ಮಾನವೀಯ ಮೌಲ್ಯಗಳೇ ನಿಜವಾದ ಧರ್ಮ

ಸುದ್ದಿ ಸಂಗ್ರಹ ಶಹಾಬಾದಪ್ರತಿಯೊಂದು ಕೆಲಸದಲ್ಲಿ ದೇವರನ್ನು ಕಾಣುವದು ನಿಜವಾದ ಧರ್ಮವಾಗಿದ್ದು, ಮಾನವನ ಮಾನವೀಯ ಮೌಲ್ಯಗಳೆ ನಿಜವಾ ಧರ್ಮ ಎಂದು ಕಲಬುರಗಿ ಚರ್ಚ್ ಫಾದರ್ ಪ್ರವೀಣ್ ಹೇಳಿದರು. ನಗರದ ಲಕ್ಷ್ಮಿ ಗಂಜನಲ್ಲಿರುವ ಸಂತ್ ತೋಮಾಸ್ ಚರ್ಚಿನಲ್ಲಿ ರಂಜಾನ್ ನಿಮಿತ್ತ ನಡೆದ ಸೌಹಾರ್ದ ಇಫ್ತಿಯಾರ್ ಕೂಟದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರ ಪರಸ್ಪರ ಸಹಕಾರ, ಸಹ ಬಾಳ್ವೆಯಿಂದ ಜೀವನ ನಡೆಸಬೇಕು, ಪ್ರತಿಯೊಂದು ಕೆಲಸದಲ್ಲಿ ದೇವರನ್ನು ಕಾಣುವದು ನಿಜವಾದ ಧರ್ಮವಾಗಿದೆ ಎಂದರು. ಜಾಮೀಯಾ ಮಜೀದ್ ಸಮಿತಿಯ ಅಧ್ಯಕ್ಷ ಮತೀನ್ ಸೇಠ್ ಮಾತನಾಡಿ, ಚರ್ಚಿನ […]

Continue Reading

ಯಾಗಾಪೂರ: SSLC ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಉಚಿತ ಪ್ರಯಾಣ ವ್ಯವಸ್ಥೆ

ಸುದ್ದಿ ಸಂಗ್ರಹ ಚಿತ್ತಾಪುರಯಾಗಾಪೂರ ಗ್ರಾಮದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ನಾಲವಾರ ಗ್ರಾಮದ ಸಮಾಜ ಸೇವಕ ಶಿವಕುಮಾರ ಸುಣಗಾರ ಉಚಿತ ವಾಹನ ವ್ಯವಸ್ಥೆ ಕಲ್ಪಿಸಿದ್ದಾರೆ. ತಾಲೂಕಿನ ಯಾಗಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ದೂರದ ನಾಲವಾರ ಗ್ರಾಮಕ್ಕೆ ಹೋಗಬೇಕಾಗಿದ್ದು, ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ತೆರಳುವ ಉದ್ದೇಶದಿಂದ ನಾಲವಾರ ಗ್ರಾಮದ ಸಮಾಜ ಸೇವಕ ಮತ್ತು ಕೋಲಿ ಸಮಾಜದ ಯುವ ಮುಖಂಡ ಶಿವಕುಮಾರ ಸುಣಗಾರ ಉಚಿತ ವಾಹನದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. […]

Continue Reading

ಬರೆದಂತೆ ಬದುಕಿದ ಆಧುನಿಕ ಸರ್ವಜ್ಞ ಡಿವಿಜಿ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿಬರೆದಂತೆ ಬದುಕಿದ ಅಪರೂಪದ ಸಾಹಿತಿ ಡಿವಿಜಿಯವರು ಆಧುನಿಕ ಸರ್ವಜ್ಞರಾಗಿದ್ದಾರೆ. ಬರವಣಿಗೆ ಮತ್ತು ಬದುಕಿನಲ್ಲಿ ಸಾಮ್ಯತೆಯಿರುವವರು ಬೆರಳಣಿಕೆಯಷ್ಟು ಜೀವನದ ನೈಜತೆ, ಮೌಲ್ಯಗಳು, ಮೇರು ಸಂದೇಶ ಡಿವಿಜಿಯವರು ತಮ್ಮ ಅನುಭಾವದ ಸಾಹಿತ್ಯ ಮೂಲಕ ಸಾರಿದ್ದಾರೆ. ‘ಕಗ್ಗ ಕವಿ’ ಎಂದೆ ಖ್ಯಾತಿ ಪಡೆದಿರುವ ಡಿವಿಜಿಯವರು ಬಹುಮುಖ ವ್ಯಕ್ತಿತ್ವವದ ಮೇರು ಸಾಹಿತಿಯಾಗಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ಕನ್ನಡದ […]

Continue Reading

ಎಲ್ಲ ಕ್ಷೇತ್ರದಲ್ಲೂ ಮಹಿಳೆಯರ ಸಾಧನೆ ಅನನ್ಯ: ತಹಸೀಲ್ದಾರ್ ನಾಗಯ್ಯ ಹಿರೇಮಠ

ಸುದ್ದಿ ಸಂಗ್ರಹ ಚಿತ್ತಾಪುರಆಧುನಿಕ ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿ, ಪುರುಷರ ಸಮಾನಾಗಿ ನಿಂತಿದ್ದಾರೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ಅಂಬಿಗರ ಚೌಡಯ್ಯ ಭವನದಲ್ಲಿ ತಾಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಮತ್ತು “ಕಾನೂನು ಅರಿವು” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಪಂಚದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಲಾಗಿದ್ದು, ಅದನ್ನು […]

Continue Reading

ಟೆಂಗಳಿ ಮಹಾದ್ವಾರ ದುರಸ್ತಿ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಟೆಂಗಳಿ ಗ್ರಾಮದ ಐತಿಹಾಸಿಕ ಮಹಾದ್ವಾರದ (ಅಗಸಿ) ದುರಸ್ತಿ ಕಾರ್ಯ ಶೀಘ್ರ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಂಡಗಿ ಪ್ರತಿಷ್ಠಾನದ ಅಧ್ಯಕ್ಷ ಶಿವರಾಜ ಅಂಡಗಿ ಮನವಿ ಪತ್ರ ಸಲ್ಲಿಸಿದರು. ಪಟ್ಟಣದಲ್ಲಿ ನಡೆದ ವಿವಿಧ ಕಾಮಗಾರಿಗಳ ಅಡಿಗಲ್ಲು ಸಮಾರಂಭದ ವೇಳೆ ಸಚಿವರನ್ನು ಭೇಟಿಯಾಗಿ, ಟೆಂಗಳಿ ಗ್ರಾಮದ ಮಹಾದ್ವಾರ ಅವನತಿ ಸ್ಥಿತಿಯಲ್ಲಿ ಇರುವುದರಿಂದ ತಕ್ಷಣವೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಮನವಿ ಮಾಡಿದರು. ಮನವಿ ಪತ್ರದಲ್ಲಿ […]

Continue Reading

SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: KSRTC ಬಸ್‌ನಲ್ಲಿ ಉಚಿತ ಪ್ರಯಾಣ ಸೌಲಭ್ಯ

ಸುದ್ದಿ ಸಂಗ್ರಹ ಬೆಂಗಳೂರು ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಪರೀಕ್ಷೆ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮಹತ್ವದ ಸುದ್ದಿ ನೀಡಿದೆ. ನಾಳೆ ಮಾರ್ಚ್ 18 ಬುಧವಾರದಿಂದ ಏಪ್ರಿಲ್‌ 02 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿವೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್‌ಆರ್‌ಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹಾಗೂ […]

Continue Reading

ವೃದ್ಧಾಶ್ರಮಕ್ಕೂ ತಟ್ಟಿದ ಸಿಲಿಂಡರ್ ಎಫೆಕ್ಟ್: ಆಹಾರಕ್ಕೆ ವೃದ್ಧರ ಪರದಾಟ

ಸುದ್ದಿ ಸಂಗ್ರಹ ಕಲಬುರಗಿ ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ ಕಲಬುರಗಿಯ ಕಾಕಡೆ ಚೌಕ್ ಬಳಿಯ ವೃದ್ಧಾಶ್ರಮಕ್ಕೂ ತಟ್ಟಿದ್ದು, ಸಿಲಿಂಡರ್ ಅಭಾವ ಉಂಟಾಗಿದೆ. ಸಿಲಿಂಡರ್ ಸಿಗದ ಹಿನ್ನೆಲೆ ಸೌದೆ ಮೇಲೆ ಅಡುಗೆ ಮಾಡಲಾಗುತ್ತಿದೆ. ಬಿರು ಬಿಸಿಲಿನಲ್ಲಿ ಕೂತು ಸಿಬ್ಬಂದಿ ಅಡುಗೆ ತಯಾರಿಸಲು ಕಷ್ಟಪಡುತ್ತಿದ್ದಾರೆ. ಆಶ್ರಮದ ವೃದ್ಧರು ಆಹಾರಕ್ಕಾಗಿ ಪರದಾಡುವಂತಾಗಿದೆ. ಎಲ್‌ಪಿಜಿ ಸಿಗದ ಹಿನ್ನೆಲೆಯಲ್ಲಿ ವೃದ್ಧಾಶ್ರಮದಲ್ಲಿರುವ 15ಕ್ಕೂ ಹೆಚ್ಚು ವೃದ್ಧರಿಗೆ ಸಮಸ್ಯೆಯಾಗಿದೆ.

Continue Reading

ಭೀಮ ಗಾಯನ ಹೆಸರಿನಲ್ಲಿ ರಾಜಕೀಯ: ವಿಕ್ರಮ್ ತೇಜಸ್ ಆಕ್ರೋಶ‌

ಸುದ್ದಿ ಸಂಗ್ರಹ ಚಿತ್ತಾಪುರ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರು ಭೇಟಿ ನೀಡಿದ ಹತ್ತು ಊರುಗಳಲ್ಲಿ ಭೀಮ ಗಾಯನ ಕಾರ್ಯಕ್ರಮ ಹಮ್ಮಿಕೊಂಡ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅಂಬೇಡ್ಕರ್ ಅವರು ಭೇಟಿ ನೀಡಿದ ವಾಡಿ ಪಟ್ಟಣ ಮರೆತು ಜಿಲ್ಲಾ ಕೇಂದ್ರದಲ್ಲಿ ಕಾರ್ಯಕ್ರಮ ಆಯೋಜಿಸುವ ಮೂಲಕ ವಾರ್ತಾ ಇಲಾಖೆ ರಾಜಕಾರಣ ಮಾಡಿದೆ ಎಂದು ಡಾ. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ನಿರ್ಮಾಣ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಕ್ರಮ್ ತೇಜಸ್ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಾಬಾ […]

Continue Reading

ಸಚಿವರ ಅನುದಾನದಿಂದ ಬಿಜೆಪಿ ನಾಯಕರಿಗೆ ದಿಗ್ಭ್ರಮೆ‌

ಸುದ್ದಿ ಸಂಗ್ರಹ ಚಿತ್ತಾಪುರಸಚಿವ ಪ್ರಿಯಾಂಕ್ ಖರ್ಗೆ ಅವರ ಅಭಿವೃದ್ಧಿನಾಟಕ ಎಂಬ ಬಿಜೆಪಿ ನಾಯಕರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತ್ಯುತ್ತರ ನೀಡಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ ಸಿದ್ದುಗೌಡ ಅಫಜಲಪುರಕರ್ ಅವರು, ಸಚಿವರು ತಮ್ಮ ಸತತ ಪ್ರಯತ್ನದಿಂದ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ತಂದಿರುವುದನ್ನು ಸಹಿಸದ ಬಿಜೆಪಿ ನಾಯಕರು ದಿಗ್ಭ್ರಮೆಗೊಂಡು ಆಧಾರರಹಿತ ಹೇಳಿಕೆಗಳು ನೀಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ 224 ಶಾಸಕರಲ್ಲಿ ಅತಿ ಹೆಚ್ಚು ಅನುದಾನ […]

Continue Reading

ಕೆಪಿಎಸ್‌ಸಿ ಅಕ್ರಮ ನೇಮಕಾತಿಗಳ ತನಿಖೆ: ಪ್ರಿಯಾಂಕ್‌ ಖರ್ಗೆ

ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪಗಳ ಹಿನ್ನೆಲೆಯಲ್ಲಿ ಸರ್ಕಾರ ತನಿಖೆಗೆ ವಹಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಜಿಲ್ಲೆಯ ಚಿಂಚೋಳಿಯ ಚಂದ್ರಂಪಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್‌ಸಿ ನಡೆಸಿದ ಪಿಡಿಒ, ಬಿಬಿಎಂಪಿ ಸಹಾಯಕ ಎಂಜಿನಿಯರ್, ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]

Continue Reading