ದಂಡೋತಿ ಸೇತುವೆ ಮುಳುಗಡೆ: ಸಂಚಾರ ಸ್ತಬ್ಧ
ಚಿತ್ತಾಪುರ: ಬುಧವಾರ ರಾತ್ರಿ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗಿದೆ. ಗುರುವಾರ ಬೆಳಿಗ್ಗೆ ಕಾಗಿಣಾ ನದಿಯಲ್ಲಿ ಭಾರಿ ಪ್ರವಾಹ ಬಂದು ತಾಲೂಕಿನ ದಂಡೋತಿ ಸಮೀಪದ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮಾರ್ಗದ ಸಾರಿಗೆ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿದೆ. ಕಾಗಿಣಾ ನದಿಯ ಮೇಲ್ಭಾಗದ ಸೇಡಂ, ಕಾಳಗಿ, ಚಿಂಚೋಳಿ ತಾಲೂಕುಗಳಲ್ಲಿ ಮಳೆಯಾಗಿದ್ದರಿಂದ ಕಾಗಿಣಾ ನದಿ ತುಂಬಿ ಹರಿಯುತ್ತಿದೆ. ಬೆಣ್ಣೆತೊರಾ ಜಲಾಶಯದಿಂದ ನೀರು ಹೊರಗೆ ಬಿಟ್ಟಿದ್ದರಿಂದ ನದಿಯಲ್ಲಿ ಪ್ರವಾಹ ಏರುಗತಿಯಲ್ಲಿದ್ದು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ಆಚೆಗಿರುವ ಗ್ರಾಮಗಳ ವಿದ್ಯಾರ್ಥಿಗಳು ಬೆಳಿಗ್ಗೆ ಪಟ್ಟಣದ ವಿವಿಧ […]
Continue Reading