ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಅಲೆ ಸೃಷ್ಟಿಸಿದ ತೇಜಸ್ವಿ

ಕಲಬುರಗಿ: ಪರಿಸರ ಹಾಗೂ ವೈಚಾರಿಕತೆ ಪರ ಬರಹಗಳ ಮೂಲಕ ಅಸಂಖ್ಯಾತ ವ್ಯಕ್ತಿಗಳನ್ನು ಪ್ರಭಾವಿಸಿದ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರು, ನಾಡು-ನುಡಿ ಏಳಿಗೆಗೆ ತಮ್ಮದೆಯಾದ ವಿಶಿಷ್ಟ ಬರಹಗಳ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಅಲೆ ಸೃಷ್ಟಿಸಿದ ಮೇರು ಸಾಹಿತಿಯಾಗಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ಶಹಾಬಾದ ತಾಲೂಕಿನ ಭಂಕೂರ್ ಗ್ರಾಮದ ಗಣೇಶ್ ನಗರದಲ್ಲಿನ ಕೋರಿಸಿದ್ದೇಶ್ವರ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಸಾಯಂಕಾಲ ಜರುಗಿದ ‘ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರ 87ನೇ ಜನ್ಮದಿನಾಚರಣೆ’ಯಲ್ಲಿ […]

Continue Reading

ಕಾಲೇಜಿನ ಅತಿಥಿ ಉಪನ್ಯಾಸಕರ ಶೈಕ್ಷಣಿಕ ಗೊಂದಲ ಪರಿಹರಿಸಲು ಪ್ರತಿಭಟನೆ

ಚಿತ್ತಾಪುರ: ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಬಗೆಹರಿಸಬೇಕು ಮತ್ತು ಅತಿಥಿ ಉಪನ್ಯಾಸಕರ ನೇಮಕ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಎಐಡಿಎಸ್ಓ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪಟ್ಟಣದ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ತಹಸೀಲ್ ಕಚೇರಿಯವರೆಗೆ ಎಐಡಿಎಸ್ಓ ತಾಲೂಕು ಪದಾಧಿಕಾರಿಗಳ ನೇತೃತ್ವದದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಸಮಿತಿ ಸದಸ್ಯ ದೇವರಾಜು ಎಸ್ ರಾಜೋಳ್ ಮಾತನಾಡಿ, ರಾಜ್ಯದಾದ್ಯಂತ ಪದವಿ […]

Continue Reading

ಬಾನಂಗಳದಲ್ಲಿ ರಕ್ತ ಚಂದ್ರಗ್ರಹಣ ಗೋಚರ: ವಿಸ್ಮಯ ಕಣ್ತುಂಬಿಕೊಂಡ ಜನ

ಬೆಂಗಳೂರು/ನವದೆಹಲಿ: ಸೂರ್ಯ, ಭೂಮಿ ಮತ್ತು ಚಂದ್ರರು ಒಂದೆ ಸಾಲಿನಲ್ಲಿ ನಿಂತಾಗ ಚಂದ್ರನ ಮೇಲೆ ಭೂಮಿಯ ಬೆಳಕು ಬೀಳುವುದೆ ಚಂದ್ರಗ್ರಹಣ. ಇಂದು (ರವಿವಾರ) ಸಂಭವಿಸಿದ ಅಪರೂಪದ ರಕ್ತಚಂದ್ರ ಗ್ರಹಣ ಆಗಸದಲ್ಲಿ ವಿಸ್ಮಯ ಮೂಡಿಸಿದೆ. ನಭೋಮಂಡಲದಲ್ಲಿ ಸಂಭವಿಸಿದ ಈ ವಿಸ್ಮಯವನ್ನು ದೇಶದ ಜನ ಮಾತ್ರವಲ್ಲದೆ ವಿಶ್ವದ ವಿವಿಧ ಭಾಗದ ಜನ ಕಣ್ತುಂಬಿಕೊಂಡು ಖುಷಿಪಟ್ಟರು. ಎಲ್ಲೆಲ್ಲಿ ರಕ್ತಚಂದ್ರನ ದರ್ಶನ ? ನೆರೆಯ ಕೇರಳದ ತಿರುನಂತಪುರದಲ್ಲಿ ಭಾಗಶಃ ಹಂತದಿಂದ ಪೂರ್ಣ ಗ್ರಹಣ ಪ್ರಕ್ರಿಯೆ ನಡೆಯುತ್ತಿದೆ. ಚಂದ್ರನು ಸಂಪೂರ್ಣ ಕೆಂಪು ಬಣ್ಣಕ್ಕೆ ತಿರುಗುತ್ತಿದ್ದಾನೆ. ಪಶ್ಚಿಮ […]

Continue Reading

ಬೆಂಗಳೂರಿನಲ್ಲಿ ಮೋಡಗಳ ಮರೆಯಲ್ಲಿ ಮರೆಯಾಗಿರುವ ಚಂದ್ರ, ನೆಲಮಂಗಲದಲ್ಲಿ ಹುಣ್ಣಿಮೆ ಚಂದ್ರನ ದರ್ಶನ

ಬೆಂಗಳೂರು: ನಭೋಮಂಡಲದ ವಿಸ್ಮಯದ ಅದ್ಭುತ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ. ಈಗಷ್ಟೇ ಚಂದ್ರಗ್ರಹಣದ ಪ್ರಕ್ರಿಯೆ ಆರಂಭವಾಗಿಬಿಟ್ಟಿದೆ. ರಾತ್ರಿ 9:57ರಿಂದ ಮಧ್ಯರಾತ್ರಿ 1:26ರ ವರೆಗೆ ಒಟ್ಟು ಮೂರುವರೆ ಗಂಟೆಗಳ ಕಾಲ ನಿಧಾನವಾಗಿ ಗ್ರಹಣ ಸಂಭವಿಸಲಿದೆ. ಸದ್ಯ ದೇಶದಲ್ಲಿ ಲಡಾಖ್‌ನಲ್ಲಷ್ಟೇ ಗ್ರಹಣ ಗೋಚರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು, ತಮಿಳುನಾಡು ಸೇರಿ ನಾಲ್ಕು ಕಡೆಗಳಲ್ಲಿ ಮೋಡ ಕವಿದ ಹಿನ್ನೆಲೆಯಲ್ಲಿ ಚಂದ್ರ ಕಣ್ಮರೆಯಾಗಿದ್ದಾನೆ. ಆಗಾಗ್ಗೆ ಭುವಿಯತ್ತ ಇಣುಕಿ ಮತ್ತೆ ಮೋಡದಲ್ಲಿ ಮರೆಯಾಗುತ್ತಿದ್ದಾನೆ. ನೆಲಮಂಗಲದಿಂದ ಆಕಾಶದಲ್ಲಿ ಹುಣ್ಣಿಮೆ ಚಂದ್ರನ ದರ್ಶನವಾಗಿದೆ. ನೆಲಮಂಗಲ ತಾಲೂಕಿನ […]

Continue Reading

ಹೋಗಿ ಮೋದಿ, ಶಾ ಹತ್ತಿರ ಕೇಳು: ಕಷ್ಟ ಹೇಳಲು ಬಂದಿದ್ದ ಯುವ ರೈತನ ವಿರುದ್ಧ ಖರ್ಗೆ ಆಕ್ರೋಶ

ಕಲಬುರಗಿ: ಅತಿವೃಷ್ಠಿಯಿಂದ ನಾನು ಬೆಳೆದಿದ್ದ ಬೆಳೆ ಹಾಳಾಗಿದೆ ಎಂದು ತನ್ನ ಕಷ್ಟವನ್ನು ಹೇಳಿಕೊಳ್ಳಲು ಬಂದಿದ್ದ ಯುವ ರೈತನ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿಯ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಬಂದಿದ್ದ ಯುವಕ ಅತಿವೃಷ್ಠಿಯಿಂದ 4 ಎಕರೆಯಲ್ಲಿ ಬೆಳೆದಿದ್ದ ತೊಗರಿ ಬೆಳೆ ಹಾಳಾಗಿದೆ ಸರ್ ಎಂದು ಹೇಳಿದ್ದಾನೆ. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು, ಯುವಕನಿಗೆ ನೀನು ಎಷ್ಟು ಎಕರೆಯಲ್ಲಿ ಬೆಳೆ ಬೆಳೆದಿದ್ದಿಯಾ ಎಂದು ಪ್ರಶ್ನಿಸುತ್ತಾರೆ. ಅದಕ್ಕೆ ಯುವಕ 4 ಎಕರೆಯಲ್ಲಿ ಬೆಳೆ ಬೆಳೆದಿದ್ದೆ […]

Continue Reading

ಜಾತಿ, ದ್ವೇಷದ ಗೋಡೆಯನ್ನು ಒಡೆದ ಗುರು: ವೀರಣ್ಣ ಯಾರಿ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಅಂಗವಾಗಿ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜಾತಿ, ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿ ಭಾತೃತ್ವ ಬೀಜ ಬಿತ್ತಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಆದರ್ಶಪೂರ್ಣವಾದದ್ದು ಎಂದರು. ಮಹಾಭಾರತದಲ್ಲಿ ಶ್ರೀ ಕೃಷ್ಣನು ಜಗತ್ತಿನಲ್ಲಿ ಅಧರ್ಮ ಯಾವಾಗ ಹೆಚ್ಚುತ್ತದೆ ಅದನ್ನು ಮಟ್ಟ ಹಾಕಿ, ಧರ್ಮವನ್ನು ಪುನರ್ ಸ್ಥಾಪಿಸಲು ನಾನು ಮತ್ತೆ ಮತ್ತೆ ಜನ್ಮ ಎತ್ತುತ್ತೆನೆ ಎಂದು […]

Continue Reading

ಆ ಗಂಡನನ್ನು ಬಿಟ್ಟು ಬೇರೊಬ್ಬನ ಜೊತೆಗೆ ಮದುವೆ, ಈಗ ಇವನನ್ನು ಬಿಟ್ಟು ಮತ್ತೊಬ್ಬನ ಜೊತೆ ಓಡಿ ಹೋದಳು: ಬಾಳು ಕೊಟ್ಟ ಪತಿ, 3 ಮಕ್ಕಳು ಅನಾಥ

ಆನೇಕಲ್: 11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನು ಬಿಟ್ಟು 3 ಮಕ್ಕಳ ತಾಯಿ ಪ್ರಿಯಕರನ ಜೊತೆ ಎಸ್ಕೇಪ್‌ ಆಗಿರುವ ಘಟನೆ ಬೆಂಗಳೂರಿನ ಬನ್ನೆರುಘಟ್ಟ ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿದೆ. 11 ವರ್ಷಗಳ ಹಿಂದೆ ಮಂಜುನಾಥ​ ಎಂಬ ವ್ಯಕ್ತಿಯ ಜೊತೆಗೆ ಲೀಲಾವತಿ ಎಂಬ ಮಹಿಳೆ ಮದುವೆಯಾಗಿದ್ದಳು. ಇವರಿಗೆ ಮೂರು ಮಕ್ಕಳು ಸಹ ಇದ್ದಾರೆ. ಆದರೆ ಮೂರು ಮಕ್ಕಳ ತಾಯಿ ಲೀಲಾವತಿ ಮತ್ತೊರ್ವನ ಜೊತೆ ಓಡಿಹೋಗಿದ್ದಾಳೆ. ಪತಿ ಮಂಜುನಾಥ, ಮೂರು ಮಕ್ಕಳು ಕಣ್ಣೀರಿಡುತ್ತಿದ್ದಾರೆ. ಮೂವರು ಮಕ್ಕಳು ಮತ್ತು ಗಂಡನನ್ನು […]

Continue Reading

ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ.6 ಮತ್ತು ಅಲೆಮಾರಿ ಸಮುದಾಯಕ್ಕೆ ಶೇ.1 ರಷ್ಟು ಮೀಸಲು ನೀಡಲು ಆಗ್ರಹ

ಚಿತ್ತಾಪುರ: ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ.6, ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲು ನೀಡುವಂತೆ ಆಗ್ರಹಿಸಿ ಬಂಜಾರ, ಭೋವಿ, ಕೊರಚಾ ಮತ್ತು ಕೊರಮ ಸಮಾಜಗಳ ಕ್ಷೇಮಾಭಿವೃದ್ಧಿ ಸಂಘದಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಂಘದ ಉಪಾಧ್ಯಕ್ಷ ಚಂದು ಜಾಧವ ಮಾತನಾಡಿ, ಒಳ ಮೀಸಲಾತಿ ಕುರಿತು ನಾಗಮೋಹನ್‌ದಾಸ್ ಆಯೋಗವು ಮಾಡಿರುವ ಶಿಫಾರಸ್ಸು ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರ ಮತ್ತು ಕರ್ನಾಟಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ 2022ರ ಸೆಕ್ಷನ್ (1)ರ […]

Continue Reading

60 ಕೋಟಿ ವಂಚನೆ ಕೇಸ್: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

ಮುಂಬೈ: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್‌ ಹೊರಡಿಸಿದ್ದಾರೆ. ತಮ್ಮ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ನ (ಈಗ ಕಾರ್ಯನಿರ್ವಹಿಸುತ್ತಿಲ್ಲ) ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಈ ಸೆಲೆಬ್ರಿಟಿ ದಂಪತಿ, ಉದ್ಯಮಿಯೊಬ್ಬರಿಗೆ ಸುಮಾರು 60 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆರ್ಥಿಕ ಅಪರಾಧಗಳ ವಿಭಾಗ ಮೂಲಗಳು ಸೂಚಿಸುವಂತೆ ಪೊಲೀಸರು ಈಗ ಶೆಟ್ಟಿ ಮತ್ತು ಕುಂದ್ರಾ ಅವರ […]

Continue Reading

ಕಲಬುರಗಿ: ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳ ದಾಳಿ

ಕಲಬುರಗಿ: ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಬಿತ್ತನೆ ಕಾರ್ಯ ಜೋರಾಗಿದೆ. ಇದನ್ನೆ ಬಂಡವಾಳ ಮಾಡಿಕೊಂಡು ಕಲಬುರಗಿ ಜಿಲ್ಲೆಯ ರೈತರಿಂದ ದುಪ್ಪಟ್ಟು ಹಣ ಪಡೆದು ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅಂಗಡಿ ಮಾಲೀಕನಿಗೆ ನೋಟಿಸ್ ನೀಡಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಲಾಗಿದೆ. ಅದನ್ನೆ ಬಂಡವಾಳ ಮಾಡಿಕೊಂಡಿರುವ ಅಫಜಲಪುರ ತಾಲೂಕಿನ ಗಾಣಗಾಪುರದ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಗೊಬ್ಬರ ಅಂಗಡಿ […]

Continue Reading