ಗುಳೆ ತಡೆದು ಊರಿನಲ್ಲೆ ಜನಕ್ಕೆ ಉದ್ಯೋಗ ನೀಡಲು ಕ್ರಮವಹಿಸಿ: ಡಿಸಿಎಂ ಪರಮೇಶ್ವರ

ಸುದ್ದಿ ಸಂಗ್ರಹ ಕಲಬುರಗಿಸೂಪರ್ ಎಲ್‌ ನಿನೋ ಪರಿಣಾಮದಿಂದ ಉಂಟಾಗಿರುವ ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಬೇಕು. ಈ ನಿಟ್ಟಿನಲ್ಲಿ ಕಲ್ಯಾಣ‌ ಕರ್ನಾಟಕ ಭಾಗದ ಜನರ ಜೀವನೋಪಾಯಕ್ಕೆ ಮತ್ತು ಜಾನುವಾರುಗಳಿಗೆ ಯಾವುದೆ ರೀತಿಯ ಸಮಸ್ಯೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಕಂದಾಯ ಸಚಿವ ಜಿ.ಪರಮೇಶ್ವರ್‌ ಹೇಳಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಸಭಾಂಗಣದ‌ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಕಲಬುರಗಿ ಕಂದಾಯ ವಿಭಾಗದ ವಿವಿಧ ಇಲಾಖೆಗಳ ಹಾಗೂ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, […]

Continue Reading

ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ: ಸಿಎಂ ಡಿಕೆಶಿ ಎಚ್ಚರಿಕೆ

ಸುದ್ದಿ ಸಂಗ್ರಹ ಕಲಬುರಗಿರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಸಿದರು. ನಗರದ ಹೊರ‌ ವಲಯದ ಗುಲಬರ್ಗಾ ವಿವಿಯ ಡಾ.ಬಿ.ಆರ್ ಅಂಬೇಡ್ಕರ್ ‌ಸಭಾಂಗಣದಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಬರ ಸನ್ನದ್ಧತೆ ಕುರಿತು ಅಧಿಕಾರಿಗಳ ‌ಸಭೆ ನಡೆಸಿ ಮಾತನಾಡಿದ ಅವರು, ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ ಮತ್ತು ಕಟ್ಟಕಡೆಯ ವ್ಯಕ್ತಿಗೂ ಅವರ ನಾಗರಿಕ ಹಕ್ಕುಗಳನ್ನು ತಲುಪಿಸುವುದು ನನ್ನ ಸರ್ಕಾರದ ಪ್ರಮುಖ ಗುರಿ. […]

Continue Reading

ನಾಲವಾರ ಗ್ರಾಮಕ್ಕೆ ಹೊರಟಿದ್ದಾಗ ಹಲಕರ್ಟಿ ಬಳಿ ಕಂದಕಕ್ಕೆ ಉರುಳಿದ KKRTC ಬಸ್

ಸುದ್ದಿ ಸಂಗ್ರಹ ವಾಡಿ ಚಾಲಕನ ನಿಯಂತ್ರಣ ತಪ್ಪಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ (KKRTC)ಯ ಬಸ್ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಸೋಮವಾರ ಹಲಕರ್ಟಿ ಸಮೀಪ ಸಂಭವಿಸಿದೆ. ಕಲಬುರ್ಗಿಯಿಂದ ವಾಡಿ ಮಾರ್ಗವಾಗಿ ನಾಲವಾರ ಗ್ರಾಮಕ್ಕೆ ಹೊರಟಿದ್ದ KKRTC ಬಸ್ ಅಪಘಾತಕ್ಕಿಡಾಗಿದೆ. ಬಲರಾಮ ಚೌಕ್ ಮಾರ್ಗದ ಫ್ಲೈಓವರ್ ಹತ್ತಿರದ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ, ಪಕ್ಕದ ನಾಲೆಗೆ ಜಾರಿದೆ. ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಈ ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, […]

Continue Reading

SIR ಕರ್ತವ್ಯ ವೇಳೆ ಕುಸಿದು ಬಿದ್ದು ಬಿಎಲ್‌ಒ ಸಾವು

ಸುದ್ದಿ ಸಂಗ್ರಹ ಶಿವಮೊಗ್ಗಎಸ್‌ಐಆರ್‌ ಕಾರ್ಯಚರಣೆ ವೇಳೆ ಮತ್ತೋರ್ವ ಬಿಎಲ್‌ಒ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದಲ್ಲಿ ನಡೆದಿದೆ. ಭದ್ರಾವತಿ ಕಲ್ಲಾಪುರದ ಅಂಗನವಾಡಿ ಶಿಕ್ಷಕಿ ಮಂಜುಳಾ (50) ಮೃತ BLO. ಮಂಜುಳಾ ಅವರು ಅರಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದ ಅಂಗನವಾಡಿಯಲ್ಲಿ ಎಸ್‌ಐಆರ್‌ ಕೆಲಸ ಮಾಡುತ್ತಿದ್ದರು. ಇಂದು ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರ ಜೊತೆ ಕೆಲಸ ಮಾಡುತ್ತಿದ್ದ ಗ್ರಾಮ ಆಡಳಿತ […]

Continue Reading

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ: ಮೂವರು ಕಳ್ಳಿಯರ ಬಂಧನ

ಸುದ್ದಿ ಸಂಗ್ರಹ ಉಡುಪಿಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ಹಣ ಕಳ್ಳತನ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಕೊಲ್ಲೂರು ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಬಂಧಿತ ಆರೋಪಿಗಳು. ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ನಿಮಿಶಾ ಎಂಬ ಭಕ್ತೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ 80 ಸಾವಿರ ರೂ. ಹಣ ಕಳ್ಳತನವಾಗಿತ್ತು. ಘಟನೆ ಬಳಿಕ ದೇವಸ್ಥಾನದ ಆವರಣದಲ್ಲಿ ಎಷ್ಟೆ ಹುಡುಕಾಟ ನಡೆಸಿದರೂ ಹಣ ಪತ್ತೆಯಾಗಿರಲಿಲ್ಲ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ […]

Continue Reading

ರಾಷ್ಟ್ರೀಯತೆಯ ಆದರ್ಶಗಳು ಅಜರಾಮರ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿ ರಾಷ್ಟ್ರಕ್ಕಾಗಿ ನಿಸ್ವಾರ್ಥ ಸೇವೆಯೇ ತನ್ನ ಧ್ಯೇಯವಾಗಿರಿಸಿಕೊಂಡಿದ್ದ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಆದರ್ಶಗಳು ದೇಶ ಭಕ್ತರ ಮನದಲ್ಲಿ ಎಂದೆಂದಿಗೂ ಅಜಾರಾಮರ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ 125ನೇಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ದಿನದಂದು ದೇಶಕ್ಕಾಗಿ ಅವರು ಮಾಡಿರುವ ತ್ಯಾಗ ಮತ್ತು ರಾಷ್ಟ್ರದ ಏಕತೆಗಾಗಿ ಅವರ ಕೊಡುಗೆ ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ […]

Continue Reading

ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ: ಕೆಕೆಆರ್‌ಟಿಸಿಯ ಚಾಲಕ ಮತ್ತು ಸಿಬ್ಬಂದಿ ಅಮಾನತು

ಸುದ್ದಿ ಸಂಗ್ರಹ ಕಲಬುರಗಿಕೆಕೆಆರ್‌ಟಿಸಿ ಬಸ್‌ನ ಹೆಡ್‌ಲೈಟ್ ಮಂದವಾಗಿದ್ದರಿಂದ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ ಮಾಡಿ ಪ್ರಯಾಣಿಕರ ಜೀವದ ಜೊತೆಗೆ ಚೆಲ್ಲಾಟವಾಡಿದ ಘಟನೆ ಗಂಭೀರವಾಗಿ ಪರಿಗಣಿಸಿ ನಿಗಮದ ಕಲಬುರಗಿ ವಿಭಾಗ–1ರ ವಿಭಾಗೀಯ ನಿಯಂತ್ರಣಾಧಿಕಾರಿ ಬಸ್ ಚಾಲಕ ಮತ್ತು ಇಬ್ಬರು ತಾಂತ್ರಿಕ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಜುಲೈ 4ರಂದು ರಾತ್ರಿ ಕಲಬುರಗಿಯಿಂದ ಚಿಂಚೋಳಿಗೆ ಹೊರಟಿದ್ದ ಬಸ್‌ನ ಹೆಡ್‌ಲೈಟ್ ಸರಿಯಾಗಿ ದೀಪ ಹೊರಸೂಸುತ್ತಿರಲಿಲ್ಲ. ಹೀಗಾಗಿ ಬಸ್ ನಿರ್ವಾಹಕ ಮತ್ತು ಇತರ ಪ್ರಯಾಣಿಕರ ಮೊಬೈಲ್ ಟಾರ್ಚ್ ಬೆಳಕಲ್ಲಿ ಬಸ್ ಚಿಂಚೋಳಿ ತಲುಪಿತ್ತು. […]

Continue Reading

ಪಿಚ್ಚರ್ ಅಭಿ ಬಾಕಿ ಹೈ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಕಲಬುರಗಿಆರ್‌ಎಸ್‌ಎಸ್‌ಗೆ ಬರೆದ ಪತ್ರಕ್ಕೆ ಇನ್ನೂ ಉತ್ತರ ಬಂದಿಲ್ಲ. ಬರಲಿ ಬಿಡಿ ಅವಸರವೇಕೆ ? ಪಿಚ್ಚರ್ ಅಭಿ ಬಾಕಿ ಹೈ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಲವಾರು ಪ್ರಶ್ನೆಗಳನ್ನು ಹಾಕಿ ಆರ್‌ಎಸ್‌ಎಸ್‌ಗೆ ಪತ್ರ ಬರೆದಿದ್ದೆನೆ. ಇನ್ನೂ ಉತ್ತರ ನೀಡಿಲ್ಲ. ನೀಡಲಿ ಬಿಡಿ ಅವಸರವೇಕೆ, ಅಭೀ ಪಿಚ್ಚರ್ ಬಾಕಿ ಹೈ ಅವರೂ ಕೂಡಾ ನನ್ನ ಹಾಗೂ ಕುಟುಂಬದ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿದ್ದಾರೆ, […]

Continue Reading

ವರದಕ್ಷಿಣೆ ಕಿರುಕುಳ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಸುದ್ದಿ ಸಂಗ್ರಹ ಚಿತ್ತಾಪುರವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಪಟ್ಟಣದಲ್ಲಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಮೀಜಾ ಅಬ್ದುಲ್ ಹುಸೇನ್ ಶೇಖ್ (24) ಆತ್ಮಹತ್ಯೆಗೆ ಶರಣಾದವರು. ರಮೀಜಾ ಪತಿ ಅಬ್ದುಲ್ ಹುಸೇನ್ ಶೇಖ್, ಅತ್ತೆ ಸಾಹೇರಾ ಬಾನು, ಅಜ್ಜಿ ಹಫೀಜಾ, ಪತಿಯ ಅಣ್ಣನ ಪತ್ನಿ ನಿಶಾದ್ ಅಬ್ದುಲ್ ಗಫೂರ್ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ಶೇಖ್‌ನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ವಿವರ: 5 ರ್ಷಗಳ ಹಿಂದೆ ಅಬ್ದುಲ್‌ ಜೊತೆ ರಮೀಜಾ […]

Continue Reading

ಗೃಹ‌ ಸಚಿವ‌ರಾದ ಬಳಿಕ ಕಲಬುರಗಿಗೆ ಭೇಟಿ: ಪ್ರಿಯಾಂಕ್‌ ಖರ್ಗೆಗೆ ಅದ್ದೂರಿ ಸ್ವಾಗತ

ಸುದ್ದಿ ಸಂಗ್ರಹ ಕಲಬುರಗಿರಾಜ್ಯದ ಗೃಹ ಸಚಿವರಾದ ಬಳಿಕ‌ ಇದೆ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ‌ ಸಚಿವ ‌ಪ್ರಿಯಾಂಕ್ ಖರ್ಗೆ ಅವರನ್ನು ‌ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು ಮತ್ತು ಅಭಿಮಾನಿಗಳು ‌ಅದ್ದೂರಿಯಾಗಿ ಭರಮಾಡಿಕೊಂಡರು. ನಗರದ ನೆಹರೂ ಗಂಜ್ ಪ್ರದೇಶದ ನಗರೇಶ್ವರ ಶಾಲೆಯ ಎದುರು ಬಂದಿಳಿದ ಕಲಬುರಗಿ, ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಪ್ರಿಯಾಂಕ್ ಖರ್ಗೆ ಅವರನ್ನು ಮೊದಲಿಗೆ ತೆರೆದ ಕಾರಿನಲ್ಲಿ, ನಂತರ ಸಿಂಗರಿಸಿದ ಲಾರಿಯ ಮೇಲೆ ಏರಿಸಿ‌ ಮೆರವಣಿಗೆ ಮಾಡಲಾಯಿತು. ಬಗೆಬಗೆಯ ಪುಷ್ಪಗಳ ವೃಷ್ಟಿಗೈದು ಸಂಭ್ರಮಿಸಿದರು. ದಾರಿಯುದ್ದಕ್ಕೂ […]

Continue Reading