ಭಾರಿ ಮಳೆ: 3 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್’ ಮತ್ತು ಬಹುತೇಕ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ನೀಡಿದ್ದು, ಭಾರಿ ಮಳೆಯಾಗಲಿದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ […]

Continue Reading

ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಪಾಲಕರ ಸಭೆ ಪೂರಕ

ಕಲಬುರಗಿ: ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಪಾಲಕರ ಸಭೆಗಳು ಪೂರಕವಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ಜೇವರ್ಗಿ ಪಟ್ಟಣದ ಕೋರ್ಟ್ ಸಮೀಪದ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಜರುಗಿದ ‘ಪಾಲಕರ ಸಭೆ’ ಉದ್ಘಾಟಿಸಿ ಮಾತನಾಡಿದ ಅವರು, ಪಾಲಕರ ಸಭೆಗಳು ಮಕ್ಕಳ ಶಿಕ್ಷಣಕ್ಕೆ ನಿರ್ಣಾಯಕವಾಗಿವೆ. ಏಕೆಂದರೆ ಪಾಲಕರು ಮತ್ತು ಶಿಕ್ಷಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತವೆ. ಮಗುವಿನ ಶೈಕ್ಷಣಿಕ, ಸಾಮಾಜಿಕ ಮತ್ತು ಭಾವನಾತ್ಮಕ ಪ್ರಗತಿಯನ್ನು ಚರ್ಚಿಸಲು ಅವಕಾಶ ಒದಗಿಸುತ್ತವೆ. ಈ ಸಭೆಗಳು ಪೋಷಕರು ತಮ್ಮ […]

Continue Reading

ರೋಷನ್’ಗೆ ಅನುಶ್ರೀನ ಪರಿಚಯಿಸಿದ್ದೆ ಶ್ರೀದೇವಿ ಭೈರಪ್ಪ, ವಿದೇಶದಿಂದ ಬಂದು ಹಾರೈಸಿದರು

ಬೆಂಗಳೂರು: ಕನ್ನಡದ ರಿಯಾಲಿಟಿ ಶೋಗಳ ಸ್ಟಾರ್ ಆಂಕರ್‌ ಅನುಶ್ರೀ ಅವರು ಇಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಕೂರ್ಗ್ ಮೂಲದ ಐಟಿ ಉದ್ಯೋಗಿ ರೋಷನ್ ರಾಮಮೂರ್ತಿ ಅವರೊಂದಿಗೆ ನಡೆದ ಮದುವೆಯಲ್ಲಿ ಆಪ್ತ ಸ್ನೇಹಿತರು , ಕುಟುಂಬಸ್ಥರು, ಕಿರುತೆರೆ ಮತ್ತು ಹಿರಿತೆರೆಯ ಹಲವಾರು ಗಣ್ಯರು ಭಾಗವಹಿಸಿದ್ದರು. ವಿಶೇಷವೆಂದರೆ ಇವರಿಬ್ಬರ ಪ್ರೀತಿಗೆ ಕೊಂಡಿಯಾಗಿದ್ದು ಶ್ರೀದೇವಿ ಬೈರಪ್ಪ ಎಂಬುದು ಬಹಿರಂಗವಾಗಿದೆ. ಶ್ರೀದೇವಿ ಬೈರಪ್ಪ ಮತ್ತು ರೋಷನ್ ಬಾಲ್ಯ ಸ್ನೇಹಿತರಾಗಿದ್ದು, ಪುನೀತ್ ರಾಜಕುಮಾರ ಅವರಿಗೆ ಸಂಬಂಧಿಸಿದ ಇವೆಂಟ್‌ ನಲ್ಲಿ ಶ್ರೀದೇವಿ ಅವರು ಅನುಶ್ರೀಯನ್ನು ಪರಿಚಯ […]

Continue Reading

ಕಾಗಿಣಾ- ಭೀಮಾ ನದಿಗಳ ಸಂಗಮವು ಕನ್ನಡ ಸಾಹಿತ್ಯ ಸಂಸ್ಕೃತಿಗೆ ಪ್ರೇರಣೆ: ಮುಡುಬಿ ಗುಂಡೇರಾವ

ಚಿತ್ತಾಪುರ: ಕಾಗಿಣಾ- ಭೀಮಾ ನದಿಗಳ ಸಂಗಮವು ಕನ್ನಡ ಸಾಹಿತ್ಯ ಸಂಸ್ಕೃತಿಗೆ ಪ್ರೇರಣೆ ನೀಡಿದೆ ಎಂದು ಸಂಶೋಧಕ ಮುಡುಬಿ ಗುಂಡೇರಾವ ಅಭಿಮತವ್ಯಕ್ತ ಪಡಿಸಿದರು. ತಾಲೂಕಿನ ಕುಂದನೂರು- ಹೊನಗುಂಟಿ ಸಮೀಪದ ಕೂಡಲ ಸಂಗಮನಾಥ ದೇವಾಲಯದಲ್ಲಿ ಗ್ರಾಮದ ಬಸವೇಶ್ವರ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-35ದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕೊಂದನೂರು, ಹೊನಗುಂಟಾ, ಶಹಬಾದ, ಭಂಕೂರ, ಮರತೂರ, ಮಾಲಗತ್ತಿ ಮುಂತಾದ ಗ್ರಾಮಗಳು ಪ್ರಾಚೀನ ಕಾಲದಲ್ಲಿ ಪ್ರಸಿದ್ದಿ ಹೊಂದಿದ್ದವು. ಧರ್ಮ, ಆಧ್ಯಾತ್ಮ, ಶಿಕ್ಷಣ, ಕಲೆ, […]

Continue Reading

ರಾಷ್ಟ್ರಕೂಟ, ಕಲ್ಯಾಣ ಚಾಲುಕ್ಯರ ಕಲಾ ವೈಭವ ಬಿಂಬಿಸುವ ದೇವಾಲಗಳು: ಮುಡುಬಿ ಗುಂಡೇರಾವ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ದೊರೆಯುವ ಬಹುತೇಕ ಶಾಸನ, ಸ್ಮಾರಕಗಳು ರಾಷ್ಟ್ರಕೂಟ, ಕಲ್ಯಾಣ ಚಾಲುಕ್ಯರ ಕಲಾ ವೈಭವ, ದಾನ, ದತ್ತಿ, ಪರೋಪಕಾರತೆ ಇತಿಹಾಸವನ್ನು ಸಾರುತ್ತವೆ ಎಂದು ಸಂಶೋಧಕ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಜಿಲ್ಲೆಯ ಹೊನಗುಂಟಿ ಗ್ರಾಮದ ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯದಲ್ಲಿ ಬಸವೇಶ್ವರ ಸೇವಾ ಬಳಗ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-36ದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಶಹಾಬಾದ ತಾಲೂಕಿನ ಭಂಕೂರ, ಮಾಲಗತ್ತಿ, ಮರತೂರ, ದೇವರ ತೆಗನೂರು, ಹೊನಗುಂಟಿ ಗ್ರಾಮಗಳಲ್ಲಿ ಐತಿಹಾಸಿಕ ಪ್ರಾಚೀನ ಕುರುಹುಗಳು, […]

Continue Reading

ಹವಾಮಾನ ಇಲಾಖೆ: ಆ.30ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ […]

Continue Reading

ಊಟ ಮುಗಿಸಿ ಬರುವಷ್ಟರಲ್ಲಿ 97 ಲಕ್ಷ ರೂ ತೆಗೆದುಕೊಂಡು ಪರಾರಿಯಾದ ಡ್ರೈವರ್

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದ ಘಟನೆ ಸಿನಿಮಾ ದೃಶ್ಯವನ್ನು ಹೋಲಿಸುವಂತಿತ್ತು. ಬಾಡಿಗೆ ಕಾರು ಚಾಲಕನು ಕಾರಿನಲ್ಲಿದ್ದ 97 ಲಕ್ಷ ರೂ ತೆಗೆದುಕೊಂಡು ಪರಾರಿಯಾಗಲು ಯತ್ನಿಸಿದ ಆದರೆ ಚಳ್ಳಕೆರೆ ಪೊಲೀಸರು ತಕ್ಷಣ ಬೆನ್ನಟ್ಟಿ ಆರೋಪಿ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಮೂಲದ ನಿವೃತ್ತ ಸಿಬಿಐ ಎಸ್ಪಿ ಗುರುಪ್ರಸಾದ್ ತಮ್ಮ ಪತ್ನಿ ಲಲಿತಾ ಜೊತೆ ಬಳ್ಳಾರಿಗೆ ತೆರಳಿದ್ದರು. ಅಲ್ಲಿ ಕುಟುಂಬದ ಜಮೀನು ಮಾರಾಟ ಮಾಡಿ 97 ಲಕ್ಷ ರೂ ತೆಗೆದುಕೊಂಡು ಬೆಂಗಳೂರಿಗೆ ಹಿಂತಿರುಗುವಾಗ ಬಾಡಿಗೆ ಕಾರಿನಲ್ಲಿ […]

Continue Reading

ಕಲ್ಯಾಣ ಮಂಟಪಗಳಲ್ಲಿ ಕದ್ದ ಹಣದಲ್ಲಿ 3 ಸೈಟ್ ಖರೀದಿಸಿ,1 ಮನೆ ಕಟ್ಟಿದ ಖದೀಮ ಅಂದರ್

ಬೆಂಗಳೂರು: ಈತ ಟಿಪ್‌ಟಾಪ್‌ ಆಗಿ ಕಲ್ಯಾಣ ಮಂಟಪಕ್ಕೆ ಕಾಲಿಟ್ಟನೆಂದರೆ ಅಲ್ಲಿ ವಧು-ವರರ ಕುಟುಂಬಕ್ಕೆ ಸೇರಿದವರ ಚಿನ್ನಾಭರಣ, ನಗದು ಮಂಗಮಾಯವಾಗುವದು ಗ್ಯಾರಂಟಿ ಇತ್ತು, ಹೀಗಾಗಿಯೇ ಮದುವೆ ಮನೆಯಲ್ಲಿ ಕದ್ದ ಚಿನ್ನಾಭರಣಗಳಿಂದ 3 ನಿವೇಶನ ಖರೀದಿಸಿ, ವಾಸಿಸಲು ಸ್ವಂತ ಮನೆಕಟ್ಟಿಕೊಂಡು ಹೆಂಡತಿ-ಮಕ್ಕಳ ಜೊತೆಗೆ ಸಂಸಾರ ಮಾಡಿಕೊಂಡಿದ್ದ ವೃತ್ತಿಪರ ಖದೀಮನೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ತುಮಕೂರು ಜಿಲ್ಲೆ ಗುಬ್ಬಿ ನಿವಾಸಿ ಪರಮೇಶ್ ಈ ಖತರ್‌ನಾಕ್‌ ಕಳ್ಳ. ಕಲ್ಯಾಣ ಮಂಟಪಗಳಿಗೆ ಅತಿಥಿಯ ಸೋಗಿನಲ್ಲಿ ತೆರಳಿ ವಧು-ವರರ ಕೊಠಡಿಗಳಲ್ಲಿ ಚಿನ್ನಾಭರಣ ಕದಿಯುತ್ತಿದ್ದ ಈ ಚಾಲಾಕಿ […]

Continue Reading

ಗಣೇಶ ಹಬ್ಬದಂದು ಚಂದ್ರನನ್ನು ನೋಡಬಾರದು ಯಾಕೆ ?

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೆಯಾದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದೆಯಾದ ಕಥೆಗಳಿದ್ದು, ಗಣೇಶ ಹಬ್ಬಕ್ಕೂ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ. ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದರೆ ಭಾದ್ರಪದ ಶುಕ್ಲದ ಚೌತಿಯ ದಿನದಂದು ಮಾತ್ರ ನೋಡಬಾರದು ಎಂದು ಅನಿಸಿದರೂ, ಆಕಸ್ಮಿಕವಾಗಿ ಚಂದ್ರನನ್ನು ನೋಡಿಯೇ ಬಿಡುತ್ತೆವೆ. ಅಂದು ಚಂದ್ರನನ್ನು ನೋಡಿದವರಿಗೆ ಅಪವಾದ ಬರುತ್ತದೆ. ಆದರೆ ಕೃಷ್ಣ ಪಕ್ಷದ ಚೌತಿಯ ಚಂದ್ರನನ್ನು ನೋಡಿದರೆ ಆ ಅಪವಾದ ದೂರವಾಗುತ್ತದೆ ಎಂಬ ನಂಬಿಕೆ ಇಂದಿಗೂ […]

Continue Reading

ನಾಲವಾರ: ಆ.28 ರಂದು ಶ್ರಾವಣ ಮಾಸದ ಮುಕ್ತಾಯ ಸಮಾರಂಭ

ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ದೇಶ್ವರ ಮಹಾಸಂಸ್ಥಾನ ಮಠದಲ್ಲಿ ಆಗಸ್ಟ್ 28 ರಂದು ಗುರುವಾರ ಶ್ರಾವಣ ಮಾಸದ ಮುಕ್ತಾಯ ಸಮಾರಂಭ ಅತ್ಯಂತ ಅದ್ಧೂರಿಯಾಗಿ ನೆರವೇರಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಕೆ ಗಂವ್ಹಾರ ತಿಳಿಸಿದ್ದಾರೆ. ಶ್ರಾವಣ ಮಾಸದ ಪರ್ಯಂತ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದ ನಿಮಿತ್ಯ ಗುರುವಾರ ಮಧ್ಯಾಹ್ನ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಪುರಪ್ರವೇಶ, ಅದ್ಧೂರಿ ಶೋಭಾಯಾತ್ರೆ ಮತ್ತು ಸದ್ಗುರು ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಪಲ್ಲಕ್ಕಿ ಉತ್ಸವ ನಡೆಯಲಿದೆ. […]

Continue Reading