ಆಯುರ್ವೇದ ಸಮಗ್ರ ಆರೋಗ್ಯ ಪದ್ದತಿ: ಡಾ.ಸದಾನಂದ ಪಾಟೀಲ

ಕಲಬುರಗಿ: ಸರ್ವ ಕಾಯಿಲೆಗೆ ಮದ್ದನ್ನು ನೀಡುವ ಆಯುರ್ವೇದ ಪದ್ಧತಿ ಸಮಗ್ರ ಆರೋಗ್ಯ ವ್ಯವಸ್ಥೆಯಾಗಿದ್ದು, ಎಲ್ಲರು ಆಯುರ್ವೇದ ಪದ್ಧತಿಯತ್ತ ಮುಖ ಮಾಡಬೇಕಾದದ್ದು ಇಂದಿನ ಅಗತ್ಯವಾಗಿದೆ ಎಂದು ಖ್ಯಾತ ಆಯುರ್ವೇದ ತಜ್ಞ ವೈದ್ಯ ಡಾ.ಸದಾನಂದ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಶಹಾಬಾದ್ ರಿಂಗ್ ರಸ್ತೆಯ ಸಮೀಪದ ಚರಕ ಆಯುರ್ವೇದ ಆಸ್ಪತ್ರೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ‘10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ’ ಮತ್ತು ‘ಧನ್ವಂತರಿ ಜಯಂತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಒತ್ತಡ […]

Continue Reading

ಪೌರ ಕಾರ್ಮಿಕರಿಗೆ ಸೇವಾ ಭದ್ರತೆಯ ಸೌಲಭ್ಯಗಳು ದೊರೆಯಲಿ

ಕಲಬುರಗಿ: ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವುದು, ಸೂಕ್ತ ವೇತನ, ಸರ್ಕಾರಿ ಸೌಲಭ್ಯಗಳು ದೊರೆಯಬೇಕು ಎಂದು ಹಿರಿಯ ಪೌರ ಕಾರ್ಮಿಕ ತಾರಾಚಂದ ರಾಠೋಡ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ ‘ರಾಜ್ಯ ಪೌರ ಕಾರ್ಮಿಕರ ದಿನಾಚರಣೆ’ಯಲ್ಲಿ ಗೌರವ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಕಸ ವಿಲೇವಾರಿ, ಸ್ವಚ್ಚತೆ ಮಾಡುವ ಕಾರ್ಯ ನಿರ್ವಹಿಸುತ್ತಿರುವ ಕಾಯಕ ಜೀವಿಗಳಾದ ಪೌರ ಕಾರ್ಮಿಕರು ಸ್ವಚ್ಚತೆಯ ರಾಯಭಾರಿಗಳು. ಅವರ […]

Continue Reading

ಕಾಗಿಣಾದಲ್ಲಿ ತಗ್ಗಿದ ಪ್ರವಾಹ: ದಂಡೋತಿ ಸೇತುವೆ ಸಂಚಾರಕ್ಕೆ ಮುಕ್ತ

ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ ಹತ್ತಿರಹರಿಯುತ್ತಿರುವ ಕಾಗಿಣಾ ನದಿಯಲ್ಲಿ ಮಂಗಳವಾರ ಬೆಳಿಗ್ಗೆಪ್ರವಾಹ ಕಡಿಮೆಯಾಗಿ ಕಳೆದ 30 ಗಂಟೆಗಳ ಕಾಲಮುಳುಗಡೆಯಾಗಿದ್ದ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ. ಸೇತುವೆ ಮೇಲೆ ದುರಸ್ತಿ ಮಾಡಿದ್ದ ರಸ್ತೆ ಅಲ್ಲಲ್ಲಿ ಪ್ರವಾಹದ ರಭಸಕ್ಕೆ ಕಿತ್ತು ಹೋಗಿದೆ. ವಾಹನಗಳ ಸಂಚಾರ ಇನ್ನೂ ಪ್ರಾರಂಭವಾಗಿಲ್ಲ. ಬೈಕ್, ಕಾರು, ಜೀಪು ಸಂಚಾರಕ್ಕೆ ಸಮಸ್ಯೆಯಿಲ್ಲ. ಸೇತುವೆ ಮೇಲೆಯೆ ಸಿಮೆಂಟ್ ಕಂಬಗಳ ಹತ್ತಿರ ಅಳವಡಿಸಿದ್ದ ಮೊಬೈಲ್ ನೆಟವರ್ಕ್ ಕೇಬಲ್ ವೈ‌ರ್ ಕಿತ್ತು ಹೋಗಿದೆ. ಬಸ್‌ ಸಂಚಾರ ಪ್ರಾರಂಭವಾಗದ ಕಾರಣ ನದಿಯ ಆಚೆಗಿರುವ ಗ್ರಾಮಗಳ […]

Continue Reading

ನವರಾತ್ರಿ ಉತ್ಸವ: ಜಗದಂಬಾ ದೇವಿಯ ಮೂರ್ತಿ ಮೆರವಣಿಗೆ

ಚಿತ್ತಾಪುರ: ಪಟ್ಟಣದ ಸ್ಟೇಷನ್ ತಾಂಡಾದ ಬಂಜಾರ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನವರಾತ್ರಿ ಉತ್ಸವದ ನಿಮಿತ್ಯ ಜಗದಂಬಾ ದೇವಿಯ ಮೂರ್ತಿ ಮೆರವಣಿಗೆ ಜನಸಾಗರದ ಮಧ್ಯೆ ಸೋಮವಾರ ಅದ್ದೂರಿಯಾಗಿ ನಡೆಯಿತು. ಪಟ್ಟಣದ ರೈಲ್ವೆ ಸ್ಟೇಷನ್’ಯಿಂದ ಪ್ರಾರಂಭವಾದ ಜಗದಂಬಾ ದೇವಿ ಮೂರ್ತಿಯ ಭವ್ಯ ಮೆರವಣಿಗೆ ಅಂಬಿಗರ ಚೌಡಯ್ಯ ಭವನ, ಬಸವೇಶ್ವರ ವೃತ್ತ, ಲಾಡ್ಡಿಂಗ್ ಕ್ರಾಸ್, ಅಂಬೇಡ್ಕರ್ ವೃತ್ತ, ಭುವನೇಶ್ವರಿ ವೃತ್ತ, ಜನತಾ ಚೌಕ್, ನಾಗಾವಿ ಚೌಕ್, ಒಂಟಿ ಕಮಾನ್ ಮುಖಾಂತರ ಸ್ಟೇಷನ್ ತಾಂಡಾದ ದೊಡ್ಡ ಸೇವಾಲಾಲ್ ಮಂದಿರದ ಆವರಣದಲ್ಲಿ ಮೂರ್ತಿ ಪ್ರತಿಷ್ಠಾಪನೆ […]

Continue Reading

ಆಲ್ಝೈಮರ್ಸ್ ಕಾಯಿಲೆ ಬಗ್ಗೆ ಜಾಗೃತಿ ಅಗತ್ಯ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಆಲ್ಝೈಮರ್ಸ್ ಕಾಯಿಲೆ ಎಂದರೆ ಮೆದುಳಿನ ನರದ ವ್ಯವಸ್ಥೆಯಲ್ಲಿನ ಅಸ್ವಸ್ಥತೆಯಾಗಿದ್ದು, ಇದು ಕ್ರಮೇಣ ನೆನಪಿನ ಶಕ್ತಿ, ಆಲೋಚನೆ ಮತ್ತು ತಿಳುವಳಿಕೆಯ ಸಾಮರ್ಥ್ಯವನ್ನು ನಾಶಪಡಿಸುತ್ತದೆ. ಇದು ಅಂತಿಮವಾಗಿ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹದಗೆಡಿಸುತ್ತದೆ. ಈ ಕಾಯಿಲೆಗೆ ಪ್ರಸ್ತುತ ಯಾವುದೆ ಚಿಕಿತ್ಸೆ ಇಲ್ಲ. ಆದರೆ ರೋಗ ಲಕ್ಷಣಗಳನ್ನು ನಿರ್ವಹಿಸಲು ಔಷಧಿ ಮತ್ತು ಆರೈಕೆ ಲಭ್ಯವಿದೆ. ಇದರ ಬಗ್ಗೆ ಜಾಗೃತಿ ಅಗತ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ […]

Continue Reading

ಚಿತ್ತಾಪುರ: ಗುಂಡಗುರ್ತಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಭೇಟಿ, ಪರಿಶೀಲನೆ

ಚಿತ್ತಾಪುರ: ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಾಲೂಕಿನ ಗುಂಡಗುರ್ತಿ ಗ್ರಾಮದ ಮನೆಗಳಲ್ಲಿ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ದವಸ ಧಾನ್ಯ ಸೇರಿದಂತೆ ಇನ್ನಿತರ ಸಾಮಾಗ್ರಿಗಳು ಸಂಪೂರ್ಣವಾಗಿ ಹಾಳಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗ್ರಾಮದ ಪ್ರಮುಖ ರಸ್ತೆ ಸೇರಿದಂತೆ ಮನೆಗಳಲ್ಲಿನೀರು ನುಗ್ಗಿ ಅನಾಹುತ ಸಂಭವಿಸಿದ ಪ್ರತಿಯೊಬ್ಬರ ಮನೆಗೆ ಭೇಟಿ ನೀಡಿ, ಏನೆಲ್ಲ ಸಮಸ್ಯೆಗಳಾಗಿವೆ ಎನ್ನುವುದರ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು. ಹಳ್ಳದ ನಾಲಾ ಸ್ವಚ್ಛತೆ ಕೈಗೊಳ್ಳಲು ಸ್ಥಳದಲ್ಲೇ […]

Continue Reading

ವಾಟ್ಸ್ಆ್ಯಪ್​ನಲ್ಲಿ ಬಂದಿದೆ ಹೊಸ ವಿಡಿಯೋ ನೋಟ್ಸ್ ಫೀಚರ್: ಬಳಸುವುದು ಹೇಗೆ ?

ಬೆಂಗಳೂರು: ವಾಟ್ಸ್​ಆ್ಯಪ್ ತನ್ನ​​ ಲಕ್ಷಾಂತರ ಬಳಕೆದಾರರಿಗಾಗಿ ಹೊಸ ವಿಡಿಯೋ ನೋಟ್ಸ್ ವೈಶಿಷ್ಟ್ಯ ಬಿಡುಗಡೆ ಮಾಡಿದೆ. ಈ ವಾಟ್ಸ್​ಆ್ಯಪ್ ​​ವೈಶಿಷ್ಟ್ಯವನ್ನು ಪ್ರಪಂಚದಾದ್ಯಂತ ಎಲ್ಲಾ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಬಿಡುಗಡೆ ಮಾಡಲಾಗಿದೆ. ವಾಯ್ಸ್ ನೋಟ್​ಗಳಂತೆ, ನೀವು ಈಗ ಮೆಟಾದ ಅತಿದೊಡ್ಡ ತ್ವರಿತ ಸಂದೇಶ ವೇದಿಕೆಯಲ್ಲಿ ವಿಡಿಯೋ ನೋಟ್ಸ್ ಕಳುಹಿಸಬಹುದು. ನಿಮ್ಮ ಸ್ನೇಹಿತರು ಮತ್ತು ಸಂಬಂಧಿಕರಿಗೆ ಸಂದೇಶಗಳ ಮೂಲಕ ಶುಭ ಹಾರೈಸಲು ನೀವು ವಾಟ್ಸ್​ಆ್ಯಪ್​​ನಲ್ಲಿ 60 ಸೆಕೆಂಡುಗಳ ವಿಡಿಯೋ ಟಿಪ್ಪಣಿ ಕಳುಹಿಸಬಹುದು. ಈ ನವರಾತ್ರಿಯಲ್ಲಿ ದುರ್ಗಾ ಪೂಜೆಯ ಶುಭಾಶಯಗಳನ್ನು ವಿಡಿಯೋ […]

Continue Reading

ಅ.1ರಂದು ಡಾ.ಸಿದ್ಧತೋಟೇಂದ್ರ ಶಿವಾಚಾರ್ಯರ ಜನ್ಮದಿನೋತ್ಸವ, ನಾಳೆಯಿಂದ ನಾಲವಾರ ಮಠದಲ್ಲಿ ನವರಾತ್ರಿ ಸಂಭ್ರಮ

ಚಿತ್ತಾಪುರ: ಅ.1 ರಂದು ಮಹಾನವಮಿಯ ಆಯುಧಪೂಜೆಯಂದು, ತಾಲೂಕಿನ ಶ್ರೀಕ್ಷೇತ್ರ ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಹಿಂದಿನ ಪೀಠಾಧಿಪತಿ ಲಿಂ.ತೋಟೇಂದ್ರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಹಾಗೂ ಪ್ರಸ್ತುತ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನೋತ್ಸವ ಸಮಾರಂಭ ಅದ್ಧೂರಿಯಾಗಿ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ. ಪ್ರಸ್ತುತ ಪೂಜ್ಯರ ಜನ್ಮದಿನೋತ್ಸವ ಹಾಗೂ ಮಠದ ಹಿರಿಯ ಗುರುಗಳ ಪುಣ್ಯಸ್ಮರಣೋತ್ಸವ ಪ್ರಯುಕ್ತ ಶ್ರೀಮಠದಲ್ಲಿ ನಾಳೆಯಿಂದ ಪ್ರತಿನಿತ್ಯ ಲಿಂಗೈಕ್ಯ ತೋಟೇಂದ್ರ ಶಿವಯೋಗಿಗಳ ಕರ್ತೃ ಗದ್ದುಗೆಗೆ ರುದ್ರಾಭಿಷೇಕ,‌ ವಿಶೇಷ ಪೂಜೆ, ಮಹಾಮಂಗಳಾರತಿ ನಡೆಯಲಿದೆ ಎಂದರು. […]

Continue Reading

ಜಿಲ್ಲೆಯ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಸಮರೋಪಾದಿಯಲ್ಲಿ ಪರಿಹಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಜಿಲ್ಲೆಯಲ್ಲಿ ನಿನ್ನೆಯಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆ ಮತ್ತು ಪ್ರವಾಹ ಪೀಡಿತ ಗ್ರಾಮಗಳಲ್ಲಿ ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಬೆಣ್ಣೆತೊರಾ ನದಿ ತುಂಬಿ ಹರಿಯುತ್ತಿದ್ದು, ಕಾಳಗಿ ಮತ್ತು ಚಿತ್ತಾಪುರ ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ನೀರು ನುಗ್ಗಿದೆ. ಪ್ರವಾಹ ಪೀಡಿತ […]

Continue Reading

ಇಂದಿನಿಂದ ಉಳಿತಾಯ ಹಬ್ಬ: ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ ?

ದಸರಾ ಹಬ್ಬದ ಜೋಶ್‌ನಲ್ಲಿರುವ ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ‘ದಸರಾ ಗಿಫ್ಟ್‌’ ಕೊಟ್ಟಿದೆ. ಇಂದಿನಿಂದ ಹೊಸ ಜಿಎಸ್‌ಟಿ ದರ ಜಾರಿಗೆ ಬರಲಿದೆ. ಇದರಿಂದ ಅದೆಷ್ಟೋ ದಿನಬಳಕೆ ವಸ್ತುಗಳ ಬೆಲೆ ಕೈಗೆಟುಕುವ ದರದಲ್ಲಿ ಸಿಗಲಿದೆ. ದಿನನಿತ್ಯ ಬಳಸುವ ಬಹುತೇಕ ವಸ್ತುಗಳ ಬೆಲೆ ಕಡಿಮೆಯಾಗಿದೆ. ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆಯಾಗಿದೆ ? ಹಳೆಯ ದರ ಎಷ್ಟಿತ್ತು ? ಎಂಬುದರ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ. ಯಾವ ಉತ್ಪನ್ನಗಳ ಬೆಲೆ ಎಷ್ಟು ? ಈ ಉತ್ಪನ್ನಗಳ ಬೆಲೆಯೂ […]

Continue Reading