ಗುಜರಾತ್‌ ಎಮ್ಮೆಯ ಹಿಂದೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡ ನಿರ್ದೇಶಕ ಜೋಗಿ ಪ್ರೇಮ್‌

ಸುದ್ದಿ ಸಂಗ್ರಹ ಬೆಂಗಳೂರು ಖ್ಯಾತ ಚಿತ್ರ ನಿರ್ದೇಶಕ ಪ್ರೇಮ್ ಅವರಿಗೆ ಹೈನುಗಾರಿಕೆಗಾಗಿ ಎಮ್ಮೆ ಕೊಡಿಸುವುದಾಗಿ 4.5 ಲಕ್ಷ ರೂ ಪಡೆದು ವಂಚಿಸಿರುವ ಆರೋಪದ ಮೇಲೆ ಗುಜರಾತ್ ಮೂಲದ ವನರಾಜ್ ಭಾಯ್ ಎಂಬಾತನ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ್ ಅವರ ಮ್ಯಾನೇಜರ್ ಕಂ ನಟ ದಶಾವರ ಚಂದ್ರು ಅವರು ದೂರು ನೀಡಿದ್ದಾರೆ. ಪ್ರಕರಣದ ಹಿನ್ನೆಲೆ: ಪ್ರೇಮ್ ಅವರು ಹೈನುಗಾರಿಕೆಗಾಗಿ ಎರಡು ಎಮ್ಮೆ ಖರೀದಿಸಲು ಮುಂದಾಗಿದ್ದರು. ಈ ವೇಳೆ ವನರಾಜ್ ಭಾಯ್ ಎಂಬ ವ್ಯಕ್ತಿಯು […]

Continue Reading

ಯೋಧನಿಗೆ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ: 20 ಲಕ್ಷ ದಂಡ ವಿಧಿಸಿದ NHAI

ಲಕ್ನೋ: ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನು ಟೋಲ್ ಪ್ಲಾಜಾ ಸಿಬ್ಬಂದಿ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿದ್ದ ಘಟನೆಗೆ ಸಂಬಂಧಿಸಿದಂತೆ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ (NHAI) ಮೀರತ್‌ನ ಟೋಲ್ ಸಂಸ್ಥೆಗೆ 20 ಲಕ್ಷ ರೂ. ದಂಡ ವಿಧಿಸಿದೆ. ಉತ್ತರ ಪ್ರದೇಶದ ಮೀರತ್‌ನಲ್ಲಿ ಯೋಧ ಕಪಿಲ್ ಕವಾಡ್ ಎನ್ನುವವರ ಮೇಲೆ ಟೋಲ್ ಸಿಬ್ಬಂದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಅಮಾನವೀಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಈಗಾಗಲೇ 6 ಜನರನ್ನು […]

Continue Reading

ಕಾರು, ಮೊಬೈಲ್, ಕಂಪ್ಯೂಟರ್ ಹೊಸ ಜಿಎಸ್‌ಟಿ ಅಡಿ ಯಾವೆಲ್ಲಾ ವಸ್ತುಗಳ ಬೆಲೆ ಕಡಿಮೆ ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆಗೆ ಗುಡ್ ನ್ಯೂಸ್ ನೀಡಿದ್ದರು. ಪ್ರಮುಖವಾಗಿ ಜಿಎಸ್‌ಟಿ ಕಡಿತದ ಕುರಿತು ಮಹತ್ವದ ಘೋಷಣೆ ಮಾಡಿದ್ದರು. ದೇಶದಲ್ಲಿ ಹೊಸ ಜಿಎಸ್‌ಟಿ ಸಿಸ್ಟಮ್ ಜಾರಿಗೆ ತರಲಾಗುತ್ತಿದೆ ಎಂದಿದ್ದರು. ಇಷ್ಟೇ ಅಲ್ಲ ಹಲವು ವಸ್ತುಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ವಿಶೇಷ ಅಂದರೆ ಈ ಬದಲಾವಣೆಯಿಂದ ದೇಶದಲ್ಲಿ ಹಲವು ವಸ್ತುಗಳ ಮೇಲಿನ ಬೆಲೆ ಕಡಿತಗೊಳ್ಳಲಿದೆ. ಈ ಪೈಕಿ ದಿನಬಳಕೆ ವಸ್ತುಗಳ ಮೇಲಿನ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ. ಜಿಎಸ್‌ಟಿ ಎಷ್ಟು ಇಳಿಕೆಯಾಗಲಿದೆ ? ಸರಕು, ಅಗತ್ಯ […]

Continue Reading

ರುದ್ರಾಕ್ಷಿ ಧಾರಣೆಯಿಂದ ಆಧ್ಯಾತ್ಮಿಕ, ಭೌತಿಕ ಲಾಭ: ಚರಲಿಂಗ ಶ್ರೀ

ಕಲಬುರಗಿ: ರುದ್ರಾಕ್ಷಿ ಪವಿತ್ರ ವಸ್ತುವಾಗಿದ್ದು, ಇದನ್ನು ಧರಿಸುವುದರಿಂದ ಆಧ್ಯಾತ್ಮಿಕ ಮತ್ತು ಭೌತಿಕ ಪ್ರಯೋಜನ ಪಡೆಯಬಹುದು, ರಕ್ತದೊತ್ತಡ ಮತ್ತು ಚರ್ಮದ ಸಮಸ್ಯೆಗಳಿಗೆ ಪರಿಹಾರ ಇದರಲ್ಲಿದೆ. ಇದು ಆಧ್ಯಾತ್ಮಿಕ ಪ್ರಗತಿಗೆ ಸಹಾಯ ಮಾಡುತ್ತದೆ‌ ಎಂದು ಗದ್ದುಗೆ ಮಠದ ಪೂಜ್ಯ ಚರಲಿಂಗ ಮಹಾಸ್ವಾಮಿಗಳು ಹೇಳಿದರು. ನಗರದ ಬಿಲಗುಂದಿ ಪೆಟ್ರೋಲ್ ಪಂಪ್ ಎದುರುಗಡೆಯ ಬಡೆಪೂರ ಕಾಲೋನಿಯ ಭಕ್ತರ ಮನೆಗಳಿಗೆ ಹೋಗಿ ರುದ್ರಾಕ್ಷಿ ಧಾರಣೆ ಕಾರ್ಯಕ್ರಮ ಮತ್ತು ಸದ್ಭಾವನ ಪಾದಯಾತ್ರೆ ಪ್ರಾರಂಭಿಸಿ ಮಾತನಾಡಿದ ಅವರು, ಧ್ಯಾನ ಮತ್ತು ಪ್ರಾರ್ಥನೆಗಳಿಗೆ ರುದ್ರಾಕ್ಷಿ ಬಳಸಲಾಗುತ್ತದೆ. ನಕರಾತ್ಮಕ ಶಕ್ತಿಗಳಿಂದ […]

Continue Reading

ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ 2 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. […]

Continue Reading

ಧರ್ಮ ಆಧ್ಯಾತ್ಮದ ತವರೂರು, ಶಿಕ್ಷಣದ ಕಾಶಿ ಹರಸೂರು: ಮುಡುಬಿ

ಕಾಳಗಿ: ಕಲ್ಯಾಣ ಚಾಲುಕ್ಯರ ಮತ್ತು ರಾಷ್ಟ್ರಕೂಟರ ಕಾಲದಲ್ಲಿ ನಾಡಿಗೆ ವಿದ್ಯಾದಾನಗೈದ ಕೀರ್ತಿ ಹರಸೂರು ಗ್ರಾಮಕ್ಕೆ ಸಲ್ಲುತ್ತದೆ ಎಂದು ಸಂಶೋಧಕ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಹರಸೂರ ಗ್ರಾಮದಲ್ಲಿ ಬಸವೇಶ್ವರ ಸೇವಾ ಬಳಗ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ- 28ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಹರಸೂರ ಗ್ರಾಮವು ಪ್ರಾಚೀನ ಕಾಲದಲ್ಲಿ ಆಧ್ಯಾತ್ಮದ ತವರೂರಾಗಿತ್ತು. ಗ್ರಾಮದ ಹೆಸರೇ ಸೂಚಿಸುವಂತೆ ಸಾಕ್ಷಾತ ಹರ(ಶಿವ)ನೇ ನೆಲೆ ನಿಂತ ಗ್ರಾಮವು ಹರಸೂರಾಗಿದೆ. ಗ್ರಾಮದಲ್ಲಿ ಶಿವನಿಗೆ ಸೇರಿದಂತೆ ಅವತಾರಗಳು, […]

Continue Reading

ಮಲೆನಾಡು, ಕಲ್ಯಾಣ ಕರ್ನಾಟಕದಲ್ಲಿ ಭಾರಿ ಮಳೆ: 5 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಚಿಕ್ಕಮಗಳೂರು, ಕೊಡಗು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರವಿವಾರ ಧಾರಾಕಾರ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ಮಲೆನಾಡಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕುದುರೆ ಮುಖ ಭಾಗದಲ್ಲಿ ಭಾರಿ ಮಳೆ ಇದ್ದು, ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಶೃಂಗೇರಿ ಪಟ್ಟಣದ ಗಾಂಧಿ ಮೈದಾನ, ದೇಗುಲದ ವಾಹನ ನಿಲುಗಡೆ ತಾಣದಲ್ಲಿದ್ದ ವಾಹನಗಳು ನೀರಿನಲ್ಲಿ ಮುಳುಗಿವೆ. ಆಸುಪಾಸಿನ ಜಮೀನು, ತೋಟಗಳಿಗೆ ನೀರು ನುಗ್ಗಿದೆ. ಕೊಪ್ಪ, ಕಳಸ, ಎನ್.ಆರ್ ಪುರ, ಮೂಡಿಗೆರೆ ವ್ಯಾಪ್ತಿಯಲ್ಲಿ ಜೋರು ಮಳೆ ಇದೆ. ಚಾರ್ಮಾಡಿ ಘಾಟಿಯಲ್ಲಿ ಜೋರು […]

Continue Reading

ನಾಲವಾರ: ಆ.21 ರಂದು ಭಕ್ತರಿಗೆ ಗುರುದೀಕ್ಷಾ, ಅಯ್ಯಾಚಾರ ಕಾರ್ಯಕ್ರಮ

ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾ ಸಂಸ್ಥಾನ ಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಇಷ್ಟಲಿಂಗ ಸಹಿತ ಗುರುಪಾದಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿ ಭಾವದಿಂದ ನಡೆಯುತ್ತಿದ್ದು, ಶ್ರಾವಣ ಸಂಭ್ರಮ ಕಳೆಗಟ್ಟಿದೆ ಎಂದು ಮಠದ ವಕ್ತಾರ ಮಹಾದೇವ ಕೆ ಗಂವ್ಹಾರ ತಿಳಿಸಿದ್ದಾರೆ. ಪ್ರತಿ ವರ್ಷದ ಪದ್ಧತಿಯಂತೆ ಶ್ರಾವಣದ ಕೊನೆಯ ಗುರುವಾರ ಆಗಸ್ಟ್ 21ರಂದು ಶ್ರೀಮಠದ ಪೀಠಾಧಿಪತಿ ಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಭಕ್ತರಿಗೆ ಗುರುದೀಕ್ಷೆ ಹಾಗೂ ಜಂಗಮ […]

Continue Reading

ಸಾಲ ಕೊಟ್ಟವರ ಮನೆಯಲ್ಲಿ ಕನ್ನ: ತಂಗಿ ಕೃತ್ಯಕ್ಕೆ ಅಣ್ಣ ಸಾಥ್,​ ಆರು ಜನರ ಬಂಧನ

ನೆಲಮಂಗಲ: ಸಾಲ ತೀರಿಸಲು ಸಾಲ ಕೊಟ್ಟವರ ಮನೆಯಲ್ಲಿ ಕಳ್ಳತನ ಮಾಡಿದ ಗ್ಯಾಂಗ್​ವೊಂದು ಸಿಕ್ಕಿಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬಾಗಲಗುಂಟೆ ಠಾಣೆಯ ಪೊಲೀಸರು 6 ಜನ ಆರೋಪಿಗಳನ್ನು ಬಂಧಿಸಿ, 9.9 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಕುಖ್ಯಾತ ಕಳ್ಳ ಮೋರಿ ರಾಜ, ವೆಂಕಟೇಶ್, ಕವಿತಾ, ಹರೀಶ್, ನಾಗರಾಜ್ ಮತ್ತು ಪ್ರತಾಪ್​ ಬಂಧಿತರು. ಘಟನೆ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ನೇಹ ಧಮ್ ಬಿರಿಯಾನಿ ಹೆಸರಿನ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ಮಂಗಳಾ ಎಂಬುವವರ ಬಳಿ ಕವಿತಾ […]

Continue Reading

ನ್ಯಾ.ಎಚ್‌.ಎನ್‌ ನಾಗಮೋಹನ್‌ ದಾಸ್‌ ಒಳಮೀಸಲಾತಿ ವರದಿ ಅವೈಜ್ಞಾನಿಕ ಎಂಬ ಬೆಣ್ಣೂರಕರ್ ಆರೋಪ ಸತ್ಯಕ್ಕೆ ದೂರ: ದೀಪಕ್ ಹೊಸೂರಕರ್

ಚಿತ್ತಾಪುರ: ನ್ಯಾ.ಎಚ್‌.ಎನ್‌ ನಾಗಮೋಹನ್‌ ದಾಸ್‌ ಒಳಮೀಸಲಾತಿ ವರದಿ ಅವೈಜ್ಞಾನಿಕ ಎಂಬ ಜಿ‌‌.ಪಂ ಮಾಜಿ ಸದಸ್ಯ ಬಸವರಾಜ ಬೆಣ್ಣೂರಕರ್ ಆರೋಪ ಸತ್ಯಕ್ಕೆ ದೂರ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸೂರಕರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಗಸ್ಟ್ 19ರ ವಿಶೇಷ ಸಂಪುಟ ಸಭೆಯಲ್ಲಿ ಒಳ ಮಿಸಲಾತಿ ಜಾರಿಗೆ ಅಂತಿಮ ತೀರ್ಮಾನ ಸರ್ಕಾರ ಕೈಗೊಳ್ಳಲೇಬೇಕು. ಇಲ್ಲವಾದರೆ ರಾಜ್ಯದ 29 ಸಾವಿರ ಹಳ್ಳಿಗಳಲ್ಲಿ ಅಸ್ಪೃಶ್ಯ ಸಮಾಜದವರು ಬೀದಿಗಿಳಿದು ಮಾಡು ಇಲ್ಲವೇ ಮಡಿ ಹೋರಾಟ […]

Continue Reading