ಅತಿವೃಷ್ಟಿ ಪೀಡಿತ ಪ್ರದೇಶ ಘೋಷಣೆಗೆ ಆಗ್ರಹ

ಸುದ್ದಿ ಸಂಗ್ರಹ ಶಹಾಬಾದ ಅತಿಯಾದ ಮಳೆಯಿಂದ ರೈತರು ಬೆಳೆದ ತೊಗರಿ, ಹೆಸರು, ಉದ್ದು ಸೇರಿದಂತೆ ಇತರ ಎಲ್ಲಾ ಬೆಳೆಗಳು ಸಂಪೂರ್ಣ ನಷ್ಟವಾಗಿದೆ, ಹೀಗಾಗಿ ಕಲಬುರಗಿ ಜಿಲ್ಲೆಯು ಅತಿವೃಷ್ಟಿ ಪೀಡಿತ ಜಿಲ್ಲೆ ಎಂದು ಘೋಷಿಸಿ ಪರಿಹಾರ ನೀಡಬೇಕು ಎಂದು ಶಹಾಬಾದ್ ಮಂಡಲ ಅಧ್ಯಕ್ಷ ನಿಂಗಣ್ಣ ಹುಳುಗೋಳ್ಕರ್ ಆಗ್ರಹಿಸಿದರು.  ನಗರದ ಬಸವೇಶ್ವರ ವೃತ್ತದಲ್ಲಿ ಬುಧುವಾರ ಬಿಜೆಪಿ ಪಕ್ಷ, ರೈತ ಮೋರ್ಚಾದ ವತಿಯಿಂದ ಅತಿವೃಷ್ಟಿ ಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆಯಲ್ಲಿ ಮಾತನಾಡಿ, ರೈತರಿಗೆ ಸೇರಬೇಕಾದ ಹಳೆಯ ಪರಿಹಾರ ಬಾಕಿಯನ್ನು ಬಿಡುಗಡೆ […]

Continue Reading

ಬಿಗ್ ಬಾಸ್ ಸೀಸನ್ 12 ಭಾರಿ ಸ್ಪೆಷಲ್: ಬಿಗ್ ಅಪ್ ಡೇಟ್

ಬೆಂಗಳೂರು: ಸೆ.28ರಂದು ರವಿವಾರ ಸಂಜೆ 6 ಗಂಟೆಗೆ ಬಿಗ್ಬಾಸ್ ಸೀಸನ್ 12ರ ಗ್ರಾಂಡ್ ಓಪನಿಂಗ್ ಪ್ರಸಾರವಾಗಲಿದ್ದು, ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9.30ಕ್ಕೆ ಕಲರ್ಸ್ ಕನ್ನಡ ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ. ವಾರಾಂತ್ಯದಲ್ಲಿ (ಶನಿವಾರ ಮತ್ತು ರವಿವಾರ) ರಾತ್ರಿ 9 ಗಂಟೆಯಿಂದ ಪ್ರಸಾರವಾಗಲಿದೆ. ಈಗಾಗಲೇ ಬಿಗ್ ಬಾಸ್ನ 11 ಸೀಸನ್‌ಗಳನ್ನು ನೋಡಿ ಯಶಸ್ವಿಯಾಗಿಸಿರುವ ವೀಕ್ಷಕರ ಮನಸಲ್ಲಿ ಈ ಸೀಸನ್ ಹೇಗಿರಬಹುದು ಎನ್ನುವ ಕೂತೂಹಲ ಇದೆ. ಈ ಸೀಸನ್‌ನಲ್ಲಿ ವಿಭಿನ್ನ ವ್ಯಕ್ತಿತ್ವದ ಕಂಟೆಸ್ಟೆಂಟ್ಸ್ ಹಾಗೂ ಅನಿರೀಕ್ಷಿತ ಟಾಸ್ಕ್‌ಗಳನ್ನು ಹೊತ್ತು ನವರಾತ್ರಿ […]

Continue Reading

ತಲೆಗೂದಲಿಗೆ ಎಣ್ಣೆ ಹಚ್ಚದಿದ್ದಕ್ಕೆ ವಿದ್ಯಾರ್ಥಿನಿಯ ಕೂದಲು ಕಟ್: ಶಿಕ್ಷಕಿ ವಜಾ

ಗಾಂಧಿನಗರ: ತಲೆಗೂದಲಿಗೆ ಎಣ್ಣೆ ಹಚ್ಚದಿದ್ದಕ್ಕೆ ವಿದ್ಯಾರ್ಥಿನಿಯ ಕೂದಲು ಕತ್ತರಿಸಿದ ಘಟನೆ ಗುಜರಾತ್‌ನ ಖಾಸಗಿ ಶಾಲೆಯಲ್ಲಿ ನಡೆದಿದೆ. ಮಂಗಳವಾರ ವಿದ್ಯಾರ್ಥಿನಿ ಶಾಲೆಗೆ ತೆರಳಿದಾಗ ತಲೆಗೂದಲಿಗೆ ಎಣ್ಣೆ ಹಚ್ಚಿರಲಿಲ್ಲ. ಇದನ್ನು ಕಂಡ ದೈಹಿಕ ಶಿಕ್ಷಕಿ ವಿದ್ಯಾರ್ಥಿಯ ಕೂದಲನ್ನು ಬ್ಲೇಡ್‌ನಿಂದ ಕತ್ತರಿಸಿದ್ದಾರೆ. ಮನೆಗೆ ಮರಳಿದ ಮಗಳ ಕೂದಲು ಗಮನಿಸಿದಾಗ ಪೋಷಕರಿಗೆ ವಿಷಯ ತಿಳಿದಿದ್ದು, ಕೂಡಲೇ ಜಿಲ್ಲಾ ಶಿಕ್ಷಣ ಅಧಿಕಾರಿಗೆ ದೂರು ನೀಡಿದ್ದಾರೆ. ದೂರಿನನ್ವಯ ಅಧಿಕಾರಿಗಳು ಶಿಕ್ಷಕಿಯನ್ನು ವಜಾಗೊಳಿಸಿದ್ದಾರೆ. ಈ ಕುರಿತು ವಿದ್ಯಾರ್ಥಿನಿಯ ತಾಯಿ ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಚಿಕ್ಕ ಚಿಕ್ಕ ವಿಷಯಗಳಿಗೆ […]

Continue Reading

ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗೆ ಕೊನೆಗೂ ನೇಮಕ

ಬೆಂಗಳೂರು: ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗೆ ಕೊನೆಗೂ ನೇಮಕವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಡಬ್ಲ್ಯೂಸಿ ಸಭೆಗೆಂದು ಬಿಹಾರ್ ತೆರಳಿದ ಸಂದರ್ಭದಲ್ಲೇ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗಿದೆ. 39 ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ಹೈಕಮಾಂಡ್‌ ಮುದ್ರೆ ಹಾಕಿ ಇಂದು (ಸೆಪ್ಟೆಂಬರ್ 24) ರಾಜ್ಯಕ್ಕೆ ರವಾನೆ ಮಾಡಿದೆ. ಇನ್ನು ಪ್ರಕರಣದಲ್ಲಿ ಜೈಲಿನಲ್ಲಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಅವರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಹಾಗಾದರೆ […]

Continue Reading

ಮರತೂರ: ಶ್ರೀಶೈಲ ಮಹಾಸ್ವಾಮಿಗಳ ಮೌನಾನುಷ್ಠಾನ

ಸುದ್ದಿ ಸಂಗ್ರಹ ಶಹಾಬಾದ್ ತಾಲೂಕಿನ ಮರತೂರ ಗ್ರಾಮದ ವಿರಕ್ತ ಮಠದ ಪೀಠಾಧ್ಯಕ್ಷ ಶ್ರೀಶೈಲ ಮಹಾಸ್ವಾಮಿಗಳು ಲೋಕಕಲ್ಯಾಣ ಮತ್ತು ಲಿಂಗೈಕ್ಯ ಗುರುಲಿಂಗ ಶಿವಾಚಾರ್ಯರ ಪುಣ್ಯಸ್ಮರಣೋತ್ಸವ ನಿಮಿತ್ಯ ಒಂದು ತಿಂಗಳ ಕಾಲ ಮೌನ ಅನುಷ್ಠಾನ ಕೈಗೊಂಡಿದ್ದಾರೆ, ಕಲಬುರಗಿಯ ಮುಕ್ತಂಪುರಿನ ಗುರುಬಸವೇಶ್ವರ ಬೃಹನ್ಮಠದ ಶಿವಾನಂದ ಮಹಾಸ್ವಾಮಿಗಳ ಪಾದಪೂಜೆ ಮಾಡುವ ಮೂಲಕ ಮೌನ ಅನುಷ್ಠಾನ ಪ್ರಾರಂಭಿಸಿದರು. ಇದೆ ಸಂದರ್ಭದಲ್ಲಿ ಶಿರೋಳಿಯ ಶಿವಬಸವ ಮಹಾಸ್ವಾಮಿಗಳು ಉಪಸ್ಥಿತರಿದ್ದರು. ಅ.7 ರಂದು ಮೌನ ಅನುಷ್ಠಾನ ಮಂಗಲ ಸಮಾರಂಭ ನಡೆಯಲಿದೆ, ನಾಡಿನ ಪೂಜ್ಯರು, ವಿವಿಧ ರಾಜಕೀಯ ಪಕ್ಷದ ಮುಖಂಡರು […]

Continue Reading

ಸಮೀಕ್ಷೆಯಲ್ಲಿ ಕಬ್ಬಲಿಗ, ಕೋಲಿ ಎಂದು ಬರೆಯಿಸಲು ಸಮಾಜದಿಂದ ಕರೆ

ಚಿತ್ತಾಪುರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಕೋಲಿ, ಕಬ್ಬಲಿಗ ಜಾತಿಯವರು ಕಡ್ಡಾಯವಾಗಿ ಜಾತಿ ಕಬ್ಬಲಿಗ ಎಂದು, ಉಪ ಜಾತಿ ಕೋಲಿ ಎಂದು ಬರೆಯಿಸಬೇಕು ಎಂದು ತಾಲೂಕು ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣಾ ಹೆಗಲೇರಿ ಮತ್ತು ಗೌರವಾಧ್ಯಕ್ಷ ರಾಮಲಿಂಗ ಬಾನರ ಸಮಾಜದ ಜನರಿಗೆ ಕರೆ ನೀಡಿದ್ದಾರೆ.‌ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಮೀಕ್ಷೆ ಮಾಡಲು ಮನೆ ಮನೆಗೆ ಸಮೀಕ್ಷೆದಾರರು ಬಂದಾಗ ಧರ್ಮ ಕೇಳಿದಾಗ ಹಿಂದೂ ಎಂದು, ಜಾತಿ ಕೇಳಿದಾಗ ಕಬ್ಬಲಿಗ […]

Continue Reading

ಧಾರಾಕಾರ ಮಳೆಗೆ ಮನೆ ನೆಲಸಮ: ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರು

ಚಿತ್ತಾಪುರ: ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮನೆಯೊಂದು ಸಂಪೂರ್ಣವಾಗಿ ನೆಲಕ್ಕುರುಳಿದ ಘಟನೆ ತಾಲೂಕಿನ ಸುಗೂರ (ಎನ್) ಗ್ರಾಮದಲ್ಲಿ ನಡೆದಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಸೆ.22 ರಂದು ಸೋಮುವಾರ ತಡರಾತ್ರಿ ಸುರಿದ ಭಾರಿ ಮಳೆಯ ಪರಿಣಾಮ ಉಮಾದೇವಿ ಗುರಯ್ಯಾಸ್ವಾಮಿ ಮಠಪತಿ ಅವರ ಮನೆಯ ಒಂದು ಕೋಣೆ ಸಂಪೂರ್ಣವಾಗಿ ನೆಲಕ್ಕುರುಳಿದೆ. ತಾಯಿ ಮತ್ತು ಇಬ್ಬರು ಮಕ್ಕಳು ಮನೆಯ ಇನ್ನೊಂದು ಕೋಣೆಯಲ್ಲಿ ಮಲಗಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಸುದ್ದಿ ತಿಳಿಯುತ್ತಲೆ ಊರಿನ ಗ್ರಾಮಸ್ಥರು ಭೇಟಿ ನೀಡಿ ಧೈರ್ಯ ಹೇಳಿದರು. […]

Continue Reading

ಸರ್ಕಾರಿ ನೌಕರರು, ಕುಟುಂಬದ ಸದಸ್ಯರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿ

ಬೆಂಗಳೂರು: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸರ್ಕಾರಿ ನೌಕರರು ಮತ್ತು ಕುಟುಂಬದ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಲಾಗಿದೆ. ಅಕ್ಟೋಬರ್ 1 ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬರಲಿದೆ. ಬಹಳ ವರ್ಷಗಳಿಂದ ಈ ಯೋಜನೆ ಮರುಜಾರಿಗೆ ಒತ್ತಾಯ ಕೇಳಿಬಂದಿತ್ತು. ಈ ಯೋಜನೆಯಡಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸಿಗಲಿದೆ. ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿಯೂ ನಗದು ರಹಿತ ಉಚಿತ ಚಿಕಿತ್ಸೆ ಸಿಗಲಿದೆ.

Continue Reading

ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ

ನವದೆಹಲಿ: ವಿಮಾನದ ಚಕ್ರ ಇರುವ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು 13 ವರ್ಷದ ಬಾಲಕನೊಬ್ಬ ಅಫ್ಘಾನಿಸ್ತಾನದ ಕಾಬೂಲ್‌ನಿಂದ ದೆಹಲಿಗೆ ಆಗಮಿಸಿದ ಘಟನೆ ನಡೆದಿದೆ. ಭಾನುವಾರ ಬೆಳಿಗ್ಗೆ 11:10 ಕ್ಕೆ ಕಾಬೂಲಿನಿಂದ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲ್ಯಾಂಡಿಂಗ್‌ ಆದ ಕಾಮ್ ಏರ್‌ಲೈನ್ಸ್‌ನಲ್ಲಿ ಬಾಲಕ ಆಗಮಿಸಿದ್ದಾನೆ. ವಿಮಾನ ಲ್ಯಾಂಡ್‌ ಆದ ಬಳಿಕ ಟ್ಯಾಕ್ಸಿ ವೇ ಬಳಿ ಬಾಲಕ ನಡೆದುಕೊಂಡು ಹೋಗುತ್ತಿರುವುದನ್ನು ಗಮನಿಸಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಆತನನ್ನು ವಶಕ್ಕೆ ಪಡೆದು ಟರ್ಮಿನಲ್ -3 ರಲ್ಲಿ ವಿಚಾರಣೆ […]

Continue Reading

ಆಯುರ್ವೇದ ಸಮಗ್ರ ಆರೋಗ್ಯ ಪದ್ದತಿ: ಡಾ.ಸದಾನಂದ ಪಾಟೀಲ

ಕಲಬುರಗಿ: ಸರ್ವ ಕಾಯಿಲೆಗೆ ಮದ್ದನ್ನು ನೀಡುವ ಆಯುರ್ವೇದ ಪದ್ಧತಿ ಸಮಗ್ರ ಆರೋಗ್ಯ ವ್ಯವಸ್ಥೆಯಾಗಿದ್ದು, ಎಲ್ಲರು ಆಯುರ್ವೇದ ಪದ್ಧತಿಯತ್ತ ಮುಖ ಮಾಡಬೇಕಾದದ್ದು ಇಂದಿನ ಅಗತ್ಯವಾಗಿದೆ ಎಂದು ಖ್ಯಾತ ಆಯುರ್ವೇದ ತಜ್ಞ ವೈದ್ಯ ಡಾ.ಸದಾನಂದ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಶಹಾಬಾದ್ ರಿಂಗ್ ರಸ್ತೆಯ ಸಮೀಪದ ಚರಕ ಆಯುರ್ವೇದ ಆಸ್ಪತ್ರೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ‘10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ’ ಮತ್ತು ‘ಧನ್ವಂತರಿ ಜಯಂತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಒತ್ತಡ […]

Continue Reading