ಭೂಸ್ವಾಧೀನ ಪ್ರಕರಣದಲ್ಲಿ ಪರಿಹಾರ ವಿಳಂಬ: ಜಿಲ್ಲಾಧಿಕಾರಿ ಕಾರು ಜಪ್ತಿ‌‌

ಸುದ್ದಿ ಸಂಗ್ರಹ ಕಲಬುರಗಿನಂದಿಕೂರ ಬಳಿಯಿರುವ ಚರಂಡಿ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಸ್ಥಾಪನೆ ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯದ ಆದೇಶದಂತೆ ಪರಿಹಾರ ವಿತರಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಕಾರನ್ನು ನ್ಯಾಯಾಲಯದ ಸಿಬ್ಬಂದಿ ಗುರುವಾರ ಜಪ್ತಿ ಮಾಡಿದ್ದಾರೆ. ಬಳಿಕ ಪರಿಹಾರ ವಿತರಣೆ ಭರವಸೆ ಬಳಿಕ ಕಾರನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಕೋರ್ಟ್‌ನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶಕೆ.ಎಸ್ ರೊಟ್ಟೇರ್ ಅವರು ಭೂಸ್ವಾಧೀನ ಪರಿಹಾರ ವಿಳಂಬ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಕಾರು (ಕೆಎ 32 ಜಿ 9990) ಜಪ್ತಿ ಮಾಡುವಂತೆ ಆದೇಶಿಸಿದ್ದರು. […]

Continue Reading

9 ರೂ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್‌: 10 ರೂ. ಲೋನ್ ಕಟ್ಟಿದ್ದಿವಿ, 66 ಪೈಸೆ ವಾಪಸ್ ಕೊಡಿ ಅಂತ ಗ್ರಾಹಕ ಪಟ್ಟು

ಸುದ್ದಿ ಸಂಗ್ರಹ ಹಾಸನ9 ರೂ 34 ಪೈಸೆ ಸಾಲ ಕಟ್ಟುವಂತೆ ಕೆನರಾ ಬ್ಯಾಂಕ್‌ನಿಂದ ಕರೆ ಮಾಡಿದ ಹಿನ್ನೆಲೆಯಲ್ಲಿ 10 ರೂ ಲೋನ್ ಕಟ್ಟಿದ್ದಿವಿ 66 ಪೈಸೆ ವಾಪಸ್ ಕೊಡಿ ಎಂದು ಗ್ರಾಹಕ ಪಟ್ಟು ಹಿಡಿದ ಘಟನೆ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ಕಾಫಿ ಬೆಳೆಗಾರ ಚೊಕ್ಕಣ್ಣಗೌಡ ಎಂಬವರು ವರ್ಷಗಳ ಹಿಂದೆ ಕೆನರಾ ಬ್ಯಾಂಕ್‌‌ನಿಂದ 50 ಸಾವಿರ ಲೋನ್ ಪಡೆದು ಸಂಪೂರ್ಣ ಹಣ ಬಡ್ಡಿ ಸಮೇತ ಕಟ್ಟಿದ್ದರು. ನಿನ್ನೆ ಏಕಾಏಕಿ ಕರೆ ಮಾಡಿ 9 ರೂ 34 ಪೈಸೆ ಸಾಲ […]

Continue Reading

ಕನ್ನಡ ಶಾಲೆ ಉಳಿಸಿ-ಬೆಳೆಸಿ ಅಭಿಯಾನದ ತಾಲೂಕಾಧ್ಯಕ್ಷರಾಗಿ ಗಿರೀಶರೆಡ್ಡಿ ನೇಮಕ‌

ಸುದ್ದಿ ಸಂಗ್ರಹ ಕಾಳಗಿನಾಡು ನುಡಿ ಹಾಗೂ ಸರ್ಕಾರಿ ಕನ್ನಡ ಶಾಲೆಗಳ ಸಂರಕ್ಷಣೆಗಾಗಿ ರಾಜ್ಯಾದ್ಯಂತ ನಡೆಯುತ್ತಿರುವ ಕನ್ನಡ ಶಾಲೆ ಉಳಿಸಿ– ಬೆಳೆಸಿ ಅಭಿಯಾನಕ್ಕೆ ಹೊಸ ಚೈತನ್ಯ ದೊರೆತಿದ್ದು, ಕಾಳಗಿ ತಾಲೂಕಾಧ್ಯಕ್ಷರಾಗಿ ಗಿರೀಶರೆಡ್ಡಿ ರಾಜಾಪುರ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಅಣ್ಣಾರಾಯ ವಿ ಇವಣಿ ತಿಳಿಸಿದ್ದಾರೆ. ಕನ್ನಡ ಶಾಲೆಗಳ ಉಳಿವಿಗಾಗಿ ಜನಜಾಗೃತಿ ಮೂಡಿಸುವುದು, ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದು ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಿಸುವ ಉದ್ದೇಶದೊಂದಿಗೆ ಈ ಅಭಿಯಾನ ರಾಜ್ಯಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘಟನೆಯ ರಾಜ್ಯ ನಾಯಕರು, ಹಿರಿಯರು […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಸಾವರ್ಕರ್ ಸ್ಮರಣೆ

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಛೇರಿಯಲ್ಲಿ ವೀರ ಸಾವರ್ಕರ್’ರ 60ನೇ ಪುಣ್ಯ ಸ್ಮರಣೆ ಪ್ರಯುಕ್ತ ಅವರ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸಿದರು.‌ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ವಿನಾಯಕ ದಾಮೋದರ್ ಸಾವರ್ಕರ್ ಹೆಸರು ಕೇಳಿದರೆ ಈಗಲೂ ನಮ್ಮ ಮೈ ಮನ ರೋಮಾಂಚನಗೊಳ್ಳುತ್ತದೆ, ಅವರು ನಮ್ಮ ಸ್ವಾಭಿಮಾನದ ಸರ್ವಸ್ವ ಎಂದರು.‌ ತಮ್ಮ ಜೀವನವನ್ನು ಸ್ವಾತಂತ್ರಕ್ಕಾಗಿ ಮುಡಿಪಾಗಿಟ್ಟ ಮಹಾನ್‌ ನಾಯಕ. ಸ್ವಾತಂತ್ರ್ಯ ಹೋರಾಟ, ಹಿಂದುತ್ವದ ಬಗ್ಗೆ ತೆಗೆದುಕೊಂಡ ನಿಲುವುಗಳು ಈಗಲೂ ಈ ಮಣ್ಣಿನ ಯುವಕರಿಗೆ ಸ್ಪೂರ್ತಿದಾಯಕ. ತಾಯಿ-ತಂದೆಯನ್ನು […]

Continue Reading

ಬೆಂಕಿ ಅವಘಡ: ‍50 ಲಕ್ಷ ಮೌಲ್ಯದ ವಸ್ತುಗಳಿದ್ದ ಎಲೆಕ್ಟ್ರಿಕಲ್ ಅಂಗಡಿ ಭಸ್ಮ

ಸುದ್ದಿ ಸಂಗ್ರಹ ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ನಗರದ ರಾಮ ಮಂದಿರ ಸರ್ಕಲ್‌ ಸಮೀಪದ ಎಲೆಕ್ಟ್ರಿಕಲ್ ಅಂಗಡಿಗೆಯೊಂದರಲ್ಲಿ ಬುಧವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ. ಅಶೋಕ ಪ್ರಜಾಪತಿ ಅವರಿಗೆ ಸೇರಿದ ಅಂಗಡಿಯಲ್ಲಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ಸಂಭವಿಸಿದ ದುರಂತದಲ್ಲಿ 20 ಲಕ್ಷ ಮೌಲ್ಯದ ಎಲೆಕ್ಟ್ರಿಕ್ ಸಾಮಾನುಗಳು ಸೇರಿದಂತೆ 50 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕೀಟ್ […]

Continue Reading

ಕಲಬುರಗಿ: ರಾಜೇಶ್ ನಾಗೂರೆ ಅವರಿಗೆ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ

ಸುದ್ದಿ ಸಂಗ್ರಹ ಕಲಬುರಗಿನಗರದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ರಾಜೇಶ್ ನಾಗೂರೆ ಅವರಿಗೆ 2025ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗಿದೆ. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಬೆಂಗಳೂರಿನ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಅನಿತಾ ಕೌಲ್ ಸ್ಮರಣಾರ್ಥ 2025-26ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್‌.ಎನ್‌ ಮುಕುಂದರಾಜ್‌ , ಬೆಂಗಳೂರಿನ ಬಿಸಿನೆಸ್‌ ಕಾರಿಡಾರ್‌ […]

Continue Reading

ಅಂಗಡಿ ಮಾಲಿಕನಿಗೆ ಚಾಕು ಇರಿತ: ಚಿತ್ರದುರ್ಗದಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಸುದ್ದಿ ಸಂಗ್ರಹ ಚಿತ್ರದುರ್ಗ ಮೊಬೈಲ್‌ ಅಂಗಡಿ ಮಾಲಿಕನಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಚಿತ್ರದುರ್ಗದ ಸಂತೆ ಮೈದಾನದಲ್ಲಿ ನಡೆದಿದೆ. ವಿಕ್ರಮ್‌ ಚೌದ್ರಿ ಎಂಬವರ ಅಂಗಡಿಗೆ ಯುವಕನೊಬ್ಬ ಮೊಬೈಲ್‌ ಸ್ಕ್ರೀನ್‌ ಹಾಕಿಸಲು ಬಂದಿದ್ದ. ಈ ವೇಳೆ ಬೇರೆ ಬ್ರ್ಯಾಂಡ್‌ನ ಮೊಬೈಲ್‌ ಸ್ಕ್ರೀನ್‌ಗೆ 100 ರೂ. ಹೆಚ್ಚುವರಿ ಆಗುತ್ತದೆ ಎಂದು ಹೇಳಿದ್ದಾರೆ. 100 ರೂ. ಹೆಚ್ಚುವರಿ ಹಣ ಕೇಳಿದ್ದಕ್ಕೆ ಸಿಟ್ಟಾದ ಯುವಕ ಚಾಕು ಇರಿದಿದ್ದಾನೆ. ಯುವಕ ಚಾಕು ಇರಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಕ್ರಮ್‌ ಚೌದ್ರಿ ಜಿಲ್ಲಾಸ್ಪತ್ರೆಗೆ ದಾಖಲಾಗಿ […]

Continue Reading

ಸೇವಾಲಾಲರ ವಿಚಾರಧಾರೆ ತಿಳಿಯಿರಿ: ಬಸವರಾಜ ಮತ್ತಿಮೂಡ್

ಸುದ್ದಿ ಸಂಗ್ರಹ ಶಹಾಬಾದಮಹಾನ್ ಮಾನವತಾವಾದಿ ಸಂತ ಸೇವಾಲಾಲ್ ಮಹಾರಾಜರ ತತ್ವ ಆದರ್ಶಗಳು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು ಎಂದು ಶಾಸಕ ಬಸವರಾಜ ಮತ್ತಿಮೂಡ್ ಹೇಳಿದರು. ತಾಲೂಕಿನ ಗ್ರಾಮೀಣ ಬಂಜಾರ ಸೇವಾ ಸಂಘ ಹಾಗೂ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಸಮಿತಿಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸೇವಾಲಾಲ್ ಮಹಾರಾಜ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂತ ಸೇವಾಲಾಲ್ ಮಹಾರಾಜರು ಸರ್ವರು ಶಾಂತಿಯಿಂದ ಸಹಭಾಳ್ವೆಯೊಂದಿಗೆ, ಸಹೋದರತೆ ಭಾವದಿಂದ ಸಮಾಜದಲ್ಲಿ ಬಾಳಬೇಕು, ಕಾಯಕ ಜೀವಿಯಾಗಿ ಬದುಕಬೇಕು, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಮಾನವಿಯಗುಣ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಮಾನವ […]

Continue Reading

ನುಡಿದಂತೆ ನಡೆದ ಶಾಸಕ ಮತ್ತಿಮೂಡ: ರಾವೂರ ಶ್ರೀ

ಸುದ್ದಿ ಸಂಗ್ರಹ ಶಹಾಬಾದ್ಜನರಿಗೆ ಆಶ್ವಾಸನೆ ನೀಡಿ ಮರೆತು ಹೋಗುವ ಜನಪ್ರತಿನಿಧಿಗಳ ಮಧ್ಯೆ, ಪಕ್ಷ ಭೇದ ಮರೆತು ಜನಪರ ಕೆಲಸ ಮಾಡುತ್ತಿರುವ ಮತ್ತು ನುಡಿದಂತೆ ನಡೆಯುತ್ತಿರುವ ಶಾಸಕ ಬಸವರಾಜ ಮತ್ತಿಮೂಡ ಅಪರೂಪದ ಶಾಸಕರು ಎಂದು ರಾವೂರಿನ ಸಿದ್ದಲಿಂಗೇಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಗೋಳಾ(ಕೆ) ಗ್ರಾಮದಲ್ಲಿ ಸಮುದಾಯ ಭವನ ಹಾಗೂ ರಸ್ತೆ ಕಾಮಗಾರಿ ಅಡಿಗಲ್ಲು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಶಾಸಕ ಬಸವರಾಜ ಮತ್ತಿಮಡು ಗುದ್ದಲಿ ಪೂಜೆ ಮಾಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ […]

Continue Reading

ಪೂಜ್ಯ ಸಿದ್ದೇಶ್ವರ ಸ್ವಾಮೀಜಿ ನೆನಪಿಸುವ ಕೃತಿ ಲೋಕಾರ್ಪಣೆ

ಸುದ್ದಿ ಸಂಗ್ರಹ ಶಹಾಬಾದ್ದಶಕಗಳ ಹಿಂದೆ ಈ ನೆಲದಲ್ಲಿ ನಡೆದಾಡಿದ ಸಿದ್ದೇಶ್ವರ ಸ್ವಾಮೀಜಿ ಕುರಿತು ಮತ್ತು ಬಸವಣ್ಣನಂತಹ ಮಹಾ ಮಾನವತಾವಾದಿಯ ಕುರಿತು ರಚಿಸಿದ ಎರಡು ಕೃತಿಗಳು ಲೋಕಾರ್ಪಣೆ ಆಗುತ್ತಿರುವುದು ಸಂತಸದ ಸಂಗತಿ ಎಂದು ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ನಗರದ ಶರಣಬಸವೇಶ್ವರ ಜ್ಞಾನ ವಿಕಾಸ ಪೀಠದ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ನೃಪತುಂಗ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಂಡಲಗಿರಿ ಪ್ರಸನ್ನ ಅವರ ‘ಎಣ್ಣೆ ಬತ್ತಿಯ ಸೊಡರು’ ಮತ್ತು ‘ಮಹಾಮನೆ’ ಎರಡು ಕೃತಿಗಳು ಲೋಕಾರ್ಪಣೆ ಮಾಡಿ […]

Continue Reading