ಅತಿವೃಷ್ಟಿಯಿಂದ ಬೆಳೆಹಾನಿಯಾದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ

ಕಲಬುರಗಿ: ಸತತವಾಗಿ ಸುರಿದ ಮಳೆಯಿಂದ ಬೆಳೆ ಹಾನಿಯಾಗಿರುವ ಶಹಾಬಾದ ಮತ್ತು ಚಿತ್ತಾಪುರ ತಾಲೂಕಿನ ನಾನಾ ಗ್ರಾಮಗಳ ಜಮೀನುಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್‌ ಭೇಟಿ ನೀಡಿ ಪರಿಶೀಲಿಸಿದರು. ಚಿತ್ತಾಪುರ ತಾಲೂಕಿನ ವಾಡಿ ಮತ್ತು ಹಲಕಟ್ಟಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಅತಿವೃಷ್ಟಿಯಿಂದ ತೊಗರಿ, ಹೆಸರು, ಹತ್ತಿ ಬೆಳೆ ಹಾನಿಯಾಗಿರುವದು ಪರಿಶೀಲಿಸಿದರು. ಶಹಾಬಾದ ತಾಲೂಕಿನ ರಾವೂರ ಮತ್ತು ಮಾಲಗತ್ತಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ತೊಗರಿ, ಹೆಸರು, ಉದ್ದು ಬೆಳೆ ಹಾನಿಯಾಗಿರುವದು ಪರಿಶೀಲಿಸಿದರು. ಚಿತ್ತಾಪುರ ಮತ್ತು ಶಹಾಬಾದ ತಾಲೂಕಿನಲ್ಲಿ ಅತಿವೃಷ್ಟಿಯಿಂದ […]

Continue Reading

12.5 ಕೋಟಿ ರೂ.ಗೆ ಮನೆ ಮಾರಾಟ ಮಾಡಿ ಐಷಾರಾಮಿ ಕಾರು ಖರೀದಿಸಿದ ನಟಿ ಹೇಮಾ ಮಾಲಿನಿ

ಮುಂಬೈ: ಬಾಲಿವುಡ್ ಡ್ರೀಮ್ ಗರ್ಲ್ ಎಂದು ಗುರುತಿಸಿಕೊಂಡಿರುವ ನಟಿ, ಸಂಸದೆ ಹೇಮಾ ಮಾಲಿನಿ ಹೊಸ ಕಾರು ಖರೀದಿಸಿದ್ದಾರೆ. ಇದರಲ್ಲೇನು ವಿಶೇಷ ಅಂತಿರಾ ? ಇಲ್ಲೆ ಇರೋದು ನೋಡಿ. ಇತ್ತೀಚೆಗಷ್ಟೇ ಹೇಮಾ ಮಾಲಿನಿ ಮುಂಬೈನಲ್ಲಿರುವ ಎರಡು ಮನೆಯನ್ನು ಮಾರಾಟ ಮಾಡಿದ್ದರು. 12.5 ಕೋಟಿ ರೂ.ಗೆ ಮನೆ ಮಾರಾಟ ಮಾಡಿದ ಬೆನ್ನಲ್ಲೆ ಹೇಮಾ ಮಾಲಿನಿ ಐಷಾರಾಮಿ ಕಾರು ಖರೀದಿಸಿದ್ದಾರೆ. ಹೊಸ ಕಾರು ಖರೀದಿಸಿದ ಹೇಮಾ ಮಾಲಿನಿ ಸ್ವತಃ ಪೂಜೆ ಮಾಡಿ ಡ್ರೀಮ್ ಕಾರನ್ನು ಡ್ರೀಮ್ ಗರ್ಲ್ಟ್ ಡ್ರೈವ್ ಮಾಡಿದ್ದಾರೆ. ಈ […]

Continue Reading

ಮಾನವನ ದೇಹಕ್ಕೆ ಎಳೆನೀರು ಸಂಜೀವಿನಿಯಂತೆ

ಕಲಬುರಗಿ: ಮಾನವನ ದೇಹದ ಬೆಳವಣಿಗೆಗೆ ಗಾಳಿ, ನೀರು, ಆಹಾರ ಅತ್ಯವಶ್ಯಕ. ದೇಹಕ್ಕೆ ಬರುವ ರೋಗಗಳಲ್ಲಿ ಆಹಾರ ಸಂಬಂಧಿತ ಕಾಯಿಲೆಗಳು ಪ್ರಮುಖ. ವ್ಯಕ್ತಿ ಯಾವುದೆ ಕಾಯಿಲೆಗೆ ತುತ್ತಾದಾಗ ಆಹಾರ, ನೀರು ಸೇವನೆ ಅಸಾಧ್ಯವಾದಾಗ ಎಳೆನೀರು ಸೇವಿಸಿದರೆ ನೈಸರ್ಗಿಕ ಗ್ಲೂಕೋಸ್ ದೊರೆಯುತ್ತದೆ. ಇದು ಸಂಜೀವಿನಿಯಂತೆ ಕಾರ್ಯನಿರ್ವಹಿಸುತ್ತದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ‘ವಿಶ್ವ ತೆಂಗು ದಿನಾಚರಣೆ’ಯಲ್ಲಿ ತೆಂಗಿನ ಗಿಡ […]

Continue Reading

YouTube ನಿಂದ ಹಣ ಗಳಿಸುವುದು ಹೇಗೆ ? 2 ದಿನಗಳ ಸರ್ಕಾರಿ ತರಬೇತಿ

ಯೂಟ್ಯೂಬ್ ಕೇವಲ ವಿಡಿಯೋ ವೇದಿಕಯಲ್ಲ. ಅದು ಗಳಿಕೆಗೆ ಅತ್ಯುತ್ತಮ ಮೂಲವಾಗಿ ಬದಲಾಗಿದೆ. ಆದ್ದರಿಂದಲೇ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ತಮ್ಮದೆಯಾದ ಯೂಟ್ಯೂಬ್ ಚಾನೆಲ್ ಪ್ರಾರಂಭಿಸಲು ಬಯಸುತ್ತಾರೆ. ಆದರೆ ಸಮಸ್ಯೆಯೆಂದರೆ ಹೆಚ್ಚಿನ ಜನರಿಗೆ ಎಲ್ಲಿಂದ ಪ್ರಾರಂಭಿಸಬೇಕು ಮತ್ತು ಯಾವ ವಿಷಯಗಳಿಂದ ಜನರನ್ನು ಹೆಚ್ಚು ಆಕರ್ಷಿಸಬೇಕು ಎಂಬುದು ತಿಳಿದಿಲ್ಲ. ನೀವೂ ಕೂಡ ಇದೆ ರೀತಿ ಸಮಸ್ಯೆಯಲ್ಲಿದ್ದರೆ ಈ ಸುದ್ದಿ ನಿಮಗಾಗಿ. ಈಗ ನೀವು ಮನೆಯಲ್ಲಿ ಕುಳಿತು ಎರಡು ದಿನಗಳಲ್ಲಿ YouTube ಚಾನೆಲ್ ರಚಿಸುವ ಮತ್ತು ಅದರಿಂದ ಹಣ ಗಳಿಸುವ ತಂತ್ರವನ್ನು […]

Continue Reading

ಭೂಮಿ ಪೂಜೆ, ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಸುದ್ದಿ ಸಂಗ್ರಹ ಶಹಾಬಾದ ರಾಯಚೋಟಿ ವೀರಭದ್ರೇಶ್ವರ ಆಶ್ರಮ ಹಾಗೂ ಭದ್ರಕಾಳಿ ದೇವಸ್ಥಾನದ ನೂತನ ಕಟ್ಟಡದ ಭೂಮಿ ಪೂಜೆಯನ್ನು ಸಮಾಜ ಸೇವಕಿ ಜಯಶ್ರೀ ಮತ್ತಿಮೂಡ ನೆರವೇರಿಸಿದರು ಮತ್ತು 501 ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು ಎಂದು ಶ್ರೀ ಮಠದ ಪೂಜ್ಯ ಶಂಕ್ರಯ್ಯ ಸ್ವಾಮಿ ಹೇಳಿದರು.  ನಗರದಲ್ಲಿ ಸೋಮುವಾರ ರಾಯಚೋಟಿ ವೀರಭದ್ರೇಶ್ವರ ಆಶ್ರಮದ ನೂತನ ಕಟ್ಟಡದ ಶಂಕು ಸ್ಥಾಪನೆ ಮತ್ತು ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀಮಠಕ್ಕೆ ಭಕ್ತರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ […]

Continue Reading

ಅತಿಯಾದ ಮಳೆಯಿಂದ ಬಳವಡಗಿ ಗ್ರಾಮ ಜಲಾವೃತ: ಅಗ್ನಿಶಾಮಕ ಸಿಬ್ಬಂದಿಯಿಂದ 20 ಜನರ ರಕ್ಷಣೆ

ಸುದ್ದಿ ಸಂಗ್ರಹ ಚಿತ್ತಾಪುರ ತಾಲೂಕಿನ ಬಳವಡಗಿ ಗ್ರಾಮದಲ್ಲಿ ಅತಿ ಹೆಚ್ಚು ಮಳೆಯಾದ ಪರಿಣಾಮ ಗ್ರಾಮದ ಕೆಲಭಾಗ ಜಲಾವೃತಗೊಂಡಿತ್ತು, ಕೂಡಲೇ ಕಲಬುರಗಿ ಅಗ್ನಿಶಾಮಕ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ 20 ಜನರ ರಕ್ಷಣೆ ಮಾಡಿದರು. ಕಲಬುರಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಲ್ಲಿಕಾರ್ಜುನ ನೇತೃತ್ವದಲ್ಲಿ ಎಸ್‌ಎಸ್‌ಓ ಆಂಜನೇಯ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಾದ ಸತೀಶ ಎಲ್.ಎಫ್, ನೈಮೋದಿನ್, ಗಬ್ಬರ್ ಸಿಂಗ್, ಶಂಕರ ಲಿಂಗ, ಮಲ್ಲಪ್ಪ, ಅಮಿತ, ಬಸವರಾಜ, ಶಂಭುಲಿಂಗಪ್ಪ ಮತ್ತು ರಾಮಾಜಿ ರಕ್ಷಣಾ ಕಾರ್ಯದಲ್ಲಿ ತೊಡಗಿ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದರು. […]

Continue Reading

ಸದೃಢ ಆರೋಗ್ಯಕ್ಕಾಗಿ ಸಮತೋಲಿತ ಆಹಾರದ ಸೇವನೆ ಅಗತ್ಯ: ಡಾ.ಅನುಪಮಾ

ಕಲಬುರಗಿ: ಸದೃಢ ಆರೋಗ್ಯಕ್ಕಾಗಿ ಎಲ್ಲರು ಸಮತೋಲಿತ ಆಹಾರ ಸೇವಿಸುವುದು ಅಗತ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಸೋಮವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ಪೋಷಕಾಂಶ ಸಪ್ತಾಹ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದ ಅವರು, ಯಾವುದೆ ರಾಷ್ಟ್ರದ ಅಭಿವೃದ್ದಿಯಲ್ಲಿ ಆರೋಗ್ಯ ಭರಿತ, ಸದೃಢ ಮಾನವ ಸಂಪನ್ಮೂಲ ತುಂಬಾ ಅವಶ್ಯಕ. ಮಗುವಿದ್ದಾಗಲೇ ಅದಕ್ಕೆ ಎಲ್ಲಾ ಪೋಷಕಾಂಶಗಳುಳ್ಳ ಸಮತೋಲಿತ ಆಹಾರ ನೀಡಬೇಕು. ಇದರಿಂದ ಆ […]

Continue Reading

ನೇತ್ರದಾನ ಮಾಡುವುದು ಅಗತ್ಯ: ಡಾ.ಕೇಶ್ವಾರ

ಕಲಬುರಗಿ: ಕಣ್ಣುಗಳು ದಾನ ಮಾಡುವುದು ಒಂದು ಶ್ರೇಷ್ಠ ಕಾರ್ಯ. ಹುಟ್ಟು ಕುರುಡರಾಗಿ ಅಥವಾ ಅಪಘಾತದಿಂದ ದೃಷ್ಟಿ ಕಳೆದುಕೊಂಡವರಿಗೆ ಕಣ್ಣು ದಾನ ಮಾಡುವ ಮೂಲಕ ಅವರಿಗೆ ದೃಷ್ಟಿ ಭಾಗ್ಯ ನೀಡಬಹುದು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ “41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ” ಕಾರ್ಯಕ್ರಮವನ್ನು ಮಹಿಳೆಯೊಬ್ಬರ ಕಣ್ಣು ಪರೀಕ್ಷಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಾವಿನ ನಂತರವು […]

Continue Reading

ಮಹಿಳೆಯರ ದೂರು ಪೆಟ್ಟಿಗೆ ಅನಾವರಣ

ಸುದ್ದಿ ಸಂಗ್ರಹ ಶಹಾಬಾದ ಪಟ್ಟಣದ ಎಸ್’ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಂಪಮ್ಮ ಹಿರೇಮಠ ಮಹಿಳೆಯರ ದೂರು ಪೆಟ್ಟಿಗೆ ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಡಾ.ಬಸವರಾಜ್ ಹಿರೇಮಠ, ಡಾ.ಸುರೇಖಾ ನಾಟೆಕರ್, ಡಾ.ಹಣಮಂತ ಸೇಡಂಕರ್, ಡಾ.ಗಂಗಾಧರ್ ಸ್ಥಾವರ ಮಠ, ಡಾ.ಕಾವೇರಿ, ಡಾ.ನಾಗರಾಜ ದೇವತಕಲ್, ಡಾ.ಲಕ್ಷ್ಮಣ ರಾಠೋಡ , ಪ್ರಮುಖರಾದ ಲಾಲಿತ, ಶಿವುಶಂಕರ್ ಹಿರೇಮಠ ಸೇರಿದಂತೆ ಬೋಧಕ ಬೋಧಕ್ಕೆತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ಶಹಾಬಾದ: ನೂತನ ತಹಸೀಲ್ದಾರ್‌ ನೀಲಪ್ರಭಾ ಬಬಲಾದ ಅವರಿಗೆ ಸನ್ಮಾನ

ಸುದ್ದಿ ಸಂಗ್ರಹ ಶಹಾಬಾದ ನೂತನ ತಹಸೀಲ್ದಾರ್ ನೀಲಪ್ರಭಾ ಬಬಲಾದ ಅವರಿಗೆ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಿವಪುತ್ರ ಕರಣಿಕ ಮತ್ತು ಪದಾಧಿಕಾರಿಗಳು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ಗುರುರಾಜ ಸಂಗಾವಿ, ನೌಕರರ ಸಂಘದ ವೀಠಾಬಾಯಿ, ಸುಶೀಲಾ, ಸುಲೋಚನಾ, ಬನ್ನಪ್ಪ ಸೈದಾಪುರ, ಈರಣ್ಣ ಸಾತಖೇಡ, ರವಿಕುಮಾರ ಮುತ್ತಗಿ, ಮುನೀರ್, ನರಸಪ್ಪ ಇದ್ದರು.

Continue Reading