ಯುವಜನತೆಯನ್ನು ಮಾದಕ ವಸ್ತುಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಿ: ಪಿ.ಎಸ್ ವನಂಜಕರ

ಸುದ್ದಿ ಸಂಗ್ರಹ ಶಹಾಬಾದ್ಯುವಜನತೆ ಮಾದಕ ವಸ್ತುಗಳಿಗೆ ಬಲಿಯಾಗಿ ಅಮೂಲ್ಯ ಜೀವನ ಹಾಳು ಮಾಡಿಕೊಂಡು ಕುಟುಂಬವನ್ನು ತೊಂದರೆಗೆ ಸಿಲುಕದಂತೆ ಎಚ್ಚರ ವಹಿಸಿ ಎಂದು ಪೊಲೀಸ್ ಇನ್ಸ್ಪೆಕ್ಟರ್ ಪಿ.ಎಸ್ ವನಂಜಕರ್ ಹೇಳಿದರು. ನಗರದ ಎಸ್‌ಎಸ್ ಮರಗೋಳ ಪದವಿ ಪೂರ್ವ ಕಾಲೇಜುನಲ್ಲಿ ಕಲಬುರಗಿ ಜಿಲ್ಲಾ ಪೊಲೀಸ್, ಶಹಾಬಾದ ಉಪ ವಿಭಾಗದ ಪೊಲೀಸ್ ಠಾಣೆಯ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಣಿಕೆ ವಿರೋಧಿ ದಿನವನ್ನು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, […]

Continue Reading

ಗೃಹ ಜ್ಯೋತಿ ದಾಖಲೆ ಪರಿಶೀಲನೆ ಆರಂಭ, ಗ್ರಾಹಕರು ಸಹಕರಿಸಬೇಕು

ಸುದ್ದಿ ಸಂಗ್ರಹ ಕಲಬುರಗಿಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನಾ ಅಭಿಯಾನ ಆರಂಭವಾಗಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಜೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ. ಮೀಟರ್ ರೀಡರ್‌ಗಳು ಹಾಗೂ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ, ಫಲಾನುಭವಿಗಳ ಗುರುತು ಮತ್ತು ದಾಖಲೆಗಳನ್ನು ಪರಿಶೀಲಿಸುವರು. ಅಗತ್ಯ ಮಾಹಿತಿಯನ್ನು ಮೊಬೈಲ್ ಆ್ಯಪ್ ಮೂಲಕ ದಾಖಲಿಸುವರು. ಘೋಷಣಾ ಪತ್ರವನ್ನೂ ಭರ್ತಿ ಮಾಡಿಸಿಕೊಂಡು ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಳಿಸುವರು. ಪರಿಶೀಲನೆ ವೇಳೆ ಫಲಾನುಭವಿಗಳು ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ರೇಷನ್ […]

Continue Reading

ಕಿರುತೆರೆಗೆ ಎಂಟ್ರಿ ಕೊಟ್ಟ ಮಾಜಿ ಸಚಿವ ಬಿ.ಸಿ ಪಾಟೀಲ್

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಗೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಯರ ಜೀವನದ ಪವಿತ್ರ ಪಯಣವನ್ನು ಭಕ್ತರು ಕಣ್ತುಂಬಿ ಕೊಳ್ಳುತ್ತಿದ್ದಾರೆ. ರಾಯರ ಮಹಿಮೆಯನ್ನು ತೆರೆ ಮೇಲೆ ಅಚ್ಚುಕಟ್ಟಾಗಿ ಮೂಡಿಸುತ್ತಿರುವ ಈ ಕಥಾಹಂದರಕ್ಕೆ ಮನೆಮನೆಯಿಂದಲೂ ಉತ್ತಮ ಮೆಚ್ಚುಗೆ ಸಿಕ್ಕಿದೆ. ಕಳೆದ ವಾರದ ಕಥೆಯಲ್ಲಿ ಪೂರ್ವಾಶ್ರಮದ ಹೆಂಡತಿ ಸರಸ್ವತಿಗೆ ಸದ್ಗತಿ ಕೊಟ್ಟ ಸಂಚಿಕೆ ಮನದುಂಬಿ ಬಂತು. ಪ್ರೇಕ್ಷಕರನ್ನು ಅಲುಗಾಡದಂತೆ ಸರೆ ಹಿಡಿಯಿತು. ರಾಯರ ಪಾತ್ರದಲ್ಲಿ ಪರಿಕ್ಷೀತ್ ರ ನಟನೆ ರಾಯರನ್ನೇ ನೋಡಿದಷ್ಟು ಪ್ರೇಕ್ಷಕರು ಮೆಚ್ಚುಗೆ […]

Continue Reading

ವಾಟ್ಸಪ್‌ ಹೊಸ ಅಪ್‌ಡೇಟ್‌ ಬಗ್ಗೆ ಕಳವಳ: ಮೆಟಾಗೆ ಕೇಂದ್ರ ಸರ್ಕಾರ ನೋಟಿಸ್

ಸುದ್ದಿ ಸಂಗ್ರಹ ನವದೆಹಲಿಮೊಬೈಲ್ ಸಂಖ್ಯೆ ಹಂಚಿಕೊಳ್ಳದೆ ಯೂಸರ್‌ನೇಮ್ ಮೂಲಕ ಸಂಪರ್ಕ ಸಾಧಿಸಲು ಅವಕಾಶ ಕಲ್ಪಿಸುವ ವಾಟ್ಸಪ್‌ನ ಹೊಸ ವೈಶಿಷ್ಟ್ಯದ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಈ ವೈಶಿಷ್ಟ್ಯವನ್ನು ಪರಿಚಯಿಸಿದ್ದಕ್ಕಾಗಿ ಕೇಂದ್ರ ಸರ್ಕಾರ ಮೆಟಾಗೆ ನೋಟಿಸ್‌ ಜಾರಿಗೊಳಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ವಾಟ್ಸಪ್‌ನ ಹೊಸ ವೈಶಿಷ್ಟ್ಯವು ಹೇಗೆ ಕಾರ್ಯನಿರ್ವಹಿಸುತ್ತದೆ ? ಯಾವ ಸುರಕ್ಷತಾ ಕ್ರಮಗಳನ್ನು ಒಳಗೊಂಡಿದೆ ? ಎಂಬುದರ ಕುರಿತು 3 ದಿನಗಳಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಮೆಸೇಜಿಂಗ್ ಆ್ಯಪ್ […]

Continue Reading

ವಾಡಿ ಪುರಸಭೆ: ಹಣಕಾಸಿನ ಅವ್ಯವಹಾರ, ತನಿಖೆಗೆ ಆಗ್ರಹ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಪುರಸಭೆಯ ಹಣಕಾಸು ವರ್ಷ 2024-25ರ ಅಧಿಕೃತ ಆಡಿಟ್ ವರದಿಯಲ್ಲಿ ತೀವ್ರ ಆಘಾತಕಾರಿ ಸಂಗತಿ ಮತ್ತು ನಿಯಮಬಾಹಿರವಾಗಿ ಆರ್ಥಿಕ ನಡವಳಿಕೆ ಪತ್ತೆಯಾಗಿವೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಆರೋಪಿಸಿ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರು. ಪ್ರಸಿದ್ಧ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯಾದ ‘ರಿತೇಶ್ ಗಾಂಧಿ ಅಂಡ್ ಅಸೋಸಿಯೇಟ್ಸ್’ ನಡೆಸಿರುವ ಶಾಸನಬದ್ಧ ಆಡಿಟ್ ವರದಿಯ ಪ್ರಕಾರ ಉಲ್ಲೇಖಿತ ದಾಖಲೆಗಳು ಮತ್ತು ಸಾರ್ವಜನಿಕ ಹಣದ ದುರುಪಯೋಗ ಮತ್ತು ಆಡಳಿತಾತ್ಮಕ ವೈಫಲ್ಯ ಎದ್ದುಕಾಣುತ್ತಿದೆ. ಆಡಿಟ್ ವರದಿಯಲ್ಲಿ […]

Continue Reading

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮಾದಕ ವ್ಯಸನದಿಂದ ದೂರವಿರಿ: ಪಿಎಸ್ಐ ರೇಣುಕಾ ಉಡಗಿ‌

ಸುದ್ದಿ ಸಂಗ್ರಹ ಶಹಾಬಾದ್ ದೇಶದ ನಿಜವಾದ ಸಂಪತ್ತೆಂದರೆ ಅದು ಮಾನವ ಸಂಪತ್ತು, ಎಲ್ಲಾ ಸಂಪನ್ಮೂಲಗಳು ಇದ್ದೂ ಉತ್ತಮ ಆರೋಗ್ಯಯುತ ಮಾನವ ಸಂಪನ್ಮೂಲ ಇಲ್ಲದಿದ್ದರೆ ಎಲ್ಲವೂ ವ್ಯರ್ಥ. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮಾದಕ ವ್ಯಸನದಿಂದ ದೂರವಿರಿ ಎಂದು ವಾಡಿ ಕ್ರೈಂ ಪಿಎಸ್ಐ ರೇಣುಕಾ ಉಡಗಿ ಹೇಳಿದರು. ತಾಲೂಕಿನ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ‘ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ’ದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಓದುವಂತಹ ವಯಸ್ಸಿನಲ್ಲಿ ಚಟಗಳಿಗೆ ದಾಸರಾಗಿ ಅಮೂಲ್ಯವಾದ ಬದುಕನ್ನು […]

Continue Reading

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೆ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ಸುದ್ದಿ ಸಂಗ್ರಹ ನವದೆಹಲಿದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೆ ಜೂನ್ ತಿಂಗಳಿನಲ್ಲಿ ಮೂರನೇ ಬಾರಿಗೆ ಇಂತಹ ಅತ್ಯಂತ ಕೆಟ್ಟ ಪರಿಸ್ಥಿತಿ ದಾಖಲಾಗಿದೆ. ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಪ್ರಮಾಣದ ಮಳೆಯಾಗಿದ್ದು, ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಕೊರತೆ ಎದ್ದು ಕಾಣುತ್ತಿದೆ. ಭಾರತದಲ್ಲಿ ಜೂನ್ ತಿಂಗಳಲ್ಲಿ ವಾಡಿಕೆಯಂತೆ 165 ಮಿಮೀ ಮಳೆಯಾಗಬೇಕಿತ್ತು. ಆದರೆ ಈ ಬಾರಿ ‘ಎಲ್ ನಿನೋ’ ಪ್ರಭಾವದಿಂದ ಮಳೆ ಪ್ರಮಾಣದಲ್ಲಿ ಭಾರಿ ಇಳಿಕೆಯಾಗಿದೆ. ಜೂನ್ ಅಂತ್ಯದ […]

Continue Reading

ಟೆಂಗಳಿ: ಮತದಾರರ ಪಟ್ಟಿಯ‌ ವಿಶೇಷ ತೀವ್ರ ಪರಿಷ್ಕರಣೆಗೆ ಚಾಲನೆ

ಸುದ್ದಿ ಸಂಗ್ರಹ ಕಾಳಗಿ ತಾಲೂಕಿನ ಟೆಂಗಳಿ ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್ಐಆರ್) ಕಾರ್ಯ ಬಿಎಲ್ಒಗಳು ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ಗ್ರಾಮ ಲೆಕ್ಕಾಧಿಕಾರಿ ಯೋಗೇಶ್ ಕಟ್ಟಿಮನಿ ಮಂಗಳವಾರ ಚಾಲನೆ‌ ನೀಡಿದರು. ವಾರ್ಡ್’ನ ಒಂದು ಕುಟುಂಬದ ಸದಸ್ಯರಿಗೆ ಎಸ್ಐಆರ್ ನಮೂನೆಗಳನ್ನು ವಿತರಿಸಿ, ಅವರಿಂದ ಮಾಹಿತಿ ಪಡೆಯಲಾಯಿತು. ಬಳಿಕ ಗ್ರಾಮ ಲೆಕ್ಕಾಧಿಕಾರಿ ಯೋಗೇಶ್ ಕಟ್ಟಿಮನಿ ಮಾತನಾಡಿ, ಮನೆಮನೆಗೆ ಅರ್ಜಿ ವಿತರಿಸಲಾಗುವುದು. ನಂತರ ಭರ್ತಿ ಮಾಡಿದ ಅರ್ಜಿಗಳನ್ನು ಪಡೆದು […]

Continue Reading

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಹಂಚಿಕೆ: ಯಾವ ಕ್ಷೇತ್ರಕ್ಕೆ ಎಷ್ಟು ?

ಸುದ್ದಿ ಸಂಗ್ರಹ ಬೆಂಗಳೂರುರಾಜಧಾನಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 2,000 ಕೋಟಿ ರೂ. ಮೊತ್ತದ ಅನುದಾನ ಹಂಚಿಕೆ ಮಾಡಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಈ ಪೈಕಿ ರಸ್ತೆ, ಚರಂಡಿ ಮತ್ತು ಪಾದಾಚಾರಿ ಮಾರ್ಗಗಳಿಗೆ 1,631 ಕೋಟಿ ರೂ. ನಾಗರಿಕ ಮೂಲಸೌಕರ್ಯ ಮತ್ತು ವಿಶೇಷ ಯೋಜನೆಗಳಿಗೆ 369 ಕೋಟಿ ರೂ. ಉಳಿದ 369 ಕೋಟಿ ಮೊತ್ತವನ್ನು ಉದ್ಯಾನಗಳು, ಸಮುದಾಯ ಭವನಗಳು, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸೌಲಭ್ಯಗಳು, ಕ್ರೀಡಾ ಮೂಲಸೌಕರ್ಯ, ಮಾರುಕಟ್ಟೆಗಳು, ಕೆರೆಗಳ ಅಭಿವೃದ್ಧಿ ಹಾಗೂ ಇತರ ಸಾರ್ವಜನಿಕ ಸೌಲಭ್ಯಗಳಿಗೆ […]

Continue Reading

ರಾಜ್ಯಸಭೆ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ

ಸುದ್ದಿ ಸಂಗ್ರಹ ನವದೆಹಲಿರಾಜ್ಯಸಭಾ ಸದಸ್ಯರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಸಭೆ ಸಭಾಪತಿಯೂ ಆಗಿರುವ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಪ್ರತಿಜ್ಞಾವಿಧಿ ಬೋಧಿಸಿದರು. ಖರ್ಗೆಯವರು ಹಿಂದಿ ಭಾಷೆಯಲ್ಲಿ ಪ್ರಮಾಣ ಸ್ವೀಕರಿಸಿದರು. ಕೈಯಲ್ಲಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡಿದ್ದರು. ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಿದ್ದ ಅವರು, ಅವಿರೋಧವಾಗಿ ಆಯ್ಕೆಯಾಗಿದ್ದರು. ಇದು ರಾಜ್ಯಸಭೆಯಲ್ಲಿ ಅವರದು ಎರಡನೇ ಅವಧಿ. ಪ್ರತಿಜ್ಞಾವಿಧಿ ಸ್ವೀಕರಿಸಿದ ಖರ್ಗೆಯವರನ್ನು ಅಭಿನಂಧಿಸಿದ ಉಪರಾಷ್ಟ್ರಪತಿ, ಅವರ ಅನುಭವದ ಪ್ರಯೋಜನ ಖಂಡಿತಾ ರಾಜ್ಯಸಭೆಗೆ ಲಾಭ ಉಂಟು […]

Continue Reading