ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಬುಧವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದೀಗ ಘಟನೆಯಲ್ಲಿ ಭಾಗಿಯಾದ ಮೂವರು ಉಗ್ರರ ರೇಖಾಚಿತ್ರವನ್ನು ಭದ್ರತಾ ಸಂಸ್ಥೆ ಬಿಡುಗಡೆ ಮಾಡಿದೆ. ಭದ್ರತಾ ಸಂಸ್ಥೆಯು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ. ಇದೀಗ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಆಧಾರದ ಮೇಲೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡಿಸಲಾಗಿದೆ. ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು […]

Continue Reading

ಬೆಂಗಳೂರಿಗೆ ಬಂದ ಎಸಿ ಎಲೆಕ್ಟ್ರಿಕ್ ಬಸ್: ಮೊದಲ ಬಾರಿಗೆ ರಾಜಧಾನಿಯಲ್ಲಿ ಬಿಎಂಟಿಸಿ ಎಸಿ ಎಲೆಕ್ಟ್ರಿಕ್ ಬಸ್ ಸಂಚಾರ

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಲಿದೆ. ಇದರಿಂದ ತಪ್ಪಿಸಿಕೊಳ್ಳಲು ಪ್ರಯಾಣಿಕರು ಮೆಟ್ರೋ ರೈಲಿನ ಮೊರೆ ಹೋಗುತ್ತಿದ್ದಾರೆ. ಈ ಹಿಂದೆ ಪ್ರತಿದಿನ ಎಂಟು ಲಕ್ಷ ಪ್ರಯಾಣಿಕರು ಸಂಚಾರ ಮಾಡುತ್ತಿದ್ದರೆ, ಬೇಸಿಗೆ ಆರಂಭವಾದ ಮೇಲೆ 9 ಲಕ್ಷ ಪ್ರಯಾಣಿಕರು ಮೆಟ್ರೋದಲ್ಲಿ ಸಂಚಾರ ಮಾಡುತ್ತಿದ್ದಾರೆ. ಬಿಎಂಟಿಸಿ ಅಂದರೆ ಜನರು ಮೂಗು ಮುರಿಯುತ್ತಿದ್ದಾರೆ. ಇದಕ್ಕೆ ಬ್ರೇಕ್ ಹಾಕಲು ಬಿಎಂಟಿಸಿ ಮುಂದಾಗಿದೆ, 320 ಹೊಚ್ಚ ಹೊಸ ಬಸ್​​ಗಳ ಮೊರೆ ಹೋಗಿದೆ. ಈಗಾಗಲೇ ಎಸಿ ಎಲೆಕ್ಟ್ರಿಕ್ ಬಸ್​ಗಳ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ಸದ್ಯದಲ್ಲೇ […]

Continue Reading

ಭೂಮಿಯ ಸಂರಕ್ಷಣೆ ಸಾಮೂಹಿಕ ಜವಾಬ್ದಾರಿ: ಎಚ್.ಬಿ ಪಾಟೀಲ

ಕಲಬುರಗಿ: ಜಗತ್ತಿನ ಸಕಲ ಜೀವರಾಶಿಗಳ ಅಸ್ತಿತ್ವಕ್ಕೆ ಕಾರಣಿಕತೃವಾದ ಭೂಮಿಯು ಅನೇಕ ಕಾರಣಗಳಿಂದ ಗಂಡಾಂತರಕ್ಕೆ ಸಿಲುಕುವ ಮೂಲಕ ಜೀವರಾಶಿಗಳ ಬದುಕಿಗೆ ಅಪಾಯ ಉಂಟಾಗುತ್ತಿದೆ. ಇದು ಹೀಗೆಯೇ ಮುಂದುವರೆದರೆ ಜೀವಿಗಳಿಗೆ ಉಳಿಗಾಲವಿಲ್ಲ. ಆದ್ದರಿಂದ ಇರುವ ಒಂದೆ ಭೂಮಿಯ ಸಂರಕ್ಷಣೆ ಮಾಡುವದು ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ಉಪನ್ಯಾಸಕ, ಪರಿಸರ ಪ್ರೇಮಿ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ‘ವಿಶ್ವ ಭೂಮಿ ದಿನಾಚರಣೆ’ […]

Continue Reading

ವಾಡಿಯಲ್ಲಿ ಆಡೋಣ ಕೆಡಿಸೋಣ ಎಂಬಂತೆ ಸಾಗಿದ 5 ಕೋಟಿ ಕಾಮಗಾರಿ: ಯಾರಿ

ವಾಡಿ: ಪಟ್ಟಣದಲ್ಲಿ ಸುಮಾರು 3 ವರ್ಷಗಳಿಂದ ಸಾಗುತ್ತಿದ್ದ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಳಿಸದೆ ಸಾರ್ವಜನಿಕರಿಗೆ ತೊಂದರೆ ಕೊಡುವದರಲ್ಲಿ ಇಲ್ಲಿನ ಗುತ್ತಿಗೆದಾರ ಹಾಗೂ ಲೋಕೋಪಯೋಗಿ ಅನುಷ್ಠಾನ ಅಧಿಕಾರಿಗಳು ನಿರತರಾಗಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಲ್ ಎತ್ತುವ ಸಲುವಾಗಿ ಕಾಮಗಾರಿಯ ವೆಚ್ಚದ ಬೋರ್ಡ್ ಹಾಕಿ, ಸುಮಾರ 40 ವಿದ್ಯುತ್ ದ್ವೀಪದ ಕಂಬಗಳನ್ನು ಬೇಕಾಬಿಟ್ಟಿಯಾಗಿ ಅಳವಡಿಸಿದ್ದರು. ಮೊನ್ನೆ ಗಾಳಿಗೆ ರಸ್ತೆ ಮಧ್ಯ ಚೆಲ್ಲಾಪಿಲ್ಲಿಯಾಗಿ ಬಿದ್ದಾಗ ಮತ್ತು ಈ ಕಳಪೆ ಕಾಮಗಾರಿ ಬಗ್ಗೆ ನಾವು ಜಿಲ್ಲಾಧಿಕಾರಿಗಳಿಗೆ ದೂರು […]

Continue Reading

ಕನ್ನಡಕ್ಕೆ ತ.ರಾ ಸುಬ್ಬರಾವ್ ಕೊಡುಗೆ ಅನನ್ಯ

ಕಲಬುರಗಿ: ಕಥೆ, ಕಾದಂಬರಿ, ನಾಟಕ, ಸಂಪಾದನೆ ಸೇರಿದಂತೆ ವಿವಿಧ ಪ್ರಕಾರದ ಸಾಹಿತ್ಯ ಕೃಷಿ ಮಾಡುವ ಮೂಲಕ ತ.ರಾ ಸುಬ್ಬರಾವ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮದೆಯಾದ ಅನನ್ಯ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ತ.ರಾ ಸುಬ್ಬರಾವ್‌ರ 105ನೇ ಜನ್ಮದಿನೋತ್ಸವ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ತರಾಸು ಅವರು ದೊಡ್ಡ […]

Continue Reading

ಸಿದ್ದಲಿಂಗೇಶ್ವರ ಸಂಸ್ಥಾನ ಮಠದಿಂದ ಶಿಕ್ಷಣ ಕ್ರಾಂತಿ: ಮಾತೋಶ್ರೀ ಡಾ.ದಾಕ್ಷಾಯಣಿ ಎಸ್ ಅಪ್ಪ

ಚಿತ್ತಾಪುರ: ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಾ ಕಳೆದ 42 ವರ್ಷಗಳಿಂದ ಈ ಭಾಗದ ಜನರ ಆಶಾಕಿರಣವಾಗಿರುವ ಶ್ರೀ ಸಿದ್ದಲಿಂಗೇಶ್ವರ ಶಿಕ್ಷಣ ಸಂಸ್ಥೆಯು ಶಿಕ್ಷಣ ಕ್ರಾಂತಿ ಮಾಡುತ್ತಿದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ಚೇರ್ಪರ್ಸನ್ ಡಾ. ದಾಕ್ಷಾಯಣಿ ಶರಣಬಸಪ್ಪ ಅಪ್ಪ ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಸಿದ್ದಲಿಂಗೇಶ್ವರ ವಸತಿ ನಿಲಯ ಮತ್ತು ಪಾಕಶಾಲೆಯ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿ ಅವರು, ಸಿದ್ದಲಿಂಗೇಶ್ವರ ತ್ರಿವಿಧ ದಾಸೋಹದ ಮೂಲಕ ಈ ಭಾಗದಲ್ಲಿ ಉತ್ತಮ ಸೇವೆ […]

Continue Reading

ರಾಜ್ಯದಲ್ಲಿ 958 ನಕಲಿ ವೈದ್ಯರು ಪತ್ತೆ

ಬೆಂಗಳೂರು: ನಮ್ಮ ರಾಜ್ಯದಲ್ಲಿ ನಕಲಿ ಡಾಕ್ಟರ್‌ಗಳ ಹಾವಳಿ ಹೆಚ್ಚಾಗಿದೆ. ಆರೋಗ್ಯ ಇಲಾಖೆ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಬರೋಬ್ಬರಿ 958 ನಕಲಿ ವೈದ್ಯರು ಕೆಲಸ ಮಾಡುತ್ತಿದ್ದಾರೆ ಎಂದು ವರದಿ ನೀಡಿದೆ. ಅದರಲ್ಲಿ ಬೆಂಗಳೂರಿನ ನೆರೆಹೊರೆ ಜಿಲ್ಲೆಗಳಾದ ಕೋಲಾರ ಹಾಗೂ ತುಮಕೂರು ಸೇರಿದಂತೆ ಬೀದರ್ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಮಿತಿ ಮೀರಿದೆ ಎಂದು ವರದಿಯಿಂದ ತಿಳಿದುಬಂದಿದೆ. ಈ ನಕಲಿ ವೈದ್ಯರು ಸಣ್ಣ ಪುಟ್ಟ ಶೀತ, ಜ್ವರ, ಮೈಕೈ ನೋವು ಇತ್ಯಾದಿ ರೋಗಗಳಾದ ಹೈಡೋಸ್ ಔಷಧಿಗಳನ್ನು ಕೊಟ್ಟು ಜನರ ಜೀವದ […]

Continue Reading

ಫೇಲ್ ಮಾಡಿದ್ರೆ ನನ್​ ಲವ್​ ಹಾಳಾಗುತ್ತೆ, ಪ್ಲೀಸ್​ ಪಾಸ್​ ಮಾಡಿ: SSLC ವಿದ್ಯಾರ್ಥಿಯ ಫೋಟೋ ವೈರಲ್​ ಬಗ್ಗೆ ಅಧಿಕಾರಿಗಳ ಸ್ಪಷ್ಟನೆ

ಬೆಳಗಾವಿ: ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ನಡೆಯುತ್ತಿದೆ. ಪ್ರತಿ ಬಾರಿಯೂ ಉತ್ತರಪತ್ರಿಕೆಗಳಲ್ಲಿ ವಿದ್ಯಾರ್ಥಿಗಳು ವಿಶೇಷ ಭಿನ್ನಹ ಸಲ್ಲಿಸುವುದು ಮಾಮೂಲಿ. ಈ ಬಾರಿಯೂ ಸಹ ವಿದ್ಯಾರ್ಥಿಗಳು ತರಹೆವಾರಿ ಕೋರಿಕೆ ಸಲ್ಲಿಸಿದ್ದಾರೆ. ಇದರ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್​ ಆಗುತ್ತಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ಮೌಲ್ಯಮಾಪನ ಕೇಂದ್ರದಲ್ಲಿ ಪತ್ತೆಯಾಗಿದೆ ಎನ್ನಲಾದ ವಿದ್ಯಾರ್ಥಿಯೊಬ್ಬರ ಉತ್ತರಪತ್ರಿಕೆಯು ವಿಶೇಷ ಗಮನ ಸೆಳೆದಿದೆ. ಅದರಲ್ಲಿ ಆತ 500 ರೂ ನೋಟೊಂದು ಅಂಟಿಸಿ, “ಹೇಗಾದರೂ ಮಾಡಿ ನನ್ನನ್ನು ಪಾಸ್​ ಮಾಡಿ. ಇಲ್ಲವಾದಲ್ಲಿ […]

Continue Reading

ರಾಷ್ಟ್ರದ ಅಭಿವೃದ್ಧಿಗೆ ಸೃಜನಶೀಲತೆ ಮತ್ತು ನಾವಿನ್ಯತೆ ಅಗತ್ಯ

ಕಲಬುರಗಿ: ಇಂದಿನ ಯುವಕರು ಕೇವಲ ಪದವಿ, ಪ್ರಮಾಣಪತ್ರ ಪಡೆದರೆ ಸಾಲದು. ವಿಷಯದ ಜ್ಞಾನವನ್ನು ಕಾರ್ಯರೂಪದಲ್ಲಿ ತರುವ ಕೌಶಲ್ಯ ಅಳವಡಿಸಿಕೊಳ್ಳಬೇಕು. ಬಹುವಿಧ ಆಯಾಮಗಳ ಚಿಂತನೆ, ಹೊಸ ಆವಿಷ್ಕಾರಗನ್ನು ಮಾಡುವ ಸೃಜನಶೀಲತೆ ಮತ್ತು ನಾವಿನ್ಯತೆ ಬೆಳೆಸಿಕೊಳ್ಳಬೇಕು. ಇವುಗಳು ರಾಷ್ಟ್ರದ ಅಭಿವೃದ್ಧಿಗೆ ಅಗತ್ಯವಾಗಿವೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಭಾನುವಾರ ಜರುಗಿದ ‘ಅಂತರಾಷ್ಟ್ರೀಯ ಸೃಜನಶೀಲತೆ ಮತ್ತು […]

Continue Reading

ಚಿತ್ತಾಪುರದಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ: ಎಸ್ಪಿ ಭೇಟಿ, ಪರಿಶೀಲನೆ

ಚಿತ್ತಾಪುರ: ಪಟ್ಟಣದ ಹಳೆಯ ಕೋರ್ಟ್ ಎದುರುಗಡೆಯ ಲಕ್ಷ್ಮಿ ಅಟೋ ಮೊಬೈಲ್ ಅಂಗಡಿ ಸಮೀಪ ಅಪರಿಚಿತ ವ್ಯಕ್ತಿಯ ಕೊಲೆಯಾದ ವಿಷಯ ತಿಳಿಯುತ್ತಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಡಿಶನಲ್ ಎಸ್ಪಿ ಮಹೇಶ ಮೇಘಣ್ಣವರ್, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್‌ಐ ಶ್ರೀಶೈಲ್ ಅಂಬಾಟಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಇದ್ದರು. ಘಟನೆಯ ಬಗ್ಗೆ ತಿಳಿಯುತ್ತಲೇ ಪತ್ತೆ ಕಾರ್ಯ ಕೈಗೊಳ್ಳಲಾಗಿದೆ, ಲಾಡ್ಡಿಂಗ್ ಕ್ರಾಸ್ ಸಮೀಪದ ಎಲ್ಲಾ ಸಿಸಿ […]

Continue Reading