ರಾಜ್ಯದಲ್ಲಿ ಏ.6ರಿಂದ 4 ದಿನ ಮಳೆ: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್‌ 2ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್‌ 6 ರಿಂದ 4 ದಿನಗಳು ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಿಗೆ ವಿವಿಧ ದಿನಗಳಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬೇಸಿಗೆ ಬಿಸಿಲು ಜೋರಿದ್ದು, ಅಂತೆಯೇ ಪೂರ್ವ ಮುಂಗಾರು ಚುರುಕಾಗುತ್ತಿದೆ. ಏಪ್ರಿಲ್ 6 ರಿಂದ 8ವರೆಗೂ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ […]

Continue Reading

ವಾಡಿಯಲ್ಲಿ ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾರತದ ಮಾಜಿ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಿಸಲಾಯಿತು. ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ಸಮಾಜ ಸುಧಾರಣೆ ಬಗ್ಗೆ ಮತ್ತು ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆ ಅವರು ಹೊಂದಿದ್ದರು ಎಂದರು. ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದ ಅವರು, ದೇಶದ ಜನರು ಅಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿ ಪ್ರಾರಂಭಿಸಿ ನೆರವಾದರು. ಇಂತಹ ಮಹಾನ್‌ ನಾಯಕರ […]

Continue Reading

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌: ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್ ?

ಸುದ್ದಿ ಸಂಗ್ರಹ ಅಭಿನಯ ಚಕ್ರವರ್ತಿ ನಟ ಸುದೀಪ್ ಅವರು ಮೂರು ವರ್ಷಗಳ ಹಿಂದೆ ನಿರ್ಮಾಪಕ ಎಂ.ಎನ್ ಕುಮಾರ್ ಮತ್ತು ಎಂ.ಎನ್ ಸುರೇಶ್ ವಿರುದ್ಧ ಹೂಡಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನ್ಯಾಯಾಲಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಶನಿವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ 7ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರಾಗಿದ್ದ ನಟ ಸುದೀಪ್ ಅವರನ್ನ ನಿರ್ಮಾಪಕರ ಪರ ವಕೀಲರು ಕ್ರಾಸ್ ಎಕ್ಸಾಮಿನೇಷನ್‌ಗೆ ಒಳಪಡಿಸಿದರು. ವಕೀಲರ ಪ್ರಶ್ನೆಗಳಿಗೆ ಸುದೀಪ್ ಉತ್ತರಿಸಲು ತಡವರಿಸಿದ್ರು ಅನ್ನೋದು ಗೊತ್ತಾಗಿದೆ. ನಿರ್ಮಾಪಕರು ಸುದೀಪ್ […]

Continue Reading

ಶ್ರೀರಾಮ ನವಮಿ: ಭವ್ಯ ಶೋಭಾಯಾತ್ರೆ

ಸುದ್ದಿ ಸಂಗ್ರಹ ಶಹಾಬಾದ್ಶ್ರೀರಾಮ ನವಮಿ ಅಂಗವಾಗಿ ಶ್ರೀರಾಮ ನವಮಿ ಉತ್ಸವ ಸಮಿತಿ ವತಿಯಿಂದ ನಗರದಲ್ಲಿ ಭವ್ಯ ಶೋಭಾಯಾತ್ರೆ‌ ನಡೆಯಿತು. ಈ ಸಂದರ್ಭದಲ್ಲಿ ರಾವೂರಿನ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು, ಬಿಜೆಪಿ ಅಧ್ಯಕ್ಷ ನಿಂಗಪ್ಪ ಹುಳಗೋಳ, ಮುಖಂಡರಾದ ಗೋರಖನಾಥ ಶಾಖಾಪೂರ, ದಿವ್ಯಾ ಹಾಗರಗಿ, ಉದ್ಯಮಿ ಅಣವೀರ ಇಂಗಿನಶೆಟ್ಟಿ ಮತ್ತು ರವಿ ರಾಠೋಡ ಸೇರಿದಂತೆ ಅನೇಕರು ಇದ್ದರು.

Continue Reading

ಬಗೆದಷ್ಟು ಬಯಲಾಗ್ತಿದೆ ಜಿಮ್ ಟ್ರೈನರ್ ಬಂಡವಾಳ: 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಸಮೀರ್

ಸುದ್ದಿ ಸಂಗ್ರಹ ಹುಬ್ಬಳ್ಳಿಲವ್ ಜಿಹಾದ್ ಪ್ರಕರಣದಲ್ಲಿ ಜಿಮ್ ಟ್ರೈನರ್ ಬಂಡವಾಳ ಬಗೆದಷ್ಟು ಬಯಲಾಗುತ್ತಿದೆ. ಇದೀಗ ಸಂತ್ರಸ್ತೆಗೆ ಸಮೀರ್ 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಎಂದು ತಿಳಿದುಬಂದಿದೆ. ಪೊಲೀಸರು ಸಮೀರ್ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಮತ್ತಷ್ಟು ಬಯಲಾಗಿದೆ. ಮೊಬೈಲ್‌ನಲ್ಲಿ ಕೆಲ ರೋಚಕ ವಿಡಿಯೋಗಳು, ಯುವತಿಯರೊಂದಿಗಿನ ವಾಟ್ಸಪ್ ಚಾಟ್‌ಗಳು ಪತ್ತೆಯಾಗಿದೆ. ಮೊಬೈಲ್‌ನಲ್ಲಿ ಸಂತಸ್ತೆ ಗರ್ಭಪಾತದ ಮಾತ್ರೆ ತೆಗೆದುಕೊಳ್ಳುತ್ತಿರುವ ವಿಡಿಯೋ ಕೂಡ ಸಿಕ್ಕಿವೆ. ಸಮೀರ್ ಪ್ರತಿ ಸಾರಿ ಲೈಂಗಿಕ ದೌರ್ಜನ್ಯ ಎಸಗಿದ ಬಳಿಕ ಗರ್ಭಪಾತ […]

Continue Reading

ಬಿಸಿಲು: ಕೋರ್ಟ್ ಸಮಯ ಬದಲು

ಸುದ್ದಿ ಸಂಗ್ರಹ ಕಲಬುರಗಿಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲು ದಿನೆ ದಿನೆ ಹೆಚ್ಚುತ್ತಿದ್ದು, ಕಲಬುರಗಿ ಹೈಕೋರ್ಟ್‌ ಪೀಠ ಸೇರಿದಂತೆ ಈ ಭಾಗದ ಎಲ್ಲ ನ್ಯಾಯಾಲಯಗಳ ಕಚೇರಿ ಅವಧಿ ಮತ್ತು ಕಲಾಪದ ಅವಧಿಯ ಸಮಯ ಬದಲಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಬೇಸಿಗೆ ಹಿನ್ನೆಲೆಯಲ್ಲಿ ಏಪ್ರಿಲ್ 1ರಿಂದ ಅನ್ವಯಿಸುವಂತೆ ಎರಡು ತಿಂಗಳ ಅವಧಿಗೆ ಸರ್ಕಾರಿ ಕಚೇರಿಗಳ ಸಮಯ ಬದಲಾಯಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇದರ ಬೆನ್ನಲ್ಲೆ ಹೈಕೋರ್ಟ್‌ನ ಈ ಅದೇಶ ಹೊರಬಿದ್ದಿದೆ. ಕಲಬುರಗಿ ಹೈಕೋರ್ಟ್‌ ಪೀಠ ಹಾಗೂ ಜಿಲ್ಲೆಗಳ ಎಲ್ಲ ನ್ಯಾಯಾಲಯಗಳ […]

Continue Reading

ಶಹಾಬಾದ್: ಶ್ರದ್ಧೆ ಭಕ್ತಿಯಿಂದ ಹನುಮ ಜಯಂತಿ ಆಚರಣೆ

ಸುದ್ದಿ ಸಂಗ್ರಹ ಶಹಾಬಾದ್ನಗರದ ವಿವಿಧ ಆಂಜನೇಯ ದೇವಸ್ಥಾನಗಳಲ್ಲಿ ಶ್ರದ್ಧಾ ಭಕ್ತಿಯಿಂದ ಹನುಮ ಜಯಂತಿ ಆಚರಿಸಲಾಯಿತು. ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೆ ಹನುಮಾನ್ ದೇವರ ಮೂರ್ತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ವಿವಿಧ ಪೂಜೆ ಭಕ್ತರಿಂದ ನಡೆಯಿತು. ಆಂಜನೇಯನ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಕುಟುಂಬ ಸಮೇತರಾಗಿ ದೇವಾಲಯಗಳಿಗೆ ಬಂದು ಸ್ವಾಮಿಯ ದರ್ಶನ ಪಡೆದರು. ಹಲವು ದೇವಸ್ಥಾನಗಳಲ್ಲಿ ಭಕ್ತರಿಗೆ ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಸ್ಥಾನದ ಅರ್ಚಕರಾದ ರವೀಂದ್ರ ಜೋಶಿ, ಯುವಕರಾದ ವೀರಭದ್ರಯ್ಯ ಸ್ವಾಮಿ, ವೆಂಕಟೇಶ ಕೆ, ಮಹೇಶ, ವಿಶ್ವರಾಧ್ಯ ಗೌಡ, […]

Continue Reading

ಟೆಂಗಳಿ: ಏ.6ರಿಂದ ಶ್ರೀ ಭೀಮೇಶ್ವರ ಜಾತ್ರಾ ಮಹೋತ್ಸವ

ಸುದ್ದಿ ಸಂಗ್ರಹ ಟೆಂಗಳಿ ಏಪ್ರಿಲ್ 6ರಿಂದ 8ರವರೆಗೆ ಕಾಳಗಿ ತಾಲೂಕಿನ ಟೆಂಗಳಿ ಗ್ರಾಮದ ಆರಾಧ್ಯ ದೈವ ಶ್ರೀ ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ ಧಾರ್ಮಿಕ ತ್ರಿವೇಣಿ ಸಂಗಮ ಅಂದರೆ ರಾಚಣ ವೀರಭದ್ರೇಶ್ವರ ಅಗ್ಗಿ, ಶರಣಬಸವೇಶ್ವರ ರಥೋತ್ಸವ, ಭೀಮೇಶ್ವರ 116ನೇ ಜಾತ್ರೆಯ ಧಾರ್ಮಿಕ ತ್ರಿವೇಣಿ ಸಂಗಮದ ಸಂಭ್ರಮ ನೋಡಿ ಶ್ರೀ ಭೀಮೇಶ್ವರ ದೇವರ ದರ್ಶನ ಪಡೆದು ಪಾವನರಾಗುವಂತೆ ಶ್ರೀ ಭೀಮೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ವೀರೇಂದ್ರ ವಾಲಿ, ಪ್ರಧಾನ ಕಾರ್ಯದರ್ಶಿ ವೀರಭದ್ರಯ್ಯ ಸಾಲಿಮಠ ಮತ್ತು ಆಡಳಿತ ಮಂಡಳಿಯ ಸದಸ್ಯ […]

Continue Reading

SSLC ಪರೀಕ್ಷೆ ಭಾರಿ ಬದಲಾವಣೆ: ತೃತೀಯ ಭಾಷೆ ಗ್ರೇಡ್‌ಗೆ ಸೀಮಿತ, ಈ ವರ್ಷದಿಂದಲೇ ಜಾರಿ

ಸುದ್ದಿ ಸಂಗ್ರಹ ಬೆಂಗಳೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ತಂದಿದೆ. ತೃತೀಯ ಭಾಷೆ ಗ್ರೇಡ್‌ಗೆ ಸೀಮಿತಗೊಳಿಸಿದ್ದು, ಈ ವರ್ಷದಿಂದಲೆ ಜಾರಿಯಾಗಲಿದೆ. ಈ ಮೂಲಕ ಒಟ್ಟು 625 ಅಂಕಗಳಿಗೆ ಬದಲಾಗಿ 525 ಅಂಕಕ್ಕೆ ಫಲಿತಾಂಶ ನೀಡಲಾಗುತ್ತದೆ. ಈ ಬಗ್ಗೆ ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ಹಂಚಿಕೊಂಡರು. ಒಟ್ಟು ಅಂಕಗಳಲ್ಲಿ ಭಾರಿ ಕಡಿತವಾಗಲಿದ್ದು, ತೃತೀಯ ಭಾಷೆಯ ಅಂಕಗಳು ಫಲಿತಾಂಶಕ್ಕೆ ಪರಿಗಣಿಸದಿರಲು ತೀರ್ಮಾನಿಸಲಾಗಿದೆ. ಇದುವರೆಗೆ 625 ಅಂಕಗಳಿಗೆ ನಡೆಯುತ್ತಿದ್ದ ಪರೀಕ್ಷೆಯನ್ನು ಈಗ 525 ಅಂಕಗಳಿಗೆ […]

Continue Reading

ಹನುಮ ಜಯಂತಿ: ಅಂಜನಾದ್ರಿಗೆ ಆಗಮಿಸಿ ಮಾಲೆ ವಿಸರ್ಜಿಸಿದ ಭಕ್ತರು

ಸುದ್ದಿ ಸಂಗ್ರಹ ಕೊಪ್ಪಳ ಹನುಮ ಜಯಂತಿ ಹಿನ್ನೆಲೆ ಇಂದು ಅಂಜನಾದ್ರಿಗೆ ಹನುಮ ಮಾಲಾಧಾರಿಗಳು ಆಗಮಿಸಿ ಮಾಲೆಯನ್ನು ವಿಸರ್ಜನೆ ಮಾಡಿದರು. ರಾಮಾಯಣ ಕಾಲದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಜಯಂತಿ ಅಂಗವಾಗಿ ಹನುಮಮಾಲೆಯನ್ನು ಧಾರಣೆ ಮಾಡಿರುವ ನೂರಾರು ಮಾಲಾಧಾರಿಗಳು ಆಗಮಿಸಿ ಮಾಲೆಯನ್ನು ವಿಸರ್ಜನೆ ಮಾಡಿದರು. ಹನುಮ ಜಯಂತಿಯ ಅಂಗವಾಗಿ 11 ದಿನಗಳ ಮುಂಚಿತವಾಗಿಯೇ ಹನುಮಮಾಲೆ ಧಾರಣೆ ಮಾಡಿರುತ್ತಾರೆ. ಮಾಲಾಧಾರಿಗಳು ಕಠಿಣ ವ್ರತ ಕೈಗೊಂಡು ಹನುಮನ ಆರಾಧನೆ ಮಾಡುತ್ತಾರೆ. ಹನುಮ ಜಯಂತಿಯಂದು ಮಾಲಾಧಾರಿಗಳು […]

Continue Reading