ಈ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ ನಾಳೆ

ಸುದ್ದಿ ಸಂಗ್ರಹ ನವದೆಹಲಿಈ ವರ್ಷದ ಮೊದಲ ಸೂರ್ಯಗ್ರಹಣ ಫೆ.17 ಮಂಗಳವಾರ ಗೋಚರವಾಗಲಿದೆ. ಇದನ್ನು ʻರಿಂಗ್ ಆಫ್ ಫೈರ್ʼ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ಮಂಗಳವಾರ ಮಧ್ಯಾಹ್ನ 3:26ರ ವೇಳೆಗೆ ಗ್ರಹಣ ಪ್ರಾರಂಭವಾಗಿ ಸಂಜೆ 7:57ಕ್ಕೆ ಕೊನೆಗೊಳ್ಳಲಿದೆ. ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, 2 ನಿಮಿಷ 20 ಸೆಕೆಂಡು ಇರಲಿದೆ. ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96% ರಷ್ಟನ್ನು ಚಂದ್ರ ಆವರಿಸಲಿದೆ. ಆದರೆ ಈ ಗ್ರಹಣ ಭಾರತದಲ್ಲಿ ಗೋಚರವಾಗುವುದಿಲ್ಲ. ಎಲ್ಲೆಲ್ಲಿ ಗೋಚರ ?ಅಂಟಾರ್ಟಿಕಾ, […]

Continue Reading

ಕಸಾಪ ಜಿಲ್ಲಾ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಗೌರವ ನಮನ

ಸುದ್ದಿ ಸಂಗ್ರಹ ಕಲಬುರಗಿಕಸಾಪ ಜಿಲ್ಲಾ  ಸಮ್ಮೇಳನದ ಸರ್ವಾಧ್ಯಕ್ಷ ಹಾಗೂ ಬಸವೇಶ್ವರ ಬಳಗದ ಗೌರವ ಸಲಹೆಗಾರ ಮುಡಬಿ ಗುಂಡೇರಾವ ಅವರಿಗೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಬೆಳಿಗ್ಗೆ ನಗರದ ಕನ್ನಡ ಭವನದ ಆವರಣದಲ್ಲಿ ಸತ್ಕರಿಸಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ ಪಾಟೀಲ್, ಗೌರವ ಸಲಹೆಗಾರ ಶಿವಯೋಗೆಪ್ಪಾ ಎಸ್ ಬಿರಾದಾರ, ಸದಸ್ಯರಾದ ಧರ್ಮರಾಜ ಜವಳಿ, ಶಿವರಾಜ ಅಂಡಗಿ, ಧರ್ಮಣ್ಣ ಧನ್ನಿ, ಸಂತೋಷ ಕುಡಳ್ಳಿ, ಮಹಾಲಿಂಗಪ್ಪ ಮುಲಗೆ, ಬಸವಪ್ರಭು ಜಿ.ಮುಡಬಿ ಸೇರಿದಂತೆ ಅನೇಕರು ಇದ್ದರು‌.

Continue Reading

ಗೂಗಲ್‌ ಮ್ಯಾಪ್‌ ನಂಬಿ ಕೆಟ್ಟ ಕೇರಳದ ಪ್ರವಾಸಿಗರು: ಉಪ್ಲಾಡಿ ಹೊಳೆಯತ್ತ ಸಾಗಿದ ಕಾರು

ಸುದ್ದಿ ಸಂಗ್ರಹ ಕೋಟಗೂಗಲ್‌ ಮ್ಯಾಪ್‌ ಎಡವಟ್ಟಿನಿಂದ ಕಾರೊಂದು ಹೊಳೆಗೆ ಬೀಳುವ ಸ್ಥಿತಿಗೆ ತಲುಪಿದ ಘಟನೆ ಶುಕ್ರವಾರ ರಾತ್ರಿ ಕೋಟ ಸಾೖಬ್ರಕಟ್ಟೆ ಮುಖ್ಯ ರಸ್ತೆಯ ಉಪ್ಲಾಡಿ ಹೊಳೆ ಬದಿಯಲ್ಲಿ ಸಂಭವಿಸಿದೆ. ಕೇರಳ ಮೂಲದ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕಾಗಿ ಪ್ರಯಾಣಿಸುತ್ತಿದ್ದರು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿದ್ದ ವೇಳೆ ಗೂಗಲ್‌ ಮ್ಯಾಪ್‌ನಲ್ಲಿ ತೋರಿದ ಡೈವರ್ಶನ್‌ ಅನುಸರಿಸಿ ಬ್ರಹ್ಮಾವರ ಬಳಿ ಬಾರಕೂರು ಮಾರ್ಗವಾಗಿ ಸಾೖಬ್ರಕಟ್ಟೆ ಮೂಲಕ ಕೋಟದತ್ತ ಸಾಗಿತ್ತು. ಉಪ್ಲಾಡಿ ಹೊಳೆ ಸಮೀಪ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್‌ […]

Continue Reading

ಸಂತ ಸೇವಾಲಾಲ್ ಶ್ರೇಷ್ಠ ದಾರ್ಶನಿಕರು

ಸುದ್ದಿ ಸಂಗ್ರಹ ಶಹಾಬಾದ್ಹಸಿದವರಿಗೆ ಊಟ ಕೊಡು, ಬಾಯಾರಿದವರಿಗೆ ನೀರು ಕೊಡು. ಇದೆ ಧರ್ಮ, ಇದೆ ಸತ್ಯದ ಮಾರ್ಗ ಎಂಬ ಸಂದೇಶ ಸಾರಿದ ಸಂತ ಸೇವಾಲಾಲ್ ಮಹಾರಾಜರು ಜಗತ್ತಿಗೆ ಸಾರಿದ ದಾರ್ಶನಿಕರಲ್ಲಿ ಒಬ್ಬರು ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಹೇಳಿದರು. ನಗರದ ರೈಲ್ವೆ ನಿಲ್ದಾಣದ ಸೇವಾಲಾಲ್ ಮಹಾರಾಜ ಆಟೋ ಸಂಘದ ವತಿಯಿಂದ ನಡೆದ ಸಂತ ಸೇವಾಲಾಲ್ ಮಹಾರಾಜರ 287ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ವಿವಿಧ ರೀತಿಯ ಧರ್ಮ, ಸಂಸ್ಕೃತಿ, ಜಾತಿ, ಭಾಷೆಗಳಿವೆ. […]

Continue Reading

ವಿದೇಶದಲ್ಲೆ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರಣಯದಾಟ ಬಿಚ್ಚಿಟ್ಟ ಪತ್ನಿ

ಸುದ್ದಿ ಸಂಗ್ರಹ ಮಂಗಳೂರು ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಮದ್ವೆಯಾಗಿ ನಂಬಿಸಿ ಹಣ ವಂಚಿಸಿದ್ದ ಪ್ರಕರಣ ಮಾಸುವ ಮುನ್ನವೆ ಮತ್ತೊಬ್ಬ ʻಮಂಗಳೂರು ಮನ್ಮಥʼನ ಪ್ರಕರಣ ಬೆಳಕಿಗೆ ಬಂದಿದೆ. ಈತ ವಿದೇಶದಲ್ಲೆ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕುತ್ತಿದ್ದ ಎನ್ನುವುದು ಗೊತ್ತಾಗಿದೆ. ಗಂಡನ ಪ್ರೀತಿ, ಪ್ರೇಮ, ಪ್ರಣಯದಾಟವನ್ನು ಸ್ವತಃ ಪತ್ನಿಯೆ ಬಟಾಬಯಲು ಮಾಡಿದ್ದು, ಬಜೆಪೆ ನಿವಾಸಿ ಮನೀಶ್ ವಿರುದ್ಧ ಪತ್ನಿ ಪ್ರೀತಿ ಮಂಗಳೂರು ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರೀತಿಯನ್ನು ಪ್ರೀತಿಸಿ ಮದ್ವೆಯಾಗಿದ್ದು ಹೇಗೆ ?ಸಂತ್ರಸ್ತೆ ಪ್ರೀತಿ ಎಂಬಾಕೆಗೆ […]

Continue Reading

ಗದಗ: ಶಿವರಾತ್ರಿಯಂದೆ ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

ಸುದ್ದಿ ಸಂಗ್ರಹ ಗದಗ ನಾಡಿನೆಲ್ಲಡೆ ಮಹಾ ಶಿವರಾತ್ರಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ ಶಿವನ ಆರಾಧನೆ ದಿನವೆ ದುಷ್ಕರ್ಮಿಗಳು ಶಿವಲಿಂಗ ಹಾಗೂ ನಂದಿ ವಿಗ್ರಹ ಭಗ್ನಗೊಳಿಸಿದ ಘಟನೆ ಮುಂಡರಗಿ ತಾಲೂಕಿನ ಶಿಂಗಟಾಲೂರ ಬಳಿ ನಡೆದಿದೆ. ಗ್ರಾಮದ ಹೊರವಲಯದ ಶ್ರೀ ರಾಮಲಿಂಗೇಶ್ವರ, ನಂದಿ ಮೂರ್ತಿಯನ್ನು ಭಗ್ನಗೊಳಿಸಿದ್ದಾರೆ. ದೇವಸ್ಥಾನಕ್ಕೆ ನುಗ್ಗಿದ ದುಷ್ಕರ್ಮಿಗಳು ಈ ದುಷ್ಕೃತ್ಯ ಮೆರೆದಿದ್ದಾರೆ. ಮಹಾ ಶಿವರಾತ್ರಿ ಹಿನ್ನೆಲೆ ಗ್ರಾಮಸ್ಥರು ಶನಿವಾರ ದೇವಸ್ಥಾನಕ್ಕೆ ಸುಣ್ಣ, ಬಣ್ಣ ಹಚ್ಚಿ ಬಂದಿದ್ದರು. ಬೆಳಿಗ್ಗೆ ಪೂಜೆಗೆ ತೆರಳಿದಾಗ ಮೂರ್ತಿ ಭಗ್ನವಾಗಿರುವ ವಿಷಯ ಬೆಳಕಿಗೆ ಬಂದಿದೆ. […]

Continue Reading

ಕನ್ನಡ ಶಾಲೆ ಉಳಿಸಿ- ಬೆಳೆಸಿ ಅಭಿಯಾನದ ಚಿತ್ತಾಪುರ ನಗರಾಧ್ಯಕ್ಷರಾಗಿ ಕುಮಾರ ಜಾಧವ ನೇಮಕ

ಸುದ್ದಿ ಸಂಗ್ರಹ ಕಲಬುರಗಿಕನ್ನಡ ಭಾಷೆ, ಸಂಸ್ಕೃತಿ ಹಾಗೂ ಸರ್ಕಾರಿ ಶಾಲೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ರಾಜ್ಯಾದ್ಯಂತ ನಡೆಯುತ್ತಿರುವ ‘ಕನ್ನಡ ಶಾಲೆ ಉಳಿಸಿ- ಬೆಳೆಸಿ ಅಭಿಯಾನ’ ಸಂಘಟನೆಯ ಚಿತ್ತಾಪುರ ನಗರಾಧ್ಯಕ್ಷರಾಗಿ ಕುಮಾರ ಜಾಧವರನ್ನು ನೇಮಕ ಮಾಡಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಅಣ್ಣಾರಾಯ ವಿ ಇವಣಿ ಹೇಳಿದರು. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಿಮಗೆ ವಹಿಸಲಾದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿ, ತಾಲೂಕಿನಲ್ಲಿ ಸಂಘಟನೆ ಇನ್ನಷ್ಟು ಬಲಿಷ್ಠಗೊಳಿಸಬೇಕು. ವಿದ್ಯಾರ್ಥಿಗಳಿಗೆ ಅಭಿಯಾನದ ಉದ್ದೇಶ ತಿಳಿಸಿ, ಕನ್ನಡ ವಿಷಯದಲ್ಲಿ 100ಕ್ಕೆ 100ರಷ್ಟು […]

Continue Reading

ಸ್ತ್ರೀ ಕುಲಕ್ಕೆ ಮಾದರಿ ಹೇಮರೆಡ್ಡಿ ಮಲ್ಲಮ್ಮ: ಜೇಮಸಿಂಗ್ ಮಹಾರಾಜ

ಸುದ್ದಿ ಸಂಗ್ರಹ ಶಹಾಬಾದ್ಸ್ತ್ರೀ ಕುಲಕ್ಕೆ ಮಾದರಿಯಾಗಿ, ಸಮಾಜದ ಉದ್ಧಾರಕ್ಕಾಗಿ, ಭಕ್ತಿಯ ಸಾಕಾರ ಮೂರ್ತಿಯಾಗಿರುವ ಮಲ್ಲಮ್ಮಳ ಜೀವನ ಪ್ರತಿಯೊಬ್ಬರಿಗೂ ಆದರ್ಶಪ್ರಾಯ ಎಂದು ಮಠದ ಪೀಠಾಧಿಪತಿ ಜೇಮಸಿಂಗ್ ಮಹಾರಾಜ ಹೇಳಿದರು. ತಾಲೂಕಿನ ಮಹಾನಗರ ಯಲ್ಲಾಲಿಂಗ ಪುಣ್ಯಾಶ್ರಮದಲ್ಲಿ 35ನೇ ಜಾತ್ರಾ ಮಹೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ‘ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ’ರ ಪುರಾಣ ಪ್ರವಚನ ಶ್ರೀಮಠದ ಪೀಠಾಧಿಪತಿ ಜೇಮಸಿಂಗ್ ಮಹಾರಾಜ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸದ್ಗುರುಗಳ ಕೃಪೆಯಿಂದ ಭಕ್ತಿ ಮತ್ತು ಧರ್ಮದ ಹಾದಿಯಲ್ಲಿ ನಡೆಯುವುದು ಜೀವನದ ಮುಖ್ಯ ಉದ್ದೇಶವಾಗಬೇಕು ಎಂದರು. […]

Continue Reading

ಕರಾಳ ಲೇಬರ್ ಕೋಡ್ ಹಿಂಪಡೆಯಲು ಕಾರ್ಮಿಕರಿಂದ ಬೃಹತ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದ್ಕಾರ್ಮಿಕ ವಿರೋಧಿ ಕರಾಳ ಕಾರ್ಮಿಕ ಸಹಿತೆ ಲೇಬರ್ ಕೋಡ್ ದುಡಿಯುವ ವರ್ಗದ ಮರಣ ಶಾಸನವಾಗಿವೆ ಕೂಡಲೆ ಕೇಂದ್ರ ಸರ್ಕಾರ ಇದನ್ನು ವಾಪಸ್ಸು ಪಡೆಯಬೇಕೆಂದು ಎಐಯುಟಿಯುಸಿ ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ ಎಂ‌.ಜಿ ಆಗ್ರಹಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಗುರುವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ನಡೆದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಉದ್ದೇಶಿಸಿ ಮಾತನಾಡಿದ ಅವರು, ಕೃಷಿ ಕೂಲಿ ಕಾರ್ಮಿಕರು ಮತ್ತು ಕಾರ್ಮಿಕರ ಕಾಯ್ದೆಗಳಾದ ವಿದ್ಯುತ್ ಕಾಯ್ದೆ ತಿದ್ದುಪಡಿ, ಬೀಜ ಕಾಯ್ದೆ, ಭೂಸ್ವಾಧೀನ ಕಾಯ್ದೆ […]

Continue Reading

ಸೇವಾಲಾಲ್ ಜಯಂತಿ ಆಚರಣೆಗೆ ನಿರ್ಧಾರ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದಲ್ಲಿ ಫೆ.15ರಂದು ತಾಲೂಕು ಆಡಳಿತದಿಂದ ಆಯೋಜನೆ ಮಾಡಿರುವ ಬಂಜಾರ ಸಮಾಜದ ಕುಲಗುರು ಸಂತ ಸೇವಾಲಾಲ್ ಮಹಾರಾಜರ 287 ಜಯಂತಿ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಜನರು ಪಾಲ್ಗೊಂಡು ಸಡಗರ, ಸಂಭ್ರಮದಿಂದ ಆಚರಣೆ ಮಾಡಬೇಕು ಎಂದು ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಗೋಪಾಲ ರಾಠೋಡ ಹೇಳಿದ್ದಾರೆ. ಪಟ್ಟಣದಲ್ಲಿ ಶುಕ್ರವಾರ ನಡೆದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು ಆಡಳಿತ ಕೇಂದ್ರ ಪ್ರಜಾಸೌಧ ಅವರಣದಲ್ಲಿ ಬೆಳಗ್ಗೆ 10 ಗಂಟೆಗೆ ಸೇವಾಲಾಲ್ ಮಹಾರಾಜರ ಭಾವಚಿತ್ರದ ಪೂಜೆ ಮತ್ತು ವೇದಿಕೆ […]

Continue Reading