ಬೇಸಿಗೆಯಲ್ಲಿ ಆರೋಗ್ಯದ ಮುಂಜಾಗ್ರತೆ ವಹಿಸಿ: ಡಾ.ಅನುಪಮಾ ಕೇಶ್ವಾರ

ಸುದ್ದಿ ಸಂಗ್ರಹ ಕಲಬುರಗಿ ಈಗಾಗಲೆ ಬಿಸಿಲಿನ ತಾಪ ಹೆಚ್ಚಾಗಿದೆ, ಬೇಸಿಗೆ ದಿನಗಳಲ್ಲಿ ವಾತಾವರಣ ಸಾಕಷ್ಟು ಬದಲಾವಣೆಯಾಗಿ, ಉಷ್ಣಾಂಶದಲ್ಲಿ ಏರಿಕೆಯಾಗುವುದರಿಂದ ಮಾನವನ ದೇಹದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಆದ್ದರಿಂದ ಆರೋಗ್ಯದಲ್ಲಿ ಏರು-ಪೇರುಗಳಾಗುವದರಿಂದ ಪ್ರತಿಯೊಬ್ಬರು ಮುನ್ನೆಚ್ಚರಿಕೆ ವಹಿಸಿಕೊಂಡು, ದೇಹದ ರಕ್ಷಣೆ ಮಾಡಿಕೊಳ್ಳಬೇಕೆಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಸಲಹೆ ನೀಡಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಏರ್ಪಡಿಸಿದ್ದ ‘ಬೇಸಿಗೆ ಕಾಲದ ಆರೋಗ್ಯದ ಮುಂಜಾಗ್ರತೆ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, […]

Continue Reading

ಒಣಹಾಕಿದ್ದ ಬಟ್ಟೆ ತರಲು ಹೋದಾಗ ಬಕೆಟ್‌ ಬಿದ್ದು ಮಗು ಸಾವು: ಶಾಕ್‌ಗೆ ಒಳಗಾಗಿ ತಾಯಿ ಆತ್ಮಹತ್ಯೆ

ಸುದ್ದಿ ಸಂಗ್ರಹ ಬೆಂಗಳೂರು ಒಣಹಾಕಿದ್ದ ಬಟ್ಟೆ ತರಲು ಹೋಗಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು ಸಾವನ್ನಪ್ಪಿದ್ದನ್ನು ನೋಡಿ ಶಾಕ್‌ಗೆ ಒಳಗಾಗಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಂದ್ರಾಲೇಔಟ್ ಠಾಣೆಯ ಭೈರವೇಶ್ವರ ನಗರದಲ್ಲಿ ನಡೆದಿದೆ. ಅಗಸ್ತ್ಯ ಮೃತ ಮಗು. ಪ್ರತಿಭಾ (29) ಆತ್ಮಹತ್ಯೆ ಮಾಡಿಕೊಂಡ ತಾಯಿ. ಮನೆಯಲ್ಲಿ ತಾಯಿ, ಮಗು ಇಬ್ಬರೆ ಇದ್ದಾಗ ಘಟನೆ ನಡೆದಿದೆ. ಪ್ರತಿಭಾ ಮತ್ತು ಮಹಂತೇಶ್ ವೃತ್ತಿಯಲ್ಲಿ ಸಾಫ್ಟ್‌ವೇರ್ ಉದ್ಯೋಗಿಗಳಾಗಿದ್ದರು. ಪ್ರತಿಭಾ ವರ್ಕ್ ಫ್ರಂ ಹೋಂ ಮಾಡುತ್ತಿದ್ದರು. ಗಂಡ ಮಹಂತೇಶ್ ಕೆಲಸದ […]

Continue Reading

ಈ ಸುದ್ದಿ ಓದಿ ಮನೆಯಲ್ಲೆ ಕುಳಿತು 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ

ಸುದ್ದಿ ಸಂಗ್ರಹ ಬೆಂಗಳೂರು ಇಂದಿನಿಂದ ಭಾರತದಲ್ಲಿ ರಾಷ್ಟ್ರೀಯ ಜನಗಣತಿ (Census 2027) ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಇದು ದೇಶದ ಮೊದಲ ಡಿಜಿಟಲ್ ಜನಗಣತಿಯಾಗಿದ್ದು ಜನರೇ ತಮ್ಮ ವಿವರಗಳನ್ನು ತಾವೇ ಸುಲಭವಾಗಿ ದಾಖಲಿಸಬಹುದು. ಕರ್ನಾಟಕ ಸೇರಿದಂತೆ ಗೋವಾ, ಮಿಜೋರಾಂ, ಒಡಿಶಾ, ಸಿಕ್ಕಿಂ, ದೆಹಲಿ, ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪದ ಜನರು ಏ.15ರವರೆಗೆ ಡಿಜಿಟಲ್‌ ಮೂಲಕ ತಮ್ಮ ಮನೆಯ ವಿವರಗಳನ್ನು ಸುಲಭವಾಗಿ ಎಂಟ್ರಿ ಮಾಡಬಹುದು. ಡಿಜಿಟಲ್‌ನಲ್ಲಿ ಹೇಗೆ ? ಹಂತ -1 ಮೊದಲು www.ce.census.gov.in ವೆಬ್‌ಸೈಟ್‌ಗೆ ಹೋಗಬೇಕು. ಇಲ್ಲಿ ಕುಟುಂಬದ […]

Continue Reading

ವಾಡಿಯಲ್ಲಿ ಶಿವೈಕ್ಯ ಶಿವಕುಮಾರ ಶ್ರೀಗಳ ಜಯಂತಿ ಆಚರಣೆ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮಿಗಳ 119ನೇ ಜಯಂತಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ತುಮಕೂರಿನ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮಿಜಿಯವರು ನಡೆದಾಡುವ ದೇವರು ಎಂದೆ ಪ್ರಸಿದ್ಧರಾದ ಶ್ರೇಷ್ಠ ಆಧ್ಯಾತ್ಮಿಕ ಶರಣರಾಗಿದ್ದರು ಎಂದರು. ಶಿಕ್ಷಣ ತಜ್ಞ ಮತ್ತು ದಾಸೋಹಿಗಳಾದ ಸ್ವಾಮಿಗಳು 111 ವರ್ಷಗಳ ಕಾಲ ಬದುಕಿ, ತ್ರಿವಿಧ ದಾಸೋಹಗಳಾದ ಅನ್ನ, ಅಕ್ಷರ, ಜ್ಞಾನದ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದರು. ಸರಳ ಜೀವನ ಮತ್ತು […]

Continue Reading

ಸರಕಾರಿ ಕಚೇರಿಗಳ ಸಮಯ ಬದಲಾವಣೆಗೆ ಸ್ವಾಗತ: ಬಸವರಾಜ ಬಳೂಂಡಗಿ

ಸುದ್ದಿ ಸಂಗ್ರಹ ಕಲಬುರಗಿ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳು ಮತ್ತು ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಏಪ್ರಿಲ್, ಮೇ ಯಲ್ಲಿ ಸರಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಿರುವುದಕ್ಕೆ ಸರಕಾರಿ ನೌಕರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೌಕರರ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1-30ರವರಿಗೆ ಕಚೇರಿ ಸಮಯ ಬದಲಾವಣೆಗೆ […]

Continue Reading

ಕರ್ನಾಟಕದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ

ಸುದ್ದಿ ಸಂಗ್ರಹ ಬೆಂಗಳೂರು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಗಣನೀಯವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಸರ್ಕಾರಿ ನೌಕರರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ 9 ಜಿಲ್ಲೆಗಳ ಕಚೇರಿ ಕೆಲಸದ ವೇಳಾಪಟ್ಟಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂದರೆ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಈ ಹೊಸ ವೇಳಾಪಟ್ಟಿ ಜಾರಿಯಲ್ಲಿರಲಿದೆ. ಬದಲಾದ ಸಮಯದ ವಿವರ ಅವಧಿ: 2026ರ ಏಪ್ರಿಲ್ […]

Continue Reading

ಏಪ್ರಿಲ್ 1ರಿಂದ ಆನ್‌ಲೈನ್ ಪಾವತಿಯಲ್ಲಿ ಮಹತ್ವದ ಬದಲಾವಣೆ

ಸುದ್ದಿ ಸಂಗ್ರಹ ಹೊಸದಿಲ್ಲಿ ಆರ್ಥಿಕ ವರ್ಷ 2026-27ನೇ ಸಾಲಿಗೆ ಅನ್ವಯವಾಗುವಂತೆ, ಬ್ಯಾಂಕಿಂಗ್ ನಿಯಮದಲ್ಲಿ ಹಲವು ಬದಲಾವಣೆಗಳು ಆಗಲಿದೆ. ಏಪ್ರಿಲ್ 1, 2026ರಿಂದ ಜಾರಿಗೆ ಬರುವಂತೆ, ಆನ್‌ಲೈನ್ ಪಾವತಿಯ ವೇಳೆ ಒಟಿಪಿ ನಮೂದಿಸುವ ವಿಧಾನದಲ್ಲಿ ಹೊಸ ಸಿಸ್ಟಂ ಪಾಲಿಸಬೇಕಾಗುತ್ತದೆ. ಹೆಚ್ಚುತ್ತಿರುವ ಡಿಜಿಟಲ್ ಮತ್ತು ಬ್ಯಾಂಕಿಂಗ್ ವಂಚನೆ ಪ್ರಕರಣಗಳಿಂದಾಗಿ, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಕೆಲವೊಂದು ಮಹತ್ತರ ಬದಲಾವಣೆ ಜಾರಿಗೆ ಬರಲಿದೆ. ಈಗಾಗಲೇ, ಹೊಸದಾಗಿ ಅಪ್ಲೈ ಮಾಡಲು ಅಥವಾ ನವೀಕರಣ ಮಾಡಲು, ಪ್ಯಾನ್ ಕಾರ್ಡ್ ನಿಯಮದಲ್ಲಿ ಬದಲಾವಣೆಯನ್ನು ಪ್ರಕಟಿಸಲಾಗಿದೆ. ಆನ್‌ಲೈನ್ ಪಾವತಿಯ ವೇಳೆ […]

Continue Reading

ಜಾನಪದದಲ್ಲಿದೆ ಬದುಕಿನ ಸಾರ: ನಿರಗುಡಿ

ಸುದ್ದಿ ಸಂಗ್ರಹ ಕಲಬುರಗಿ ಜಾನಪದ ಸಂಸ್ಕೃತಿ, ಪರಂಪರೆ ದೇಶದ ಮೂಲವಾಗಿದೆ. ಇದನ್ನು ಮರೆತರೆ  ನಮಗೆ ಉಳಿಗಾಲವಿಲ್ಲ. ಜಾನಪದ ಕನ್ನಡದ ತಾಯಿ ಬೇರಾಗಿದೆ. ಜಾನಪದದಲ್ಲಿದೆ ಬದುಕಿನ ಸಾರ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್ ನಿರಗುಡಿ ಹೇಳಿದರು. ನಗರದ ಶೆಟ್ಟಿ ಕಾಂಪ್ಲೆಕ್ಸ್ ಎದುರುಗಡೆಯ ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್’ನಲ್ಲಿಂದು ಏರ್ಪಡಿಸಿದ್ದ  ‘ಕನ್ನಡ ಜಾನಪದ ಪರಿಷತ್ತಿನ 11ನೇ  ಸಂಸ್ಥಾಪನಾ ದಿನಾಚರಣೆ’  ಉದ್ಘಾಟಿಸಿ, ಮಾತನಾಡಿದರು. ಕಾಲೇಜಿನ ಪ್ರಾಚಾರ್ಯೆ ಡಾ.ಭಾಗಿರತಿ ಎಚ್. ಗುಡ್ಡೇವಾಡಿ ಮಾತನಾಡಿ, ಆಹಾರ, ಆಚಾರ, ವಿಚಾರ ಸೇರಿದಂತೆ  […]

Continue Reading

ಮುಂದಿನ 2 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಸುದ್ದಿ ಸಂಗ್ರಹ ಬೆಂಗಳೂರು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು […]

Continue Reading

ಹೊನ್ನಾಳಿಯಲ್ಲಿ ಸಿನಿಮಿಯ ರೀತಿಯ ದರೋಡೆ: ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

ಸುದ್ದಿ ಸಂಗ್ರಹ ದಾವಣಗೆರೆ ಕಾರು ಅಡ್ಡಗಟ್ಟಿ 38 ಲಕ್ಷ ರೂ. ಹಣ ದೋಚಿದ ಘಟನೆ ಹೊನ್ನಾಳಿ ತಾಲೂಕಿನ ಅರಕೆರೆ ಕಾಲೋನಿಯ ಸಮೀಪದ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಭದ್ರಾವತಿಯ ಮಾಲತೇಶ್ ಹಣ ಕಳೆದುಕೊಂಡವರು. ಮಾಲತೇಶ್ ಅವರ ಸ್ನೇಹಿತ ಮಾನಚಾರಿ ಜೊತೆ ಹಗರಿಬೊಮ್ಮನಹಳ್ಳಿಯಲ್ಲಿ ತಮ್ಮ ಪೂರ್ವಿಕರ ಜಮೀನು ಮಾರಿ, ಓಮಿನಿ ಕಾರಲ್ಲಿ ಹಣ ತರುತ್ತಿದ್ದರು. 76 ಲಕ್ಷ ರೂ. ಹಣವನ್ನು ಒಂದು ಬ್ಯಾಗಿನಲ್ಲಿ 38 ಲಕ್ಷ ರೂ. ಹಣವನ್ನು ಮತ್ತೊಂದು ಬ್ಯಾಗಿನಲ್ಲಿ ಹಾಗೂ ಜೆಬಿನಲ್ಲಿ ಎರಡು ಲಕ್ಷ ಇಟ್ಟುಕೊಂಡು ಬರುತ್ತಿದ್ದರು. […]

Continue Reading