ಚಿತ್ತಾಪುರ: ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಚಿತ್ತಾಪುರ: ಗುರುವಾರ ರಾತ್ರಿಯಿಂದ ಶುಕ್ರವಾರ ಮಧ್ಯಾಹ್ನದವರೆಗೆ ನಿರಂತರವಾಗಿ ಸುರಿದ ಮಳೆಗೆ ತಾಲೂಕಿನಾದ್ಯಂತ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಜನರು ಮನೆಯಿಂದ ಹೊರಗೆ ಬಾರದಂತೆ ಸುರಿದ ಮಳೆಯಿಂದ ಬೆಳಗ್ಗೆ ಜೀವನಾವಶ್ಯಕ ಸಾಮಗ್ರಿ ಖರೀದಿಸಲು, ದೈನಂದಿನ ಜೀವನಕ್ಕೆ ತೀವ್ರ ಅಡಚಣೆ ಉಂಟಾಯಿತು. ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಲು ಮಳೆಯಿಂದ ತೀವ್ರ ತೊಂದರೆ ಅನುಭವಿಸಿದರು. ಮಳೆಯಿಂದ ಹೊಲಗದ್ದೆಗಳು ನೀರುಮಯವಾಗಿವೆ. ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ಮಳೆಯು ಕೂಲಿಕಾರ್ಮಿಕರಿಗೆ ಕೆಲಸವಿಲ್ಲದೆ ಮನೆಯಲ್ಲಿಯೆ ಇರುವಂತೆ ಮಾಡಿದೆ.

Continue Reading

ಬಿಗ್ ಬಾಸ್ ವಿನ್ನರ್ ಹಣಮಂತ ಲಮಾಣಿ ಮತ್ತು ತಂಡ ನಾಳೆ ಚಿತ್ತಾಪುರಕ್ಕೆ ಆಗಮನ

ಚಿತ್ತಾಪುರ: ಪಟ್ಟಣದ ಸ್ಟೇಷನ್‌ ತಾಂಡಾದಲ್ಲಿ 25ನೇ ವರ್ಷದ ನವರಾತ್ರಿ ಉತ್ಸವದ ಬೆಳ್ಳಿ ಮಹೋತ್ಸವ ನಿಮಿತ್ಯ ನಾಳೆ ಸಂಜೆ ಬಿಗ್ ಬಾಸ್ ವಿನ್ನರ್ ಹಣಮಂತ ಲಮಾಣಿ ಮತ್ತು ತಂಡ ಆಗಮಿಸುತ್ತಿದ್ದಾರೆ ಎಂದು ನವರಾತ್ರಿ ಉತ್ಸವ ಸಮಿತಿಯ ಅಧ್ಯಕ್ಷ ವಿನೋದ ಪವಾರ ಹೇಳಿದ್ದಾರೆ. ಸ್ಟೇಷನ್ ತಾಂಡಾದ ಸೇವಾಲಾಲ್, ಜಗದಂಬಾ ದೇವಸ್ಥಾನದ ಆವರಣದಲ್ಲಿ ನಾಳೆ ಸಂಜೆ 7.30ಕ್ಕೆ ಕರ್ನಾಟಕದ ಮನೆ ಮಗ ಬಿಗ್ ಬಾಸ್ ವಿಜೇತ ಹಣಮಂತ ಲಮಾಣಿ ಮತ್ತು ತಂಡದಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಜರುಗುವುದು, ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ […]

Continue Reading

ನೃತ್ಯ ಸ್ಪರ್ಧೆಯಲ್ಲಿ ವಿಜೇತ ತಂಡಕ್ಕೆ ಬಹುಮಾನ ವಿತರಣೆ

ಚಿತ್ತಾಪುರ: ನವರಾತ್ರಿ ಉತ್ಸವದ ನಿಮಿತ್ಯ ಏರ್ಪಡಿಸಲಾಗಿದ್ದ ನೃತ್ಯ ಸ್ಪರ್ಧೆಯಲ್ಲಿ ವಿಜೇತ ತಂಡಕ್ಕೆ ಬಹುಮಾನ ವಿತರಿಸಲಾಯಿತು. ಪಟ್ಟಣದ ಸ್ಟೇಷನ್ ತಾಂಡಾದ ತುಕಾರಾಮ ಖೀರು ನಾಯಕ್ ಏರಿಯಾದಲ್ಲಿ ಮೂರನೇ ವರ್ಷದ ನವರಾತ್ರಿ ಉತ್ಸವ ಕಾರ್ಯಕ್ರಮದ ನಿಮಿತ್ಯ ಶಾಲೆಗಳ ಮಕ್ಕಳ ಕಲಾ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ ಪ್ರಾರ್ಥನಾ ಶಾಲೆಯ ವಿದ್ಯಾರ್ಥಿಗಳು ಮತ್ತು ಎಕ್ಸಲೆಂಟ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಂಕರ್ ಚೋಕ್ಲಾ ಚೌವ್ಹಾಣ್, ರವಿ ಜಯರಾಮ್ ರಾಠೋಡ, ವೆಂಕಿ ಜಾಧವ್, ವಿನೋದ್ ಚೋಕ್ಲಾ ಚೌಹಾನ್ ಮತ್ತು ರಮೇಶ್ ಹನುಮ ಪವಾರ ಕಾರ್ಯಕ್ರಮದ ನಿರ್ಣಾಯಕರಾಗಿದ್ದರು. […]

Continue Reading

ನಾಳೆ ಬಿಗ್ ಬಾಸ್ ವಿನ್ನರ್ ಹನುಮಂತ ಲಂಬಾಣಿ ಮತ್ತು ತಂಡದಿಂದ ಸಂಗೀತ ರಸಮಂಜರಿ

ಚಿತ್ತಾಪುರ: ಪಟ್ಟಣದ ಸ್ಟೇಷನ್‌ ತಾಂಡಾದಲ್ಲಿ 25ನೇ ವರ್ಷದ ಬೆಳ್ಳಿ ಮಹೋತ್ಸವದ ನವರಾತ್ರಿ ಉತ್ಸವವು ಸಡಗರದಿಂದ ಜರುಗುತ್ತಿದ್ದು, ಇದರ ಅಂಗವಾಗಿ ನಾಳೆ ಸಂಗೀತ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಜಗದೀಶ ಚವ್ಹಾಣ್ ಹೇಳಿದ್ದಾರೆ. 25ನೇ ವರ್ಷದ ಬೆಳ್ಳಿ ಮಹೋತ್ಸವದ ನವರಾತ್ರಿ ಉತ್ಸವ ನಿಮಿತ್ಯ ಸೆ.27 ರಂದು ಸಂಜೆ 7.30ಕ್ಕೆ ಕರ್ನಾಟಕದ ಮನೆ ಮಗ ಬಿಗ್ ಬಾಸ್ ವಿನ್ನರ್ ಹನುಮಂತ ಲಂಬಾಣಿ ಮತ್ತು ತಂಡದಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮ […]

Continue Reading

ಪ್ರತಿಯೊಬ್ಬರಲ್ಲಿ ರಾಷ್ಟ್ರಪ್ರಜ್ಞೆ ಮೈಗೂಡಲಿ: ಡಾ.ಸಿದ್ದಲಿಂಗ ಶ್ರೀ

ಕಲಬುರಗಿ: ಪ್ರತಿಯೊಬ್ಬರು ಧರ್ಮ ಮತ್ತು ಪ್ರದೇಶಕ್ಕೆ ಪ್ರಾತಿನಿಧ್ಯ ನೀಡದೆ, ಎಲ್ಲರು ಭಾರತೀಯರು ಒಂದೆ ಎಂಬ ರಾಷ್ಟ್ರಪ್ರಜ್ಞೆ ಮೈಗೂಡಿಸಿಕೊಳ್ಳಬೇಕು ಎಂದು ಯಡ್ರಾಮಿ ವಿರಕ್ತ ಮಠದ ಪೂಜ್ಯ ಡಾ.ಸಿದ್ದಲಿಂಗ ಸ್ವಾಮೀಜಿ ಹೇಳಿದರು. ಜೇವರ್ಗಿ ಪಟ್ಟಣದ ಸಜ್ಜನ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ‘ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ, ಶಿಕ್ಷಕರ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸತ್ಕಾರ’ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ತಂದೆ-ತಾಯಿ, ಗುರು-ಹಿರಿಯರು, ದೇಶಕ್ಕೆ ಗೌರವ ನೀಡಬೇಕು. ವಿದ್ಯಾರ್ಥಿ ದಿಸೆಯಿಂದಲೇ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಕರು […]

Continue Reading

ತಿಂಡಿ ತಿನ್ನಲೂ ಒಂದು ಗಂಟೆ ಬೇಕಿತ್ತು, ಆತ್ಮಹತ್ಯೆ ಯೋಚನೆ ಬಂದಿತ್ತು: ಜೀವನದಲ್ಲಿ ಕಾಡಿದ ನರರೋಗದ ಬಗ್ಗೆ ಸಲ್ಮಾನ್ ಖಾನ್ ಮಾತು

ತಿಂಡಿ ತಿನ್ನಲೂ ನನಗೆ ಗಂಟೆಗಳ ಅವಧಿ ಬೇಕಿತ್ತು, ಆತ್ಮಹತ್ಯೆ ಯೋಚನೆಗಳು ಬಂದಿದ್ದವು ಎಂದು ಜೀವನದಲ್ಲಿ ಅನುಭವಿಸಿದ ನರರೋಗದ ನರಕಯಾತನೆ ಬಗ್ಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮಾತನಾಡಿದ್ದಾರೆ. ‘ಟು ಮಚ್’ ಎಂಬ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನರದ ಅಸ್ವಸ್ಥತೆಯಿಂದಾಗಿ ಉಂಟಾಗಿದ್ದ ಟ್ರೈಜಿಮಿನಲ್ ನರರೋಗದ ಬಗ್ಗೆ, ತಾವು ಅನುಭವಿಸಿದ ಯಾತನೆ ಬಗ್ಗೆ ಹೇಳಿಕೊಂಡಿದ್ದಾರೆ. ಇದು ಸಾಮಾನ್ಯ ಜೀವನದ ಮೇಲೆಯೂ ತೀವ್ರವಾಗಿ ಪರಿಣಾಮ ಬೀರಿತ್ತು. ತಿನ್ನುವದರಿಂದ ಹಿಡಿದು ಎಲ್ಲವನ್ನೂ ಕಷ್ಟವನ್ನಾಗಿಸಿತ್ತು ಎಂದು ತಿಳಿಸಿದ್ದಾರೆ. 2007ರಲ್ಲಿ `ಪಾರ್ಟ್ನರ್’ ಸಿನಿಮಾದ ಸೆಟ್‌ನಲ್ಲಿ ಈ […]

Continue Reading

ವಾಡಿ: ಪಂಡಿತ ದೀನ್‍ದಯಾಳ್’ರ 109ನೇ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪಂಡಿತ ದೀನ್‍ದಯಾಳ್ ಉಪಾಧ್ಯಾಯರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪಂಡಿತ ದೀನ್‍ದಯಾಳ್ ಉಪಾಧ್ಯಾಯರು ಕಾಂಗ್ರೆಸ್ಸಿಗೆ ಪರ್ಯಾಯವಾಗಿ ಭಾರತೀಯ ಜನಸಂಘ ಎಂಬ ರಾಜಕೀಯ ಶಕ್ತಿಯನ್ನು ಪೋಷಿಸಿದರು, ಅವರು ಕಾಲವಾದ ನಂತರ ಭಾರತೀಯ ಜನಸಂಘವು ಭಾರತೀಯ ಜನತಾ ಪಕ್ಷವಾಗಿ ಮಾರ್ಪಟ್ಟು ಇಂದಿನ ಬೃಹತ್ ಬಿಜೆಪಿ ಉದಯಕ್ಕೆ ಕಾರಣವಾಯಿತು ಎಂದರು. ಅವರ ಮಾನವತಾವಾದ ನಮ್ಮ ಪಕ್ಷಕ್ಕೆ ಒಂದು ಸೈದ್ಧಾಂತಿಕ ವೈಚಾರಿಕತೆ […]

Continue Reading

ನಿಸ್ವಾರ್ಥ ಸೇವೆಯಿಂದ ಸಮಾಜ ಪರಿವರ್ತಿಸಲು ಸಾಧ್ಯ

ಸುದ್ದಿ ಸಂಗ್ರಹ ಶಹಬಾದ ಸಮಾಜದಲ್ಲಿ ಪ್ರತಿಯೊಬ್ಬರು ನಿಸ್ವಾರ್ಥ ಸೇವೆ ಸಲ್ಲಿಸಿದಾಗ ಮಾತ್ರ ಸಮಾಜ ಪರಿವರ್ತಿಸಲು ಸಾಧ್ಯ ಎಂದು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಹನುಮಂತಪ್ಪ ಬಿ ಸೇಡಂಕರ ಹೇಳಿದರು. ನಗರದ ಹೈ.ಕ ಶಿಕ್ಷಣ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಇಂದು ತೆಗೆದುಕೊಳ್ಳುವ ನಿರ್ಧಾರ, ನಾಳೆ ಸಮಾಜ ಪರಿವರ್ತಿಸುವ ಶಕ್ತಿ ಹೊಂದಿದೆ. ಸೇವಾ ಮನೋಭಾವವು ಬದುಕನ್ನು ಶ್ರೀಮಂತಗೊಳಿಸುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹೈ.ಕ ಶಿಕ್ಷಣ ಸಂಸ್ಥೆಯ […]

Continue Reading

ಆರ್ಥಿಕ ಬೆಳವಣಿಗೆಗೆ ಮೇಕ್ ಇನ್ ಇಂಡಿಯಾ ಪೂರಕ

ಕಲಬುರಗಿ:  ಭಾರತದಲ್ಲಿ ವಿನ್ಯಾಸ, ತಯಾರಿಕೆ ಮತ್ತು ಜೋಡಣೆಯನ್ನು ಉತ್ತೇಜಿಸಲು, ವ್ಯಾಪಾರ-ವ್ಯವಹಾರ ವೃದ್ಧಿಗೆ  ಭಾರತ ಸರ್ಕಾರವು ಪ್ರಾರಂಭಿಸಿದ ಮೇಕ್ ಇನ್ ಇಂಡಿಯಾ ಯೋಜನೆ ಪೂರಕವಾಗಿದೆ ಎಂದು ಜಿಲ್ಲಾ ಸಣ್ಣ ಕೈಗಾರಿಕೆಗಳ ಮಾಲೀಕರ ಸಂಘದ ಅಧ್ಯಕ್ಷ ಭೀಮಾಶಂಕರ ಪಾಟೀಲ ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ಡಿಗ್ರಿ ಕಾಲೇಜಿನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಮೇಕ್ ಇನ್ ಇಂಡಿಯಾದ ದಶಮಾನೋತ್ಸವ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ಉತ್ಪಾದನೆಯಲ್ಲಿ ಹೂಡಿಕೆ ಹೆಚ್ಚಿಸುವುದು, […]

Continue Reading

ಬಾಡಿಗೆಗೆಂದು ಸುಮಾರು 500 ಕಾರುಗಳನ್ನು ಪಡೆದು ಗಿರವಿಗೆ ಇಟ್ಟ ಭೂಪ

ಬಳ್ಳಾರಿ: ಬಾಡಿಗೆ ವಾಹನಗಳ ಟ್ರೆಂಡ್​ ಸದ್ಯ ಜೋರಾಗಿದೆ. ಅದರಲ್ಲೂ ಸೆಲ್ಫ್​ ಡ್ರೈವಿಂಗ್​ಗೆಂದು ವಾಹನ ಪಡೆಯುವವರೆ ಹೆಚ್ಚು, ಹೀಗಾಗಿ ಕೆಲ ವಾಹನಗಳ ಮಾಲಿಕರು ಕಂಡ ಕಂಡವರಿಗೆ ವಾಹನಗಳನ್ನು ಬಾಡಿಗೆಗೆ ಕೊಡುವುದು ಉಂಟು. ಅಂತಹ ಮಾಲಿಕರಿಗೆ ಬಳ್ಳಾರಿಯಲ್ಲೊಬ್ಬ ವ್ಯಕ್ತಿ ಭರ್ಜರಿ ಶಾಕ್​ ಕೊಟ್ಟಿದ್ದಾನೆ. ಯಾಮಾರಿ ಯಾರ್ಯಾರಿಗೋ ವಾಹನಗಳನ್ನು ಬಾಡಿಗೆ ನೀಡಿದರೆ, ಅವು ಇನ್ಯಾರ ಬಳಿ ಗಿರವಿ ಇರುತ್ತವೆ ಎಂಬುದು ಪ್ರೂವ್ ಮಾಡಿ ತೋರಿಸಿದ್ದಾನೆ. ಕಾರು ಪಡೆದಿದ್ದು ಬಾಡಿಗೆಗೆ, ಇಟ್ಟಿದ್ದು ಗಿರವಿಗೆ ರಾಯಚೂರು ಜಿಲ್ಲೆಯ ಸಿಂಧನೂರಿನ M.D ಜಹೀದ್ ಭಾಷಾ ಅಲಿಯಾಸ್ […]

Continue Reading