ವಾಡಿ: ಬಿಜೆಪಿ ಕಛೇರಿಯಲ್ಲಿ 126ನೇ ಮನ್ ಕಿ ಬಾತ್ ವೀಕ್ಷಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 126ನೇ ಮನ್ ಕಿ ಬಾತ್ ಕಾರ್ಯಕ್ರಮ ಮುಖಂಡರು ವಿಕ್ಷೀಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಮೋದಿ ಅವರ ಮನ್ ಕಿ ಬಾತ್ ನಲ್ಲಿ ಭಗತ್ ಸಿಂಗ, ಎಸ್.ಎಲ್ ಭೈರಪ್ಪನವರ ಬಗ್ಗೆ ಯುವಕರು ಹೆಚ್ಚಾಗಿ ಅರಿತು ದೇಶಾಭಿಮಾನ ಮೈಗೂಡಿಸಿಕೊಳ್ಳುವಂತ ಅನೇಕ ವಿಷಯಗಳು ಮನ್ ಕಿ ಬಾತ್ ಮುಖಾಂತರ ನಮಗೆ ಧಾರೆಯೆರೆಯುತ್ತಿರುವುದು ನಮ್ಮ ದೇಶ ಸೇವೆಗೆ ಇನ್ನಷ್ಟು ಸ್ಪೂರ್ತಿ ಸಿಗುವಂತಾಗಿದೆ ಎಂದರು. ಈ ಸಂದರ್ಭದಲ್ಲಿ ಪುರಸಭೆ ಮಾಜಿ […]

Continue Reading

ವಾಡಿ: ನಿರಂತರ ಮಳೆಗೆ ಹಸು ಸಾವು

ವಾಡಿ: ಪಟ್ಟಣದ ವಾರ್ಡ್ ನಂ.15ರ ಮರಾಠಿ ಗಲ್ಲಿಯ ಸತೀಶ್ ಪಂಗಡವಾಲ ಅವರ ಹಸು ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಸಾವಿಗೀಡಾಗಿದೆ. ಮನೆಯ ಮುಂಭಾಗದಲ್ಲಿ ಕಟ್ಟಿದ್ದ ಹಸು ಮಳೆಯಿಂದ ತೀವ್ರ ಅಸ್ವಸ್ಥತಗೊಂಡಿತ್ತು. ತಕ್ಷಣ ಪಶು ವೈದ್ಯಾಧಿಕಾರಿಗೆ ಫೋನ್ ಮೂಲಕ ಸಂಪರ್ಕಿಸಿದಾಗ ಅವರು ಹೇಳಿದಂತೆ ಪ್ರಥಮ ಚಿಕಿತ್ಸೆಗೆ ಮುಂದಾಗುವ ಹೊತ್ತಿಗೆ ಹಸು ಸಾವನ್ನಪ್ಪಿದೆ. ಕಳೆದ ಒಂದು ವರ್ಷದ ಹಿಂದೆ ಈ ಹಸುವನ್ನು ಕುಟುಂಬದ ಉಪಜೀವನ ನಿರ್ವಹಿಸಲು 80 ಸಾವಿರ ಸಾಲ ಮಾಡಿ ಖರೀದಿಸಿದ್ದರು, ಈಗ ಸಂಭವಿಸಿದ ಈ ಅನಾಹುತದಿಂದ ದಿಕ್ಕೆ […]

Continue Reading

ಶಹಾಬಜಾರ: ಯುಪಿಎಚ್‌ಸಿಯಲ್ಲಿ ವಿಶ್ವ ರೇಬಿಸ್ ದಿನಾಚರಣೆ

ಕಲಬುರಗಿ: ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ‘ವಿಶ್ವ ರೇಬಿಸ್ ದಿನಾಚರಣೆ’ ಜರುಗಿತು. ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಮಾತನಾಡಿ, ರೇಬಿಸ್ ಕಾಯಿಲೆಯು ಪ್ರಾಣಿಗಳಿಂದ ಮಾನವರಿಗೆ ಬರುವ ಕಾಯಿಲೆಯಾಗಿದೆ. ಜ್ವರ, ಆಯಾಸ, ತುರಿಕೆ, ಕೆಮ್ಮು, ಗಂಟಲು ನೋವು, ನರಗಳಲ್ಲಿ ನೋವು, ವಾಂತಿ ಇವು ಕಾಯಿಲೆಯ ಲಕ್ಷಣಗಳಾಗಿವೆ. ಇದು ತೊಂದರೆ ಉಂಟುಮಾಡುತ್ತದೆ. ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯಬೇಕು ಮತ್ತು ಮುಂಜಾಗ್ರತೆ ವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ […]

Continue Reading

ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರವಾಸೋದ್ಯಮದ ಪಾತ್ರ ಅನನ್ಯ: ಎಚ್.ಬಿ ಪಾಟೀಲ

ಕಲಬುರಗಿ: ದೇಶ ಸುತ್ತು, ಕೋಶ ಓದು ಎಂಬ ಮಾತಿನಂತೆ ಸುಕ್ಷೇತ್ರಗಳು, ಸ್ಮಾರಕಗಳು, ನೈಸರ್ಗಿಕ ತಾಣಗಳು, ಐತಿಹಾಸಿಕ ಸ್ಥಳಗಳಿಗೆ ತೆರಳಿ ವೀಕ್ಷಣೆ ಮಾಡುವುದರಿಂದ ನಮ್ಮ ಇತಿಹಾಸ, ಪರಂಪರೆ, ಕಲೆ, ಸಾಹಿತ್ಯ, ಸಂಸ್ಕೃತಿ ತಿಳಿಯುತ್ತದೆ. ಪ್ರವಾಸೋದ್ಯಮದಿಂದ ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗಗಳನ್ನು ದೊರೆಯುತ್ತವೆ. ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರವಾಸೋದ್ಯಮದ ಪಾತ್ರ ಮಹತ್ವದ್ದಾಗಿದೆ ಎಂದು ಅರ್ಥಶಾಸ್ತ್ರದ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ನಾಕಾ ಸಮೀಪದ ಐತಿಹಾಸಿಕ ಹಾಗೂ ಬಹು ಪುರಾತನ ಸ್ಥಂಬ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ಸಮಾಜ ಸೇವಾ […]

Continue Reading

ಪ್ರವಾಹ ಪೀಡಿತ ಹಳೆ ಹೆಬ್ಬಾಳ ಗ್ರಾಮದ ಜನರ ಸಮಸ್ಯೆ ಆಲಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ಮಳೆ ಹಾಗೂ ಪ್ರವಾಹ ಪೀಡಿತ ಹಳೆ ಹೆಬ್ಬಾಳ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ನಿರಂತರ ಸುರಿವ ಮಳೆಯ ಮಧ್ಯೆಯೇ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ತಾಲೂಕಿನ ಹಳೆ ಹೆಬ್ಬಾಳ ಗ್ರಾಮದಲ್ಲಿ ಮಳೆಯಿಂದ ಬಿದ್ದ ಮನೆಯನ್ನು ಪರಿಶೀಲಿಸಿ ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಳೆ ಹೆಬ್ಬಾಳ ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು ಸಚಿವರ ಮುಂದೆ ಬೇಡಿಕೆ ಇರಿಸಿದರು. […]

Continue Reading

ಚಿತ್ತಾಪುರ: ಸಂತ್ರಸ್ತ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ

ಚಿತ್ತಾಪುರ: ಪಟ್ಟಣದ ಬಾಹರ್ ಪೇಟ್ ಮತ್ತು ಚಿತ್ತಾಪುರ ತಾಲೂಕಿನ ಗುಂಡಗುರ್ತಿ, ಬಳವಡಗಿ ಗ್ರಾಮಗಳಲ್ಲಿ ಮನೆಗಳಲ್ಲಿ ನೀರು ನುಗ್ಗಿದ ಸಂತ್ರಸ್ತ ಕುಟುಂಬಗಳಿಗೆ ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರು ಕಳುಹಿಸಿರುವ 500 ಆಹಾರ ಧಾನ್ಯದ ಕಿಟ್’ಗಳನ್ನು ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್ ವಿತರಣೆ ಮಾಡಿದರು. ನಂತರ ಮಾತನಾಡಿದ ಅವರು, ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರು ಸದಾ ಬಡವರ ಏಳಿಗೆಗಾಗಿ ಶ್ರಮಿಸುವ ನಾಯಕರಾಗಿದ್ದಾರೆ. ಬಡವರಿಗೆ ಏನೇ ತೊಂದರೆಯಾದರೆ ಕೂಡಲೆ ಅವರಿಗೆ ಪರಿಹಾರ ರೂಪದಲ್ಲಿ ಸಹಾಯ ಮಾಡುವ […]

Continue Reading

ಸುರಕ್ಷಿತ ಗರ್ಭನಿರೋಧಕ ಆಯ್ಕೆಗಳ ಬಗ್ಗೆ ಜಾಗೃತಿ ಅಗತ್ಯ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಜನನ ನಿಯಂತ್ರಣದಲ್ಲಿ ಸುರಕ್ಷಿತ ಗರ್ಭನಿರೋಧಕ ಆಯ್ಕೆಗಳು ಮತ್ತು ವಿಧಾನಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿನ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಕೇಂದ್ರ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ “ವಿಶ್ವ ಗರ್ಭನಿರೋಧಕ/ಜನನ ನಿಯಂತ್ರಣ ದಿನಾಚರಣೆ”ಯಲ್ಲಿ ಮಾತನಾಡಿದ ಅವರು,ಜನಸಂಖ್ಯಾ ಸ್ಪೋಟದಿಂದ ತತ್ತರಿಸಿರುವ ವಿಶ್ವದ ಬಹುತೇಕ ರಾಷ್ಟ್ರಗಳಿಗೆ ಜನನ ನಿಯಂತ್ರಣ, ಕುಟುಂಬ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಅಗತ್ಯವಾಗಿದೆ ಎಂದರು‌. ಅನಪೇಕ್ಷಿತ ಗರ್ಭಧಾರಣೆಗಳನ್ನು […]

Continue Reading

ಪರಿಸರದ ಆರೋಗ್ಯ ಕಾಪಾಡುವುದು ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ಪರಿಸರ ಸ್ವಚ್ಛತೆ ಕಾಪಾಡುವುದು, ವ್ಯಾಪಕವಾಗಿ ಗಿಡಗಳನ್ನು ನೆಟ್ಟು ಪೋಷಿಸುವುದು, ಮಾಲಿನ್ಯ ನಿಯಂತ್ರಿಸಿ ಪರಿಸರದ ಆರೋಗ್ಯ ಕಾಪಾಡುವುದು ಅಗತ್ಯವಾಗಿದೆ ಎಂದು ಉಪನ್ಯಾಸಕ, ಪರಿಸರ ಪ್ರೇಮಿ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ವಿಶ್ವ ಪರಿಸರ ಆರೋಗ್ಯ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನ ಸಕಲ ಜೀವರಾಶಿಗಳು ಉಳಿದು, ಸಮೃದ್ಧವಾಗಿ ಬೆಳವಣಿಗೆಯಾಗಬೇಕಾದರೆ ಪರಿಸರದ ಪಾತ್ರ ಪ್ರಮುಖವಾಗಿದೆ ಎಂದರು. ವಿವಿಧ […]

Continue Reading

ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರ, ಭೀಮಾತೀರದಲ್ಲಿ ಪ್ರವಾಹ ಸ್ಥಿತಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ವರುಣನ ಆರ್ಭಟಕ್ಕೆ ಉತ್ತರ ಕರ್ನಾಟಕ ತತ್ತರಿಸಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಭೀಮಾತೀರದಲ್ಲಿ ಆತಂಕ ಮೂಡಿಸಿದೆ. ಮಹಾರಾಷ್ಟ್ರದ ಉಜನಿ, ವೀರಾ ಜಲಾಶಯದಿಂದ 2.90 ಲಕ್ಷ ಕ್ಯೂಸೆಕ್ಸ್ ನೀರನ್ನು ಭೀಮಾ ನದಿಗೆ ಹರಿಸಲಾಗಿದೆ. ಇದರಿಂದಾಗಿ ವಿಜಯಪುರ ಜಿಲ್ಲೆಯ ಭೀಮಾನದಿ ಪಾತ್ರದಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ಅಲಮೇಲ ತಾಲೂಕಿನ ದೇವಣಗಾಂವನ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ. ಹಳೆಯ ತಾವರಖೇಡ ಗ್ರಾಮದ ಮನೆಗಳಿಗೂ ನೀರು ನುಗ್ಗಿದೆ. ಕಲಬುರಗಿಯ ಗಾಣಗಾಪೂರದ ಸಂಗಮ ಕ್ಷೇತ್ರದ ಪಾರಾಯಣ ಮಂಟಪ, […]

Continue Reading

ಚಿತ್ತಾಪುರ: ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಚಿತ್ತಾಪುರ: ಗುರುವಾರ ರಾತ್ರಿಯಿಂದ ಶುಕ್ರವಾರ ಮಧ್ಯಾಹ್ನದವರೆಗೆ ನಿರಂತರವಾಗಿ ಸುರಿದ ಮಳೆಗೆ ತಾಲೂಕಿನಾದ್ಯಂತ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಜನರು ಮನೆಯಿಂದ ಹೊರಗೆ ಬಾರದಂತೆ ಸುರಿದ ಮಳೆಯಿಂದ ಬೆಳಗ್ಗೆ ಜೀವನಾವಶ್ಯಕ ಸಾಮಗ್ರಿ ಖರೀದಿಸಲು, ದೈನಂದಿನ ಜೀವನಕ್ಕೆ ತೀವ್ರ ಅಡಚಣೆ ಉಂಟಾಯಿತು. ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಲು ಮಳೆಯಿಂದ ತೀವ್ರ ತೊಂದರೆ ಅನುಭವಿಸಿದರು. ಮಳೆಯಿಂದ ಹೊಲಗದ್ದೆಗಳು ನೀರುಮಯವಾಗಿವೆ. ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ಮಳೆಯು ಕೂಲಿಕಾರ್ಮಿಕರಿಗೆ ಕೆಲಸವಿಲ್ಲದೆ ಮನೆಯಲ್ಲಿಯೆ ಇರುವಂತೆ ಮಾಡಿದೆ.

Continue Reading