ಬಿದಿರಿನಿಂದ ಆರ್ಥಿಕ ಸದೃಢತೆ ಸಾಧ್ಯ: ಎಚ್.ಬಿ ಪಾಟೀಲ

ಕಲಬುರಗಿ: ಬಹುಪಯೋಗಿಯಾದ ಬಿದರಿನಿಂದ ಆರ್ಥಿಕವಾಗಿ ಸದೃಢವಾಗಲು ಸಾಧ್ಯ, ರೈತರು ಇದರ ಬಗ್ಗೆ ಚಿತ್ತ ಹರಿಸುವುದು ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಬಿದಿರು ದಿನಾಚರಣೆ’ಯನ್ನು ಬಿದಿರಿನ ಗಿಡಗಳಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಬಿದಿರು ಅರಣ್ಯ ಬೆಳೆಯಾಗಿದ್ದು, ಬುಟ್ಟಿ, ಪೀಠೋಪಕರಣಗಳ ತಯಾರಿಕೆ, ಕೃಷಿ ಉಪಕರಣಗಳ ತಯಾರಿಕೆ, ಮನೆ ನಿರ್ಮಾಣಕ್ಕೆ ಸಲಕರಣೆ, ಜೊತೆಗೆ […]

Continue Reading

ಜಲ ಸಂರಕ್ಷಣೆ, ಸೂಕ್ತ ನಿರ್ವಹಣೆ ಅಗತ್ಯ: ಎಚ್.ಬಿ ಪಾಟೀಲ್

ಕಲಬುರಗಿ: ಸಕಲ ಜೀವರಾಶಿಗಳಿಗೆ ಆಸರೆಯಾದ ಜಲವನ್ನು ಹಾಳು ಮಾಡದೆ, ಸಂರಕ್ಷಣೆ ಮತ್ತು ಸೂಕ್ತ ನಿರ್ವಹಣೆ ಮಾಡಬೇಕು ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದಲ್ಲಿನ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಜಲ ಮೇಲ್ವಿಚಾರಣೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾಗತಿಕ ನೀರಿನ ಬಿಕ್ಕಟ್ಟಿನ ಬಗ್ಗೆ ಜಾಗೃತಿ ಮೂಡಿಸುವುದು, ಜಲ ಸಂರಕ್ಷಣೆಯ ಬಗ್ಗೆ ಕ್ರಮ ತೆಗೆದುಕೊಳ್ಳಲು ಜನರನ್ನು ಪ್ರೋತ್ಸಾಹಿಸುವ ಕಾರ್ಯ ಇನ್ನೂ ಹೆಚ್ಚಿನ ಮಟ್ಟದಲ್ಲಿ […]

Continue Reading

ಶಬರಿಮಲೆ ವಿಗ್ರಹದಿಂದ ಚಿನ್ನ ನಾಪತ್ತೆ: ತನಿಖೆಗೆ ಆದೇಶಿಸಿದ ಹೈಕೋರ್ಟ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿದೆ. ಹಳೆಯ ತಾಮ್ರ ಮತ್ತು ಚಿನ್ನದ ಲೇಪನ ಮೂರ್ತಿಗಳ ತೂಕದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಆಯುಕ್ತರು ಆರೋಪಿಸಿದ್ದಾರೆ. 2019ರಲ್ಲಿ ದೇವರ ಮೂರ್ತಿಗಳಿಗೆ ಪುನರ್‌ಲೇಪನ ಮಾಡಲಾಗಿತ್ತು. ಈ ವೇಳೆ ತಾಮ್ರದ ಮೂರ್ತಿಗೆ ಹೊದಿಸಿದ್ದ ಚಿನ್ನದ ಕವಚದಲ್ಲಿ 4.5 ಕೆಜಿ ಚಿನ್ನ ಕಳ್ಳತನವಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೈಕೋರ್ಟ್‌ […]

Continue Reading

ಕೇರಳದಲ್ಲಿ ಭೀತಿ ಹುಟ್ಟಿಸಿದ ಮೆದುಳು ತಿನ್ನುವ ಅಮೀಬಾ

ವಿಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ಹೊಸ ಹೊಸ ಸಂಶೋಧನೆಗಳು ಅಚ್ಚರಿ ಮೂಡಿಸುತ್ತಿದ್ದರೆ, ಹೊಸ ಮಾದರಿಯ ವೈರಸ್‌ಗಳು ವಿಶ್ವದಾದ್ಯಂತ ಜನರ ನಿದ್ದೆಗೆಡಿಸಿವೆ. ಕೆಲ ದಿನಗಳ ಹಿಂದೆ ಚೀನಾದಲ್ಲಿ ಪತ್ತೆಯಾಗಿದ್ದ ನ್ಯುಮೋನಿಯಾ ಮಾದರಿಯ ವೈರಸ್ ವಿಶ್ವವನ್ನೆ ಆತಂಕಕ್ಕೆ ದೂಡಿತ್ತು. ನಿರ್ಲಕ್ಷ್ಯ ವಹಿಸಿದರೆ ಇದರಿಂದ ಭಾರತಕ್ಕೂ ಸಂಕಷ್ಟ ಕಟ್ಟಿಟ್ಟಬುತ್ತಿ ಎಂದು ಸಾಂಕ್ರಾಮಿಕ ರೋಗ ತಜ್ಞರು ಎಚ್ಚರಿಸಿದ್ದರು. ಅದಕ್ಕಿಂತಲೂ ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಕಾಣಿಸಿಕೊಂಡಿರುವ ಮೆದುಳು ತಿನ್ನುವ ಅಮೀಬಾ ಸೋಂಕು ಜನರ ನಿದ್ದೆಗೆಡಿಸಿದೆ. 1962ರಲ್ಲಿ ಕಾಣಿಸಿಕೊಂಡಿದ್ದ ಈ ಸೋಂಕು ಭಾರತದಲ್ಲಿ ಮೊದಲು ಕಾಣಿಸಿಕೊಂಡಿದ್ದು, ಹರಿಯಾಣದ […]

Continue Reading

ವಾಡಿ: ಪ್ರಧಾನಿ ಮೋದಿಯವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ

ವಾಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಮುಖಂಡರು ಪಟ್ಟಣದ ಶಕ್ತಿ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜೀವನದುದ್ದಕ್ಕೂ ದೇಶದ ಒಳಿತಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆರೋಗ್ಯದಿಂದ ನೂರಾರು ವರ್ಷಗಳು ಬಾಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೆವೆ ಎಂದರು. ಪುರಸಭೆ ಮಾಜಿ ವಿರೋಧ ಪಕ್ಷದ ನಾಯಕ ಭೀಮಶಾ ಜಿರೋಳ್ಳಿ ಮಾತನಾಡಿ, ದೇಶದ ಕಟ್ಟಕಡೆಯ ವ್ಯಕ್ತಿಯೂ ನಿರ್ಭೀತಿಯಿಂದ ನೆಮ್ಮದಿಯ ಜೀವನ […]

Continue Reading

ಶಹಾಬಾದ್: ಸತತ ಮಳೆಯಿಂದ ದೇವಾಲಯ ಜಲಾವೃತ, ಜನಜೀವನ ಅಸ್ತವ್ಯಸ್ತ

ಸುದ್ದಿ ಸಂಗ್ರಹ ಶಹಾಬಾದ್ಮಹಾರಾಷ್ಟ್ರ ಜಲಾಶಯಗಳಿಂದ ನಿರಂತರ ನೀರು ಹರಿಬಿಡುತ್ತಿರುವ ಪರಿಣಾಮ ನಗರದ ಹಳೆ ಶಹಬಾದ್, ಸಂಗ್ ಏರಿಯಾ ಅಪ್ಪರ ಮಡ್ಡಿ ಲೋವರ್‌ ಮಡ್ಡಿ, ಸುಮಾರು ನಾಲ್ಕು ವಾರ್ಡಗಳಲ್ಲಿ ಹಳ್ಳದ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಳೆ ಶಹಾಬಾದ್ ವಿಶ್ವರಾಧ್ಯ ಮಠ ಸಂಪೂರ್ಣ ಜಲದಿಗ್ಧಂಧನವಾಗಿದೆ. ಆಕಸ್ಮಿಕವಾಗಿ ಮಠದಲ್ಲಿ ಉಳಿದುಕೊಂಡ ಮಾನಸಿಕ ಅಸ್ತವ್ಯಸ್ತ ಮಹೆಬೂಬ್ ಪಟೇಲ್ ಅವರನ್ನು ರಕ್ಷಿಸಿ ಅಗ್ನಿಶಾಮಕ ದಳದ ತಂಡವು ಸುರಕ್ಷಿತ ಸ್ಥಳಕ್ಕೆ ತಲುಪಿಸಿದ್ದಾರೆ. ವಾರ್ಡ್ ನಂಬರ್ 7, 8, 9, 26 ಮತ್ತು 27ರಲ್ಲಿ ಹೆಚ್ಚು […]

Continue Reading

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ 5 ವರ್ಷದ ನಂತರ ಒಮ್ಮೆಲೆ 4 ಮಕ್ಕಳಿಗೆ ಜನ್ಮ ನೀಡಿದ ತಾಯಿ

ಪುಣೆ: ಅವಳಿಗಳು ಜನಿಸುವುದೆ ಅಪರೂಪ, ತ್ರಿವಳಿ ಮಕ್ಕಳು ಇನ್ನೂ ಅಪರೂಪ ಹಾಗೂ ವಿರಳ ಆದರೆ ನಾಲ್ಕು ಮಕ್ಕಳು ಒಟ್ಟಿಗೆ ಜನಿಸುವುದು ಅಪರೂಪದಲ್ಲಿ ಅಪರೂಪ, ವಿರಳಾತಿ ವಿರಳವಾಗಿದೆ. ಆದರೆ ಇಲ್ಲೊಬ್ಬರು ತಾಯಿ ತ್ರಿವಳಿಗಳಿಗೆ ಜನ್ಮ ನೀಡಿದ ಐದು ವರ್ಷಗಳ ನಂತರ ಮತ್ತೆ ನಾಲ್ಕು ಮಕ್ಕಳಿಗೆ ಒಟ್ಟಿಗೆ ಜನ್ಮ ನೀಡಿದ್ದಾರೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಆಸ್ಪತ್ರೆಯಲ್ಲಿ ಅಪರೂಪದ ಘಟನೆ ನಡೆದಿದೆ. 38 ವಾರಗಳು ತುಂಬುವ ಮೊದಲೇ 33ನೇ ವಾರದಲ್ಲೇ ಸಿ-ಸೆಕ್ಷನ್ ಅಥವಾ ಶಸ್ತ್ರಚಿಕಿತ್ಸೆಯ ಮೂಲಕ 27 ವರ್ಷದ ಮಹಿಳೆಗೆ ಶಸ್ತ್ರಚಿಕಿತ್ಸೆ […]

Continue Reading

ರೋಗಿಗಳಿಗೆ ಸುರಕ್ಷಿತ ಚಿಕಿತ್ಸೆ ಅಗತ್ಯ: ಡಾ.ರಾಜಶೇಖರ ಪಾಟೀಲ

ಕಲಬುರಗಿ: ರೋಗಿಗೆ ಚಿಕಿತ್ಸೆ ನೀಡುವಾಗ ಸುರಕ್ಷಿತವಾಗಿ ನೀಡುವ ಜೊತೆಗೆ ಆಗಬಹುದಾದ ಹಾನಿಯನ್ನು ತಡೆಗಟ್ಟುವುದು, ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ಅನಗತ್ಯ ಹಾನಿಯ ಅಪಾಯ ತಗ್ಗಿಸುವುದು ಅಗತ್ಯವಾಗಿದೆ ಎಂದು ಖ್ಯಾತ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ಬಸವ ಗಂಗಾ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಸಂಜೆ ಜರುಗಿದ “ವಿಶ್ವ ರೋಗಿಗಳ ಸುರಕ್ಷತಾ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ರೋಗಿಯ ಆರೈಕೆ ಮಾಡುವ ಪ್ರಕ್ರಿಯೆಯ ಪ್ರತಿಯೊಂದು […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ವಿಶ್ವಕರ್ಮ ಜಯಂತಿ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ವಿಶ್ವಕರ್ಮ ಜಯಂತಿಯ ಅಂಗವಾಗಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಮುಖಂಡರು ಪುಷ್ಪನಮನ ಸಲ್ಲಿಸಿದರು. ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ, ವಿಶ್ವಕರ್ಮ ಸಮಾಜದ ಮುಖಂಡ ಬಸವರಾಜ ಪಂಚಾಳ ಮಾತನಾಡಿ, ವಿಶ್ವಕರ್ಮ ಜಯಂತಿಯು ದೈವಿಕ ವಾಸ್ತುಶಿಲ್ಪಿಯ ಜನ್ಮವನ್ನು ಆಚರಿಸುವ ದಿನ ಮಾತ್ರವಲ್ಲ, ಕುಶಲಕರ್ಮಿಗಳು ಮತ್ತು ಕಾರ್ಮಿಕರ ಕೊಡುಗೆ ಗುರುತಿಸುವ ಸಂದರ್ಭವಾಗಿದೆ ಎಂದರು. ಜಗತ್ತನ್ನು ನಿರ್ಮಿಸಲು ಮತ್ತು ರೂಪಿಸಲು ತಮ್ಮ ಕೈಗಳಿಂದ ಕೆಲಸ ಮಾಡುವವರ ಕೌಶಲ್ಯ, ಸಮರ್ಪಣೆ ಮತ್ತು ಸೃಜನಶೀಲತೆಯನ್ನು ಶ್ಲಾಘಿಸುವ ದಿನವಿದು. ಈ ಹಬ್ಬವು ನಮ್ಮ […]

Continue Reading

ಬಿಜೆಪಿ ಕಛೇರಿಯಲ್ಲಿ ಕಲ್ಯಾಣ ಕರ್ನಾಟಕ ಸ್ವಾತಂತ್ರೋತ್ಸವ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬ್ರಿಟಿಷರು ಭಾರತವನ್ನು ಬಿಟ್ಟು ತೊಲಗುವಾಗ ಯಾವ ಕಡೆ ಹೋಗಬೇಕು ಎನ್ನುವ ಬಗ್ಗೆ ದೇಶಿಯ ಸಂಸ್ಥಾನಗಳಿಗೆ ಮುಕ್ತ ಅವಕಾಶ ನೀಡಿರುವುದು ಹೈದರಾಬಾದ್‌ ಕರ್ನಾಟಕ ಭಾಗದವರ ಸ್ಥಿತಿ ಬೆಂಕಿಯಿಂದ ಬಾಣಲೆಗೆ ಬಿದ್ದಂತಾಗಿತ್ತು. ದೇಶ ಸ್ವಾತಂತ್ರ್ಯಗೊಂಡಾಗ ಸುಮಾರು 500 ದೇಶಿಯ ಸಂಸ್ಥಾನಗಳು ಇದ್ದವು. ಅದರಲ್ಲಿ ಹೈದರಾಬಾದ್‌ ಸಂಸ್ಥಾನವೂ ಒಂದು. 1774 ರಿಂದ 1948 ರವರೆಗೆ […]

Continue Reading