ಜೇವರ್ಗಿ ಪುರಸಭೆಯಲ್ಲಿ ಗೋಲ್ಮಾಲ್: 3 ವರ್ಷದಲ್ಲಿ 188 ನಕಲಿ ಖಾತೆಗಳು ಪತ್ತೆ

ಕಲಬುರಗಿ: ಇತ್ತೀಚೆಗಷ್ಟೇ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಗೋಲ್ಮಾಲ್ ಪ್ರಕರಣ ವರದಿಯಾದ ಬೆನ್ನಲ್ಲೆ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ಜೇವರ್ಗಿ ಪುರಸಭೆಯಲ್ಲಿ 3 ವರ್ಷದಲ್ಲಿ 188 ನಕಲಿ ಖಾತೆಗಳು ಪತ್ತೆಯಾಗಿದ್ದು, 100ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ. ಜಮೀನು, ನಿವೇಶನ ಮತ್ತು ಕಮರ್ಷಿಯಲ್ ಅಂಗಡಿಗಳ ನಕಲಿ ಖಾತೆಗಳ ನೋಂದಣಿ ತಡೆಯಲು ಸರ್ಕಾರ ಹಲವು ಕಠಿಣ ನಿಯಮ ಜಾರಿಗೆ ತರುತ್ತಿದೆ. ಆದರೆ ಜೇವರ್ಗಿ ಪುರಸಭೆಯಲ್ಲಿ ಅಧಿಕಾರಿಗಳ ಲಂಚಗುಳಿತನಕ್ಕೆ ನಕಲಿ ಖಾತೆಗಳ ಪ್ರಕರಣ ಹೆಚ್ಚಾಗಿದೆ. ಜೇವರ್ಗಿ ಪಟ್ಟಣದ ಶಾಂತಿ […]

Continue Reading

ಹ್ಯಾಂಡ್‌ಶೇಕ್ ನೀಡದಿದ್ದಕ್ಕೆ ಮುಜುಗರ: ಭಾರತದ ವಿರುದ್ಧ ಎಸಿಸಿಗೆ ದೂರು ನೀಡಿದ ಪಾಕ್‌

ದುಬೈ: ಇಲ್ಲಿ ನಡೆದ ಏಷ್ಯಾ ಕಪ್ 2025 ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಗೆದ್ದು ಬೀಗಿದೆ. ಟಾಸ್ ಸಮಯದಲ್ಲಿ ಮತ್ತು ಪಂದ್ಯದ ನಂತರ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಪಾಕ್‌ ತಂಡದ ನಾಯಕ ಸಲ್ಮಾನ್ ಆಘಾ ಅವರನ್ನು ನಿರ್ಲಕ್ಷಿಸಿ, ಹ್ಯಾಂಡ್‌ಶೇಖ್‌ ಸಹ ಮಾಡಲಿಲ್ಲ. ಈ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಟೀಂ ಇಂಡಿಯಾ ನಾಯಕನ ದಿಟ್ಟತನದಿಂದ ಮುಜುಗರಕ್ಕೊಳಗಾದ ಪಾಕಿಸ್ತಾನ ತಂಡದ ವ್ಯವಸ್ಥಾಪಕ ನವೀದ್ ಅಖ್ತರ್ ಚೀಮಾ, ಭಾರತೀಯ ತಂಡದ ವಿರುದ್ಧ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ಗೆ ಅಧಿಕೃತವಾಗಿ ದೂರು […]

Continue Reading

ಅಪ್ಪ-ಅಮ್ಮನ ಜಗಳಕ್ಕೆ ಮಕ್ಕಳು ಬಲಿ: ತಂದೆ ನೇಣಿಗೆ ಶರಣು, ಪ್ರಾಣಪಾಯದಿಂದ ತಾಯಿ ಪಾರು

ಬೆಂಗಳೂರು ಗ್ರಾಮಾಂತರ: ಗಂಡ-ಹೆಂಡತಿ ಜಗಳಕ್ಕೆ ಇಬ್ಬರು ಮಕ್ಕಳು ಬಲಿಯಾಗಿರುವ ಘಟನೆ ಹೊಸಕೋಟೆಯ ಗೊಣಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಲ್ಲದೆ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದು, ಪತ್ನಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಂಡ ಶಿವು, ಮಗಳು ಚಂದ್ರಕಲಾ, ಮಗ ಉದಯ ಸೂರ್ಯ ಸಾವನ್ನಪ್ಪಿದ್ದಾರೆ. ಶಿವು ಪತ್ನಿ ಮಂಜುಳಾ ಪ್ರಾಣಪಾಯದಿಂದ ಪಾರಾಗಿದ್ದಾಳೆ. ಗಂಡ-ಹೆಂಡತಿ ಇಬ್ಬರು ಸಹ ಸಾಲದ ಬಾಧೆಯಲ್ಲಿ ಸಿಲುಕಿಕೊಂಡಿದ್ದರು. ಗಂಡನಿಗೆ ಕೆಲ ದಿನಗಳ ಹಿಂದೆ ಅಪಘಾತವಾಗಿತ್ತು ಎನ್ನಲಾಗಿದೆ. ಇದರಿಂದ ಎಲ್ಲರೂ ಸಹ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದರೆ ಮಂಜುಳಾ […]

Continue Reading

ಪೊಲೀಸ್ ವಾಹನದ ಕೀ ಕದ್ದು, ಮನೆಗೆ ಡ್ರಾಪ್ ಕೇಳಿದ ಕುಡುಕರು

ಭುವನೇಶ್ವರ: ಮದ್ಯದ ಅಮಲಿನಲ್ಲಿದ್ದವ ಯಾರ ಮಾತನ್ನೂ ಕೇಳುವುದಿಲ್ಲ ಎಂಬ ಮಾತಿದೆ. ಆದರೆ ಇಲ್ಲಿ ಇಬ್ಬರು ಭೂಪರು ಕಂಠಪೂರ್ತಿ ಮದ್ಯಸೇವಿಸಿ ಪೊಲೀಸರನ್ನೆ ಮನೆಗೆ ಡ್ರಾಪ್ ಮಾಡುವಂತೆ ಕೇಳಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಒಡಿಶಾದಲ್ಲಿ ಈ ಘಟನೆ ನಡೆದಿದ್ದು, ಮದ್ಯ ಸೇವಿಸಿದ ಇಬ್ಬರು ವ್ಯಕ್ತಿಗಳು ಪೊಲೀಸರಿಂದ ಅವರ ಕಾರಿನ ಕೀ ಕದ್ದಿದ್ದಾರೆ. ಬಳಿಕ ಬೊಲೆರೋ ಕಾರಿನೊಳಗೆ ಕುಳಿತು ತಮ್ಮನ್ನು ಮನೆಗೆ ಡ್ರಾಪ್ ಮಾಡುವಂತೆ ಒತ್ತಾಯಿಸಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಪೊಲೀಸ್ ಅಧಿಕಾರಿ ವಾಹನದ ಕೀ ಕೊಡುವಂತೆ ಕೇಳಿದರೂ […]

Continue Reading

ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ: ಉತ್ತರ ಬಂಗಾಳ, ಭೂತಾನ್‌ನಲ್ಲೂ ಕಂಪನ

ದಿಸ್ಪುರ: ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಬಂಗಾಳ ಮತ್ತು ನೆರೆಯ ಭೂತಾನ್‌ನಲ್ಲೂ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರವು 5 ಕಿಲೋಮೀಟರ್ ಆಳದಲ್ಲಿದ್ದು, ಉದಲ್ಗುರಿ ಪಟ್ಟಣದಲ್ಲಿತ್ತು ಎಂದು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಗುವಾಹಟಿಯಲ್ಲಿ ಭಯಭೀತರಾದ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಹೋದರು. ಇಲ್ಲಿಯವರೆಗೆ ಯಾವುದೆ ಗಾಯ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ವರದಿಗಳಾಗಿಲ್ಲ. ಈಶಾನ್ಯವು ಹೆಚ್ಚಿನ ಭೂಕಂಪನ ವಲಯದಲ್ಲಿ ಬರುವುದರಿಂದ ಈ ಪ್ರದೇಶದಲ್ಲಿ ಭೂಕಂಪಗಳು ಆಗಾಗ್ಗೆ ಸಂಭವಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೆ […]

Continue Reading

ಪ್ರಥಮ ಚಿಕಿತ್ಸೆ ಜೀವ ರಕ್ಷಕ: ಡಾ.ರಾಜಶೇಖರ ಪಾಟೀಲ

ಕಲಬುರಗಿ: ಯಾವುದೆ ರೀತಿಯ ಅಪಘಾತ, ದೇಹವು ಅನಾರೋಗ್ಯಕ್ಕೆ ತುತ್ತಾದಾಗ ಆಸ್ಪತ್ರೆ ತೆರಳುವಕ್ಕಿಂತ ಮುಂಚಿತವಾಗಿ, ಮನೆ ಅಥವಾ ಅಫಘಾತವಾದ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಥಮ ಚಿಕಿತ್ಸೆ ಮಾಡುವುದು ತುಂಬಾ ಅವಶ್ಯಕ ಎಂದು ಖ್ಯಾತ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ‘ಅಂತಾರಾಷ್ಟ್ರೀಯ ಪ್ರಥಮ ಚಿಕಿತ್ಸೆ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಪ್ರಥಮ […]

Continue Reading

ಡ್ರಗ್ ಪೆಡ್ಲರ್‌ಗಳ ಜೊತೆಗೆ ಪೊಲೀಸರ ನಂಟು ಆರೋಪ: ಇನ್‌ಸ್ಪೆಕ್ಟರ್‌ ಸೇರಿ 11 ಪೊಲೀಸರು ಸಸ್ಪೆಂಡ್‌

ಬೆಂಗಳೂರು: ಡ್ರಗ್ ಪೆಡ್ಲರ್‌ಗಳ ಜೊತೆಗೆ ಪೊಲೀಸರ ನಂಟು ಆರೋಪದಲ್ಲಿ ಇನ್‌ಸ್ಪೆಕ್ಟರ್‌ ಸೇರಿದಂತೆ 11 ಜನ ಪೊಲೀಸರನ್ನು ಅಮಾನತು ಮಾಡಲಾಗಿದೆ. ಚಾಮರಾಜಪೇಟೆ, ಜೆಜೆ ನಗರ ಪೊಲೀಸರನ್ನು ಅಮಾನತು ಮಾಡಿ ಪೊಲೀಸ್ ಕಮಿಷನರ್ ಸೀಮಂತಕುಮಾರ್ ಸಿಂಗ್ ಅದೇಶ ಹೊರಡಿಸಿದ್ದಾರೆ. ನಾಲ್ವರು ಡ್ರಗ್ ಪೆಡ್ಲರ್‌ಗಳ ಜೊತೆಗೆ ಸಂಬಂಧ ಹೊಂದಿದ ಆರೋಪದಲ್ಲಿ ಚಾಮರಾಜಪೇಟೆ ಇನ್‌ಸ್ಪೆಕ್ಟರ್‌ ಟಿ.ಮಂಜಣ್ಣ ಸೇರಿ ಹನ್ನೊಂದು ಪೊಲೀಸ್‌ ಸಿಬ್ಬಂದಿ ಅಮಾನತಾಗಿದ್ದಾರೆ. ಪೊಲೀಸರು ತಿಂಗಳಿಗೆ ಒಂದೂವರೆಯಿಂದ 2 ಲಕ್ಷ ಮಾಮೂಲಿ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

Continue Reading

ಹಾಟ್ ಏರ್ ಬಲೂನ್ ಹಾರುವ ಮುನ್ನವೆ ಬೆಂಕಿ: ಮಧ್ಯಪ್ರದೇಶ ಸಿಎಂ ಬಚಾವ್

ಭೋಪಾಲ್‌: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್‌ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂದಸೋರ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಮೋಹನ್ ಯಾದವ್ ಅವರು ಅಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಿಗ್ಗೆ (ಸೆ.13) ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್‌ ಏರ್‌ ಬಲೂನ್‌ನಲ್ಲಿ ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದರು. ಅಷ್ಟರಲ್ಲೆ ಎಂಜಿನ್‌ನ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೆ ಭದ್ರತಾ ಸಿಬ್ಬಂದಿ ಅವರನ್ನು ಕೆಳಗಿಳಿಸಿ, ಸುರಕ್ಷಿತ ಸ್ಥಳಕ್ಕೆ […]

Continue Reading

ಕುಟುಂಬ ರಾಜಕಾರಣ: ದೇಶದಲ್ಲಿ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ

ನವದೆಹಲಿ: ದೇಶದಲ್ಲಿ ಕುಟುಂಬ ರಾಜಕಾರಣ ಎಷ್ಟು ಬೇರೂರಿದೆ ಎಂಬ ವರದಿಯೊಂದು ಬಹಿರಂಗಪಡಿಸಿದೆ. ದೇಶದಲ್ಲಿ 21% ಸಂಸದರು, ಶಾಸಕರು ಕುಟುಂಬ ರಾಜಕಾರಣದ ಹಿನ್ನೆಲೆ ಹೊಂದಿದವರು ಎನ್ನಲಾಗಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ ವರದಿಯಲ್ಲಿ ಈ ಮಾಹಿತಿ ಹೊರಹಾಕಿದೆ. ಕುಟುಂಬ ರಾಜಕಾರಣದಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ 94 ಜನ ವಂಶಪಾರಂಪರ್ಯದಿಂದ ಅಧಿಕಾರಕ್ಕೆ ಬಂದವರಿದ್ದಾರೆ. ಉತ್ತರ ಪ್ರದೇಶದಲ್ಲಿ 141 ಜನ, ಮಹಾರಾಷ್ಟ್ರದಲ್ಲಿ 129 ಜನ, ಬಿಹಾರದಲ್ಲಿ 96 ಜನ ಇದ್ದಾರೆ. ಕೊನೆಯ ಸ್ಥಾನದಲ್ಲಿ ಅಸ್ಸಾಂ ಇದ್ದು, ಇಲ್ಲಿ ಕೇವಲ 9 […]

Continue Reading

ಗಂಡನ ಪ್ರೀತಿ ಕಡಿಮೆಯಾಗಿದ್ದಕ್ಕೆ 40 ದಿನದ ಮಗುವಿನ ಬಾಯಿಗೆ ಟಿಶ್ಯೂ ಪೇಪರ್ ತುರುಕಿ ಕೊಂದ ತಾಯಿ

ಚೆನ್ನೈ: ತಾಯಿಯೇ ಮಗುವನ್ನು ಕೊಂದಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಗಂಡನ ಪ್ರೀತಿ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿರೋದಾಗಿ ಮಹಿಳೆ ಹೇಳಿಕೆ ನೀಡಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಘಟನೆ ಸಂಬಂಧ ಪೊಲೀಸರು ಆರೋಪಿ ತಾಯಿಯನ್ನು ಬಂಧಿಸಿದ್ದಾರೆ. ಮಗುವನ್ನು ಕೊಂದ ಮಹಿಳೆಯನ್ನು ಬೆನಿತಾ ಜಯ ಅನ್ನಲ್ (20) ಎಂದು ಗುರುತಿಸಲಾಗಿದೆ. ಬೆನಿತಾ ಕನ್ಯಾಕುಮಾರಿ ಜಿಲ್ಲೆಯ ಕರುಂಗಲ್ ಬಳಿಯ ಬಾಲೂರ್ ಕಟ್ಟುವಿಲೈ ಪ್ರದೇಶದ ನಿವಾಸಿ. ಒಂದು ವರ್ಷದ ಹಿಂದೆ ದಿಂಡಿಗಲ್ ಜಿಲ್ಲೆಯ ಉತ್ತರ ವೇದಚಂದೂರಿನ ನಾಗಕೋಣನೂರು […]

Continue Reading