ಭಾರತಕ್ಕೆ ಪ್ರಯಾಣಿಸುತ್ತಿದ್ದ ಥಾಯ್‌ ಸರಕು ಹಡಗಿನ ಮೇಲೆ ಇರಾನ್‌ ದಾಳಿ

ಸುದ್ದಿ ಸಂಗ್ರಹ ಟೆಹ್ರಾನ್ ಯುಎಇ ಬಂದರಿನಿಂದ ಹೊರಟ ಸ್ವಲ್ಪ ಸಮಯದಲ್ಲೆ ಥಾಯ್‌ ಧ್ವಜ ಹೊತ್ತ ಸರಕು ಹಡಗಿನ ಮೇಲೆ ಹಾರ್ಮುಜ್‌ ಜಲಸಂಧಿಯ ಬಳಿ ದಾಳಿ ನಡೆದಿದೆ. ಸರಕು ಹಡಗಿನ ಮೇಲೆ ಬುಧವಾರ ದಾಳಿ ನಡೆದಿದೆ ಎಂದು ರಾಯಲ್‌ ಥಾಯ್‌ ನೌಕಾಪಡೆ ತಿಳಿಸಿದೆ. ಇಪ್ಪತ್ತು ನಾವಿಕರನ್ನು ರಕ್ಷಿಸಲಾಗಿದೆ. ಆದರೆ ಮೂವರು ಇನ್ನೂ ಪತ್ತೆಯಾಗಿಲ್ಲ. ಥಾಯ್ ಕಂಪನಿ ಪ್ರೆಷಿಯಸ್ ಶಿಪ್ಪಿಂಗ್ ಪಿಸಿಎಲ್ ಒಡೆತನದ ಬೃಹತ್ ವಾಹಕ ನೌಕೆ ಮಯೂರಿ ನರಿ, ಯುಎಇಯ ಖಲೀಫಾ ಬಂದರಿನಿಂದ ಹೊರಟು ಭಾರತದ ಕಾಂಡ್ಲಾ ಬಂದರಿಗೆ […]

Continue Reading

ಕುಟುಂಬದಿಂದ ಬಾಹ್ಯಾಕಾಶದವರೆಗೆ ಮಹಿಳೆಯರ ಸಾಧನೆ ಗಮನಾರ್ಹ: ಜ್ಯೋತಿ ಮರಗೋಳ

ಸುದ್ದಿ ಸಂಗ್ರಹ ಶಹಾಬಾದ್ಮಹಿಳೆಯ ಬುದ್ಧಿಶಕ್ತಿ, ತಾಳ್ಮೆ ಮತ್ತು ವಿಶ್ಲೇಷಣಾ ಸಾಮರ್ಥ್ಯದಿಂದ ಕುಟುಂಬದಿಂದ ಬಾಹ್ಯಾಕಾಶದವರೆಗೂ ಗಮನಾರ್ಹ ಸಾಧನೆ ಮಾಡುತ್ತಿದ್ದು, ಸಂಪ್ರದಾಯಗಳ ಸಂಕೋಲೆಯಿಂದ ಮುಕ್ತಗೊಂಡು ಜಾಗತಿಕ ಮನ್ನಣೆ ಪಡೆಯುವಂತಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಿಳಾ ಮಹಾಸಭಾದ ಜಿಲ್ಲಾಧ್ಯಕ್ಷೆ ಜ್ಯೋತಿ ಮರಗೋಳ ಹೇಳಿದರು. ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾನತೆಯ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಕೊಡುಗೆ ಅಪಾರ, ಮಹಿಳೆಯರು […]

Continue Reading

ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗಣ ಬಾರ್ಕಿ ಜಾತಿಗಳನ್ನು STಗೆ ಸೇರಿಸಲು ಕ್ರಮ: ಬೋಸರಾಜು

ಸುದ್ದಿ ಸಂಗ್ರಹ ಬೆಂಗಳೂರು ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗಣ ಬಾರ್ಕಿ ಜಾತಿಗಳನ್ನು ST ಸಮುದಾಯಕ್ಕೆ ಸೇರಿಸಲು ಕೇಂದ್ರಕ್ಕೆ ಶೀಘ್ರವೆ ಶಿಫಾರಸು ಕಳಿಸೋದಾಗಿ ಸಚಿವ ಬೋಸರಾಜು ತಿಳಿಸಿದ್ದಾರೆ. ವಿಧಾನ ಪರಿಷತ್ ಗಮನ ಸೆಳೆಯೋ ಪ್ರಸ್ತಾಪದಲ್ಲಿ ಕಾಂಗ್ರೆಸ್‌ನ ತಿಪ್ಪಣ್ಣಪ್ಪ ಕಮಕನೂರು, ಬಿಜೆಪಿ ಸದಸ್ಯ ತಳವಾರ್ ಸಾಬಣ್ಣ ವಿಷಯ ಪ್ರಸ್ತಾಪ ಮಾಡಿದರು. ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಮತ್ತು ಬಾರ್ಕಿ ಜಾತಿಗಳನ್ನು ST ಸಮುದಾಯಕ್ಕೆ ಸೇರಿಸಿ. ಈ ಸಮುದಾಯಗಳು ಹಿಂದುಳಿದ ಸಮುದಾಯಗಳು. ಈ ಸಮುದಾಯಗಳನ್ನು STಗೆ ಸೇರಿಸಬೇಕು. ರಾಜ್ಯ ಸರ್ಕಾರ ಕೇಂದ್ರಕ್ಕೆ […]

Continue Reading

JEEಯಲ್ಲಿ ಮಗ ದೇಶಕ್ಕೆ ಟಾಪರ್: 4 ಸಾವಿರ ಶಾಲಾ ಮಕ್ಕಳಿಗೆ ಸಿಹಿಯೂಟ ಹಾಕಿ ಸಂಭ್ರಮಿಸಿದ ತಾಯಿ

ಸುದ್ದಿ ಸಂಗ್ರಹ ಮೈಸೂರು‌ಜಂಟಿ ಪ್ರವೇಶ ಪರೀಕ್ಷೆ(ಜೆಇಇ) ಬಿ.ಆರ್ಕ್, ಬಿ ಪ್ಲಾನಿಂಗ್‌ ಫೇಸ್ 1ರಲ್ಲಿ ಮಗ ದೇಶಕ್ಕೆ ಟಾಪರ್ ಆದ ಖುಷಿಯಲ್ಲಿ ತಾಯಿ ಶಾಲಾ ಮಕ್ಕಳಿಗೆ ಊಟ ಹಾಕಿಸಿ ಸಂಭ್ರಮಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಮಲೆಯೂರು ಗ್ರಾಮದ ನಿವಾಸಿಗಳಾಗಿರುವ ಎ.ಸಿ ನೇತ್ರಾವತಿ ಮತ್ತು ಎಂ.ಡಿ ಗುರುಸ್ವಾಮಿ ದಂಪತಿಯ ಪುತ್ರ ಎಂ.ಜಿ ನಾಗದೇವ 2026ರ ಜೆಇಇ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕಿನ ಸುತ್ತೂರು ಜೆಎಸ್ಎಸ್ ಪ್ರೌಢ ಶಾಲೆಯಲ್ಲಿ ಶಿಕ್ಷಕಿಯಾಗಿರುವ ತಾಯಿ, ಸುತ್ತೂರಿನ ವಸತಿ ಶಾಲೆಯಲ್ಲಿ […]

Continue Reading

ಮುಷ್ಕರದಿಂದ ಹಿಂದೆ ಸರಿದ ವೈದ್ಯರು: ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

ಸುದ್ದಿ ಸಂಗ್ರಹ ಬೆಂಗಳೂರು ಸರ್ಕಾರಿ ಆಸ್ಪತ್ರೆ ಓಪಿಡಿ ಮುಷ್ಕರದಿಂದ ವೈದ್ಯರು ಹಿಂದೆ ಸರಿದಿದ್ದಾರೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮತ್ತು ಸರ್ಕಾರದ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದೆ. ವೈದ್ಯರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮುಂದಾಗಿದೆ. ನಾಳೆಯಿಂದ ಎಂದಿನಂತೆ ಓಪಿಡಿ ಕಾರ್ಯ ನಿರ್ವಹಿಸಲಿವೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿತ್ತು. ಮುಷ್ಕರದ ಎಚ್ಚರಿಕೆಯಿಂದ ಎಚ್ಚೆತ್ತ ಸರ್ಕಾರ ಇಂದು ವೈದ್ಯಾಧಿಕಾರಿಗಳ ಸಂಘದ ಜೊತೆ ಸಭೆ ನಡೆಸಿತು. ಸಚಿವ ಮಹಾದೇವಪ್ಪ ಮತ್ತು ಆರೋಗ್ಯ ಸಚಿವ […]

Continue Reading

ರಾಷ್ಟ್ರದ ರಕ್ಷಣೆಯಲ್ಲಿ ಸಿಐಎಸ್‌ಎಫ್ ಸೇವೆ ಅನನ್ಯ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿವಿಧ್ವಂಸಕ ಕೃತ್ಯ ತಡೆ, ಅಗ್ನಿಶಾಮಕ ಸೇವೆ ಮತ್ತು ವಿವಿಐಪಿ ರಕ್ಷಣೆ ನಿರ್ವಹಿಸುವ ಮೂಲಕ ರಾಷ್ಟ್ರದ ಅಭಿವೃದ್ಧಿಯಲ್ಲಿ ಸಿಐಎಸ್‌ಎಫ್ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ಮಹಾಗಾಂವ ಕ್ರಾಸ್ ಸಮೀಪದ ಸಂಜೀವಿನ ವೃದ್ಧಾಶ್ರಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಸಿಐಎಸ್‌ಎಫ್ ದಿನಾಚರಣೆ’ಯಲ್ಲಿ  ನಿವೃತ್ತ ಸಿಐಎಸ್‌ಎಫ್ ಯೋಧ ಕಾಮಣ್ಣ ಮದಗುಣಕಿ ಅವರನ್ನು ಸತ್ಕರಿಸಲಾಯಿತು, ನಂತರ ಮಾತನಾಡಿದ ಅವರು, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು 1969ರಲ್ಲಿ ಸ್ಥಾಪಿತವಾದ ಪ್ರಮುಖ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯಾಗಿದ್ದು, ದೇಶದ […]

Continue Reading

ಉತ್ತಮ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಸಾಧ್ಯ: ರಾವೂರ ಶ್ರೀ

ಸುದ್ದಿ ಸಂಗ್ರಹ ಶಹಾಬಾದ್ಉತ್ತಮ ಫಲಿತಾಂಶ ಬರಲು ಶಾಲೆಯ ಶಿಕ್ಷಕರ ಪರಿಶ್ರಮ ಅಷ್ಟೆ ಮುಖ್ಯ ಎಂದು ರಾವೂರ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಸಮೀಪದ ರಾವೂರ ಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಶಿಕ್ಷಣವೆಂದರೆ ಮಗುವಿನ ಸರ್ವಾಂಗಿಣ ವಿಕಾಸವಾಗಿದೆ. ಆದರೆ ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳು ಬರಿ ಫಲಿತಾಂಶದ ದೃಷ್ಟಿಯಲ್ಲಿ ಮಕ್ಕಳನ್ನು ಸೀಮಿತಗೊಳಿಸಿದ್ದಾರೆ. ಇಂತಹ ಮಕ್ಕಳು ಸಮಾಜದಲ್ಲಿ ಸಾಮಾಜಿಕರಣ ಆಗುವುದು ಕಷ್ಟ. ದೈಹಿಕ, ಮಾನಸಿಕ, ಪಠ್ಯ […]

Continue Reading

ಸರ್ಕಾರಕ್ಕೆ ಸೀರೆ ವಾಪಸ್ ಕೊಡುವ ಅಭಿಯಾನ: ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಘೋಷಣೆ

ಸುದ್ದಿ ಸಂಗ್ರಹ ಹಾವೇರಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವ ಧನ ಹೆಚ್ಚಳ ಮಾಡುವ ಬದಲಾಗಿ, ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಕೇವಲ ಸೀರೆ ಕೊಟ್ಟು ಅಪಮಾನ ಮಾಡಿದೆ. ಇದನ್ನು ಖಂಡಿಸಿ ಸೀರೆ ವಾಪಸ್ ಕೊಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಪ್ರಧಾನ ಕಾರ್ಯದರ್ಶಿ ಸುನಂದಮ್ಮ ರೇವಣಕರ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರಿಗೆ […]

Continue Reading

ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

ಸುದ್ದಿ ಸಂಗ್ರಹ ಯಾದಗಿರಿ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಇಂದು ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ ಅರ್ಜಿ ವಜಾಗೊಳಿಸಿದೆ. ಅರ್ಜಿ ವಜಾ ಬೆನ್ನಲ್ಲೆ ಇದೀಗ ಮುತ್ಯಾ ಭಕ್ತರು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಜಾಮೀನು […]

Continue Reading

ಗ್ರಾಹಕರೆ ಗಮನಿಸಿ: ಗ್ಯಾಸ್ ಸಿಲಿಂಡರ್ ಬುಕಿಂಗ್‌ಗೆ ಹೊಸ ನಿಯಮ, ಇನ್ನುಮುಂದೆ 21 ದಿನ ಕಾಯಲೇಬೇಕು

ಸುದ್ದಿ ಸಂಗ್ರಹ ನವದೆಹಲಿ ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಅನಿರೀಕ್ಷಿತ ಆಘಾತ ನೀಡಿವೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿದ್ದಂತೆ, ಪೂರೈಕೆಯಲ್ಲಿ ಅಡ್ಡಿಯಾಗುತ್ತದೆ ಎಂದು ಜನರು ಭಯಭೀತರಾಗಿದ್ದಾರೆ. ಈ ಕಳವಳದಿಂದ, ಜನರು ಸಿಲಿಂಡರ್‌ ಬುಕ್ ಮಾಡಲು ಪೈಪೋಟಿ ನಡೆಸುತ್ತಿದ್ದಾರೆ. ಪ್ರಪಂಚದಾದ್ಯಂತ ಯುದ್ದದ ವಾತಾವರಣ ಹೆಚ್ಚು ಅಪಾಯಕಾರಿಯಾಗುತ್ತಿರುವುದರಿಂದ ಭಾರತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಈಗ, ಸಿಲಿಂಡರ್ ಬುಕ್ ಮಾಡಿದ ನಂತರ, ನೀವು ಎರಡನೆಯದಕ್ಕಾಗಿ ಕನಿಷ್ಠ 21 ದಿನಗಳು ಕಾಯಬೇಕು. ಸದ್ಯ ಈ ನಿಯಮದಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಹಾರ್ಮುಜ್ ಜಲಸಂಧಿಯ […]

Continue Reading