ದಂಡೋತಿ ಸೇತುವೆ ಮುಳುಗಡೆ: ಸಂಚಾರ ಸ್ತಬ್ಧ

ಚಿತ್ತಾಪುರ: ಬುಧವಾರ ರಾತ್ರಿ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗಿದೆ. ಗುರುವಾರ ಬೆಳಿಗ್ಗೆ ಕಾಗಿಣಾ ನದಿಯಲ್ಲಿ ಭಾರಿ ಪ್ರವಾಹ ಬಂದು ತಾಲೂಕಿನ ದಂಡೋತಿ ಸಮೀಪದ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮಾರ್ಗದ ಸಾರಿಗೆ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿದೆ. ಕಾಗಿಣಾ ನದಿಯ ಮೇಲ್ಭಾಗದ ಸೇಡಂ, ಕಾಳಗಿ, ಚಿಂಚೋಳಿ ತಾಲೂಕುಗಳಲ್ಲಿ ಮಳೆಯಾಗಿದ್ದರಿಂದ ಕಾಗಿಣಾ ನದಿ ತುಂಬಿ ಹರಿಯುತ್ತಿದೆ. ಬೆಣ್ಣೆತೊರಾ ಜಲಾಶಯದಿಂದ ನೀರು ಹೊರಗೆ ಬಿಟ್ಟಿದ್ದರಿಂದ ನದಿಯಲ್ಲಿ ಪ್ರವಾಹ ಏರುಗತಿಯಲ್ಲಿದ್ದು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ಆಚೆಗಿರುವ ಗ್ರಾಮಗಳ ವಿದ್ಯಾರ್ಥಿಗಳು ಬೆಳಿಗ್ಗೆ ಪಟ್ಟಣದ ವಿವಿಧ […]

Continue Reading

ಕಾರಲ್ಲಿ ಇಬ್ಬರು ಬಾಲಕಿಯರಿದ್ದರು, ಕಣ್ಣೀರಿಡುತ್ತಾ ಓಡಿ ಬಂದ ವಿದ್ಯಾರ್ಥಿನಿ: ಕಿಡ್ನ್ಯಾಪ್‌ಗೆ ನಡೆಯಿತಾ ಯತ್ನ ?

ಹಾಸನ: ಕಾರಲ್ಲಿ ಇಬ್ಬರು ಬಾಲಕಿಯರಿದ್ದರು, ಕಾರಲ್ಲಿದ್ದವರು ನನ್ನನ್ನೂ ಕಿಡ್ನ್ಯಾಪ್‌ ಮಾಡಲು ಯತ್ನಿಸಿದ್ದರು ಎಂದು ಶಾಲಾ ವಿದ್ಯಾರ್ಥಿನಿಯೊಬ್ಬಳು ಅಳುತ್ತ ಓಡಿ ಶಾಲೆಗೆ ಬಂದ ಪ್ರಸಂಗ ಆಲೂರು ತಾಲೂಕಿನ ಹಂಚೂರು ಗ್ರಾಮದಲ್ಲಿ ನಡೆದಿದೆ. ಶಾಲೆಗೆ ಓಡಿ ಬಂದ ವಿದ್ಯಾರ್ಥಿನಿ, ಬಿಳಿ ಬಣ್ಣದ ಮಾರುತಿ ಓಮ್ನಿಯಲ್ಲಿ ಬಂದವರು ಅಪಹರಣಕ್ಕೆ ಯತ್ನಿಸಿದ್ದರು, ಕಾರಿನಲ್ಲಿ ಮತ್ತಿಬ್ಬರು ವಿದ್ಯಾರ್ಥಿನಿಯರು ಇದ್ದರು ಎಂದು ಹೇಳಿಕೊಂಡಿದ್ದಾಳೆ. ಈ ವೇಳೆ ಗಾಬರಿಯಿಂದ ಬಾಲಕಿ ಬ್ಯಾಗ್‌ ಸಹ ಎಸೆದು ಬಂದಿದ್ದಾಳೆ. ಈ ಮಾಹಿತಿಯನ್ನು ಶಾಲಾ ಮುಖ್ಯ ಶಿಕ್ಷಕರು ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ […]

Continue Reading

ಅರಜಂಬಗಾ: ಕರವೇ ಗ್ರಾಮ ಘಟಕದ ಅಧ್ಯಕ್ಷರಾಗಿ ಲಾಲ್ ಪಟೇಲ್ ಆಯ್ಕೆ

ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಅರಜಂಬಗಾ ಗ್ರಾಮ ಘಟಕದ ಅಧ್ಯಕ್ಷರಾಗಿ ಲಾಲ್ ಪಟೇಲ್ ತಂದೆ ಮಕಬೂಲ್ ಪಟೇಲ್ ಅವರನ್ನು ನೇಮಕ ಮಾಡಲಾಯಿತು. ನಗರದ ಒಕ್ಸ್ ಎಲೈಟ್ ಹೋಟೆಲ್’ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮಾಸಿಕ ಸಭೆಯಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಕಾಶಿ ಮತ್ತು ಕರವೇ ಜಿಲ್ಲಾಧ್ಯಕ್ಷ ಆನಂದ್ ದೊಡ್ಮನಿ ಅವರು ಕಾಳಗಿ ತಾಲೂಕಿನ ಅರಂಬಗಾ ಗ್ರಾಮ ಘಟಕದ ಅಧ್ಯಕ್ಷರನ್ನು ನೇಮಕ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸರ್ವ ತಾಲೂಕು ಅಧ್ಯಕ್ಷರು, […]

Continue Reading

ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

Continue Reading

ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು, ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಸಮಗ್ರ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ವಿಧಾನಪರಿಷತ್‌ನಲ್ಲಿ ಗಮನ ಸೆಳೆಯುವ ಸೂಚನೆಯಡಿ ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಹಾಗೂ ಬಿಜೆಪಿಯ ಡಿ.ಎಸ್‌ ಅರುಣ್‌ ಅವರ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನಡೆಸುವ ವಿಷಯದ ಬಗ್ಗೆ ಉತ್ತರ ನೀಡಿದರು. ಸ್ಥಳೀಯ ಸಂಸ್ಥೆಗಳಿಗೆ […]

Continue Reading

ಅಂಗಾಂಗ ದಾನ ಜೀವದಾನಕ್ಕೆ ಸಮಾನ: ಡಾ.ರಾಜಶೇಖರ ಪಾಟೀಲ

ಕಲಬುರಗಿ: ರಕ್ತದಾನ, ಅಂಗಾಂಗ ದಾನ, ದೇಹ ದಾನ ಮಾಡುವುದರಿಂದ ಮತ್ತೊಬ್ಬರ ಜೀವ ಉಳಿಯುವುದರ ಜೊತೆಗೆ ದಾನಿ ಸತ್ತ ನಂತರವು ದಾನ ಮಾಡಿದ ಅಂಗಾಂಗಳ ಮೂಲಕ ಬದುಕಬಹುದಾಗಿದೆ, ಅಂಗಾಂಗ ದಾನಿಗಳಿಗೆ ಸಾವಿಲ್ಲ ಎಂದು ಖ್ಯಾತ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ಜೆ.ಆರ್ ನಗರದಲ್ಲಿನ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಬುಧವಾರ ಸಂಜೆ ಜರುಗಿದ ‘ವಿಶ್ವ ಅಂಗಾಂಗ ದಾನ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, […]

Continue Reading

ಕರ್ತವ್ಯ ಲೋಪ: ಧಾರವಾಡ ಜಿ.ಪಂ ಯೋಜನಾಧಿಕಾರಿ ಅಮಾನತು

ಧಾರವಾಡ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಧಾರವಾಡ ಜಿ.‌ಪಂ ಯೋಜನಾಧಿಕಾರಿ ರೇಖಾ ಡೊಳ್ಳಿನ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾರ್ಯದರ್ಶಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ರೇಖಾ ಅವರು ಕಾನೂನು ಬಾಹಿರವಾಗಿ ಕೋಟಿ ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಜಿಲ್ಲಾ ಮಟ್ಟದ ಅನುದಾನ ಪ್ರಸ್ತಾವನೆ ಸಲ್ಲಿಸುವಾಗ ಕಾನೂನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ರಾಜೀವ್ ಗಾಂಧಿ ಚೈತನ್ಯ ಯೋಜನೆಯಡಿ ಗ್ರಾಮೀಣ ಜನರಿಗೆ ಕೌಶಲ್ಯ ಕೊಡುವ ಯೋಜನೆ ಇತ್ತು. 2017-18ರಲ್ಲಿ ಈ ಯೋಜನೆಯ ಕಾರ್ಯಕ್ರಮಕ್ಕೆ ಕೈಗೊಂಡ ಅಭಿಯಾನದ […]

Continue Reading

ಕಲಬುರಗಿ: ಜಿ.ಪಂ ಸಿಇಒ ಕೈ ಸೇರಲಿದೆ ಹಾಸ್ಟೆಲ್‌ ಅವ್ಯವಸ್ಥೆ ವರದಿ

ಕಲಬುರಗಿ: ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕಳಪೆ ಊಟ ಪೂರೈಕೆ, ಕಾಟ್, ಬೆಡ್ ಇಲ್ಲದಿರುವುದು, ಮೆನು ಪ್ರಕಾರ ಊಟ, ಉಪಾಹಾರ ನೀಡದಿರುವುದು, ಶುಚಿ ಕಿಟ್ ನೀಡದಿರುವುದು, ಶೌಚಾಲಯ ಸ್ವಚ್ಛತೆ ಕಾಯ್ದುಕೊಳ್ಳದೆ ಅಸಡ್ಡೆ ತೋರಿಸುವಂತಹ ಹಾಸ್ಟೆಲ್‌ ವಾರ್ಡನ್‌ಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮುಂದಾಗಿದೆ. ಈ ಸಂಬಂಧ ಹಾಸ್ಟೆಲ್ ಪರಿಸ್ಥಿತಿ ಯಥಾವತ್ ವರದಿ ನೀಡುವುದಕ್ಕಾಗಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಭಂವರ್ ಸಿಂಗ್ ಮೀನಾ ಅವರು ಪ್ರತಿ ಹಾಸ್ಟೆಲ್‌ಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ. […]

Continue Reading

ರಾಷ್ಟ್ರದ ಅಭಿವೃದ್ಧಿಗೆ ಯುವಕರ ಪಾತ್ರ ಮಹತ್ತರವಾಗಿದೆ: ಎಚ್.ಬಿ ಪಾಟೀಲ

ಕಲಬುರಗಿ: ರಾಷ್ಟ್ರದ ಅಭಿವೃದ್ಧಿಗೆ ಯುವಕರ ಪಾತ್ರ ಮಹತ್ತರವಾಗಿದೆ. ಯುವಕರು ವಿಶ್ವದ ಭವಿಷ್ಯ, ದೇಶದ ಪ್ರಗತಿಗೆ ಯುವಶಕ್ತಿ ಬಳಸಿಕೊಳ್ಳಬೇಕು ಎಂದು ಉಪನ್ಯಾಸಕ ಹಾಗೂ ಸಮಾಜ ಸೇವಕ ಎಚ್.ಬಿ ಪಾಟೀಲ ಹೇಳಿದರು. ಜೇವರ್ಗಿ ಪಟ್ಟಣದ ಕೋರ್ಟ್ ಸಮೀಪದ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ‘ಅಂತಾರಾಷ್ಟ್ರೀಯ ಯುವ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಯುವಕರ ಪಾತ್ರ ಮುಖ್ಯವೆಂದು ಸಾರಲು ಈ ದಿನಾಚರಣೆ ಪೂರಕವಾಗಿದೆ. ಯುವಕರನ್ನು ಒಗ್ಗೂಡಿಸುವುದು, ಸಾಮಾಜಿಕ-ಆರ್ಥಿಕ […]

Continue Reading

ಎಟಿಎಂ ಕಳ್ಳತನ ಮಾಡುವಾಗಲೇ ಎಎಸ್ಐಯಿಂದ ಕಳ್ಳ ಅರೆಸ್ಟ್‌

ಬಳ್ಳಾರಿ: ಮಧ್ಯರಾತ್ರಿ ಎಟಿಎಂ ದರೋಡೆ ಮಾಡುತ್ತಿದ್ದ ಖದೀಮನನ್ನ ಬಳ್ಳಾರಿಯ ಗಸ್ತು ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ. ಕಳ್ಳನನ್ನು ಹಿಡಿದ ಪೊಲೀಸ್ ಅಧಿಕಾರಿಯ ಸಾಹಸದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈ ಜುಮ್ಮೆನಿಸುತ್ತದೆ. ಎಎಸ್ಐ ಮಲ್ಲಿಕಾರ್ಜುನ ಖದೀಮನನ್ನ ಬಂಧಿಸಿದ್ದಾರೆ. ಆಂಧ್ರದ ಅನಂತಪುರದ ವೆಂಕಟೇಶ್ ಬಂಧಿತ ಆರೋಪಿ. ಕಳ್ಳನನ್ನು ಹಿಡಿಯುವಾಗ ಸ್ವಲ್ಪ ಯಾಮಾರಿದರೂ ಎಎಸ್ಐ ಮೇಲೆ ದರೋಡೆಕೋರ ಭಯಾನಕ ದಾಳಿ ಮಾಡುತ್ತಿದ್ದ. ಹೀಗಾಗಿ ಸರ್ಕಸ್ ಮಾಡಿ ಖದೀಮನನ್ನು ಹೆಡೆಮುರಿ ಕಟ್ಟುವಲ್ಲಿ ಎಎಸ್ಐ ಯಶಸ್ವಿಯಾಗಿದ್ದಾರೆ. ಖದೀಮ […]

Continue Reading