ಚಿತ್ತಾಪುರ: ಯಲ್ಲಮ್ಮ ದೇವಿಯ ಬೆಳ್ಳಿ ಮೂರ್ತಿಯ ಎರಡು ಕೈ ತುಂಡು ಮಾಡಿ ಹೊತ್ತೊಯ್ದ ಕಳ್ಳರು

ಚಿತ್ತಾಪುರ: ಯಲ್ಲಮ್ಮ ದೇವಸ್ಥಾನದ ಬೀಗದ ಕೈ ಮುರಿದು ದೇವಿಯ ಬೆಳ್ಳಿ ಮೂರ್ತಿಯ 2 ಕೈಗಳನ್ನು ತುಂಡು ಮಾಡಿ ತೆಗೆದುಕೊಂಡು ಹೋದ ಘಟನೆ ಪಟ್ಟಣದ ಬಾಹರಪೇಟ್ ಸಮೀಪ ಕೊತಲಾಪೂರ ಯಲ್ಲಮ್ಮ ದೇವಸ್ಥಾನದಲ್ಲಿ ನಡೆದಿದೆ. ನವರಾತ್ರಿ ನಿಮಿತ್ಯ ದೇವಸ್ಥಾನಕ್ಕೆ ಸುಣ್ಣ-ಬಣ್ಣ ಮಾಡಿ ಅಲಂಕಾರ ಕಾರ್ಯ ನಡೆಯುತ್ತಿತ್ತು. ಸೆ.16 ರಂದು ಮಂಗಳವಾರ ಕೊನೆಯ ಹಂತಕ್ಕೆ ತಲುಪಿತ್ತು. ಉಳಿದ ಕಾರ್ಯ ನಾಳೆ ಮಾಡಿದರಾಯಿತು ಎಂದು ದೇವಸ್ಥಾನದ ಗೇಟ್’ಗೆ ಬೀಗ ಹಾಕಿ ಹೋಗಲಾಗಿತ್ತು. ಸೆ.17 ರಂದು ಬುಧವಾರ ಬೆಳಗ್ಗೆ ದೇವಿಯ ಪೂಜಾ ಕಾರ್ಯಕ್ಕೆ ಅರ್ಚಕ […]

Continue Reading

ಯಾವುದೆ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುವದಿಲ್ಲ: ಕೆ.ಹೆಚ್ ಮುನಿಯಪ್ಪ

ಬೆಂಗಳೂರು: ಯಾವುದೆ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನ ರದ್ದು ಮಾಡುವದಿಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೆವೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಅನರ್ಹ ರೇಷನ್ ಕಾರ್ಡ್‌ಗಳ ರದ್ದು ವಿಚಾರವಾಗಿ ಮಾತನಾಡಿದ ಅವರು, ಬಿಪಿಎಲ್‌ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್‌ಗೆ ವರ್ಗಾವಣೆ ಮಾಡುತ್ತೆವೆ. ಹೊರತು ಯಾವ ಕಾರ್ಡನ್ನು ರದ್ದು ಮಾಡುವುದಿಲ್ಲ, ಎಲ್ಲಾ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತೆವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ […]

Continue Reading

ಶಹಾಬಾದ: ರಾಣಿ ಅಬ್ಬಕ್ಕ, ಅಹಲ್ಯಾಬಾಯಿ ಹೋಳ್ಕರ್, ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಸುದ್ದಿ ಸಂಗ್ರಹ ಶಹಾಬಾದ ಎಸ್’ಎಸ್ ಮರಗೋಳ ಕಾಲೇಜಿನಲ್ಲಿ ರಾಣಿ ಅಬ್ಬಕ್ಕ ದೇವಿರವರ 500ನೇ ಜನ್ಮ ಶತಾಬ್ದಿ, ಅಹಲ್ಯಾಬಾಯಿ ಹೋಳ್ಕರ್ ರವರ 300ನೇ ಜನ್ಮ ದಿನಾಚರಣೆ ಮತ್ತು ಕಿತ್ತೂರ ರಾಣಿ ಚೆನ್ನಮ್ಮ ರವರ 200ನೇ ಜಯಂತೋತ್ಸವ ನಿಮಿತ್ಯ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು. ಪಟ್ಟಣದ ಎಸ್’ಎಸ್ ಮರಗೋಳ ಕಾಲೇಜಿನಲ್ಲಿ ಎಸ್’ಎಸ್ ಮರಗೋಳ ಪದವಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಕ್ರಮವನ್ನು […]

Continue Reading

ಲಂಚ ಪಡೆದು ಸಿಕ್ಕಿಬಿದ್ದ ಬೆಂಗಳೂರು, ಬೀದರ್, ಮಂಡ್ಯದ​​ ಮೂವರು ವೈದ್ಯರ ಅಮಾನತು

ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ, ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ಕರ್ನಾಟಕದ ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥ ಡಾ. ಮಂಜಪ್ಪ ಸಿ.ಎನ್, ಬೀದರ್ […]

Continue Reading

SBI ಬ್ಯಾಂಕ್‌ ದರೋಡೆ: ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಬ್ಯಾಂಕ್‌ನಲ್ಲಿ ಕಳ್ಳರು ಕೈಚಳಕ ತೋರಿಸಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ನಲ್ಲಿ ದರೋಡೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ ಕಟ್ಟಿಹಾಕಿ ಕಳ್ಳರು ಕಳ್ಳತನ ಮಾಡಿದ್ದಾರೆ. ಬ್ಯಾಂಕ್ ವಹಿವಾಟು ಸಮಯ ಮುಗಿದ ಮೇಲೆ ಬ್ಯಾಂಕ್‌‌ಗೆ 5ಕ್ಕೂ ಹೆಚ್ಚು ಮುಸುಕುಧಾರಿಗಳು ನುಗ್ಗಿ ಈ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ […]

Continue Reading

ಯುಪಿಐ ದೈನಂದಿನ ವಹಿವಾಟು ಮಿತಿ 10 ಲಕ್ಷದವರೆಗೆ ಏರಿಕೆ

ನವದೆಹಲಿ: ಡಿಜಿಟಲ್‌ ಪಾವತಿಯಲ್ಲಿ ಕ್ರಾಂತಿಗೆ ಕಾರಣವಾದ ಯುಪಿಐ ನಿಯಮದಲ್ಲಿ ಸರ್ಕಾರ ಕೆಲ ಬದಲಾವಣೆ ಮಾಡಿದ್ದು, ಸೆ.15ರಿಂದ ಈ ಬದಲಾವಣೆ ಜಾರಿಗೆ ಬಂದಿದೆ. ಬದಲಾವಣೆ ಅನ್ವಯ ಸಾಲ, ಇಎಂಐ, ಬಂಡವಾಳ ಮಾರುಕಟ್ಟೆ ಹೂಡಿಕೆ, ವಿಮಾ ಕಂತುಗಳ ಪಾವತಿಯ ದೈನಂದಿನ ಮಿತಿಯನ್ನು ದಿನಕ್ಕೆ 10 ಲಕ್ಷ ರೂ.ಗೆ ಏರಿಸಲಾಗಿದೆ. ಒಂದು ಬಾರಿಗೆ 5 ಲಕ್ಷ ರೂ. ಮೊತ್ತದ ವಹಿವಾಟು ನಡೆಸಬಹುದು. ಉಳಿದಂತೆ ಕ್ರೆಡಿಟ್‌ ಕಾರ್ಡ್‌ ಬಿಲ್‌ ಪಾವತಿಯನ್ನು ಒಂದು ಬಾರಿಗೆ 5 ಲಕ್ಷ ರೂ.ನಂತೆ ದಿನಕ್ಕೆ ಗರಿಷ್ಠ 6 ಲಕ್ಷ […]

Continue Reading

ಬೀದರ್: 3ನೇ ಮಹಡಿಯಿಂದ ತಳ್ಳಿ ಮಲ ಮಗಳನ್ನು ಕೊಲೆ ಮಾಡಿದ ಮಹಿಳೆ

ಬೀದರ್: ಆಟ ಆಡಿಸುವ ನೆಪದಲ್ಲಿ ಮಲ ಮಗಳನ್ನು ಟೆರೇಸ್ ಮೇಲೆ ಕರೆದುಕೊಂಡು ಹೋಗಿ ಮೂರನೇ ಮಹಡಿಯಿಂದ ಮಲತಾಯಿ ತಳ್ಳಿ ಕೊಲೆ ಮಾಡಿದ ಅಮಾನವೀಯ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ. 7 ವರ್ಷದ ಸಾನ್ವಿ ಮೃತ ಬಾಲಕಿ (ಮಲಮಗಳು) ಹಾಗೂ ಆರೋಪಿಯನ್ನು ರಾಧಾ (ಮಲತಾಯಿ) ಎಂದು ಗುರುತಿಸಲಾಗಿದೆ. ಆ.27ರಂದು ಮಲತಾಯಿ ರಾಧಾ ಬಾಲಕಿಗೆ (ಮಲಮಗಳು) ಆಟ ಆಡಿಸುವ ನೆಪದಲ್ಲಿ 3ನೇ ಮಹಡಿಗೆ ಕರೆದುಕೊಂಡು ಹೋಗಿದ್ದಳು. ಆ ವೇಳೆ ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಳು. ಎಲ್ಲರಿಗೂ […]

Continue Reading

ರಾಜ್ಯದಲ್ಲಿ 3 ದಿನ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ 16 ಮತ್ತು 17ರಂದು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿರುವ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೆ.18 ರಂದು ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಗ್ರಾಮಾಂತರ, […]

Continue Reading

ಅಂಬುಲೆನ್ಸ್‌ಗೆ ದಾರಿ ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

ಧಾರವಾಡ: ಅಂಬುಲೆನ್ಸ್‌ಗೆ ಎಷ್ಟೋ ಜನ ದಾರಿ ಬಿಟ್ಟುಕೊಡುವುದಿಲ್ಲ. ಇನ್ನು ಸಿಎಂ ಕಾರು ಬರುವಾಗ ಅಂಬುಲೆನ್ಸ್‌ಗೆ ದಾರಿ ಬಿಟ್ಟುಕೊಡುವುದಿಲ್ಲ, ಟ್ರಾಫಿಕ್‌ನಲ್ಲೆ ಅಂಬುಲೆನ್ಸ್ ಸಿಲುಕುತ್ತೆ ಎಂದು ದೂರಿದವರೆ ಹೆಚ್ಚು. ಆದರೆ ಸಿಎಂ ಸಿದ್ದರಾಮಯ್ಯ, ಅಂಬುಲೆನ್ಸ್‌ಗೆ ದಾರಿ ಮಾಡಿಕೊಡುವ ಮೂಲಕ ಅಪವಾದದಿಂದ ಮುಕ್ತರಾಗಿದ್ದಾರೆ. ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಅಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುವಾಗ ದಾರಿ ಬಿಟ್ಟುಕೊಟ್ಟಿದ್ದಾರೆ ಸಿಎಂ ಸಿದ್ದರಾಮಯ್ಯ. ಧಾರವಾಡ ಕೃಷಿ ವಿವಿಯ ಕೃಷಿ ಮೇಳ ಉದ್ಘಾಟನೆ ಕಾರ್ಯಕ್ರಮ ಮುಗಿಸಿ ಹುಬ್ಬಳ್ಳಿಗೆ ವಾಪಸ್ ಆಗುತ್ತಿದ್ದ ವೇಳೆ ಧಾರವಾಡ ನಗರದ ಎನ್‌ಟಿಟಿಎಫ್ ಬಳಿ […]

Continue Reading

ಸ್ಯಾಂಡಲ್‌ವುಡ್‌ನ ಬುದ್ಧಿವಂತನಿಗೂ ಹ್ಯಾಕರ್‌ ಕಾಟ: ವಿಡಿಯೋ ಹಂಚಿಕೊಂಡ ಉಪ್ಪಿ ದಂಪತಿ

ಬೆಂಗಳೂರು: ಇತ್ತೀಚೆಗೆ ಮೊಬೈಲ್ ಹ್ಯಾಕರ್‌ಗಳ ಕಾಟ ಹೆಚ್ಚಾಗಿದೆ. ಈ ಬಿಸಿ ಈಗ ಸ್ಯಾಂಡಲ್‌ವುಡ್‌ನ ಬುದ್ಧಿವಂತನಿಗೂ ತಟ್ಟಿದೆ. ಉಪೇಂದ್ರ ಹಾಗೂ ಪ್ರಿಯಾಂಕಾ ದಂಪತಿ ಬೆಳ್ಳಂಬೆಳಗ್ಗೆ ವೀಡಿಯೋ ಮೂಲಕ ತಮ್ಮ ಮೊಬೈಲ್ ಹ್ಯಾಕ್ ಆಗಿರುವ ವಿಚಾರ ಬಹಿರಂಗಪಡಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ನಮ್ಮಿಬ್ಬರ ಫೋನ್ ಹ್ಯಾಕ್ ಆಗಿದೆ. ಯಾರಾದರೂ ನಮ್ಮ ಹೆಸರಲ್ಲಿ ಹಣ ಕೇಳಿದರೆ ಕೊಡಬೇಡಿ, ಅದಕ್ಕೂ ಮುನ್ನ ಅನೌನ್ಸ್ ಮಾಡ್ತಿದ್ದೆವೆ. ಮುಂದೆ ಪೊಲೀಸರಿಗೆ ದೂರು ಕೊಡುತ್ತೆವೆ ಎಂದಿದ್ದಾರೆ ದಂಪತಿ. ಫೋನ್ ಹ್ಯಾಕ್ ಆಗಿದ್ದು ಹೇಗೆ ?ಆನ್‌ಲೈನ್‌ನಲ್ಲಿ ವಸ್ತುವೊಂದನ್ನು […]

Continue Reading