ಆರೋಗ್ಯಕರ ಜೀವನ ಶೈಲಿಯಿಂದ ಕಾಯಿಲೆಗಳು ದೂರ: ಡಾ.ಅಂಕಿತ್ ಕದರ್ಗಿ

ಕಲಬುರಗಿ: ಎಲ್ಲರು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಂಡರೆ ಕಾಯಿಲೆಗಳಿಂದ ದೂರವಿರಬಹುದಾಗಿದೆ. ಆರೋಗ್ಯವೇ ಮನುಷ್ಯನ ದೊಡ್ಡ ಸಂಪತ್ತಾಗಿದ್ದು, ಅದನ್ನು ಕಾಪಾಡಿಕೊಳ್ಳಬೇಕು ಎಂದು ತಜ್ಞ ವೈದ್ಯ ಡಾ.ಅಂಕಿತ್ ಆರ್ ಕದರ್ಗಿ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಕೆ.ಎಚ್.ಬಿ ಗ್ರೀನ್ ಪಾರ್ಕನ ಹನುಮಾನ ದೇವಸ್ಥಾನದ ಆವರಣದಲ್ಲಿ ಆಯುಸಿಂಕ್ ಮೆಡಿಕಲ್ ಕಂಪನಿ ಮತ್ತು ಬಡಾವಣೆಯ ಜಂಟಿ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ಒಂದು ದಿನದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಆರೋಗ್ಯ ಕಳೆದುಕೊಂಡು ಬೇರೆಲ್ಲಾ ಸಂಪತ್ತು ಗಳಿಸಿದರೂ ವ್ಯರ್ಥ. ಪ್ರಸ್ತುತ ದಿನಗಳಲ್ಲಿ […]

Continue Reading

ಶಾಂತಿಯುತ ವಾತಾವರಣ ನಿರ್ಮಾಣ ಸರ್ವರ ಜವಾಬ್ದಾರಿ: ಎಚ್.ಬಿ ಪಾಟೀಲ

ಕಲಬುರಗಿ: ಪ್ರತಿಯೊಬ್ಬರು ಸೃಷ್ಟಿಕೃತನ ಮಕ್ಕಳು, ನಾವೆಲ್ಲರು ಒಂದೆ ಎಂಬ ಭಾವನೆ ಮೂಡಬೇಕು. ಎಲ್ಲೆಡೆ ಶಾಂತಿಯುತ ವಾತಾವರಣ ನಿರ್ಮಾಣ ಮಾಡುವುದು ಸರ್ವರ ಜವಾಬ್ದಾರಿಯಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ಕಮಲಾಪುರ ತಾಲೂಕಿನ ಮಹಾಗಾಂವ ಕ್ರಾಸ್ ಸಮೀಪದ ಚಿಗುರು ನಿರ್ಗತಿಕ ಮತ್ತು ಅನಾಥ ಮಕ್ಕಳ ನಿಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಭಾನುವಾರ ಜರುಗಿದ ‘ಅಂತಾರಾಷ್ಟ್ರೀಯ ಶಾಂತಿ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಇಡಿ ಜಗತ್ತೆ ಶಾಂತಿಯ ಮಂತ್ರ ಪಠಿಸಬೇಕಾಗಿದೆ. ಭಯೋತ್ಪಾದನೆ, ವೈಷಮ್ಯ, […]

Continue Reading

ಮಣ್ಣಿನ ಮೂರ್ತಿಗೆ ಪೂಜಿಸಿ ಪಾಲಕರನ್ನು ಸ್ಮರಿಸಿದ ಅನಾಥ ಮಕ್ಕಳು

ಕಲಬುರಗಿ: ಮಹಾಗಾಂವ ಕ್ರಾಸ್ ಸಮೀಪದ ಚಿಗುರು ನಿರ್ಗತಿಕ ಮತ್ತು ಅನಾಥ ಮಕ್ಕಳ ನಿಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಭಾನುವಾರ ಜರುಗಿದ ‘ಮಹಾಲಯ ಅಮವಾಸ್ಯೆ’ಯ ಕಾರ್ಯಕ್ರಮದ ಪ್ರಯುಕ್ತ ಅನಾಥ ಮಕ್ಕಳು ಪಾಲಕರ ಮಣ್ಣಿನ ಮೂರ್ತಿಯನ್ನು ರಚಿಸಿ, ಪೂಜಿಸಿ ಸ್ಮರಿಸಿದ ಅಪರೂಪದ ಘಟನೆ ಜರುಗಿತು. ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಮಾತನಾಡಿ, ಏಕಲವ್ಯ ಮತ್ತು ದ್ರೋಣಾಚಾರ್ಯರ ಮೂರ್ತಿ ಸ್ಥಾಪಿಸಿ ಬಿಲ್ವವಿದ್ಯೆ ಕಲಿತಿದ್ದು ನಾವು ತಿಳಿದಿದ್ದೆವೆ. ಪ್ರಸ್ತುತವಾಗಿ ಇಲ್ಲಿನ ಅನಾಥ ಮಕ್ಕಳು ತಮ್ಮ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥ […]

Continue Reading

ಜಿಎಸ್‌ಟಿ ಸುಧಾರಣೆಯಿಂದ ದಿನನಿತ್ಯದ ಅಗತ್ಯ ವಸ್ತುಗಳು, ಔಷಧಿಗಳು ಅಗ್ಗ: ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಸಲ್ಲಿಸಿದ ಹೊಸೂರಕರ್

ಚಿತ್ತಾಪುರ: ಜಿಎಸ್‌ಟಿ ಉಳಿತಾಯ ಉತ್ಸವದ ಆರಂಭದಿಂದ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸೂರಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಜಿಎಸ್‌ಟಿ ಸುಧಾರಣೆಯಿಂದ ದಿನನಿತ್ಯದ ಅಗತ್ಯ ವಸ್ತುಗಳು, ಔಷಧಿಗಳು, ವಿಮೆ ಅಗ್ಗವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವರಾತ್ರಿಯ ಮುನ್ನಾ ದಿನದಂದು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜಿಎಸ್‌ಟಿ ಉತ್ಸವ (ಉಳಿತಾಯ ಹಬ್ಬ) ಆರಂಭವಾಗುತ್ತಿದೆ ಎಂದು ಹೇಳಿದ್ದಾರೆ. ಕೇವಲ 5% ಮತ್ತು 18% ರ ಎರಡು ತೆರಿಗೆ ಸ್ಲ್ಯಾಬ್‌ಗಳಿಗೆ ತರಲಾಗಿದೆ. ಹಿಂದೆ 12% ತೆರಿಗೆಯಲ್ಲಿದ್ದ […]

Continue Reading

ನಂದಿನಿ: 20 ಉತ್ಪನ್ನಗಳ ದರ ಇಳಿಕೆ

ಬೆಂಗಳೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿಯು (ಕೆಎಂಎಫ್) ತುಪ್ಪ, ಬೆಣ್ಣೆ, ಪನೀರ್ ಸೇರಿ ‘ನಂದಿನಿ’ ಹಾಲಿನ ವಿವಿಧ ಉತ್ಪನ್ನಗಳ ದರವನ್ನು ಇಳಿಕೆ ಮಾಡಿದ್ದು, ಇದೆ ತಿಂಗಳು 22ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಶನಿವಾರ ಸುದ್ದಿಗಾರರೊಂದಿಗೆ ಈ ಬಗ್ಗೆ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ ಶಿವಸ್ವಾಮಿ, ಹಾಲಿನ ಉತ್ಪನ್ನಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಇಳಿಕೆಯ ಪರಿಣಾಮ, ಈ ಪರಿಷ್ಕರಣೆ ಮಾಡಲಾಗಿದೆ. 1 ಲೀಟ‌ರ್ ತುಪ್ಪದ ದರ ರೂ.650 ರಿಂದ 610ಕ್ಕೆ ಇಳಿಕೆ ಮಾಡಲಾಗಿದೆ. […]

Continue Reading

ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು

ಹಾಸನ: ದೇವಾಲಯದ ಕಬ್ಬಿಣದ ಬಾಗಿಲು ತೆರೆದು ಕಲ್ಲಿನ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಬೇಲೂರು ಪುರಸಭೆ ಆವರಣದ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಪ್ರತಿನಿತ್ಯ ಪೂಜೆ ಕೈಂಕರ್ಯಗಳು ನಡೆಯುತ್ತವೆ. ಪ್ರತಿನಿತ್ಯ ವ್ಯಾಪಾರಿಗಳು ಬೆಳಗ್ಗೆ ಗಣೇಶ ಮೂರ್ತಿಗೆ ಕೈಮುಗಿದು ವ್ಯಾಪಾರ ಆರಂಭಿಸುತ್ತಾರೆ. ಶನಿವಾರ ರಾತ್ರಿ ಪುರಸಭೆ ಗೇಟ್‌ಗೆ ಬೀಗ ಹಾಕಿಕೊಂಡು ತೆರಳಿದ್ದರು. ಇಂದು ಬೆಳಗ್ಗೆ ಭಕ್ತಾಧಿಗಳು ಕೈಮುಗಿಯಲು ಹೋದಾಗ ಗಣಪತಿಗೆ ಚಪ್ಪಲಿ ಹಾರ ಹಾಕಿ […]

Continue Reading

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ 2026ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣದಲ್ಲಿ www.kseab.karnataka.gov.in ವೇಳಾಪಟ್ಟಿ ಪ್ರಕಟಿಸಲಾಗಿದೆ. 2026ರ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 09 ರವರೆಗೆ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಯನ್ನು ಮಂಡಲಿಯ ಇ-ಮೇಲ್ ವಿಳಾಸ: chairpersonkseab@gmail.com ಗೆ ಹಾಗೂ ಹಾರ್ಡ್ ಪ್ರತಿಯನ್ನು […]

Continue Reading

ಜನರ ಸಂಕಟಕ್ಕೆ ಸ್ಪಂದಿಸಲು ಮುಖ್ಯಾಧಿಕಾರಿಗೆ ಬಿಜೆಪಿ ಆಗ್ರಹ

ವಾಡಿ: ಪಟ್ಟಣದ ಪುರಸಭೆ ಜನಸಾಮಾನ್ಯರಿಗೆ ಮೂಲಸೌಕರ್ಯ ಒದಗಿಸುವಲ್ಲಿ ವಿಫಲವಾಗುತ್ತಿದೆ, ಇದನ್ನು ಸರಿಪಡಿಸಿ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮತ್ತು ಮುಖಂಡರು ಆಗ್ರಹಿಸಿದರು. ಅಭಿವೃದ್ಧಿ ಬಗ್ಗೆ ಕೇಳಿದರೆ ಜನಪ್ರತಿನಿಧಿಗಳಿಲ್ಲದ ಕಾರಣ ಕೋಟ್ಯಾಂತರ ರೂ ವಾಪಸ್ ಹೋಗಿದೆ ಅಂತಿರಾ, ಹೀಗಾದರೆ ಇಲ್ಲಿನ ಜನರ ಸಂಕಟಕ್ಕೆ ಪರಿಹಾರ ಯಾವಾಗ ಎಂದರು. ಕುಡಿಯುವ ನೀರು 3-4 ದಿನಗಳಿಗೊಮ್ಮೆ ರಾಡಿ ನೀರು ಸರಬರಾಜು, ನೀರು ಸರಬರಾಜಾದರೆ ಪೈಪ್’ಗಳ ಸೋರಿಕೆ, ಅಕಾಲಿಕ ಮಳೆಯಿಂದ ಚರಂಡಿ ನೀರು ರಸ್ತೆ ಹಾಗೂ ಮನೆಯೊಳಗೆ, ಅಸಮರ್ಪಕ ಬಿದಿ ದೀಪಗಳು, […]

Continue Reading

ಸೆ.22 ರಿಂದ ಜಾತಿ ಜನಗಣತಿ ಆರಂಭ: ಸರ್ಕಾರದಿಂದ ಅಧಿಕೃತ ಆದೇಶ ಜಾರಿ

ಬೆಂಗಳೂರು: ಜಾತಿ ಜನಗಣತಿ ನಡೆಯುವುದು ಖಚಿತವಾಗಿದ್ದು ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ. ಸೆ.22 ರಿಂದ ಅ.7 ರವರೆಗೆ ಸಮೀಕ್ಷೆ ನಡೆಸಲಾಗುವುದು ಎಂದು ಆದೇಶಲ್ಲಿ ತಿಳಿಸಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ನಡೆಸಲಾಗುತ್ತಿದ್ದು ಸಮೀಕ್ಷೆಗೆ ಸಿದ್ಧರಿರುವಂತೆ ರಾಜ್ಯದ ಜನತೆಗೆ ತಿಳಿಸಲಾಗಿದೆ. ಆದರೆ ಈಗ ಎದ್ದಿರುವ ಗೊಂದಲ ಬಗೆಹರಿಸುವ ಬಗ್ಗೆ ಆದೇಶದಲ್ಲಿ ಯಾವುದೆ ಸ್ಪಷ್ಟನೆ ನೀಡಿಲ್ಲ. ಈಗಾಗಲೇ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ […]

Continue Reading

ರಾವೂರ: ಸೆ.21 ರಿಂದ ಸಿದ್ದಲಿಂಗ ಶ್ರೀಗಳ ಮೌನಾನುಷ್ಠಾನ

ರಾವೂರ: ನವರಾತ್ರಿ ಉತ್ಸವದ ಅಂಗವಾಗಿ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಸೆ.21 ರಿಂದ ಮೌನ ಅನುಷ್ಠಾನ ಕೈಗೊಳ್ಳಲಿದ್ದಾರೆ ಎಂದು ಶ್ರೀಮಠದ ಕಾರ್ಯದರ್ಶಿ ಡಾ.ಗುಂಡಣ್ಣ ಬಾಳಿ ತಿಳಿಸಿದ್ದಾರೆ. ಆಲೂರ ಗ್ರಾಮದ ಶಿಖರೇಶ್ವರ ದೇವಸ್ಥಾನದಲ್ಲಿ ಸೆಪ್ಟೆಂಬರ್ 21 ರಂದು ರವಿವಾರ ರಾತ್ರಿ ಮೌನ ಅನುಷ್ಠಾನ ಪ್ರಾರಂಭಿಸುವರು. ಅಕ್ಟೋಬರ್ 2 ರಂದು ದಸರಾ ಹಬ್ಬದ ದಿನ ಗುರುವಾರ ಮೌನ ಅನುಷ್ಠಾನ ಮಂಗಲವಾಗಿ ಅಂದು ಸಂಜೆ 5.30 ಕ್ಕೆ ಪೂಜ್ಯರು ರಾವೂರ ಸಿದ್ದಲಿಂಗೇಶ್ವರ ಸಂಸ್ಥಾನ ಮಠದಲ್ಲಿ […]

Continue Reading