆ, ಕಲಾವಿದರಿಗೆ ಪ್ರೋತ್ಸಾಹ ಅಗತ್ಯ

ಕಲಬುರಗಿ: ಭಾರತ ದೇಶ ಅನೇಕ ಧರ್ಮ, ಸಮುದಾಯ, ಭಾಷೆ, ಪ್ರದೇಶಗಳು, ಅಪರೂಪದ ವಾಸ್ತುಶಿಲ್ಪಗಳು, ಕಲಾಕೃತಿಗಳು, ಐತಿಹಾಸಿಕ ಸ್ಮಾರಕಗಳನ್ನು ಹೊಂದಿದ್ದು ದೊಡ್ಡ ಮ್ಯೂಸಿಯಂ ಆಗಿದೆ. ವಿಶ್ವದ ಯಾವುದೇ ಕಲಾವಿದನಿಗೆ ನಮ್ಮ ದೇಶವೇ ಆಧಾರವಾಗಿದ್ದು, ಇಲ್ಲಿಗೆ ಆಗಮಿಸಿ ಅಧ್ಯಯನ ಮಾಡುತ್ತಿದ್ದಾರೆ. ದೇಶದಲ್ಲಿರುವ ಅಪರೂಪದ ಕಲಾಕೃತಿಗಳು, ಐತಿಹಾಸಿಕ ಸ್ಥಳಗಳು, ಸ್ಮಾರಕಗಳನ್ನು ರಕ್ಷಿಸಿ, ಮುಂದಿನ ಜನಾಂಗಕ್ಕೆ ಮುಟ್ಟಿಸುವ ಕಾರ್ಯವಾಗಬೇಕಾಗಿದೆ ಎಂದು ಅಂತಾರಾಷ್ಟೀಯ ಖ್ಯಾತ ಚಿತ್ರ ಕಲಾವಿದ ಡಾ.ಸುಬ್ಬಯ್ಯ ಎಂ.ನೀಲಾ ಅಭಿಮತಪಟ್ಟರು. ನಗರದ ಅಗ್ನಿಶಾಮಕ ಠಾಣೆಯ ಎದುರುಗಡೆಯಿರುವ ಮಹಾಲಕ್ಷ್ಮಿ ನಗರದ ನೀಲಾ ಆರ್ಟ್ ಗ್ಯಾಲರಿ’ಯಲ್ಲಿ […]

Continue Reading

ದಿ.ಪುನೀತ್ ರಾಜ್‌ಕುಮಾರ್ ಕನಸಿನ ‘ಅಪ್ಪು ಫ್ಯಾನ್‌ ಡಮ್’ ಆ್ಯಪ್ ಅನಾವರಣ

ದಿ.ಪುನೀತ್ ರಾಜ್‌ಕುಮಾರ್ ಅವರ ಕನಸುಗಳನ್ನು ಸಾಕಾರಗೊಳಿಸಲು ನೂತನ ಆ್ಯಪ್ `ಅಪ್ಪು ಫ್ಯಾನ್ ಡಮ್’ ಅನಾವರಣಗೊಂಡಿದೆ. ಆ್ಯಪ್, ಎಐ ತಂತ್ರಜ್ಞಾನದ ಮೂಲಕ ಅಭಿಮಾನಿಗಳನ್ನು ತಲುಪುವ ಸದುದ್ದೇಶದೊಂದಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ನೇತೃತ್ವದಲ್ಲಿ ಸಿದ್ಧವಾಗಿರುವ ಆ್ಯಪ್‌ನ್ನು ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಲೋಕಾರ್ಪಣೆ ಮಾಡಿದರು. ಆ್ಯಪ್ ಲೋಕಾರ್ಪಣೆ ವೇಳೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮಾತನಾಡಿ, ನಿಮಗೆ ಗೊತ್ತಿರುವಂತೆ ಅಪ್ಪು ಯಾವಾಗಲೂ ಹೊಸತನದ ಕಡೆಗೆ ಹುಡುಕಾಟ ನಡೆಸುತ್ತಿದ್ದರು. ಹೊಸತನದ ಹುಡುಕಾಟದಿಂದಲೇ ಹೊಸಬರಿಗೆ ಅವಕಾಶ ಕೊಡಲೆಂದೇ ಪಿಆರ್‌ಕೆ ಕೂಡ ಶುರುವಾಗಿದ್ದು, ಇಂಡಸ್ಟ್ರಿಗೆ […]

Continue Reading

ಕರ್ನಾಟಕದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ಹೂಡಿಕೆಗೆ ಅಸ್ತು: 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ತಿಳಿಸಿದ್ದಾರೆ. ಒಟ್ಟು 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದ್ದಾರೆ. […]

Continue Reading

ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೊ ಹನಿ ಹಾಕಿಸಿ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಐದು ವರ್ಷಗಳೊಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೊ ಹನಿ ಹಾಕಿಸುವ ಮೂಲಕ ಪೋಲಿಯೊ ರೋಗ ಬರದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ವಿಶ್ವ ಪೋಲಿಯೋ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರು ಕೂಡಾ ನಮ್ಮ ನೆರೆ-ಹೊರೆ ರಾಷ್ಟ್ರಗಳಲ್ಲಿ ಇನ್ನೂ ಕಂಡುಬರುತ್ತಿರುವುದರಿಂದ ಅದು ವೈರಸ್ ನಮ್ಮ ದೇಶಕ್ಕೆ ತಗುಲಬಾರದೆಂದು ಮುಂಜಾಗ್ರತೆಯಾಗಿ ಪೋಲಿಯೊ […]

Continue Reading

ವಿಶ್ವದ ಸಮಗ್ರ ಅಭಿವೃದ್ಧಿಗೆ ವಿಶ್ವಸಂಸ್ಥೆ ಕೊಡುಗೆ ಅನನ್ಯ

ಕಲಬುರಗಿ: ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆ ಕಾಪಾಡುವುದು, ಸಮಾನತೆ ಆಧಾರದ ಮೇಲೆ ವಿಶ್ವದಲ್ಲಿನ ರಾಷ್ಟ್ರಗಳ ಸ್ನೇಹ ಸಂಬಂಧ ಬೆಳೆಸುವುದು, ಅಂತಾರಾಷ್ಟ್ರೀಯ ಸಹಾಯಕ್ಕೆ ಬೆಂಬಲ ನೀಡಿ ವಿಶ್ವದಲ್ಲಿನ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಮಾನವೀಯ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಮತ್ತು ಮಾನವನ ಮೂಲಭೂತ ಹಕ್ಕುಗಳನ್ನು ಉತ್ತೇಜಿಸುವಂತಹ ಮುಂತಾದ ಕಾರ್ಯಗಳನ್ನು ಮಾಡುವ ಮೂಲಕ ವಿಶ್ವಸಂಸ್ಥೆ ವಿಶ್ವದ ಸಮಗ್ರ ಅಭಿವೃದ್ಧಿಗೆ ತನ್ನದೆಯಾದ ಕೊಡುಗೆ ನೀಡುತ್ತಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಶಿವಾ ವಿದ್ಯಾ […]

Continue Reading