ಕಲಬುರಗಿ: ಜಿ.ಪಂ ಸಿಇಒ ಕೈ ಸೇರಲಿದೆ ಹಾಸ್ಟೆಲ್‌ ಅವ್ಯವಸ್ಥೆ ವರದಿ

ಕಲಬುರಗಿ: ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕಳಪೆ ಊಟ ಪೂರೈಕೆ, ಕಾಟ್, ಬೆಡ್ ಇಲ್ಲದಿರುವುದು, ಮೆನು ಪ್ರಕಾರ ಊಟ, ಉಪಾಹಾರ ನೀಡದಿರುವುದು, ಶುಚಿ ಕಿಟ್ ನೀಡದಿರುವುದು, ಶೌಚಾಲಯ ಸ್ವಚ್ಛತೆ ಕಾಯ್ದುಕೊಳ್ಳದೆ ಅಸಡ್ಡೆ ತೋರಿಸುವಂತಹ ಹಾಸ್ಟೆಲ್‌ ವಾರ್ಡನ್‌ಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮುಂದಾಗಿದೆ. ಈ ಸಂಬಂಧ ಹಾಸ್ಟೆಲ್ ಪರಿಸ್ಥಿತಿ ಯಥಾವತ್ ವರದಿ ನೀಡುವುದಕ್ಕಾಗಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಭಂವರ್ ಸಿಂಗ್ ಮೀನಾ ಅವರು ಪ್ರತಿ ಹಾಸ್ಟೆಲ್‌ಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ. […]

Continue Reading

ರಾಷ್ಟ್ರದ ಅಭಿವೃದ್ಧಿಗೆ ಯುವಕರ ಪಾತ್ರ ಮಹತ್ತರವಾಗಿದೆ: ಎಚ್.ಬಿ ಪಾಟೀಲ

ಕಲಬುರಗಿ: ರಾಷ್ಟ್ರದ ಅಭಿವೃದ್ಧಿಗೆ ಯುವಕರ ಪಾತ್ರ ಮಹತ್ತರವಾಗಿದೆ. ಯುವಕರು ವಿಶ್ವದ ಭವಿಷ್ಯ, ದೇಶದ ಪ್ರಗತಿಗೆ ಯುವಶಕ್ತಿ ಬಳಸಿಕೊಳ್ಳಬೇಕು ಎಂದು ಉಪನ್ಯಾಸಕ ಹಾಗೂ ಸಮಾಜ ಸೇವಕ ಎಚ್.ಬಿ ಪಾಟೀಲ ಹೇಳಿದರು. ಜೇವರ್ಗಿ ಪಟ್ಟಣದ ಕೋರ್ಟ್ ಸಮೀಪದ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ‘ಅಂತಾರಾಷ್ಟ್ರೀಯ ಯುವ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಯುವಕರ ಪಾತ್ರ ಮುಖ್ಯವೆಂದು ಸಾರಲು ಈ ದಿನಾಚರಣೆ ಪೂರಕವಾಗಿದೆ. ಯುವಕರನ್ನು ಒಗ್ಗೂಡಿಸುವುದು, ಸಾಮಾಜಿಕ-ಆರ್ಥಿಕ […]

Continue Reading

ಎಟಿಎಂ ಕಳ್ಳತನ ಮಾಡುವಾಗಲೇ ಎಎಸ್ಐಯಿಂದ ಕಳ್ಳ ಅರೆಸ್ಟ್‌

ಬಳ್ಳಾರಿ: ಮಧ್ಯರಾತ್ರಿ ಎಟಿಎಂ ದರೋಡೆ ಮಾಡುತ್ತಿದ್ದ ಖದೀಮನನ್ನ ಬಳ್ಳಾರಿಯ ಗಸ್ತು ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ. ಕಳ್ಳನನ್ನು ಹಿಡಿದ ಪೊಲೀಸ್ ಅಧಿಕಾರಿಯ ಸಾಹಸದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈ ಜುಮ್ಮೆನಿಸುತ್ತದೆ. ಎಎಸ್ಐ ಮಲ್ಲಿಕಾರ್ಜುನ ಖದೀಮನನ್ನ ಬಂಧಿಸಿದ್ದಾರೆ. ಆಂಧ್ರದ ಅನಂತಪುರದ ವೆಂಕಟೇಶ್ ಬಂಧಿತ ಆರೋಪಿ. ಕಳ್ಳನನ್ನು ಹಿಡಿಯುವಾಗ ಸ್ವಲ್ಪ ಯಾಮಾರಿದರೂ ಎಎಸ್ಐ ಮೇಲೆ ದರೋಡೆಕೋರ ಭಯಾನಕ ದಾಳಿ ಮಾಡುತ್ತಿದ್ದ. ಹೀಗಾಗಿ ಸರ್ಕಸ್ ಮಾಡಿ ಖದೀಮನನ್ನು ಹೆಡೆಮುರಿ ಕಟ್ಟುವಲ್ಲಿ ಎಎಸ್ಐ ಯಶಸ್ವಿಯಾಗಿದ್ದಾರೆ. ಖದೀಮ […]

Continue Reading

ನನ್ನ ವಜಾದ ಹಿಂದೆ ಪಿತೂರಿ, ಷಡ್ಯಂತ್ರವಿದೆ – ಯಾರು ಹಿಂದಿದ್ದಾರೆ ಗೊತ್ತಿದೆ: ರಾಜಣ್ಣ ಬಾಂಬ್‌

ಬೆಂಗಳೂರು: ನನ್ನ ವಜಾದ ಹಿಂದೆ ಪಿತೂರಿ ಮತ್ತು ಷಡ್ಯಂತ್ರವಿದೆ. ಏನ್‌ ಆಗಿದೆ ? ಯಾರು ಹಿಂದೆ ಇದ್ದಾರೆ ಎಲ್ಲಾ ಗೊತ್ತಿದೆ. ಕಾಲ ಬಂದಾಗ ಅದನ್ನು ತಿಳಿಸುತ್ತೆನೆ ಎಂದು ಮಾಜಿ ಸಚಿವ ಕೆ.ಎನ್‌ ರಾಜಣ್ಣ ಬಾಂಬ್‌ ಸಿಡಿಸಿದ್ದಾರೆ. ಮಂತ್ರಿ ಸ್ಥಾನದಿಂದ ವಜಾಗೊಳಿಸಿದ ಬೆನ್ನಲ್ಲೇ ರಾಜಣ್ಣ ಅವರು ತಮ್ಮ ಆಪ್ತ ಸಚಿವರು, ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಅವರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಮಾಜಿಯಾಗಿ ನಿಮ್ಮ […]

Continue Reading

100 ಕೋಟಿ ರೂ. ಬೆಲೆ ಬಾಳುವ ಕಾರಿನ ಒಡತಿ ನೀತಾ ಅಂಬಾನಿ, Audi A9 Chameleon ಕಾರಿನ ವಿಶೇಷತೆಗಳೇನು ?

ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪತ್ನಿ ನೀತಾ ಅಂಬಾನಿ ಅವರ ಬಳಿ ಅತ್ಯಂತ ದುಬಾರಿ ಕಾರುಗಳು ಇವೆ. ಇದೀಗ ಅವರು ದುಬಾರಿ ಬೆಲೆಯ ( A9 Chameleon )ವಿಶೇಷ ಕಾರೊಂದನ್ನು ಖರೀದಿಸಿದ್ದಾರೆ. ನೀತಾ ಅಂಬಾನಿ ಈಗಾಗಲೇ ಆಡಿ A9 (Audi A9 Chameleon) ಕಾರನ್ನು ಹೊಂದಿದ್ದಾರೆ. ಇದರ ಮೌಲ್ಯ ಸುಮಾರು 100 ಕೋಟಿ ರೂ. ಈ ಕಾರು ತುಂಬಾ ವಿಶೇಷವಾಗಿದೆ. ಕಾರಿನ ವಿಶೇಷತೆಗಳು ಈ ಕಾರು ಊಸರವಳ್ಳಿಯಂತೆ ಬಣ್ಣಗಳನ್ನುಬದಲಾಯಿಸಬಹುದು. ಇದು ವಿಚಿತ್ರವೆನಿಸಬಹುದು, ಇದು ಸತ್ಯ. ಆದರೆ […]

Continue Reading

ಭಾರತದ ಅತ್ಯಂತ ದುಬಾರಿ ಕಾರು ಮುಖೇಶ್ ಅಂಬಾನಿಯವರದ್ದಲ್ಲ, ನೀತಾ ಅಂಬಾನಿಯವರದ್ದು, ಇದರ ಬೆಲೆ ಎಷ್ಟು ಕೋಟಿ ಗೊತ್ತಾ ?

ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ಕುಟುಂಬವು ಐಷಾರಾಮಿ ಕಾರುಗಳ ಸಂಗ್ರಹಕ್ಕೆ ಹೆಸರುವಾಸಿಯಾಗಿದೆ. ಆದರೆ ದೇಶದ ಅತ್ಯಂತ ದುಬಾರಿ ಕಾರು ಯಾರದ್ದು ಎಂದು ಊಹಿಸಬಹುದು, ಇದು ಮುಖೇಶ್ ಅಂಬಾನಿಯವರದ್ದಲ್ಲ, ಅವರ ಪತ್ನಿ ಮತ್ತು ಉದ್ಯಮಿ ನೀತಾ ಅಂಬಾನಿ ಅವರದ್ದಾಗಿದೆ. The Audi A9 Chameleon ಈ ಕಾರಿನ ಬೆಲೆ ಸುಮಾರು 100 ಕೋಟಿ ರೂ. ಇದು ಭಾರತದ ಅತ್ಯಂತ ದುಬಾರಿ ಕಾರು ಎಂದು ಪರಿಗಣಿಸಲಾಗಿದೆ. The Audi A9 Chameleon ಈ ಕಾರಿನ ವಿಶೇಷತೆ […]

Continue Reading

ಕಲಬುರಗಿ: ಕಾರು-ಬಸ್ ಮಧ್ಯೆ ಭೀಕರ ಅಪಘಾತ, ತಂದೆ-ಮಗ ಸ್ಥಳದಲ್ಲೇ ಸಾವು

ಕಲಬುರಗಿ: ಬಸ್ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರ (ಕೆ) ಗ್ರಾಮದ ಬಳಿ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಸೋಮಶೇಖರ್ (55), ಪ್ರಕಾಶ್ (28) ಮೃತ ದುರ್ದೈವಿಗಳಾಗಿದ್ದು, ಮೃತರು ಬಾಗಲಕೋಟೆ ಜಿಲ್ಲೆಯವರಾಗಿದ್ದು, ಕಾರಿನಲ್ಲಿದ್ದ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದಾರೆ‌. ಕಲಬುರಗಿ ಕಡೆಯಿಂದ ಬಾಗಲಕೋಟೆಯ ಬಿಳಗಿ ಕಡೆಗೆ ಹೋಗುತ್ತಿರುವ ಸಂದರ್ಭದಲ್ಲಿ ಎದುರಿಗೆ ಬಂದ ಎನ್‌ಇಕೆಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಅವಘಡ ಸಂಭವಿಸಿದೆ. ಬಸ್ ಡಿಕ್ಕಿ […]

Continue Reading

ಮೋದಿ ಚಾಲನೆ ಕೊಟ್ಟಿರುವ ಹಳದಿ ಮಾರ್ಗದ ಮೆಟ್ರೋ ಟಿಕೆಟ್ ದರ ಎಷ್ಟು ? ಎಲ್ಲೆಲ್ಲಿ ನಿಲುಗಡೆ ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ಆರ್​​.ವಿ ರಸ್ತೆಯಿಂದ ಬೊಮ್ಮಸಂದ್ರದ ನಡುವಿನ ಹಳದಿ ಮಾರ್ಗದ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಿದರು. ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದರು, ಈ ವೇಳೆ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಮನೋಹರ್​ ಲಾಲ್ ಖಟ್ಟರ್, ಶೋಭಾ ಕರಂದ್ಲಾಜೆ, ಡಿಸಿಎಂ ಡಿ.ಕೆ ಶಿವಕುಮಾರ​, ಸಂಸದರಾದ ಡಾ.ಸಿ.ಎನ್ ಮಂಜುನಾಥ, ತೇಜಸ್ವಿ ಸೂರ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಉಪಸ್ಥಿತರಿದ್ದರು. 2014ರಲ್ಲಿ ಆರಂಭವಾದ […]

Continue Reading

ಸಮಾಧಿ ನೆಲಸಮಕ್ಕೆ ಅವನೇ ಕಾರಣ: ಗೀತಾ ಬಾಲಕೃಷ್ಣ

ಬೆಂಗಳೂರು: ರಾಜ್ಯಾದ್ಯಂತ ಅಭಿಮಾನಿಗಳ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನಟ ವಿಷ್ಣುವರ್ಧನ್ ಸಮಾಧಿ ನೆಲಸಮ ವಿಚಾರಕ್ಕೆ ಸಂಬಂಧಿಸಿದಂತೆ ಇದೆ ಮೊದಲ ಬಾರಿಗೆ ದಿ.ನಟ ಬಾಲಕೃಷ್ಣ ಅವರ ಕುಟುಂಬದ ಸದಸ್ಯರೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ. ನಟ ಬಾಲಕೃಷ್ಣ ಅವರಿಗೆ ಸೇರಿದ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿರುವ ವಿಚಾರಕ್ಕೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಭಿಮಾನಿಗಳು ಈ ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವಂತೆ ಈ ಕುರಿತು ನಟ ಬಾಲಕೃಷ್ಣ ಕುಟುಂಬದ ಸದಸ್ಯರು ಪ್ರತಿಕ್ರಿಯೆ ನೀಡಿದ್ದಾರೆ. ಘಟನೆ ಕುರಿತು […]

Continue Reading

ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದರೂ ಹೋಗ್ತಿನಿ, ಹಣ ಕೊಡಲು ರೆಡಿ ಇದ್ದಿನಿ: ಕಿಚ್ಚ ಸುದೀಪ್‌

ಎಕ್ಸ್‌ ಖಾತೆಯಲ್ಲಿ (ಟ್ವಿಟರ್) ಸುದೀರ್ಘ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಕಿಚ್ಚ ಸುದೀಪ್‌, ನಾವು ನಂಬಿಕೆಯಿಟ್ಟಂತಹ ದೇವಸ್ಥಾನ ಒಡೆದಾಗ ಎಷ್ಟು ನೋವಾಗುತ್ತದೆಯೊ ಅಷ್ಟೇ ನೋವು, ಸಂಕಟ ನನಗಾಗಿದೆ. ವಿಷ್ಣು ಸ್ಮಾರಕ ಉಳಿಸಿಕೊಳ್ಳಲು ಸಾಕಷ್ಟು ಹೋರಾಟ ಮಾಡಿದ್ದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣಕಾಸು ಬೇಕಾ ? ಮತ್ತೆನಾದರೂ ಬೇಕಾ ? ಎಲ್ಲದಕ್ಕೂ ನಾವು ಸಿದ್ಧರಿದ್ದಿವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ಹರಿಸಲಿಲ್ಲ. ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ-ನಿಮಗೆ ಎಷ್ಟು […]

Continue Reading