ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌: 56,432 ಹುದ್ದೆಗಳ ಭರ್ತಿ

ಸುದ್ದಿ ಸಂಗ್ರಹ ಬೆಂಗಳೂರು ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಈ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತೆವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ನಾವು ಆದ್ಯತೆ ನೀಡಿದ್ದೆವೆ. ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೆವೆ ಎಂದಿದ್ದಾರೆ. ಉದ್ಯೋಗ ನೇಮಕಾತಿಗಳಲ್ಲಿ ನ್ಯಾಯಾಲಯದ ಪ್ರಕರಣಗಳಿಂದ […]

Continue Reading

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

ಸುದ್ದಿ ಸಂಗ್ರಹ ಮುಂಬೈ ಸಂಜು ಸ್ಯಾಮ್ಸನ್‌ ಸ್ಫೋಟಕ ಬ್ಯಾಟಿಂಗ್‌, ಅಕ್ಷರ್‌ ಪಟೇಲ್‌ ಸ್ಟನ್ನಿಂಗ್‌ ಕ್ಯಾಚ್‌, ಕೊನೆಯಲ್ಲಿ ಬುಮ್ರಾ ಬೌಲಿಂಗ್‌ ಕಮಾಲ್‌ನಿಂದ ಇಂಗ್ಲೆಂಡ್‌ ವಿರುದ್ಧ ಭಾರತ 7 ರನ್‌ಗಳ ರೋಚಕ ಜಯದೊಂದಿಗೆ ನಾಲ್ಕನೇ ಬಾರಿ ಟಿ20 ಫೈನಲ್‌ ಪ್ರವೇಶಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಭಾರತ 7 ವಿಕೆಟ್‌ ನಷ್ಟಕ್ಕೆ 253 ರನ್‌ ಗಳಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್‌ ಬೆಥೆಲ್‌ ಸ್ಫೋಟಕ ಶತಕ ಸಿಡಿಸಿಯೂ 7 ವಿಕೆಟ್‌ ನಷ್ಟಕ್ಕೆ 246 ರನ್‌ ಹೊಡೆದು ಸೋಲು ಒಪ್ಪಿಕೊಂಡಿತು. […]

Continue Reading

ಶುಕ್ರವಾರ ಬೆಳಗ್ಗೆ 10:15ಕ್ಕೆ ಬಜೆಟ್‌: ಪೆಟ್ರೋಲ್, ಡೀಸೆಲ್‌ ಮೇಲೆ 1 ರೂ. ಸೆಸ್ ?

ಸುದ್ದಿ ಸಂಗ್ರಹ ಬೆಂಗಳೂರು ದೀರ್ಘಕಾಲಿಕ ಮುಖ್ಯಮಂತ್ರಿಯಾಗಿ ರೆಕಾರ್ಡ್ ಮಾಡಿರುವ ಸಿಎಂ ಸಿದ್ದರಾಮಯ್ಯ ನಾಳೆ ದಾಖಲೆಯ 17ನೇ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿಎಂ, ನಾಳೆ ಬೆಳಗ್ಗೆ 10:15ಕ್ಕೆ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ ನಾಲ್ಕೂವರೆ ಲಕ್ಷ ಕೋಟಿ ಮುಟ್ಟುವ ಸಾಧ್ಯತೆ ಇದೆ. ಕಳೆದ ಬಾರಿ ಆದಾಯ ಸಂಗ್ರಹದ ಗುರಿ ಮುಟ್ಟಿಲ್ಲ. ಇದರ ಪರಿಣಾಮವೂ 2026-27ನೇ ಸಾಲಿನ ಬಜೆಟ್ ಮೇಲೆ ಪರಿಣಾಮ ಬೀರಲಿದೆ. ಸಾಲ ಮಾಡಿ ತುಪ್ಪ ತಿನ್ನುವುದು ರಾಜ್ಯಕ್ಕೆ ಹೊಸದೆನಲ್ಲ. ಈ ಬಾರಿ 75 […]

Continue Reading

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ ಕಾರ್ಡ್ ಪತ್ತೆ

ಸುದ್ದಿ ಸಂಗ್ರಹ ಮಂಗಳೂರು ಇಲ್ಲಿನ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ರಾಶಿರಾಶಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಸಾವಿರಾರು ಆಧಾರ್ ಕಾರ್ಡ್‌ಗಳು ಬಿದ್ದಿರುವುದನ್ನು ಕಂಡ ಸಾರ್ವಜನಿಕರು ಶಾಕ್ ಆಗಿದ್ದು, ತಕ್ಷಣ ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸ್ಥಳೀಯರು ಎಲ್ಲಾ ಆಧಾರ್ ಕಾರ್ಡ್‌ ಸಂಗ್ರಹಿಸಿದ್ದಾರೆ. ಆಧಾರ್ ಕಾರ್ಡ್ ದುರುಪಯೋಗ ಅಥವಾ ನಿರ್ಲಕ್ಷ್ಯದ ಬಗ್ಗೆ ಸೂಕ್ತ ತನಿಖೆ ನಡೆಸಲು ಅಧಿಕಾರಿಗಳಿಗೆ ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ. […]

Continue Reading

ಬೆಂಗಳೂರು, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಸುದ್ದಿ ಸಂಗ್ರಹ ಬೆಂಗಳೂರು ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆಯಿಂದಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ. ಎಲ್ಲೆಲ್ಲಿ, ಯಾರ ವಾಸ್ತವ್ಯಗಳ ಮೇಲೆ ಲೋಕಾ ದಾಳಿ ? ಬೆಳಗ್ಗೆ ಸುಮಾರು 6 ಗಂಟೆಯಿಂದ ಲೋಕಾಯುಕ್ತ ಪೊಲೀಸರು ಹಲವು ತಂಡಗಳಾಗಿ ವಿಭಜನೆಗೊಂಡು […]

Continue Reading

ನಾನು ಗಂಡಸಾಗಿ ಹುಟ್ಟಿರುವುದೆ ತಪ್ಪಾ ? ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆಯ ಮುಖ್ಯಶಿಕ್ಷಕ

ಸುದ್ದಿ ಸಂಗ್ರಹ ಕೊಪ್ಪಳಜಿಲ್ಲೆಯ ಕುಕನೂರ ತಾಲೂಕಿನ ಕೋಮಲಾಪುರ ಗ್ರಾಮದ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಅವರ ವೈಯಕ್ತಿಕ ಬದುಕಿನ ವಿವಾದ ಶಾಲಾ ಆವರಣದಲ್ಲಿ ಸಾರ್ವಜನಿಕ ಗಲಾಟೆಗೆ ಕಾರಣವಾಗಿದೆ. ತಮ್ಮ ಪತ್ನಿ ಪ್ರತಿದಿನ ಶಾಲೆಗೆ ಬಂದು ಕಿರಿಕ್​​ ಮಾಡುವುದು, ತಮ್ಮ ವೃತ್ತಿ ಬದುಕಿಗೆ ಮತ್ತು ಸಾರ್ವಜನಿಕ ಘನತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಶಿಕ್ಷಕ ಸಿದ್ದೇಶ ಶೆಟ್ಟರ್ ಆರೋಪಿಸಿದ್ದಾರೆ. ಸಿದ್ದೇಶ ಶೆಟ್ಟರ್ ಅವರ ಹೇಳಿಕೆಯ ಪ್ರಕಾರ, ತಮ್ಮ ಪತ್ನಿ ತಮ್ಮನ್ನು ಮನೆಯಲ್ಲಿ ಕೈದಿ ತರಹ ಇಟ್ಟುಕೊಂಡಿದ್ದು, ಕುಟುಂಬದ […]

Continue Reading

ಬಿಸಿಲ ಬೇಗೆಗೆ ಬಳ್ಳಾರಿ ಮಂದಿ ಹೈರಾಣ: ಜನರಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ

ಸುದ್ದಿ ಸಂಗ್ರಹ ಬಳ್ಳಾರಿ ರಾಜ್ಯಾದ್ಯಂತ ಬೇಸಿಗೆಯ ಬಿಸಿ ಆರಂಭವಾಗಿದ್ದು, ಸೆಕೆಯ ವಾತಾವರಣ ಕಂಡುಬರುತ್ತಿದೆ. ಆದರೆ ಗಣಿನಾಡು ಬಳ್ಳಾರಿಯ ಮಂದಿ ಮಾತ್ರ ಈಗಲೆ ಬಿಸಿಲಿನ ಬೇಗೆಗೆ ತತ್ತರಿಸಿ ಹೋಗಿದ್ದಾರೆ. ಕಳೆದ 2-3 ದಿನಗಳಿಂದ ಬಳ್ಳಾರಿಯಲ್ಲಿ 36°, 37° ಮತ್ತು 38° ಸೆಲ್ಸಿಯಸ್ ವರಗೆ ತಾಪಮಾನ ದಾಖಲಾಗಿದೆ. ಹೀಗಾಗಿ ಬಿಸಿಲಿನ ಧಗೆಗೆ ಜನ ಹೈರಾಣಾಗಿದ್ದಾರೆ. ಈಗಾಗಲೆ ಹವಾಮಾನ ಇಲಾಖೆ ಕೂಡ ಜಿಲ್ಲೆಯಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ವಾತಾವರಣದಲ್ಲಿ ಅತಿ ಹೆಚ್ಚು ಬಿಸಿ ಗಾಳಿ ಸಾಧ್ಯತೆ […]

Continue Reading

ಪಂಡಿತ ಡಾ.ಪುಟ್ಟರಾಜ ಗವಾಯಿಗಳ ಕೊಡುಗೆ ಅವಿಸ್ಮರಣೀಯ

ಸುದ್ದಿ ಸಂಗ್ರಹ ಕಲಬುರಗಿ ತ್ರಿಕಾಲ ಜ್ಞಾನಿ, ಸಾಹಿತಿ, ಸಮಾಜಕ್ಕೆ ಆದರ್ಶ ಗುರು, ಸಮಾಜ ಸುಧಾರಕರಾಗಿ ವಿವಿಧ ಆಯಾಮಗಳಿಂದ ಅವರು ನೀಡಿರುವ ಕೊಡುಗೆ ಅವಿಸ್ಮರಣೀಯ ಎಂದು ಹಿರಿಯ ಸಂಗೀತ ಕಲಾವಿದ ಹಣಮಂತರಾಯ ಮಂಗಾಣೆ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದಲ್ಲಿನ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ಗಾನಯೋಗಿ ಪಂಡಿತ ಡಾ.ಪುಟ್ಟರಾಜ ಗವಾಯಿಗಳ 112ನೇ ಜಯಂತ್ಯುತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾವು ಎರಡು ವರ್ಷದವರಿದ್ದಾಗ ಕಣ್ಣುಗಳ ಕಳೆದುಕೊಂಡ ಪಂಡಿತ ಡಾ.ಪುಟ್ಟರಾಜ ಗವಾಯಿಗಳು […]

Continue Reading

ಗುಣಮಟ್ಟ ಕಾಪಾಡಬೇಕು, ಕಳಪೆ ಕಾಮಗಾರಿ ಸಹಿಸಲ್ಲ: ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಚಿತ್ತಾಪುರಒಳಚರಂಡಿ, ಕುಡಿಯುವ ನೀರಿನ ಕಾಮಗಾರಿ, ಸಂಪರ್ಕ ರಸ್ತೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡದಿದ್ದರೆ ಸಹಿಸುವ ಮಾತೆ ಇಲ್ಲ ಎಂದು ಕ್ಷೇತ್ರದ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪಟ್ಟಣದಲ್ಲಿನ ತಾಲೂಕು ಆಡಳಿತದ ಪ್ರಜಾಸೌಧ ಕಟ್ಟಡದ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ಸಾಕಷ್ಟು ಅನುದಾನ ತಂದರೂ, ಕೆಲಸ ಮಾಡಲು ಅವಕಾಶವಿದ್ದರೂ, ಅಧಿಕಾರಿಗಳು ಮಾತ್ರ ಆಸಕ್ತಿಯಿಂದ ಕೆಲಸ ಮಾಡುತ್ತಿಲ್ಲ. […]

Continue Reading

ಮಾರುಕಟ್ಟೆಗಾಗಿ ಪ್ರಪಂಚ ಸ್ಮಶಾನ ಮಾಡುತ್ತಿರುವ ಅಮೆರಿಕ-ಇಸ್ರೇಲ್: ಎಂ ಶಶಿಧರ

ಸುದ್ದಿ ಸಂಗ್ರಹ ಶಹಾಬಾದವಿಶ್ವದ ತೈಲ ಮಾರುಕಟ್ಟೆಯನ್ನು ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳಲು ಅಮೆರಿಕ ಹುನ್ನಾರ ನಡೆಸುತ್ತಿದೆ. ತೈಲ ನಿಕ್ಷೇಪ ಹೊಂದಿರುವ ರಾಷ್ಟ್ರಗಳನ್ನು ಕುತಂತ್ರದಿಂದ ತನ್ನ ಅಂಕೆಯಲ್ಲಿಟ್ಟುಕೊಳ್ಳಲು ಪ್ರಯತ್ನಿಸುತಿದೆ. ಅದು ಸಾಧ್ಯವಾಗದಿದ್ದರೆ ಇಲ್ಲಸಲ್ಲದ ಕಾರಣ ನೀಡಿ ಸಾರ್ವಭೌಮ ರಾಷ್ಟ್ರಗಳ ಮೇಲೆ ಮಿಲಿಟರಿ ದಾಳಿ ಮಾಡುವುದರ ಮೂಲಕ ಅಮೆರಿಕ ಮತ್ತು ಇಸ್ರೇಲ್ ಸಾಮ್ರಾಜ್ಯಶಾಹಿಗಳು ಪ್ರಪಂಚವನ್ನು ಸ್ಮಶಾನ ಮಾಡುತ್ತಿವೆ. ಅವರಿಗೆ ನಮ್ಮ ಧಿಕ್ಕಾರವಿದೆ ಎಂದು ಎಸ್’ಯುಸಿಐ (ಸಿ)ನ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಎಮ್ ಶಶಿಧರ ಆಕ್ರೋಶ ವ್ಯಕ್ತಪಡಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ […]

Continue Reading