ಅಪರೂಪದ ಶಿಕ್ಷಕ ಶಿವಲಿಂಗಪ್ಪ ಹೆಬ್ಬಾಳಕರ್ ಅಭಿನಂದನಾ ಗ್ರಂಥ ಬಿಡುಗಡೆ

ಸುದ್ದಿ ಸಂಗ್ರಹ ಶಹಾಬಾದ್ಸರಳ ಮತ್ತು ಸೌಮ್ಯ ಸ್ವಭಾವದ ಅಪರೂಪದ ಶಿಕ್ಷಕ ಎಂದರೆ ಶಿವಲಿಂಗಪ್ಪ ಹೆಬ್ಬಾಳಕರ್ ಎಂದು ತಹಸೀಲ್ದಾರ್ ನೀಲಪ್ರಭಾ ಬಬಲಾದ್ ಹೇಳಿದರು. ನಗರದ ರಾಯಲ್ ಗಾರ್ಡನ್ ಕಲ್ಯಾಣ ಮಂಟಪದಲ್ಲಿ ಶನಿವಾರ ಗಿರಿಶಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ಹಾಗೂ ಹೆಬ್ಬಾಳಕರ್ ಅವರ ಅಭಿಮಾನಿ ಬಳಗದ ವತಿಯಿಂದ ‘ಪ್ರಜ್ಞೆಶೀಲ ಅಭಿನಂದನಾ ಗ್ರಂಥ’ ಬಿಡುಗಡೆ ಹಾಗೂ ವಯೋನಿವೃತ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿವಲಿಂಗಪ್ಪ ಹೆಬ್ಬಾಳಕರ್ ಶಿಕ್ಷಣ ಇಲಾಖೆಯಲ್ಲಿ ಸುಮಾರು 36 ವರ್ಷಗಳ ಸೇವೆ ಸಲ್ಲಿಸಿ ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. […]

Continue Reading

ಜನರಿಗೆ ಭಯ ಹುಟ್ಟಿಸುವ ರೀತಿ ಬಂದೂಕು ಹಿಡಿದು ರೀಲ್ಸ್‌: ಮೂವರು ಯುವಕರ ಬಂಧನ

ಸುದ್ದಿ ಸಂಗ್ರಹ ಬಳ್ಳಾರಿಜನರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ನಕಲಿ ಬಂದೂಕು ಹಿಡಿದು ರೀಲ್ಸ್‌ ಮಾಡಿದ್ದ ಮೂವರು ಯುವಕರನ್ನು ಬಳ್ಳಾರಿಯ ಕೌಲ್‌ ಬಜಾರ್‌ ಪೊಲೀಸರು ಬಂಧಿಸಿದ್ದಾರೆ. ಸಾಹಿಲ್, ವಿಕಾಸ್ ಮತ್ತು ಅಭಿಷೇಕ್ ಬಂಧಿತ ಆರೋಪಿಗಳು. ನಗರದ ಬಂಡಿಹಟ್ಟಿ ಬಳಿಯ ಹೆಚ್‌ಎಲ್‌ಸಿ ಕಾಲುವೆ ಮೇಲೆ ಭಯ ಹುಟ್ಟಿಸುವ ರೀತಿ ಆರೋಪಿಗಳು ರೀಲ್ಸ್ ಮಾಡಿದ್ದರು. ನಕಲಿ ಡಬಲ್ ಬ್ಯಾರೆಲ್ ಬಂದೂಕು ಹಾಗೂ ಪಿಸ್ತೂಲ್ ಹಿಡಿದುಕೊಂಡು ರೀಲ್ಸ್ ಮಾಡಿದ್ದರು. ಭಯ ಹುಟ್ಟಿಸುವ ರೀತಿಯಲ್ಲಿ ರೀಲ್ಸ್ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದರು. ಪ್ರಕರಣ […]

Continue Reading

ಪೋಕ್ಸೊ ಆರೋಪಿ ಪರಾರಿ ಪ್ರಕರಣ: ಅಫಜಲಪುರ ಪಿಎಸ್ಐ ಅಮಾನತು

ಸುದ್ದಿ ಸಂಗ್ರಹ ಕಲಬುರಗಿಪೋಕ್ಸೊ ಪ್ರಕರಣದ ಆರೋಪಿ ಠಾಣೆಯಿಂದ ತಪ್ಪಿಸಿಕೊಂಡ ಹೋಗಿದ್ದ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ್ದಕ್ಕಾಗಿ ಅಫಜಲಪುರ ಠಾಣೆಯ ಪಿಎಸ್‌ಐ ಸೋಮಲಿಂಗ ಒಡೆಯರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಆದೇಶ ಹೊರಡಿಸಿದ್ದಾರೆ. ಬಾಲಕಿಯನ್ನು ಅಪಹರಿಸಿ ಪುಣೆಗೆ ಕರೆದೊಯ್ದಿದ್ದ ಆರೋಪಿ ಮಂಜುನಾಥ ಇಂಗಳೆ (23)ಯನ್ನು ಬಂಧಿಸಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಈ ಸಂದರ್ಭದಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದ. ಘಟನೆಯ ಬೆನ್ನಲ್ಲೆ ಅಫಜಲಪುರ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ರವಿದಾಸ್ ಕಟ್ಟಿಮನಿ, ಕಾನ್‌ಸ್ಟೆಬಲ್‌ಗಳಾದ ಶಿವಣ್ಣ ಮತ್ತು ಪ್ರಶಾಂತ್ […]

Continue Reading

ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ದೇವಿಂದ್ರ ಅರಣಕಲ್

ಸುದ್ದಿ ಸಂಗ್ರಹ ಚಿತ್ತಾಪುರ ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪೋಷಿಸಬೇಕು ಎಂದು ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ದೇವಿಂದ್ರಅರಣಕಲ್ ಹೇಳಿದರು. ಪಟ್ಟಣದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಸಂಘದ ಕಚೇರಿ ಹತ್ತಿರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಸಹಕಾರ ಸಚಿವಾಲಯ 5 ವರ್ಷ ಪೂರೈಸುತ್ತಿರುವ ನಿಮಿತ್ತ ಸಹಕಾರ ಸಪ್ತಾಹ ಆಚರಣೆ, ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಹಕಾರ ಸಪ್ತಾಹದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಹಮ್ಮಿಕೊಳ್ಳಲಾಗಿದೆ. ಪರಿಸರ ಉಳಿಸಿ […]

Continue Reading

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ ?: ಪ್ರಿಯಾಂಕ್ ಖರ್ಗೆ ಗರಂ

ಸುದ್ದಿ ಸಂಗ್ರಹ ಬೆಂಗಳೂರುಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ ? ಅವರದ್ದೆ ತಾನೆ ಜವಾಬ್ದಾರಿ ಎಂದು ಎಸ್‌ಐಆರ್ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಎಸ್‌ಐಆರ್ ಲೋಪ ಎಂಬ ವಿಪಕ್ಷಗಳ ಆರೋಪದ ಕುರಿತು ಮಾತನಾಡಿ, ಏನೆ ಮಾಡಿದ್ರು ಕಾನೂನು ಮೀರಿ ಯಾರೂ ಏನು ಮಾಡೋಕೆ ಆಗೊಲ್ಲ. ಎಲೆಕ್ಷನ್ ಕಮಿಷನ್ ದು ವೀಕ್ಷಕರು ಇರ್ತಾರೆ. ಅಂತಹ ಲೋಪ ಆಗಿದ್ದರೆ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬಹುದು. ರಾಜ್ಯ ಸರ್ಕಾರದವರು ಯಾರಿಗೂ ಒತ್ತಾಯ ಮಾಡಿ SIR ಮಾಡಿಸುತ್ತಿಲ್ಲ. […]

Continue Reading

ಪೋಕ್ಸೋ ಆರೋಪಿ ಮತ್ತೆ ಪೊಲೀಸರ ಬಲೆಗೆ: ಮಹಾರಾಷ್ಟ್ರಕ್ಕೆ ಪರಾರಿಯಾಗುವ ಮುನ್ನವೇ ಸೆರೆ

ಸುದ್ದಿ ಸಂಗ್ರಹ ಕಲಬುರಗಿಅಫಜಲಪುರ ಪೊಲೀಸ್ ಠಾಣೆಯಿಂದ ಪರಾರಿಯಾಗಿ ಪೊಲೀಸರಿಗೆ ತಲೆನೋವಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಮಂಜುನಾಥ್ ಕೊನೆಗೂ ಮತ್ತೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಹಾರಾಷ್ಟ್ರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ತೆಲ್ಲೂರು ಬಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್‌.ಪಿ ಆಡೂರು ಶ್ರೀನಿವಾಸಲು ತಿಳಿಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಂಜುನಾಥ್‌ನ್ನು ಇತ್ತೀಚೆಗೆ ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿ ಅಫಜಲಪುರಕ್ಕೆ ಕರೆತರಲಾಗಿತ್ತು. ಆದರೆ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ನಡೆಯುತ್ತಿದ್ದ ವೇಳೆ ಆತ ಪೊಲೀಸರ […]

Continue Reading

ರಾಜ್ಯದಲ್ಲಿ 7,925 ಪೊಲೀಸ್ ಹುದ್ದೆಗಳ ನೇಮಕಾತಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 2026-27ನೇ ಸಾಲಿನಲ್ಲಿ 7,925 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಅತ್ಯಂತ ಪಾರದರ್ಶಕವಾಗಿ ನಡೆಸಲಾಗುತ್ತಿದೆ ಎಂದು ಹೇಳಿದರು. ಒಟ್ಟು ಹುದ್ದೆಗಳ ಪೈಕಿ 1,639 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಿರಿಸಲಾಗಿದ್ದು, ಉಳಿದ ಹುದ್ದೆಗಳು ರಾಜ್ಯದ ಇತರೆ ಭಾಗಗಳಿಗೆ ಮೀಸಲಾಗಿದೆ. ಈ ನೇಮಕಾತಿಯಲ್ಲಿ ಡಿಟೆಕ್ಟಿವ್ ಸಬ್‌-ಇನ್‌ಸ್ಪೆಕ್ಟರ್, ಸಶಸ್ತ್ರ […]

Continue Reading

BLO ಗಳು ಕಡ್ಡಾಯವಾಗಿ ಮನೆ ಮನೆಗೆ ತೆರಳಿ ಫಾರಂ ಕೊಡಬೇಕು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಖಡಕ್‌ ಸೂಚನೆ

ಸುದ್ದಿ ಸಂಗ್ರಹ ಬೆಂಗಳೂರುಬಿಎಲ್‌ಒಗಳು ಕಡ್ಡಾಯವಾಗಿ ಮನೆ ಮನೆಗೆ ತೆರಳಿ ಫಾರಂ ಕೊಡಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್‌ ಖಡಕ್‌ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬಿಎಲ್‌ಒಗಳು ಮನೆಗಳಿಗೆ ತೆರಳದೆ ರಸ್ತೆಗಳಲ್ಲಿ ಟೆಂಟ್‌ ಹಾಕಿಕೊಂಡು ಕುಳಿತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಜುಲೈ 2 ರಂದು ಬಂದಿರುವ ದೂರುಗಳನ್ನು ಆಧರಿಸಿ ಇಂದು ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು, ಡೆಪ್ಯುಟಿ ಕಮಿಷನರ್‌ಗಳು ಮತ್ತು ಜಿಬಿಎ ಮುಖ್ಯ ಆಯುಕ್ತರಿಗೆ ಅಧಿಕೃತ ಸುತ್ತೋಲೆ ರವಾನಿಸಿರುವ […]

Continue Reading

ಜವಳಿ ಪಾರ್ಕ್ ಅಭಿವೃದ್ಧಿಗೆ ಕ್ರಮವಹಿಸಲು ಸಂಪುಟ‌ ನಿರ್ಣಯ

ಸುದ್ದಿ ಸಂಗ್ರಹ ಕಲಬುರಗಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಮಹತ್ವಾಕಾಂಕ್ಷೆಯ ಜವಳಿ ಪಾರ್ಕ್‌ ಅನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅಭಿವೃದ್ಧಿಪಡಿಸಲು ಕ್ರಮ ವಹಿಸುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 1,000 ಎಕರೆ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಈ ಜವಳಿ ಪಾರ್ಕ್ ಸುಮಾರು 1,700 ಕೋಟಿ ಯೋಜನಾ ಮೊತ್ತದೊಂದಿಗೆ ಅಭಿವೃದ್ಧಿಪಡಿಸಲಾಗುವುದು. 320 ಕೋಟಿ ವೆಚ್ಚದಲ್ಲಿ ಮೊದಲ ಹಂತದ ಅಭಿವೃದ್ಧಿ ಕಾರ್ಯ ಕೆಐಎಡಿಬಿ ಕೈಗೆತ್ತಿಕೊಳ್ಳಲಿದೆ. ಕಲಬುರಗಿಯ ನದಿಸಿನ್ನೂರು, […]

Continue Reading

ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳಿವೆ: ತೇಗಲತಿಪ್ಪಿ

ಸುದ್ದಿ ಸಂಗ್ರಹ ಶಹಾಬಾದ್ ವಚನ ಸಾಹಿತ್ಯ ನಮ್ಮ ಬದುಕಿನ ಆದರ್ಶಗಳಾಗಿವೆ, ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳಿವೆ. ಅಂತಹ ವಚನ ಸಾಹಿತ್ಯವನ್ನು ಉಳಿಸಿ ಬೆಳೆಸಿ ಸಂರಕ್ಷಣೆ ಮಾಡಿದ ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ನಿಜವಾದ ಸಾಧಕರಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ್ ಪಾಟೀಲ್ ತೇಗಲತಿಪ್ಪಿ ಹೇಳಿದರು. ತಾಲೂಕಿನ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ‘ವಚನ ಸಂರಕ್ಷಣಾ ದಿನದ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ […]

Continue Reading