ಕಾರಿನ ಮೇಲೆ ಪಾಕ್ ಧ್ವಜ ಪ್ರದರ್ಶನ: ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲು

ಗದಗ: ಕಾರಿನ ಬಾನೆಟ್ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಗದಗ ನಗರದ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಿಸಲಾಗಿದೆ. ಈದ್‌ಮಿಲಾದ್ ಹಬ್ಬದಂದು ಅಪ್ರಾಪ್ತ ಬಾಲಕ ಇನ್ಸ್ಟಾಗ್ರಾಮ್‌ನಲ್ಲಿ ಕಾರಿನ ಬಾನೆಟ್ ಮೇಲೆ ಪಾಕಿಸ್ತಾನ ಧ್ವಜ ಹಾಕಿದ ಫೋಟೋ ಪೋಸ್ಟ್ ಮಾಡಿದ್ದು, ಸಮಾಜದ ಐಕ್ಯತೆಗೆ ಧಕ್ಕೆ ತರುವ ಹಾಗೂ ಸೌಹಾರ್ದತೆಗೆ ಭಾದಕವಾಗುವ ಕೃತ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ಬಾಲಕನ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕ ಪೋಸ್ಟ್ ಮಾಡಿದ ಫೋಟೋ […]

Continue Reading

ವಿಷ್ಣು ಸಮಾಧಿ, ಕರ್ನಾಟಕ ರತ್ನ ಬಗ್ಗೆ ರಮೇಶ್ ಅರವಿಂದ್ ರಿಯಾಕ್ಷನ್

ಬೆಂಗಳೂರು: ಹಿರಿಯ ನಟ ರಮೇಶ್ ಅರವಿಂದ್ ಅಭಿನಯದ 106ನೇ ಸಿನಿಮಾ ದೈಜಿ ಚಿತ್ರದ ಟೀಸರ್ ರಿಲೀಸ್ ಆಗಿದೆ. ಟೀಸರ್ ರಿಲೀಸ್ ಇವೆಂಟ್ ಬಳಿಕ ನಟ ರಮೇಶ್ ಅರವಿಂದ್ ಹಲವಾರು ವಿಚಾರಗಳ ಬಗ್ಗೆ ಮಾತನಾಡಿದರು. ಮುಖ್ಯವಾಗಿ ಹಿರಿಯ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುವ ಬಗ್ಗೆ ಮತ್ತು ಸಮಾಧಿ ನೆಲಸಮ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ವಿಷ್ಣು ಸರ್ ಅವರನ್ನು ಬಹಳ ಹತ್ತಿರದಿಂದ ನೋಡಿದ್ದಿನಿ. ಅವರಿಗೆ ಡಾಕ್ಟರೇಟ್ ಬಂದಾಗ ನಾನು ಹೇಳಿದ್ದು ಒಂದೆ, […]

Continue Reading

ನೇಪಾಳದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಮಕ

ಕಠ್ಮಂಡು: ನೇಪಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿ ನೇಪಾಳದ ಪ್ರಧಾನಿ ಮತ್ತು ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ಮಧ್ಯಂತರ ಸರ್ಕಾರದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ದೇಶಾದ್ಯಂತ ನಡೆದ ವರ್ಚುವಲ್ ಸಭೆಯಲ್ಲಿ 5,000ಕ್ಕೂ ಹೆಚ್ಚು ಯುವಕರು ಅವರನ್ನು ಬೆಂಬಲಿಸಿದ ನಂತರ, ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ನೇಪಾಳದ ಮುಂದಿನ ಪ್ರಧಾನಿ ಹುದ್ದೆಗೆ ಜನರಲ್ ಝಡ್ ಅವರ ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಆನ್‌ಲೈನ್ ಚರ್ಚೆಯು ಉನ್ನತ ಹುದ್ದೆಗೆ […]

Continue Reading

ಸೋಲು ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ಶಿವಶರಣಪ್ಪ ಮಂಠಾಳೆ

ಚಿತ್ತಾಪುರ: ಸೋಲು ಗೆಲುವಿಗಿಂತ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ತಾಲೂಕ ಧೈಹಿಕ ಶಿಕ್ಷಣಾಧಿಕಾರಿ ಶಿವಶರಣಪ್ಪ ಮಂಠಾಳೆ ಹೇಳಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿಗೆ ಮಕ್ಕಳಲ್ಲಿ ಕ್ರೀಡಾ ಮನೋಭಾವ ಕಡಿಮೆಯಾಗುತ್ತಿದೆ. ಮೊಬೈಲ್, ಸಾಮಾಜಿಕ ಜಾಲತಾಣಗಳಲ್ಲಿ ಕಳೆದು ಹೋಗುತ್ತಿದ್ದಾರೆ. ಪಾಠಗಳ ಜೊತೆಗೆ ಆಟಗಳು ಮಕ್ಕಳ ವ್ಯಕ್ತಿತ್ವ ವಿಕಾಸಗೊಳಿಸುತ್ತವೆ ಎಂದರು. ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ಕೊರತೆಯಿಂದ ಹೆಚ್ಚಿನ […]

Continue Reading

ಪ್ರೆಸ್‌ ಮೀಟ್‌ ನಡೆಯುತ್ತಿದ್ದಾಗ ಕುಸಿದು ಬಿದ್ದ ಸ್ವೀಡನ್‌ನ ನೂತನ ಆರೋಗ್ಯ ಸಚಿವೆ ಎಲಿಸಬೆಟ್ ಲ್ಯಾನ್

ಸ್ಟಾಕ್‌ಹೋಮ್: ಪ್ರೆಸ್‌ ಮೀಟ್‌ ನಡೆಯುತ್ತಿದ್ದ ವೇಳೆ ಸ್ವೀಡನ್‌ನ ನೂತನ ಆರೋಗ್ಯ ಸಚಿವೆ ಎಲಿಸಬೆಟ್ ಲ್ಯಾನ್ ವೇದಿಕೆಯಲ್ಲೆ ಕುಸಿದು ಬಿದ್ದ ಘಟನೆ ನಡೆದಿದೆ. ಲ್ಯಾನ್‌ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ಘಟನೆ ಸಂಭವಿಸಿದಿದೆ. ಸುದ್ದಿಗೋಷ್ಠಿಯಲ್ಲಿ 48 ವರ್ಷದ ಎಲಿಸಬೆಟ್ ಲ್ಯಾನ್, ಸ್ವೀಡಿಷ್ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್ ಹಾಗೂ ಕ್ರಿಶ್ಚಿಯನ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಎಬ್ಬಾ ಬುಷ್ ಪಕ್ಕದಲ್ಲಿ ನಿಂತಿದ್ದರು. ಪತ್ರಕರ್ತರು ಪ್ರಶ್ನೆ ಕೇಳುತ್ತಿರುವಾಗ ವೇದಿಕೆಯಿಂದ ಗಾಜಿನ ಪೋಡಿಯಂ ಸಮೇತ ಕುಸಿದುಬಿದ್ದಿದ್ದಾರೆ. 16 ಸೆಕೆಂಡುಗಳ ವಿಡಿಯೋ ವೈರಲ್‌ಎಲಿಸಬೆಟ್ ಲ್ಯಾನ್ […]

Continue Reading

ಹಿಂದೂಗಳ ತಾಳ್ಮೆ ಕೆಣಕುತ್ತಿರುವ ಸರ್ಕಾರ: ವೀರಣ್ಣ ಯಾರಿ

ವಾಡಿ: ಸೆ.7 ರಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕಲ್ಲು ತೂರಾಟದ ವೇಳೆ ಬೀದಿ ದೀಪಗಳನ್ನು ಆಫ್ ಮಾಡಿದ್ದು, ಇದು ಪೂರ್ವ ಯೋಜಿತ ಕೃತ್ಯವಾಗಿದೆ. ಇದರಲ್ಲಿ ಭಾಗಿಯಾದ ಸಮಾಜಘಾತುಕರಿಗೆ ಕಠಿಣ ಶಿಕ್ಷಗೆ ಗುರಿಪಡಿಸಬೇಕು ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಆಗ್ರಹಿಸಿದರು.‌ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ಹಬ್ಬಗಳು, ಗಣಪತಿ ಉತ್ಸವ ಮತ್ತು ಮೆರವಣಿಗೆಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿ ಬಿಟ್ಟಿವೆ, ಇವುಗಳಿಗೆ ಮಟ್ಟಹಾಕುವುದು ಬಿಟ್ಟು, ಅನ್ಯಾಯದ ವಿರುದ್ಧ ಹೋರಾಡಿದರೆ ಲಾಠಿ ಚಾರ್ಜ್ ಮಾಡುತ್ತಾ […]

Continue Reading

ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿಂದು ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧಿಸಿದ್ದು, ನೂತನ ಉಪರಾಷ್ಟ್ರಪತಿ ಸಿ.ಪಿ ರಾಧಕೃಷ್ಣನ್ ಆಯ್ಕೆಯಾಗಿದ್ದಾರೆ. ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್‌ ಗೆಲುವು ಸಾಧಿಸಿದರು. ರಾಧಾಕೃಷ್ಣನ್‌ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಪ್ರತಿಸ್ಪರ್ಧಿ ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದು ಪರಾಭವಗೊಂಡರು. ಉಪರಾಷ್ಟ್ರಪತಿ ಆಯ್ಕೆಗೆ ಇಂದು ಬೆಳಗ್ಗೆ 10 ಗಂಟೆ ಸಂಜೆ 5 […]

Continue Reading

5ನೇ ತರಗತಿ ವಿದ್ಯಾರ್ಥಿಯ ಕಣ್ಣುಗುಡ್ಡೆ ಕಿತ್ತ 1ನೇ ತರಗತಿ ವಿದ್ಯಾರ್ಥಿ

ಬಾಗಲಕೋಟೆ: ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆ ಕಳೆದುಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ನಡೆದಿದೆ. ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ 1ನೇ ಕ್ಲಾಸ್ ಓದುತ್ತಿರುವ ಭೀಮಪ್ಪ ಮತ್ತು 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮರ್ಥ ನಡುವೆ ಪೆನ್ನಿನ ವಿಚಾರಕ್ಕೆ ಗಲಾಟೆಯಾಗಿದ್ದು, ಈ ವೇಳೆ ಭೀಮಪ್ಪ ಕಟ್ಟಿಗೆಯಿಂದ ಸಮರ್ಥನ ಬಲಗಣ್ಣಿಗೆ ಇರಿದಿದ್ದಾನೆ. ಇದರಿಂದ ತೀವ್ರ ಗಾಯಗೊಂಡಿರುವ ಸಮರ್ಥನಿಗೆ ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವೈದ್ಯರು ಕಣ್ಣುಗುಡ್ಡೆಯನ್ನೆ ತೆಗೆದಿದ್ದಾರೆ. […]

Continue Reading

ಚಿಕ್ಕಮಗಳೂರಿನ 10 ಸಾವಿರ ಎಕರೆಯಲ್ಲಿ ಚಿನ್ನದ ನಿಕ್ಷೇಪ ಪತ್ತೆ: ಡ್ರಿಲ್ಲಿಂಗ್ ಗಾಗಿ ಕೇಂದ್ರ ಸರ್ಕಾರದ ಮೊರೆ ಹೋದ ಬೆಂಗಳೂರು ಕಂಪನಿ

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಮಡಿಲಿನಲ್ಲಿರುವ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ವ್ಯಾಪ್ತಿಗೆ ಬರುವ ಅರಣ್ಯ ಪ್ರದೇಶದ ಸುಮಾರು 10,100 ಎಕರೆ ಪ್ರದೇಶದಲ್ಲಿ ಚಿನ್ನದ ನಿಕ್ಷೇಪ ಇರುವುದು ಪತ್ತೆಯಾಗಿದೆ. ಈ ಕುರಿತಂತೆ ಬೆಂಗಳೂರಿನ ಖಾಸಗಿ ಕಂಪನಿಯೊಂದು ಕೇಂದ್ರ ಅರಣ್ಯ ಇಲಾಖೆಗೆ ಪತ್ರ ಬರೆದಿದೆ. ತಾನು ಗುರುತಿಸಿರುವ ಪ್ರದೇಶದಲ್ಲಿ ಚಿನ್ನವಿರುವುದು ದೃಢಪಟ್ಟಿದೆ. ಆದರೆ ಆ ಪ್ರದೇಶದ ಒಂದು ಟನ್ ಮಣ್ಣಿನಲ್ಲಿ ಎಷ್ಟು ಗ್ರಾಂ ಚಿನ್ನ ಬರಬಹುದು ಎಂಬುದನ್ನು ಮನವರಿಕೆ ಮಾಡಿಕೊಳ್ಳಲು ಅಲ್ಲಿ ಕೆಲವು ಪರೀಕ್ಷೆಗಳನ್ನು ನಡೆಸುವ ಅವಶ್ಯಕತೆಯಿದೆ. ಅದಕ್ಕಾಗಿ ಆ 10,100 […]

Continue Reading

ಸ್ವಾವಲಂಬನೆ, ಘನತೆಯ ಬದುಕಿಗೆ ಸಾಕ್ಷರತೆ ಅಗತ್ಯ

ಕಲಬುರಗಿ: ಸಾಕ್ಷರತೆಯು ಪ್ರತಿಯೊಬ್ಬರ ಜೀವನದಲ್ಲೂ ಪ್ರಮುಖವಾದ ಅಂಶವಾಗಿದೆ, ವ್ಯಕ್ತಿಯನ್ನು ಸಮಾಜದಲ್ಲಿ ಘನತೆ ಹಾಗೂ ಸ್ವಾವಲಂಬನೆಯಿಂದ ಬದಕಲು ಸಹಾಯ ಮಾಡುತ್ತದೆ. ಸಾಕ್ಷರತೆಯು ಉದ್ಯೋಗ ಮತ್ತು ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸಿಕೊಟ್ಟು, ಜನರನ್ನು ಬಡತನ ಮತ್ತು ನಿರುದ್ಯೋಗದಿಂದ ಹೊರಬರಲು ಸಹಾಯ ಮಾಡುತ್ತದೆ. ಆದ್ದರಿಂದ ಪ್ರತಿಯೊಬ್ಬರು ಶಿಕ್ಷಣ ಪಡೆದು ಸುಶಿಕ್ಷಿತರಾಗಬೇಕು ಎಂದು ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ ಪಾಟೀಲ್ ಹೇಳಿದರು.  ನಗರದ ಆಳಂದ ರಸ್ತೆಯ ಶಿವ ನಗರದ ಮಲ್ಲಿನಾಥ ಮಹಾರಾಜ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಬೆಳಿಗ್ಗೆ ಜರುಗಿದ “ಅಂತಾರಾಷ್ಟ್ರೀಯ ಸಾಕ್ಷರತಾ […]

Continue Reading